Big News

ಅರ್ಥಪೂರ್ಣವಾಗಿ ಮಹಿಳಾ ದಿನಾಚರಣೆ: ಸಾಧಕರಿಗೆ ಸಂದಿತು ಸನ್ಮಾನ

Share

ಹೊನ್ನಾವರ: ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕಾಡಳಿತ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮ ಪಟ್ಟಣದ ನಾಮಧಾರಿ ಸಭಾಭವನದಲ್ಲಿ ನಡೆಯಿತು.

“ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ವಿಚಾರ ಸಂಕಿರಣವನ್ನು ಪಿಎಸ್‌ಐ ಮಮತಾ ನಾಯ್ಕ ಅವರು ಉದ್ಘಾಟಿಸಿ ಮಾತನಾಡಿದರು. ಮನುಸ್ಮೃತಿಯಲ್ಲಿ ಹೆಣ್ಣನ್ನು ನಾಲ್ಕು ಗೋಡೆಯೊಳಗೆ ಸಿಮೀತವಾಗಿಡುವಂತೆ ಬರೆಯಲಾಗಿದೆ. ಆದರೆ ಇಂದು ಎಲ್ಲಾ ರಂಗದಲ್ಲಿಯೂ ಮಹಿಳೆ ಸಮರ್ಥಳು ಎಂದು ತೋರಿಸಿದ್ದು, ಭಾರತದ ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿ ಸಮರ್ಥವಾಗಿ ನಿಭಾಯಿಸಿದ್ದಾಳೆ. ವಿವಾಹದ ಬಳಿಕ ಹೆಣ್ಣು ಇಂದು ತಮ್ಮ ವೃತಿಯಿಂದ ದೂರವಾಗುತ್ತಿದ್ದಾಳೆ. ಸ್ವಾವಲಂಭಿ ಜೀವನ ನಡೆಸಲು ವಿವಾಹದ ನಂತರವು ಶಿಕ್ಷಣ ಹಾಗೂ ಉದ್ಯೋಗ ಮುಂದುವರೆಸಬೇಕು. ಸರ್ಕಾರವು ಹಲವು ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದರು.

ಹೊನ್ನಾವರ ಜೆ.ಎಂ.ಎಫ್.ಸಿ ನ್ಯಾಯಲಯದ ಸಹಾಯಕ ಸರಕಾರಿ ಅಭಿಯೋಜಕರಾದ ಸಂಪದಾ ಗುನಗಾ ಕಾನೂನು ಸಾಕ್ಷರತೆ ಮತ್ತು ಮಹಿಳೆಯರ ಸಬಲಿಕರಣದ ಕುರಿತು ಉಪನ್ಯಾಸ ನೀಡಿ,ಮಹಿಳೆ ಎಂದರೆ ಅಬಲೆಯಲ್ಲ,ಸಬಲೆ.ಇಂದು ಮಹಿಳೆಯರ ರಕ್ಷಣೆಗಾಗಿ ಅನೇಕ ಕಾನೂನುಗಳಿದ್ದರು ಅನೇಕ ವಲಯಗಳಲ್ಲಿ ತೊಂದರೆ ಅನುಭವಿಸುವುದು ಮುಂದುವರೆದಿದೆ.ಕೆಲಸದ ಒತ್ತಡದಿಂದ ಕುಟುಂಬದೊoದಿಗೆ ಸುಖಮಯ ಜೀವನ ಕಳೆಯುವುದು ಕಡಿಮೆಯಾಗುತ್ತಿದೆ. ಮಹಿಳೆಯರಿಗಾಗಿ ಇರುವ ಕಾನೂನುಗಳ ಅರಿವು ಹೊಂದಬೇಕು.ದೌರ್ಜನ್ಯ ಮೀತಿ ಮೀರಿದಾಗ ಮಾತ್ರ ಕಾನೂನು ಮೊರೆ ಹೋಗಬೇಕೆ ವಿನಃ,ಸಣ್ಣಪುಟ್ಟ ವಿಚಾರಗಳಿಗು ಕಾನೂನು ಎನ್ನುವ ಬದಲು ಸಮಸ್ಯೆ ನಿಮ್ಮಲ್ಲಿಯೇ ಬಗೆಹರಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಪ್ರವೀಣ ಕರಾಂಡೆ ಮಾತನಾಡಿ, ಮಹಿಳೆಯರ ಹಕ್ಕುಗಳು, ಸಮಾನತೆ ಮತ್ತು ಸಬಲೀಕರಣಕ್ಕೆ ಎಲ್ಲ ಅವಕಾಶಗಳು ಲಭ್ಯವಿದೆ. ಮಹಿಳೆಯರು ಇಂದು ಉನ್ನತ ಸ್ಥಾನವನ್ನು ಅಲಂಕರಿಸುವ ಮೂಲಕ ಅವರ ಶಕ್ತಿ ಮತ್ತು ಸಾಮರ್ಥ್ಯವನ್ನು ತೋರಿಸಿಕೊಡುತ್ತಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಇಂದು ಶೇ. 70 ರಿಂದ 80 ರಷ್ಟು ಮಹಿಳೆಯರು ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರಿಗೆ ಗೌರವ ಸ್ಥಾನಮಾನವಿದೆ ಎಂದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರನ್ನು, ಸನ್ಮಾನಿಸಲಾಯಿತು. ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಉಪಾಧ್ಯಕ್ಷೆ ಲಕ್ಷ್ಮಿ ಎಚ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ

Share

Don't Miss

ಶಿರೂರು ಗುಡ್ಡ ಕುಸಿತ ದುರಂತ : ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ಧ ಪ್ರಣವಾನಂದ ಸ್ವಾಮೀಜಿ

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ದುರ್ಘಟನೆಗೆ ಸಂಬoಧಿಸಿದoತೆ ಅಂಕೋಲಾ ಪೊಲೀಸರು 8 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಶಿರೂರು ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಗುತ್ತಿಗೆ ಕಂಪನಿಯ ಬೇಜವಾಬ್ದಾರಿ...

ಭಟ್ಕಳದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ: 80ಕ್ಕೂ ಹೆಚ್ಚು ಜನರಿಂದ ರಕ್ತದಾನ

ಭಟ್ಕಳ: ಪುನಿತ್ ರಾಜಕುಮಾರು ಬದುಕಿದ ರೀತಿ ನಿಜಕ್ಕೂ ಎಲ್ಲರಿಗೂ ಆದರ್ಶಪ್ರಾಯ. ಅವರು ಮಾಡಿರುವ ಸಾಮಾಜಿಕ ಕಾರ್ಯಗಳು ಅದರಲ್ಲೂ ಬಲಗೈಯಲ್ಲಿ ಕೊಟ್ಟದ್ದು ಎಡಗೈಗೂ ಗೊತ್ತಾಗದಂತೆ ಅದನ್ನು ನಿಭಾಯಿಸಿದ ರೀತಿ ನಿಜಕ್ಕೂ ಅನನ್ಯ. ಇಂತಹ...

ಸಿಐಡಿ ಡಿವೈಎಸ್ಪಿಯಾಗಿ ಎಚ್ ಜಯರಾಜಗೆ ಪದೋನ್ನತಿ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆಗೆ ಹೊಸ ಭಾಷ್ಯವನ್ನು ಬರೆಯುವ ಮೂಲಕ ಜನರ ನಡುವೆ ಬೆರೆಯುವ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡು ಸಮಾಜಘಾತುಕ...

ವಿಶ್ವಜಲ ದಿನ ಆಚರಣೆ: ಸಾರ್ವಜನಿಕರಿಗೆ ಕಾನೂನು ಅರಿವು ಕಾರ್ಯಕ್ರಮ

ಹೊನ್ನಾವರ: ವಿಶ್ವ ಜಲ ದಿನ” ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಗಿಡಕ್ಕೆ ನೀರೆರಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ, ಜೆ.ಎಂ.ಎಫ್.ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ...

