Big News

ಮಾರ್ಚ್ 8 ಭಟ್ಕಳ ತಾಲೂಕಿನಲ್ಲಿ ಲೋಕ್ ಅದಾಲತ್: ಸುದ್ದಿಗೋಷ್ಠಿ ನಡೆಸಿ ಮಾಹಿತಿ

Share

ಭಟ್ಕಳ: ರಾಜ್ಯ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ರಾಜ್ಯದ್ಯಂತ ಮಾರ್ಚ 8 ರಂದು ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಭಟ್ಕಳ ತಾಲೂಕಿನಲ್ಲೂ ಸಹ ಲೋಕ್ ಅದಾಲತ್ ಕಾರ್ಯಕ್ರಮ ನಡೆಯುತ್ತಿದ್ದು, ಸುಮಾರು 1500 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಇತ್ಯರ್ಥವಾಗುವ ಸಾಧ್ಯತೆ ಇದೆ ಎಂದು ಹಿರಿಯ ನ್ಯಾಯಾದೀಶ ಹಾಗೂ ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಕಾಂತ ಕುರಣಿ ಹೇಳಿದರು.

ತಾಲೂಕಿನ ನ್ಯಾಯಾಲಯದ ಸಂಕಿರ್ಣದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ ಲೋಕ ಅದಾಲತ್ ನಲ್ಲಿ 1146 ಪ್ರಕರಣಗಳನ್ನು ಸಾರ್ವಜನಿಕರು ಹಾಗೂ ವಕೀಲರ ಸಹಕಾರದಿಂದ ಇತ್ಯರ್ಥಪಡಿಸಲಾಗಿತ್ತು. ಲೋಕ ಅದಾಲತ್ ಎಂದರೆ ಕಕ್ಷಿದಾರರೆ ಪರಸ್ಪರ ರಾಜಿಮಾಡಿಕೊಂಡು ಪ್ರಕರಣವನ್ನು ಇತ್ಯರ್ಥಪಡಿಸುವುದಾಗಿದ್ದು, ಇಲ್ಲಿ ಯಾರು ಗೆದ್ದಂತೆ ಅಥವಾ ಸೋತಂತೆ ಭಾವನೆ ಮೂಡುವುದಿಲ್ಲ ಬದಲಾಗಿ ಇಬ್ಬರೂ ಗೆದ್ದಂತಾಗುತ್ತದೆ.

ಲೋಕ್ ಅದಾಲತ್ ಮೂಲಕ ಇತ್ಯರ್ಥಪಡಿಸಲಾದ ಸಿವಿಲ್ ಪ್ರಕರಣದಲ್ಲಿ ನ್ಯಾಯಾಲಯದ ಶುಲ್ಕವನ್ನು ಹಿಂದಿರುಗಿಸಲಾಗುತ್ತದೆ. ಕಕ್ಷಿದಾರರಿಗೆ ಸಮಯ ಹಾಗೂ ಹಣವು ಕೂಡ ಉಳಿತಾಯವಾಗುವಂತಾಗುತ್ತದೆ. ಈ ಸಂಬoದ ವಕೀಲರ ಸಂಘ, ಪೋಲಿಸ್ ಇಲಾಖೆಯೊಂದಿಗೆ, ಬ್ಯಾಂಕಿoಗ್ ಸಂಸ್ಥೆಗಳೊoದಿಗೆ ಸಭೆಯನ್ನು ನಡೆಸಲಾಗಿದ್ದು ಅವರು ಪೂರಕವಾಗಿ ಸಹಕರಿಸಿದ್ದು ಸಾರ್ವಜನಿಕರು ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಲೋಕ್ ಅದಾಲತ್ ನ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಳ್ಳುವಂತೆ ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ತಾಲೂಕಾ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ದೀಪಾ ಅರಳಗುಂಡಿ ಹೆಚ್ಚುವರಿ ನ್ಯಾಯಾಧೀಶೆ ಧನವತಿ ಇದ್ದರು.

ವಿಸ್ಮಯ ನ್ಯೂಸ್, ಈಶ್ವರ ನಾಯ್ಕ ಭಟ್ಕಳ

Share

Don't Miss

ಶಿರೂರು ಗುಡ್ಡ ಕುಸಿತ ದುರಂತ : ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ಧ ಪ್ರಣವಾನಂದ ಸ್ವಾಮೀಜಿ

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ದುರ್ಘಟನೆಗೆ ಸಂಬoಧಿಸಿದoತೆ ಅಂಕೋಲಾ ಪೊಲೀಸರು 8 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಶಿರೂರು ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಗುತ್ತಿಗೆ ಕಂಪನಿಯ ಬೇಜವಾಬ್ದಾರಿ...

ಭಟ್ಕಳದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ: 80ಕ್ಕೂ ಹೆಚ್ಚು ಜನರಿಂದ ರಕ್ತದಾನ

ಭಟ್ಕಳ: ಪುನಿತ್ ರಾಜಕುಮಾರು ಬದುಕಿದ ರೀತಿ ನಿಜಕ್ಕೂ ಎಲ್ಲರಿಗೂ ಆದರ್ಶಪ್ರಾಯ. ಅವರು ಮಾಡಿರುವ ಸಾಮಾಜಿಕ ಕಾರ್ಯಗಳು ಅದರಲ್ಲೂ ಬಲಗೈಯಲ್ಲಿ ಕೊಟ್ಟದ್ದು ಎಡಗೈಗೂ ಗೊತ್ತಾಗದಂತೆ ಅದನ್ನು ನಿಭಾಯಿಸಿದ ರೀತಿ ನಿಜಕ್ಕೂ ಅನನ್ಯ. ಇಂತಹ...

