ಹೊನ್ನಾವರ: ತಾಲೂಕಿನ ಕಾಸರಕೋಡ್ ಟೊಂಕಾ ಉದ್ದೇಶಿತ ವಾಣಿಜ್ಯ ಬಂದರು ವಿರೋಧಿಸಿ ನಿಷೇಧಾಜ್ಞೆಯ ನಡುವೆಯು ಮೀನುಗಾರರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66 ಪಕ್ಕದಲ್ಲೇ ಇರುವ ಹಿರೇಮಠ ಸ್ಮಶಾನದಿಂದ ಕಾಸರಕೋಡ ಗ್ರಾಮದಲ್ಲಿ ಸಮುದ್ರಗುಂಟ ಇರುವ ರಸ್ತೆಯನ್ನು ಅಭಿವೃದ್ಧಿಪಡಿಸಿ ಬಂದರು ಅಭಿವೃದ್ಧಿ ಯೋಜನಾ ಸ್ಥಳದವರೆಗೆ ಹೋಗುವ ರಸ್ತೆ ಕಾಮಗಾರಿಯ ಸರ್ವೆ ಕಾರ್ಯ ನಡೆಯುವ ಸುತ್ತಲಿನ ಪ್ರದೇಶದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಆದೇಶಿಸಿದ್ದರು. ಅದರ ಹೊರತಾಗಿಯೂ ಬಂದರು ವಿರೋಧಿಸಿ ಸ್ಥಳೀಯ ಮೀನುಗಾರರು ಪ್ರತಿಭಟನೆ ಹಮ್ಮಿಕೊಂಡಿದ್ದರಿoದ ಪ್ರತಿಭಟನೆನಿರತ ಐವತ್ತುಕ್ಕೂ ಅಧಿಕ ಮೀನುಗಾರರನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ವಿರುದ್ಧ ಸ್ಥಳೀಯ ಮೀನುಗಾರರು ಆಕ್ರೋಶ ವ್ಯಕ್ತಪಡಿಸಿ ನಮ್ಮ ಜಾಗ ನಮಗೆ ಬಿಟ್ಟುಕೊಡಿ,ಸರ್ವೇಗೆ ಮುಂದಾದರೆ ನಾವೆಲ್ಲಾ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎನ್ನುವ ಎಚ್ಚರಿಕೆ ನೀಡಿದರು. ಪೊಲೀಸರು ಮತ್ತು ಮೀನುಗಾರಿಕೆ ಸಚಿವ ಮಂಕಾಳು ವೈದ್ಯರ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. ಸಾಯಂಕಾಲ ನಾಲ್ಕು ಗಂಟೆ ಒಳಗೆ ವಶಕ್ಕೆ ಪಡೆದ ಮೀನುಗಾರರನ್ನು ಬಿಡುಗಡೆಗೊಳಿಸದಿದ್ದಲ್ಲಿ ಸಮುದ್ರಕ್ಕೆ ಹಾರಿ ಪ್ರಾಣ ಬಿಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು,ಪೊಲೀಸರು,ಸ್ಥಳೀಯರು ಮದ್ಯೆ ಕೆಲಕಾಲ ಮಾತಿನ ಚಕಮಕಿ ಉಂಟಾಗಿತ್ತು. ಮೂವರು ಮಹಿಳೆಯರು,ಇರ್ವರು ಪುರುಷರು ಪ್ರತಿಭಟನೆ ವೇಳೆ ಅಸ್ವಸ್ಥರಾಗಿದ್ದು ತಕ್ಷಣ ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿದೆ.
ಏತನ್ಮದ್ಯೆ ಶಾಲಾ ವಿದ್ಯಾರ್ಥಿನಿ ಅಪೇಕ್ಷಾ ತಾಂಡೇಲ್ ತಮ್ಮ ತಾಯಿಯನ್ನು ಪೊಲೀಸರು ಪ್ರತಿಭಟನೆ ವೇಳೆ ಬಂಧಿಸಿ ಕರೆದೊಯ್ದದನ್ನು ಖಂಡಿಸಿ,ಮಾಧ್ಯಮದ ಮೂಲಕ ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ. ಅಮ್ಮ ಮನೆಗೆ ವಾಪಸ್ಸಾಗದಿದ್ದಲ್ಲಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಏಚ್ಚರಿಕೆ ನೀಡಿದಳು. ಪ್ರತಿಭಟನೆಯ ನಡುವೆಯೂ ಬಿಗಿಪೊಲೀಸ್ ಬಂದೋಬಸ್ತ್ ನಲ್ಲಿ ಅಧಿಕಾರಿಗಳು ಸರ್ವೇ ಕಾರ್ಯ ಮುಂದುವರೆಸಿದರು. ಭಟ್ಕಳ ಉಪವಿಭಾಗಾಧಿಕಾರಿ ಕಾವ್ಯಾ ರಾಣಿ, ಡಿವೈಎಸ್ ಪಿ ಮಹೇಶ್ ಕೆ,ತಹಶೀಲ್ದಾರ ಪ್ರವೀಣ ಕರಾಂಡೆ,ಪಿಐ ಸಿದ್ರಾಮೇಶ್ವರ ಸ್ಥಳದಲ್ಲೇ ಬಿಡುಬಿಟ್ಟಿದ್ದರು. ತಮ್ಮ ಮನೆ,ಭೂಮಿ ಕಳೆದುಕೊಳ್ಳುವ ಭೀತಿಯಿಂದ ಸಮುದ್ರದಡದಲ್ಲಿ ಮೀನುಗಾರರು ಗುಂಪು ಗುಂಪಾಗಿ ಸೇರಿದ್ದರು.ಪ್ರತಿಭಟನೆಗೆ ಮುಂದಾಗುತ್ತಿದ್ದ ಸ್ಥಳದಲ್ಲಿ ಪೊಲೀಸರು ಎಂಟ್ರಿ ನೀಡಿ ಮೀನುಗಾರರ ಚದುರಿಸುತ್ತಿರುವ ದ್ರಶ್ಯ ಕಂಡುಬoತು.
ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