ಜನಸಾಮಾನ್ಯರ ಆರ್ಥಿಕ ಮಟ್ಟ ಏರಿಸುವ ಉದ್ದೇಶದಿಂದ ಗ್ಯಾರಂಟಿ ಯೋಜನೆ ಜಾರಿ: ಜಿಲ್ಲಾಧ್ಯಕ್ಷ ಸಾಯಿ ಗಾವಂಕರ್

ಭಟ್ಕಳ: ಕಾಂಗ್ರೇಸ್ ಪಕ್ಷ ಕೇವಲ ಚುನಾವಣೆ ಗೆಲ್ಲುವ ಉದ್ದೇಶದಿಂದ ಗ್ಯಾರಂಟಿ ಯೋಜನೆಯನ್ನು ಹೊರತರಲಿಲ್ಲ. ಬದಲಾಗಿ ಜನಸಾಮಾನ್ಯರ ಆರ್ಥಿಕ ಮಟ್ಟವನ್ನು ಏರಿಸುವ ನಿಟ್ಟಿನಲ್ಲಿ ಹಾಗೂ ಜನರಲ್ಲಿ ಕೊಳ್ಳುವಿಕೆಯ ಶಕ್ತಿಯನ್ನು ಹೆಚ್ಚಿಸಿ ಆರ್ಥಿಕ ಚೈತನ್ಯಕ್ಕೆ...

ಶಿರೂರು ಗುಡ್ಡ ಕುಸಿತ ದುರಂತ : ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ಧ ಪ್ರಣವಾನಂದ ಸ್ವಾಮೀಜಿ

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ದುರ್ಘಟನೆಗೆ ಸಂಬoಧಿಸಿದoತೆ ಅಂಕೋಲಾ ಪೊಲೀಸರು 8 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಶಿರೂರು ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಗುತ್ತಿಗೆ ಕಂಪನಿಯ ಬೇಜವಾಬ್ದಾರಿ...

Related Articles

ವಿಶ್ವಜಲ ದಿನ ಆಚರಣೆ: ಸಾರ್ವಜನಿಕರಿಗೆ ಕಾನೂನು ಅರಿವು ಕಾರ್ಯಕ್ರಮ

ಹೊನ್ನಾವರ: ವಿಶ್ವ ಜಲ ದಿನ” ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಗಿಡಕ್ಕೆ ನೀರೆರಯುವ ಮೂಲಕ ಕಾರ್ಯಕ್ರಮಕ್ಕೆ...

ಅಂಕೋಲಾದಲ್ಲಿ ಬೆಳಂಬಾರ ಸುಗ್ಗಿ ವೈಭವ: ಭರ್ಜರಿ ರೋಡ್ ಶೋ ನಡೆಸಿ ವಿಶೇಷ ಪ್ರದರ್ಶನ

ಅಂಕೋಲಾ: ನಾಡಿನ ಸಾಂಪ್ರದಾಯಿಕ ಮತ್ತು ಜನಪದ ಕಲಾ ಪ್ರಕಾರಗಳಲ್ಲಿ ಸುಗ್ಗಿಗೆ ತನ್ನದೇ ಆದ ಪ್ರಾಮುಖ್ಯತೆ ಇದ್ದು,...

ಅಂಕೋಲಾದಲ್ಲಿ ಹೆಜ್ಜೆಗುರುತು ಮತ್ತು ಸರ್ವಮಯಿ ಕಿರುಚಿತ್ರ ಬಿಡುಗಡೆ: ಸಖಥ್ ಸದ್ದು ಮಾಡ್ತಿದೆ ವಿದ್ಯಾರ್ಥಿಗಳೇ ನಿರ್ಮಿಸಿ ನಿರ್ದೇಶಿಸಿದ ಚಿತ್ರ

ಅಂಕೋಲಾ: ಮಹಿಳಾ ದಿನಾಚರಣೆಯ ಪ್ರಯುಕ್ತ ಕೆ.ಎಲ್. ಇ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನಿರ್ಮಿಸಿರುವ ಎರಡು ಕಿರುಚಿತ್ರಗಳನ್ನು...

ಬುರುಡೆ ಜಲಪಾತ ವೀಕ್ಷಣೆಗೆ ಪ್ರತಿದಿನ ನೂರಾರು ಪ್ರವಾಸಿಗರು: ಕಾಡುತ್ತಿದೆ ಮೂಲಭೂತ ಸೌಕರ್ಯ ಕೊರತೆ

ಸಿದ್ದಾಪುರ: ತಾಲೂಕಿನ ಕ್ಯಾದಗಿ ಗ್ರಾಮ ಪಂಚಾಯತ್ ಸಮೀಪ ಇರುವ ಬುರುಡೆ ಜಲಪಾತಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ...