Important

ಬ್ರಹ್ಮಾನಂದ ಸರಸ್ವತಿ ಶ್ರೀಗಳಿಗೆ ಗುರುನಮನ: ಶ್ರೀಗಳಿಗೆ ಅದ್ಧೂರಿಯಾಗಿ ಸ್ವಾಗತ

Share

ಕುಮಟಾ: ಪ್ರಯಾಗರಾಜ್‌ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಭಾರತದ ಸುಮಾರು ೧೫ ಸಾವಿರ ನಾಗಾಸಾಧುಗಳು ಕೂಡಿ ಸನ್ಯಾಸಿ ಪರಂಪರೆಯಲ್ಲಿಯೇ ಮೊಟ್ಟಮೊದಲಬಾರಿಗೆ ಕರ್ನಾಟಕದ ಮದಲ ಮಂಡಲಾಧೀಶ್ವರರನ್ನಾಗಿ ಧರ್ಮಸ್ಥಳ ನಿತ್ಯಾನಂದನಗರ ಶ್ರೀರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾದೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಪಟ್ಟಾಭಿಷೇಕವನ್ನು ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಶ್ರೀಗಳಿಗೆ ಗೌರವ ಸಮರ್ಪಣೆಯೊಂದಿಗೆ ಗುರುನಮನ ಕಾರ್ಯಕ್ರಮವನ್ನು ಕುಮಟಾ ತಾಲೂಕಿನ ನಾಮಧಾರಿ ಸಭಾಭವನದಲ್ಲಿ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ ಶ್ರೀ ಗುರುಗಳಿಗೆ ನಾಮಧಾರಿ ಸಮಾಜದ ಪ್ರಮುಖರು ತುಳಸಿಮಾಲೆ ಹೂಹಾರವನ್ನು ಸಮರ್ಪಿಸಿ ಗೌರವದಿಂದ ಬರಮಾಡಿಕೊಂಡರು. ತಾಲೂಕಾ ನಾಮಧಾರಿ ಸಂಘದ ಅಧ್ಯಕ್ಷರಾದ ಮಂಜುನಾಥ ನಾಯ್ಕ ದಂಪತಿಗಳು ಗುರುಗಳ ಪಾದಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಪ್ರಾಸ್ಥಾವಿಕವಾಗಿ ಮಾತನಾಡಿದ ಶ್ರೀ ರಾಮ ಕ್ಷೇತ್ರ ಸೇವಾ ಸಮಿತಿ ಕುಮಟಾ ಇದರ ಸಂಚಾಲಕರಾದ ಆರ್.ಜಿ.ನಾಯ್ಕ ಅವರು ಮಾತನಾಡಿ ಕೇವಲ ಹದಿನೈದು ವರ್ಷಗಳಲ್ಲಿ ಶ್ರೀಗಳು ಉತ್ತರ ಪ್ರದೇಶದಲ್ಲಿ ಮಠ ಸ್ಥಾಪಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ದಕ್ಷಿಣ ಭಾರತದ ಸ್ವಾಮೀಜಿಯೊಬ್ಬರು ಉತ್ತರ ಭಾರತದ ಕಡೆ ಹಲವಾರು ಮಠಗಳನ್ನು ಸ್ಥಾಪಿಸಿರವುದು ಸಣ್ಣ ವಿಚಾರವಲ್ಲ. ಶ್ರೀಗಳು ಶೈಕ್ಷಣಿಕ, ಆಧ್ಯಾತ್ಮಿಕ ಆಲೋಚನೆ ಮೇರೆಗೆ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. 25 ಲಕ್ಷ ನಾಗಾಸಾಧುಗಳಲ್ಲಿ ಶ್ರೀಗಳು ಮಹಾಮಂಡಲೇಶ್ವರ 1008 ಪರಮೋಚ್ಚ ಹುದ್ದೆಯನ್ನು ಪಡೆದ ದೈವಿಕ ಶಕ್ತಿ ನಮ್ಮ ಶ್ರೀಗಳಾಗಿದ್ದಾರೆ.

