Important

ಸಿಐಡಿ ಡಿವೈಎಸ್ಪಿಯಾಗಿ ಎಚ್ ಜಯರಾಜಗೆ ಪದೋನ್ನತಿ

Share

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆಗೆ ಹೊಸ ಭಾಷ್ಯವನ್ನು ಬರೆಯುವ ಮೂಲಕ ಜನರ ನಡುವೆ ಬೆರೆಯುವ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡು ಸಮಾಜಘಾತುಕ ಶಕ್ತಿಗಳಿಗೆ ಕಂಟಕವಾಗಿ ಕಾಡಿದ್ದ ದಕ್ಷ ಪೊಲೀಸ್ ಅಧಿಕಾರಿ ಜಯರಾಜ್ ಅವರು ಪೊಲೀಸ್ ಉಪಾಧೀಕ್ಷಕ ಹುದ್ದೆಗೆ ಪದೋನ್ನತಿ ಹೊಂದಿ ಸಿ.ಐ.ಡಿ ಘಟಕದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಜಯರಾಜ್ ಕರ್ತವ್ಯ ನಿರ್ವಹಿಸಿದ ಪ್ರತಿಯೊಂದು ಪ್ರದೇಶಗಳಲ್ಲಿ ಜನಸಾಮಾನ್ಯರು ಅವರನ್ನು ಸದಾ ನೆನೆದರೆ ಕಾನೂನು ಬಾಹಿರ ಕೆಲಸಗಳಲ್ಲಿ ತೊಡಗಿದವರು ಅವರ ಹೆಸರು ಕೇಳಿದರೆ ಒಳಗಿಂದ ಒಳಗೆ ನಡುಗುವ ರೀತಿಯಲ್ಲಿ ಕರ್ತವ್ಯ ನಿರ್ವಹಣೆಯ ಮೂಲಕ ಜಯರಾಜ್ ಗುರುತಿಸಿಕೊಂಡಿದ್ದಾರೆ.

ದಾವಣಗೆರೆ ಜಿಲ್ಲೆಯ ಆಲೂರು ಹಟ್ಟಿ ಎಂಬ ಗ್ರಾಮೀಣ ಪ್ರದೇಶದಲ್ಲಿ ಸಾಧಾರಣ ಕುಟುಂಬದಲ್ಲಿ ಜನಿಸಿದ ಜಯರಾಜ್ ತಮ್ಮ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣವನ್ನು ಸಮೀಪದ ಸರ್ಕಾರಿ ಶಾಲೆಯಲ್ಲಿ ಪೂರೈಸಿ ದಾವಣಗೆರೆಯಲ್ಲಿ ಬಿ.ಎ, ಬಿ.ಇಡಿ ಪದವಿ ಮತ್ತು ಎಂ.ಎ ಸ್ನಾತಕೋತ್ತರ ಪದವಿ ಪಡೆದರು.

ಪೊಲೀಸ್ ಅಧಿಕಾರಿಯಾಗಬೇಕು ಎಂಬ ಬಾಲ್ಯದ ಕನಸನ್ನು ಹೊತ್ತು ಸಾಗಿದ ಜಯರಾಜ್ ಅವರು ಉತ್ತಮ ಕಬಡ್ಡಿ ಆಟಗಾರನಾಗಿ ಕುವೆಂಪು ವಿಶ್ವವಿದ್ಯಾಲಯ ಮತ್ತು ರಾಜ್ಯ ಮಟ್ಟದಲ್ಲಿ ಚಾಂಪಿಯನ್ ಆಟಗಾರ ಎನಿಸಿದ್ದು, ಎನ್.ಸಿ.ಸಿಯಲ್ಲಿ ಸಿ ಸರ್ಟಿಪಿಕೇಟ್ ಪಡೆದಿರುವುದು ಜಯರಾಜ್ ಕನಸು ನನಸು ಮಾಡುವಲ್ಲಿ ಸಹಯಾಕವಾಗಿ 2003 ರಲ್ಲಿ ಪೊಲೀಸ್ ಇಲಾಖೆ ಸೇರಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸಪೆಕ್ಟರ್ ಆಗಿ ತಮ್ಮ ವೃತ್ತಿ ಜೀವನದ ಪಯಣವನ್ನು ಆರಂಭಿಸುತ್ತಾರೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮತ್ತು ಅಂಕೋಲಾ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರ ನಡುವೆ ಪೊಲೀಸ್ ಸೇವೆ ಎಂಬ ಮಹತ್ವಪೂರ್ಣ ಅಂಶಕ್ಕೆ ಹೆಚ್ಚಿನ ಮಹತ್ವ ನೀಡಿದರು.

ಅಂಕೋಲಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅಂದಿನ ತಹಶೀಲ್ಧಾರ ಆಗಿದ್ದ ಸಾಂಸ್ಕೃತಿಕ ಮನಸ್ಸಿನ ಗಟ್ಟಿ ನಿರ್ಧಾರದ ಉದಯಕುಮಾರ ಶೆಟ್ಟಿ ಅವರೊಂದಿಗೆ ಸೇರಿ ಹತ್ತಾರು ಜನ – ಮನ ಸೂರೆಗೊಳ್ಳುವ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿದ್ದಲ್ಲದೇ , ಕರಾವಳಿಯ ಗಂಡು ಮೆಟ್ಟಿನ ಕಲೆಯಾದ ಯಕ್ಷಗಾನ ಕಲಿತು , ಅಭ್ಯಸಿಸಿ 2009ರಲ್ಲಿ ಯಕ್ಷರಂಗದಲ್ಲಿ ಕಾಲಿಗೆ ಗೆಜ್ಜೆ ಕಟ್ಟೆ , ಮನೋಜ್ಞ ಅಭಿನಯದ ಮೂಲದ ಯಕ್ಷ ಪ್ರೇಮಿಗಳ ಮನದಲ್ಲಿ ಅಚ್ಚಳಿಯದ ಪಾತ್ರಧಾರಿಯಾದವರಿವರು. ಕರ್ನಾಟಕದ ಬಾರ್ಡೋಲಿ ಎಂದೆನಿಸಿದ ಅಂಕೋಲೆಯಲ್ಲಿ ರಾಷ್ಟ್ರೀಯ ಉತ್ಸವ ಸಮಿತಿ ವತಿಯಿಂದ , ಸ್ಥಳೀಯ ಚಿನ್ನದಗರಿ ಯುವಕ ಸಂಘದ ವಿಶೇಷ ಸಹಕಾರದಿಂದ ಸ್ವಾತಂತ್ರ್ಯೋತ್ಸವ ಕಪ್ ಎನ್ನುವ ಕ್ರಿಕೆಟ್ ಪಂದ್ಯಾವಳಿ ಹುಟ್ಟು ಹಾಕಿ , ತಾಲೂಕಿನ ವಿವಿಧ ಸಂಘ ಸಂಸ್ಥೆಗಳು , ಇಲಾಖೆಗಳ ನಡುವೆ ಸೌಹಾರ್ದ ಮತ್ತು ಬಾಂಧ್ಯವ ಬೆಸೆಯುವ ಮತ್ತು ಕ್ರೀಡೆ ಮೂಲಕ ಎಲ್ಲರನ್ನೂ ಒಂದೆಡೆ ಸೇರಿಸಿ ಹಬ್ಬದ ಮೆರಗು ಹೆಚ್ಚಿಸಿದ ಇವರು , ವರ್ಗಾವಣೆ ಗೊಂಡ ನಂತರವೂ ಅಂಕೋಲಿಗರ ಪ್ರೀತಿ ನಂಟು ಉಳಿಸಿಕೊಂಡವರು.

ಹಾಗಾಗಿಯೇ ಸರ್ವರ ಸಹಕಾರದಲ್ಲಿ ಸ್ವಾತಂತ್ರ್ಯೋತ್ಸವ ಕಪ್ ದಶಮಾನೋತ್ಸವ ಕಂಡು ಅಧಿಕಾರಿಗಳ ಹೆಸರನ್ನು ಮತ್ತೆ ಮತ್ತೆ ಸ್ಮರಿಸುವಂತೆ ಮಾಡಿದೆ. ಸಿಬ್ಬಂದಿಗಳ ಮೂಲಭೂತ ಸೌಕರ್ಯಗಳ ಕುರಿತು ಸದಾ ಗಮನ ನೀಡುತ್ತಾ ಬಂದಿದ್ದ ಜಯರಾಜ್ ಅಂಕೋಲಾದಲ್ಲಿ ಪೊಲೀಸ್ ಸಿಬ್ಬಂದಿಗಳ ವಸತಿಗೃಹ ಆವರಣದಲ್ಲಿ ಇರುವ ಶ್ರೀರಾಮ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಹತ್ವ ನೀಡಿ, ತಮ್ಮೆಲ್ಲರ ಸೇವೆ – ಶ್ರಮದಾನದ ಜೊತೆ , ದಾನಿಗಳ , ರಾಮ ಭಕ್ತರ ಮೂಲಕ ಭವ್ಯ ಮಂದಿರ ನಿರ್ಮಿಸಿ , ಪ್ರತಿ ವರ್ಷ ಇಲ್ಲಿ ವಿಶೇಷ ಪೂಜೆ ಮತ್ತಿತರ ಕಾರ್ಯಗಳು, ಕಾರ್ಯಕ್ರಮಗಳು ನಡೆಯುತ್ತಾ ಬರಲು ಮೂಲ ಕಾರಣೀ ಕರ್ತರಾಗಿದ್ದರು.

2010 ರಲ್ಲಿ ಪೊಲೀಸ್ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ ಜಯರಾಜ್ ದಾವಣಗೆರೆ, ಶಿವಮೊಗ್ಗ, ಭದ್ರಾವತಿ ಗಳಲ್ಲಿ ಸೇವೆ ಸಲ್ಲಿಸಿ ರೌಡಿಗಳಿಗೆ ಸಿಂಹಸ್ವಪ್ನವಾಗಿ ಬನ್ನಂಜೆ ರಾಜಾ ಸೇರಿದಂತೆ ಹಲವಾರು ರೌಡಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಇಲಾಖೆಯ ಹಿರಿ ಕಿರಿಯ ಅಧಿಕಾರಿಗಳೊಂದಿಗೆ ತಾವು ಸಹ ಮಹತ್ತರ ಕರ್ತವ್ಯ ನಿರ್ವಹಿಸಿದವರು, ಇವರ ಕಾರ್ಯ ದಕ್ಷತೆಗೆ 2015 ರಲ್ಲಿ ಮುಖ್ಯಮಂತ್ರಿಗಳ ಬಂಗಾರದ ಪದಕ ಒಲಿದು ಬಂತು.

2017 ರಲ್ಲಿ ಬೆಂಗಳೂರಿಗೆ ವರ್ಗಾವಣೆಗೊಂಡು ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಅಧಿಕಾರ ಸ್ವೀಕರಿಸಿ ಬಾಂಗ್ಲಾ ಡಕಾಯಿತರ ಗ್ಯಾಂಗ್ ಸೇರಿದಂತೆ ಸಮಾಜ ಘಾತುಕ ಶಕ್ತಿಗಳ ನಿಗ್ರಹಕ್ಕೆ ಶೂಟೌಟ್ ನಂತಹ ಅನಿವಾರ್ಯ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಶಾಂತಿ ಸುವ್ಯವಸ್ಥೆ ಕಾಪಾಡಿ ಜನ ಸಾಮಾನ್ಯರ ರಕ್ಷಣೆಗೆ ಮಹತ್ವ ನೀಡಿದರು.

ನಂತರ ಬಾಣಸವಾಡಿ, ಚಾಮರಾಜಪೇಟೆ, ಗೋವಿಂದಪುರ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ ಅವರು ಠಾಣಾ ವ್ಯಾಪ್ತಿಯಲ್ಲಿ ಹಲವಾರು ಪ್ರಕರಣಗಳನ್ನು ಭೇದಿಸುವ ತಮ್ಮ ದಕ್ಷತೆ ಮತ್ತು ಬದ್ಧತೆಯನ್ನು ತೋರಿದರು. ಮಾರು,ವೇಷ ಧರಿಸಿ ಹೊರ ರಾಜ್ಯಗಳಿಗೆ ಹೋಗಿ ಅಪಾಯಕಾರಿ ಪರಿಸ್ಥಿತಿತಿಗಳನ್ನು ಎದುರಿಸಿ ಕುಖ್ಯಾತ ಪ್ರಕರಣಗಳ ಆರೋಪಿಗಳನ್ನು ಬಂಧಿಸಿ ತಂದರು.

