Big News

ಮಾರ್ಚ್ 8 ಭಟ್ಕಳ ತಾಲೂಕಿನಲ್ಲಿ ಲೋಕ್ ಅದಾಲತ್: ಸುದ್ದಿಗೋಷ್ಠಿ ನಡೆಸಿ ಮಾಹಿತಿ

Share

ಭಟ್ಕಳ: ರಾಜ್ಯ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ರಾಜ್ಯದ್ಯಂತ ಮಾರ್ಚ 8 ರಂದು ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಭಟ್ಕಳ ತಾಲೂಕಿನಲ್ಲೂ ಸಹ ಲೋಕ್ ಅದಾಲತ್ ಕಾರ್ಯಕ್ರಮ ನಡೆಯುತ್ತಿದ್ದು, ಸುಮಾರು 1500 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಇತ್ಯರ್ಥವಾಗುವ ಸಾಧ್ಯತೆ ಇದೆ ಎಂದು ಹಿರಿಯ ನ್ಯಾಯಾದೀಶ ಹಾಗೂ ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಕಾಂತ ಕುರಣಿ ಹೇಳಿದರು.

ತಾಲೂಕಿನ ನ್ಯಾಯಾಲಯದ ಸಂಕಿರ್ಣದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ ಲೋಕ ಅದಾಲತ್ ನಲ್ಲಿ 1146 ಪ್ರಕರಣಗಳನ್ನು ಸಾರ್ವಜನಿಕರು ಹಾಗೂ ವಕೀಲರ ಸಹಕಾರದಿಂದ ಇತ್ಯರ್ಥಪಡಿಸಲಾಗಿತ್ತು. ಲೋಕ ಅದಾಲತ್ ಎಂದರೆ ಕಕ್ಷಿದಾರರೆ ಪರಸ್ಪರ ರಾಜಿಮಾಡಿಕೊಂಡು ಪ್ರಕರಣವನ್ನು ಇತ್ಯರ್ಥಪಡಿಸುವುದಾಗಿದ್ದು, ಇಲ್ಲಿ ಯಾರು ಗೆದ್ದಂತೆ ಅಥವಾ ಸೋತಂತೆ ಭಾವನೆ ಮೂಡುವುದಿಲ್ಲ ಬದಲಾಗಿ ಇಬ್ಬರೂ ಗೆದ್ದಂತಾಗುತ್ತದೆ.

ಲೋಕ್ ಅದಾಲತ್ ಮೂಲಕ ಇತ್ಯರ್ಥಪಡಿಸಲಾದ ಸಿವಿಲ್ ಪ್ರಕರಣದಲ್ಲಿ ನ್ಯಾಯಾಲಯದ ಶುಲ್ಕವನ್ನು ಹಿಂದಿರುಗಿಸಲಾಗುತ್ತದೆ. ಕಕ್ಷಿದಾರರಿಗೆ ಸಮಯ ಹಾಗೂ ಹಣವು ಕೂಡ ಉಳಿತಾಯವಾಗುವಂತಾಗುತ್ತದೆ. ಈ ಸಂಬoದ ವಕೀಲರ ಸಂಘ, ಪೋಲಿಸ್ ಇಲಾಖೆಯೊಂದಿಗೆ, ಬ್ಯಾಂಕಿoಗ್ ಸಂಸ್ಥೆಗಳೊoದಿಗೆ ಸಭೆಯನ್ನು ನಡೆಸಲಾಗಿದ್ದು ಅವರು ಪೂರಕವಾಗಿ ಸಹಕರಿಸಿದ್ದು ಸಾರ್ವಜನಿಕರು ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಲೋಕ್ ಅದಾಲತ್ ನ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಳ್ಳುವಂತೆ ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ತಾಲೂಕಾ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ದೀಪಾ ಅರಳಗುಂಡಿ ಹೆಚ್ಚುವರಿ ನ್ಯಾಯಾಧೀಶೆ ಧನವತಿ ಇದ್ದರು.

ವಿಸ್ಮಯ ನ್ಯೂಸ್, ಈಶ್ವರ ನಾಯ್ಕ ಭಟ್ಕಳ

Share

Don't Miss

ಉಚಿತ ಹೃದಯ ರೋಗ ತಪಾಸಣಾ ಶಿಬಿರ : ಮೇ 31ರ ಶನಿವಾರದಂದು ಕುಮಟಾ ತಾಲೂಕಾಸ್ಪತ್ರೆಯಲ್ಲಿ ಆಯೋಜನೆ

ಕುಮಟಾ: ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಸೇವಾಖಂಡದ ಯೋಗಕ್ಷೇಮ ವಿಭಾಗ , ಜನಪರ ಹೋರಾಟ ವೇದಿಕೆ ಕುಮಟಾ ಹಾಗೂ ತಾಲೂಕಾಸ್ಪತ್ರೆ ಕುಮಟಾ ಇವರ ಸಹಯೋಗದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರವನ್ನು...

ವಾಡಿಕೆಗಿಂತ ಅಧಿಕ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ ನೋಡಿ?

ಕಾರವಾರ: ಜೂನ್ ತಿಂಗಳಿನಲ್ಲಿ ಆರಂಭವಾಗುವ ಮುಂಗಾರು ಮಳೆಯ ಪ್ರಮಾಣವು ವಾಡಿಕೆಗಿಂತ ಅಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ದೇಶದಾದ್ಯಂತ ಶೇ. 106 ರಷ್ಟು ಮಳೆಯಾಗಲಿದ್ದು, 87...

ಸಂಪನ್ನಗೊoಡ ಹೊನ್ನೆಬೈಲ್ ಹಬ್ಬ: ಹರಿದು ಬಂದ ಭಕ್ತ ಸಾಗರ

ಅಂಕೋಲಾ: ಹೊನ್ನೆಬೈಲ್ ಗ್ರಾಮ ದೇವರುಗಳಾದ ಶ್ರೀಬೊಮ್ಮಯ್ಯ ದೇವರು, ಶ್ರೀಕುಸ್ಲೆ ದೇವರು ಮತ್ತು ಶ್ರೀಮಾಣಿಬೀರ ದೇವರುಗಳ ಬಂಡಿಹಬ್ಬಕ್ಕೆ ಪೂರಕವಾದ ವಿಶೇಷ ಹಬ್ಬ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅತ್ಯಂತ ವಿಜೃಂಭಣೆಯಿoದ ನಡೆಯಿತು. ಕಾರಣಾಂತರಗಳಿoದ...

ಈ ಊರಿನವರ ಗೋಳಿನ ಕಥೆ-ವ್ಯಥೆ ನೋಡಿ

ಶಿರಸಿ: ಇದು ಯಾವುದೋ ಇತಿಹಾಸದ ಕಟ್ಟು ಕಥೆಯಲ್ಲ.. ಅಕ್ಷರಶಃ ಜೀವ ಕೈಯ್ಯಲ್ಲಿಡಿದು ಸಾಗಿ, ಕುಗ್ರಾಮದ ಕರಾಳ ಕಥೆಗೆ ಸಾಕ್ಷಿಯಾದ ಕಣ್ಣುಗಳ ಅಕ್ಷರ ರೂಪದ ಚಿತ್ರಣವಿದು.. ಶಿರಸಿ ತಾಲೂಕಿನ ಗಡಿಭಾಗಕ್ಕೆ ಹೊಂದಿಕೊoಡಿರುವ ಮುಷ್ಕಿ...

ಶಿರಸಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗಟಾರಕ್ಕೆ ಉರುಳಿಬಿದ್ದ ಖಾಸಗಿ ಬಸ್

ಶಿರಸಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ಗಟಾರಕ್ಕೆ ಉರುಳಿದ ಘಟನೆ ಶಿರಸಿ ತಾಲೂಕಿನ ಶಿರಸಿ-ಯಲ್ಲಾಪುರ ರಸ್ತೆಯ ಕಡವೆ ಕ್ರಾಸ್ ಬಳಿ ಸಂಭವಿಸಿದೆ. ಎದುರಿನಿಂದ ಬಂದ ವಾಹನಕ್ಕೆ ಜಾಗ ನೀಡುವ ವೇಳೆ...

ಉಚಿತ ಹೃದಯ ರೋಗ ತಪಾಸಣಾ ಶಿಬಿರ : ಮೇ 31ರ ಶನಿವಾರದಂದು ಕುಮಟಾ ತಾಲೂಕಾಸ್ಪತ್ರೆಯಲ್ಲಿ ಆಯೋಜನೆ

ಕುಮಟಾ: ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಸೇವಾಖಂಡದ ಯೋಗಕ್ಷೇಮ ವಿಭಾಗ , ಜನಪರ ಹೋರಾಟ ವೇದಿಕೆ ಕುಮಟಾ ಹಾಗೂ ತಾಲೂಕಾಸ್ಪತ್ರೆ ಕುಮಟಾ ಇವರ ಸಹಯೋಗದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರವನ್ನು...

Related Articles

ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅಭಿನಂದನಾ ಕಾರ್ಯಕ್ರಮ: ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರದ ಭರವಸೆ ನೀಡಿದ ಸಂಸದರು

ಕುಮಟಾ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಸತತ ಪ್ರಯತ್ನದಿಂದ ಸುಮಾರು 82 ಕೋಟಿಗೂ ಅಧಿಕ...

ವೃದ್ಧರು, ಅಸಹಾಯಕರಿಗೆ ಹೊಸ ಬಟ್ಟೆ ನೀಡಿ ಪುತ್ರಶೋಕ ಮರೆಯಲೆತ್ನಿಸಿದ ಮಿರಾಶಿ ಕುಟುಂಬ

ಅಂಕೋಲಾ: KEBಯ ನಿವೃತ್ತ ಎಕ್ಸಿಕ್ಕೂಟಿವ್ ಇಂಜಿನಿಯರ್ ಹಾಗೂ ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರಾಮಚಂದ್ರ ತಿಮ್ಮಣ್ಣ...

ವಿಶ್ವಜಲ ದಿನ ಆಚರಣೆ: ಸಾರ್ವಜನಿಕರಿಗೆ ಕಾನೂನು ಅರಿವು ಕಾರ್ಯಕ್ರಮ

ಹೊನ್ನಾವರ: ವಿಶ್ವ ಜಲ ದಿನ” ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಗಿಡಕ್ಕೆ ನೀರೆರಯುವ ಮೂಲಕ ಕಾರ್ಯಕ್ರಮಕ್ಕೆ...

ಅಂಕೋಲಾದಲ್ಲಿ ಬೆಳಂಬಾರ ಸುಗ್ಗಿ ವೈಭವ: ಭರ್ಜರಿ ರೋಡ್ ಶೋ ನಡೆಸಿ ವಿಶೇಷ ಪ್ರದರ್ಶನ

ಅಂಕೋಲಾ: ನಾಡಿನ ಸಾಂಪ್ರದಾಯಿಕ ಮತ್ತು ಜನಪದ ಕಲಾ ಪ್ರಕಾರಗಳಲ್ಲಿ ಸುಗ್ಗಿಗೆ ತನ್ನದೇ ಆದ ಪ್ರಾಮುಖ್ಯತೆ ಇದ್ದು,...