ಸಿಐಡಿ ಡಿವೈಎಸ್ಪಿಯಾಗಿ ಎಚ್ ಜಯರಾಜಗೆ ಪದೋನ್ನತಿ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆಗೆ ಹೊಸ ಭಾಷ್ಯವನ್ನು ಬರೆಯುವ ಮೂಲಕ ಜನರ ನಡುವೆ ಬೆರೆಯುವ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡು ಸಮಾಜಘಾತುಕ...

ವಿಶ್ವಜಲ ದಿನ ಆಚರಣೆ: ಸಾರ್ವಜನಿಕರಿಗೆ ಕಾನೂನು ಅರಿವು ಕಾರ್ಯಕ್ರಮ

ಹೊನ್ನಾವರ: ವಿಶ್ವ ಜಲ ದಿನ” ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಗಿಡಕ್ಕೆ ನೀರೆರಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ, ಜೆ.ಎಂ.ಎಫ್.ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ...

ಜನಸಾಮಾನ್ಯರ ಆರ್ಥಿಕ ಮಟ್ಟ ಏರಿಸುವ ಉದ್ದೇಶದಿಂದ ಗ್ಯಾರಂಟಿ ಯೋಜನೆ ಜಾರಿ: ಜಿಲ್ಲಾಧ್ಯಕ್ಷ ಸಾಯಿ ಗಾವಂಕರ್

ಭಟ್ಕಳ: ಕಾಂಗ್ರೇಸ್ ಪಕ್ಷ ಕೇವಲ ಚುನಾವಣೆ ಗೆಲ್ಲುವ ಉದ್ದೇಶದಿಂದ ಗ್ಯಾರಂಟಿ ಯೋಜನೆಯನ್ನು ಹೊರತರಲಿಲ್ಲ. ಬದಲಾಗಿ ಜನಸಾಮಾನ್ಯರ ಆರ್ಥಿಕ ಮಟ್ಟವನ್ನು ಏರಿಸುವ ನಿಟ್ಟಿನಲ್ಲಿ ಹಾಗೂ ಜನರಲ್ಲಿ ಕೊಳ್ಳುವಿಕೆಯ ಶಕ್ತಿಯನ್ನು ಹೆಚ್ಚಿಸಿ ಆರ್ಥಿಕ ಚೈತನ್ಯಕ್ಕೆ...

ಶಿರೂರು ಗುಡ್ಡ ಕುಸಿತ ದುರಂತ : ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ಧ ಪ್ರಣವಾನಂದ ಸ್ವಾಮೀಜಿ

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ದುರ್ಘಟನೆಗೆ ಸಂಬoಧಿಸಿದoತೆ ಅಂಕೋಲಾ ಪೊಲೀಸರು 8 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಶಿರೂರು ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಗುತ್ತಿಗೆ ಕಂಪನಿಯ ಬೇಜವಾಬ್ದಾರಿ...

Related Articles

ವಿಶ್ವಜಲ ದಿನ ಆಚರಣೆ: ಸಾರ್ವಜನಿಕರಿಗೆ ಕಾನೂನು ಅರಿವು ಕಾರ್ಯಕ್ರಮ

ಹೊನ್ನಾವರ: ವಿಶ್ವ ಜಲ ದಿನ” ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಗಿಡಕ್ಕೆ ನೀರೆರಯುವ ಮೂಲಕ ಕಾರ್ಯಕ್ರಮಕ್ಕೆ...

ಅಂಕೋಲಾದಲ್ಲಿ ಬೆಳಂಬಾರ ಸುಗ್ಗಿ ವೈಭವ: ಭರ್ಜರಿ ರೋಡ್ ಶೋ ನಡೆಸಿ ವಿಶೇಷ ಪ್ರದರ್ಶನ

ಅಂಕೋಲಾ: ನಾಡಿನ ಸಾಂಪ್ರದಾಯಿಕ ಮತ್ತು ಜನಪದ ಕಲಾ ಪ್ರಕಾರಗಳಲ್ಲಿ ಸುಗ್ಗಿಗೆ ತನ್ನದೇ ಆದ ಪ್ರಾಮುಖ್ಯತೆ ಇದ್ದು,...

ಅಂಕೋಲಾದಲ್ಲಿ ಹೆಜ್ಜೆಗುರುತು ಮತ್ತು ಸರ್ವಮಯಿ ಕಿರುಚಿತ್ರ ಬಿಡುಗಡೆ: ಸಖಥ್ ಸದ್ದು ಮಾಡ್ತಿದೆ ವಿದ್ಯಾರ್ಥಿಗಳೇ ನಿರ್ಮಿಸಿ ನಿರ್ದೇಶಿಸಿದ ಚಿತ್ರ

ಅಂಕೋಲಾ: ಮಹಿಳಾ ದಿನಾಚರಣೆಯ ಪ್ರಯುಕ್ತ ಕೆ.ಎಲ್. ಇ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನಿರ್ಮಿಸಿರುವ ಎರಡು ಕಿರುಚಿತ್ರಗಳನ್ನು...

ಬುರುಡೆ ಜಲಪಾತ ವೀಕ್ಷಣೆಗೆ ಪ್ರತಿದಿನ ನೂರಾರು ಪ್ರವಾಸಿಗರು: ಕಾಡುತ್ತಿದೆ ಮೂಲಭೂತ ಸೌಕರ್ಯ ಕೊರತೆ

ಸಿದ್ದಾಪುರ: ತಾಲೂಕಿನ ಕ್ಯಾದಗಿ ಗ್ರಾಮ ಪಂಚಾಯತ್ ಸಮೀಪ ಇರುವ ಬುರುಡೆ ಜಲಪಾತಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ...