Big News

ವಿಶ್ವಜಲ ದಿನ ಆಚರಣೆ: ಸಾರ್ವಜನಿಕರಿಗೆ ಕಾನೂನು ಅರಿವು ಕಾರ್ಯಕ್ರಮ

Share

ಹೊನ್ನಾವರ: ವಿಶ್ವ ಜಲ ದಿನ” ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಗಿಡಕ್ಕೆ ನೀರೆರಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ, ಜೆ.ಎಂ.ಎಫ್.ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಹೊನ್ನಾವರ ಅಧ್ಯಕ್ಷರಾದ ಬಿ.ಸಿ. ಚಂದ್ರಶೇಖರ ಮಾತನಾಡಿ, ಇಂದು ಮನುಷ್ಯನ ಅತಿಯಾದ ಸ್ವಾರ್ಥದಿಂದ ನದಿ ಮಲೀನವಾಗುತ್ತಿದೆ. ಸ್ವಚ್ಚ ನೀರು ಸಿಗುತ್ತಿಲ್ಲ. ಮಲೆನಾಡು ಭಾಗವು ಬಯಲುಸೀಮೆಯ ತರಹವೇ ನೀರಿಗಾಗಿ ಹಾಹಾಕಾರ ಆಗುತ್ತಿದೆ. ನೀರಿನ ಸಂರಕ್ಷಣೆ ಸರ್ಕಾರದ ಕೆಲಸ ಮಾತ್ರವಲ್ಲ, ಸಂಘ-ಸoಸ್ಥೆಗಳು, ನಾಗರೀಕರು ಕೈಜೋಡಿಸಬೇಕು ಎಂದರು.

‘ಜಲ ಸಂರಕ್ಷಣೆಯ ಪ್ರಾಮುಖ್ಯತೆ’ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸಹಾಯಕ ಸರ್ಕಾರಿ ಅಭಿಯೋಜಕಿ ಸಂಪದಾ ಗುನಗಾ ಮಾತನಾಡಿ, ಜಲ ಎನ್ನುವುದು ನಮ್ಮ ಜೀವಕ್ಕೆ,ಜೀವನಕ್ಕೆ ಎಷ್ಟು ಮಹತ್ವ ಎನ್ನುವುದು ಎಲ್ಲರು ಅರಿಯಬೇಕು. ನೀರನ್ನು ಕಡೆಗಣಿಸುತ್ತಿದ್ದೇವೆ.ಅದರ ಪ್ರಾಮುಖ್ಯತೆ ಮರೆಯುತ್ತಿದ್ದೆವೆ.ನಮಗೆ ಕೇವಲ ಶೇಕಡಾ 3ರಷ್ಟು ಮಾತ್ರ ಶುದ್ದ ಕುಡಿಯುವ ನೀರು ಸಿಗುತ್ತದೆ ಎಂದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯನಿರ್ವಾಹಕ ಅಬಿಯಂತರರಾದ ಶಿವರಾಮ ಎಸ್ ನಾಯ್ಕ ಮಾತನಾಡಿ, 1993 ರಲ್ಲಿ ವಿಶ್ವಸಂಸ್ಥೆ ವಿಶ್ವ ಜಲ ದಿನವನ್ನು ಆಚರಿಸಬೇಕೆಂದು ಹೇಳಿದೆ. ಹಿಮನದಿಗಳ ರಕ್ಷಣೆ ಮಾಡದಿದ್ದರೆ ಮುಂದಿನ ಪೀಳಿಗೆಗೆ ನೀರಿಲ್ಲದಂತೆ ಆಗುತ್ತದೆ. ಆದ್ದರಿಂದ ಹಿಮಕರಗುವಿಕೆ ತಡೆಗಟ್ಟುವುದು ಅಗತ್ಯವಿದೆ ಎಂದರು.

ನೀರು ಸರಬರಾಜು ಮಂಡಳಿ ಹಾಗೂ ಒಳಚರಂಡಿ ಯೋಜನೆಯ ಹೊನ್ನಾವರ ವಿಭಾಗದ ಮುಖ್ಯಕಾರ್ಯನಿರ್ವಾಹಕ ಇಂಜಿನಿಯರ್ ಅಜಯ್ ಪ್ರಭು ಅವರು ಶರಾವತಿ ಕುಡಿಯುವ ನೀರಿನ ಯೋಜನೆ ಕುರಿತು ಸ್ಕ್ರಿನ್ ಮೂಲಕ ವಿಡಿಯೋ ಪ್ರದರ್ಶಿಸಿ ಮಾಹಿತಿ ನೀಡಿದರು. ವೇದಿಕೆಯಲ್ಲಿ ಜೆಎಮ್ ಎಫ್ ಸಿ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರಾದ ಈರಣ್ಣ ಹುಣಸಿಕಟ್ಟಿ, ವಕೀಲರ ಸಂಘದ ಕಾರ್ಯದರ್ಶಿ ಉದಯ ಬಿ.ನಾಯ್ಕ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಮ್.ಎನ್ ಖಾನ್,ವಕೀಲರಾದ ಎಮ್.ಎನ್ ಸುಬ್ರಮಣ್ಯ ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ ಸಮ್ಮೇಳನವು ಇದೇ ಜೂನ್ 14 ರ ಭಾನುವಾರದಂದು ಕುಮಟಾದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಂಗಣದಲ್ಲಿ ನಡೆಯಲಿದೆ....

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ / ಹೆಗಡೆ ಆಪ್ಟಿಕಲ್ಸ್, ಭಟ್ಕಳ ಹಾಗೂ ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಹೊಂದಿದ್ದು, ಇದೀಗ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಸ್ವಾತಂತ್ರ‍್ಯೋತ್ಸವದ ಸಂಭ್ರಮಕ್ಕೆ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಭರ್ಜರಿ ಆಫರ್; ಶೇ.70ರಷ್ಟು ರಿಯಾಯಿತಿ

ಕುಮಟಾ: ಸ್ವಾತಂತ್ರ‍್ಯೋತ್ಸವದ ಅಂಗವಾಗಿ ತರಂಗ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ ಗ್ರಾಹಕರಿಗಾಗಿ ವಿಶೇಷ ‘ಫ್ರೀಡಂ ಫೆಸ್ಟಿವಲ್’ ಆಫರ್...

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ...

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ...

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...