ಆದ ಕಾರಣದಿಂದ ಕುಮಟಾ ಹಾಗೂ ಹೊನ್ನಾವರದ ಜನತೆಯ ಸಹಕಾರವನ್ನು ಪಡೆದುಕೊಂಡು ಮೊಟ್ಟಮೊದಲ ಚಾತುರ್ಮಾಸವನ್ನು ಕುಮಟಾದ ಕೋನಳ್ಳಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕುಮಟಾದಲ್ಲಿ ನಡೆಯುತ್ತಿರುವ ಶ್ರೀ ಗುರುಗಳ ಮೊಟ್ಟ ಮೊದಲ ಚಾತುರ್ಮಾಸವಾಗಿದ್ದರಿಂದ ಇದು ನಮ್ಮ ಮನೆಯ ಕಾರ್ಯಕ್ರಮವೆಂದು ತಿಳಿದು ಎಲ್ಲರೂ ಸಕ್ರೀಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕೊಂದು ವಿನಂತಿಸಿಕೊoಡರು.

ಈ ಸಂದರ್ಭದಲ್ಲಿ ಪ್ರಗತಿಪರ ರೈತರಾಗಿರುವ ಉತ್ತಮ ಕೃಷಿಕ ಪ್ರಶಸ್ತಿ ಪಡೆದಿರುವ ಕಾಗಾಲದ ನಾಗರಾಜ ನಾಯ್ಕ ದಂಪತಿಗಳನ್ನು ಶ್ರೀಗಳು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಆರ್ಶೀವಚನ ನೀಡಿದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಧ್ಯಾತ್ಮದಿಂದ ಆನಂದವನ್ನು ಪಡೆಯುವವರೇ ನಿಜವಾದ ಸನ್ಯಾಸಿಗಳು. 2 ತಿಂಗಳಿನಿoದ ಸರಿಯಾಗಿ ನಿದ್ದೆ ಮಾಡದೇ ನಿರಂತರ ಧ್ಯಾನ ತಪಸ್ಸುಗಳ ಮೂಲಕ ಸಾಧನೆ ಮಾಡಲಾಗಿದೆ. ಚಾತುರ್ಮಾಸ ಎಂದರೆ ಸಾಕ್ಷಾತ್ ಭಗವಂತನೇ ಭೂಮಿಗೆ ಬರುವ ಒಂದು ಸನ್ನಿವೇಶವಾಗಿದೆ. ಹಿಂದೆ ಮಹಾಭಾರತದ ಕಾಲದಿಂದಲೂ ಈ ಚಾತುರ್ಮಾಸ ವೃತಾಚರಣೆ ನಡೆದುಕೊಂಡು ಬಂದಿರುವುದರ ಬಗ್ಗೆ ಸಂಕ್ಷಿಪ್ತವಾಗಿ ವಿವರಣೆ ನೀಡಿದರು.

ಈ ಸಂದರ್ಭದಲ್ಲಿ ಕುಮಟಾ ಹೊನ್ನಾವರ ಶಾಸಕರಾದ ದಿನಕರ ಶೆಟ್ಟಿಯವರು ಆಗಮಿಸಿ ಶ್ರೀಗಳ ಆಶೀರ್ವಾದವನ್ನು ಪಡೆದುಕೊಂಡರು. ಉದ್ಯಮಿಗಳಾದ ಮುರಳೀಧರ ಪ್ರಭು, ನಾಮಧಾರಿ ಸಂಘದ ಪ್ರಮುಖರಾದ ಎಚ್.ಆರ್.ನಾಯ್ಕ, ಜೆಡಿಎಸ್ ಮುಖಂಡರಾದ ಸೂರಜ್ ನಾಯ್ಕ, ರತ್ನಾಕರ ನಾಯ್ಕ, ಸತೀಶ ನಾಯ್ಕ, ಯುವ ನಾಮಧಾರಿ ಸಂಘದ ಅಧ್ಯಕ್ಷ ರಾಜೇಶ ನಾಯ್ಕ, ಕಾರ್ಯದರ್ಶಿಗಳಾದ ರಾಘವೇಂದ್ರ ನಾಯ್ಕ, ಸಂತೋಷ ನಾಯ್ಕ, ವೈಭವ ನಾಯ್ಕ, ಸಂಘದ ನಿರ್ದೆಶಕರಾದ ಕಮಲಾಕರ ನಾಯ್ಕ, ಗಜಾನನ ನಾಯ್ಕ, ಸುರೇಶ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್ ದೀಪೇಶ ನಾಯ್ಕ ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ ಅರೆಗದ್ದೆ ನೆನಪಾಗುತ್ತಾರೆ. ಅದರ ಬೆನ್ನಲ್ಲೇ ರಿಯಲ್ ಎಸ್ಟೇಟ್ ಉದ್ಯಮ, ಆಯ್ಸಪ್ಲಾಂಟ್. ಸಹನಾ ಪ್ಯಾಲೇಸ್ ಲಾಡ್ಜ್,...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...