Big News

ರೆಕಾರ್ಡ್ ರೂಮ್ ಪರಿಶೀಲನೆ ನಡೆಸಿದ ಕಂದಾಯ ಸಚಿವರು

Share

ಕುಮಟಾ: ರಾಜ್ಯ ಸರ್ಕಾರದ ಕಂದಾಯ ಸಚಿವರಾದ ಕೃಷ್ಣ ಬೈರೇ ಗೌಡ ಅವರು ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು ಈ ಸಂದರ್ಭದಲ್ಲಿ ಕುಮಟಾ ಆಡಳಿತ ಸೌಧಕ್ಕೆ ಆಗಮಿಸಿ ತಾಲೂಕ ಕಚೇರಿಯ ರೆಕಾರ್ಡ್ ರೂಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಾ ಆಡಳಿತ ಸೌಧಕ್ಕೆ ಆಗಮಿಸಿದ ಸಚಿವರನ್ನು ಜಿಲ್ಲಾಡಳಿತ ಹಾಗೂ ತಾಲೂಕಾಡಳಿತದ ವತಿಯಿಂದ ಹಾರ ಹಾಕಿ ಸ್ವಾಗತಿಸಲಾಯಿತು.

ನಂತರ ಸಚಿವರು ತಾಲೂಕು ಕಚೇರಿಯ ರೆಕಾರ್ಡ್ ರೂಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯ ಸರ್ಕಾರ ಭೂ ಸುರಕ್ಷಾ ಯೋಜನೆಯ ಅಡಿ ತಾಲೂಕು ಕಚೇರಿಯ ರೆಕಾರ್ಡ್ ರೂಂನಲ್ಲಿ ಇರುವ ಎಲ್ಲಾ ಧಾಖಲಾತಿಗಳನ್ನು ಗಣಕೀಕೃತ ಮಾಡಲು ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಸಚಿವರು ಪರಿಶೀಲನೆ ನಡೆಸಿದರು. ಕುಮಟಾ ತಹಶೀಲ್ದಾರರು ಸಚಿವರಿಗೆ ತಮ್ಮ ಕಚೇರಿಯಲ್ಲಿ ಇರುವ ದಾಖಲಾತಿಗಳ ಬಗ್ಗೆ ಮಾಹಿತಿ ನೀಡಿದರು.

ಪ್ರತಿದಿನದಲ್ಲಿ ಗಣಕೀಕೃತವಾಗುವ ಸರಾಸರಿ ದಾಖಲಾತಿಗಳ ಬಗ್ಗೆ ಜಿಲ್ಲಾಧಿಕಾರಿ ಕೆಅವರು ಸಚಿವರಿಗೆ ಮಾಹಿತಿ ನೀಡಿದರು. ಜಿಲ್ಲೆಯ ಎಲ್ಲಾ ತಾಲೂಕುಗಳ ಮಾಹಿತಿಯನ್ನು ಪಡೆದುಕೊಂಡ ಸಚಿವರು ರೆಕಾರ್ಡ ರೂಂನಲ್ಲಿ ಇಟ್ಟಿರುವ ದಾಖಲಾತಿಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಂದಾಯ ಸಚಿವರು ಜನಸಾಮಾನ್ಯರು ತಮ್ಮ ಭೂ ದಾಖಲಾತಿಗಳನ್ನು ಪಡೆಯಲು ತಾಲೂಕು ಕಚೇರಿಗೆ ಬರುವ ಅವಶ್ಯಕತೆ ