Important

ಶಿರಸಿ ರಸ್ತೆ ಕಾಮಗಾರಿ ವಿಳಂಬಕ್ಕೆ ಆಕ್ರೋಶ: ಅಧಿಕಾರಿಗಳ ಚಳಿ ಬಿಡಿಸಿದಶಾಸಕ ದಿನಕರ ಶೆಟ್ಟಿ

Share

ಕುಮಟಾ: ಅಂಕೋಲಾ ಬೇಲೆಕೆರಿಯಿಂದ ಶಿರಸಿ ಸಾಗರಮಾಲಾ ಯೋಜನೆಯಡಿ ಮಂಜೂರಿಯಾಗಿದ್ದ ರಸ್ತೆ ಕಾಮಗಾರಿ ಗುತ್ತಿಗೆ ಪಡೆದ ಆರ್.ಎನ್.ಎಸ್. ಕಂಪನಿಯು ವಿವಿಧ ಕಾರಣಗಳನ್ನು ನೀಡಿ ಕಾಮಗಾರಿಯನ್ನು ಪೂರ್ಣ ಮಾಡಲು ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿಯ ಸ್ಥಳಕ್ಕೆ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿಯವರು ಭೆಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ನೋಡಿ ಕಂಪನಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಕಳೆದ ಆರು ವರ್ಷಗಳಿಂದ ನಡೆಯುತ್ತಿರುವ ಈ ರಸ್ತೆ ಕಾಮಗಾರಿಯು ಇನ್ನೂ ಪೂರ್ಣವಾಗಿಲ್ಲ. ಆದ್ದರಿಂದ ಈ ಭಾಗದಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ ದಿನ ನಿತ್ಯ ಕೆಲಸಕ್ಕೆ ತೆರಳುವ ಶಿಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ.

ಇದರ ಬಗ್ಗೆ ಶಾಸಕರಾದ ದಿನಕರ ಶೆಟ್ಟಿಯವರಲ್ಲಿ ದೂರು ಬಂದ ಹಿನ್ನೆಲೆಯಲ್ಲಿ ಕುಮಟಾ ಸಹಾಯಕ ಆಯುಕ್ತರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಕರು ಹಾಗೂ ರಸ್ತೆ ನಿರ್ಮಾಣದ ಜವಾಬ್ದಾರಿ ಹೊಂದಿರುವ ಆರ್‌ಎನ್‌ಎಸ್ ಕಂಪನಿಯ ಪ್ರತಿನಿಧಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಆರ್.ಎನ್.ಎಸ್. ಕಂಪನಿಯ ನಿರ್ಲಕ್ಷ್ಯ ಹಾಗೂ ಕಾಲಾವಕಾಶದಲ್ಲಿ ಕಾಮಗಾರಿ ಪೂರ್ಣಗೊಳಿಸದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಆರ್.ಎನ್.ಎಸ್. ಕಂಪನಿಯ ಅಧಿಕಾರಿಗಳೊಂದಿಗೆ ಫೋನ್ ಕರೆ ಮಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಆರ್.ಎನ್.ಎಸ್. ಕಂಪನಿಯು ವಿವಿಧ ಕಾರಣಗಳನ್ನು ನೀಡಿ ಕಾಮಗಾರಿಯನ್ನು ಪೂರ್ಣ ಮಾಡಲು ವಿಳಂಬ ಮಾಡುತ್ತಿದೆ. ಕಳೆದ ಆರು ವರ್ಷಗಳಿಂದ ನಡೆಯುತ್ತಿರುವ ಈ ರಸ್ತೆ ಕಾಮಗಾರಿಯು ಇನ್ನೂ ಪೂರ್ಣವಾಗಿಲ್ಲ. ಆದ್ದರಿಂದ ಈ ಭಾಗದಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ ದಿನ ನಿತ್ಯ ಕೆಲಸಕ್ಕೆ ತೆರಳುವ ಶಿಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ.

ಇದು ಸಾರ್ವಜನಿಕರ ದಿನನಿತ್ಯದ ಜೀವನದ ಮೇಲೆ ಪರಿಣಾಮ ಬೀರುತ್ತಿರುವುದರಿಂದ ಕಾಮಗಾರಿಯನ್ನು ತಕ್ಷಣವೇ ವೇಗವಾಗಿ ಮುಗಿಸಲು ಎಚ್ಚರಿಕೆ ನೀಡಲಾಗಿದೆ. ಕುಮಟಾ ಭಾಗದಿಂದ ಈ ರಸ್ತೆಯಲ್ಲಿ ಸಂಚರಿಸುವ ಕೆಲಸಕ್ಕೆ ತೆರಳುವ ಶಿಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕಂಪನಿಯ ವತಿಯಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕುಮಟಾ ಸಹಾಯಕ ಆಯುಕ್ತರಾದ ಕಲ್ಯಾಣಿ ಕಾಂಬ್ಳೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಕರು ಪ್ರಮುಖರಾದ ಗಜಾನನ ಪೈ ಸೇರಿದಂತೆ ಅಳಕೋಡ ಪಂಚಾಯತ್ ಅಧ್ಯಕ್ಷರು ಹಾಗೂ ಸಾರ್ವಜನಿಕರು ಹಾಜರಿದ್ದರು.

ವಿಸ್ಮಯ ನ್ಯೂಸ್ ದೀಪೇಶ ನಾಯ್ಕ ಕುಮಟಾ…

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ ಸಮ್ಮೇಳನವು ಇದೇ ಜೂನ್ 14 ರ ಭಾನುವಾರದಂದು ಕುಮಟಾದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಂಗಣದಲ್ಲಿ ನಡೆಯಲಿದೆ....

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ / ಹೆಗಡೆ ಆಪ್ಟಿಕಲ್ಸ್, ಭಟ್ಕಳ ಹಾಗೂ ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಹೊಂದಿದ್ದು, ಇದೀಗ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಕುಮಟಾ: ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅತ್ಯಂತ ವಿಜೃಂಭಣೆಯಿoದ ನೆರವೇರಿತು....

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...