ಜಯರಾಜ್ ಅವರ ಸೇವೆ ಗುರುತಿಸಿ ಪ್ರಸಕ್ತ ಸಾಲಿನ ರಾಷ್ಟ್ರಪತಿ ಸೇವಾ ಪದಕವನ್ನು ಅವರಿಗೆ ನೀಡಿ ಪುರಸ್ಕಾರಿಸಲಾಗಿದೆ.
ಇದೀಗ ಅವರು ಡಿ.ವೈ.ಎಸ್.ಪಿ ಯಾಗಿ ಪದೋನ್ನತಿ ಹೊಂದಿ ಸಿ.ಐ.ಡಿ ಜವಾಬ್ದಾರಿ ವಹಿಸಿಕೊಂಡಿರುವುದು ಅವರು ಕರ್ತವ್ಯ ನಿರ್ವಹಿಸಿರುವ ಎಲ್ಲಡೆ ಸಾರ್ವಜನಿಕರಿಂದ ಸಂತೋಷ ವ್ಯಕ್ತವಾಗಿದೆ. ಖ್ಯಾತ ನಟ ಹ್ಯಾಟ್ರಿಕ್ ಹಿರೋ ಶಿವರಾಜಕುಮಾರ ಅವರು , ಜಯರಾಜ ಅವರ ಸಾಮಾಜಿಕ ಕಳಕಳಿಯನ್ನು ವಿಶೇಷವಾಗಿ ಪ್ರಶಂಸಿಸಿ , ಉನ್ನತ ಹುದ್ದೆ ಅಲಂಕರಿಸಿರುವ ಜಯರಾಜ ಇವರಿಗೆ ಅಭಿನಂದಿಸಿ ಶುಭ ಕೋರಿದ್ದು , ಇತರೆ ನೂರಾರು ಗಣ್ಯರು , ಆಪ್ತರು ,ಹಿತೈಷಿಗಳು , ಅಭಿಮಾನಿಗಳೂ ಸಹ ಹರ್ಷ ವ್ಯಕ್ತಪಡಿಸಿ ಶುಭ ಕೋರಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ ತರಬಹುದು,ಇಂತಹದೊoದು ಪ್ರಕೃತಿ ವಿಸ್ಮಯ ನಡೆದದ್ದು ದೂರದಲ್ಲೆಲ್ಲೋ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ...

ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗೆ ಸರ್ಚ್ ವಾರೆಂಟ್ ಮೇಲೆ ಬಂದ ಲೋಕಾಯುಕ್ತರ ತಂಡ : ಯಾಕೆ ನೋಡಿ?

ಅಂಕೋಲಾ‌ : ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮುಂತಾದ ಕೆಲಸಗಳಲ್ಲಿ ಅನಗತ್ಯ ವಿಳಂಬ ಮತ್ತು ಏಜೆಂಟರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ...

ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶೀ ಮೇಳ: ಅಕ್ಟೋಬರ್ 7, 8,9 ರಂದು ಆಯೋಜನೆ

ಅಂಕೋಲಾ : ರಾಘವೇಂದ್ರ ಇವೆಂಟ್ಸ್ ಅಂಕೋಲಾ ಹಾಗೂ ಬೆನಕ ಇವೆಂಟ್ಸ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ...

ಸೇವಾಪರ್ವ ವಿಕಸಿತ ಭಾರತ ವಿಷಯಾಧಾರಿತ ಪೇಟಿಂಗ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದರ್ಶನ ನಾಯ್ಕ

ಭಟ್ಕಳ: ಕೇಂದ್ರ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ತಂಜಾವೂರು ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ವಿಕ್ಷಿತ್ ಭಾರತ್...

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ...

ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಹೊನ್ನಾವರ ಇದರ ವಾರ್ಷಿಕ ಸರ್ವ ಸಾಧಾರಣ

ಹೊನ್ನಾವರ : ಇಲ್ಲಿನ ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ...

ಮಾನವೀಯತೆಯ ದೀಪ ಬೆಳಗಿಸಿದ ನೇತ್ರದಾನಿ ಕೃಷ್ಣ ನಾಯ್ಕ ಅಮರ

ಕುಮಟಾ : ತಾಲೂಕಿನ ಧಾರೇಶ್ವರ ಹೋಬಳಿ ಹರನೀರು ತುದಿಮನೆ ನಿವಾಸಿ ಕೃಷ್ಣ ನಾರಾಯಣ ನಾಯ್ಕ (77...

ಬಸ್ ಗೆ ಡಿಕ್ಕಿ ಹೊಡೆದ ಲಾರಿ : ಸ್ಟೇರಿಂಗ್ ಮಧ್ಯ ಸಿಲುಕಿದ ಲಾರಿ ಚಾಲಕ ಸಾವು: ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ನಿಧನ

ಅಂಕೋಲಾ: ಟ್ಯಾಂಕರ್ ಲಾರಿ ಮತ್ತು ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಹೃದಯದಾಕಾರದ ಮುಖದ ಗೂಬೆ: ಶಾಲೆಗೆ ಬಂತು ಗುಮ್ಮ

ಅಂಕೋಲಾ: ಮಕ್ಕಳು ಊಟ, ತಿಂಡಿ, ನಿದ್ದೆ ಸರಿಯಾಗಿ ಮಾಡದಿದ್ದರೆ ಅಥವಾ ಬೇರೆ ಕಾರಣದಿಂದ ಹಠ ಹಿಡಿದರೆ...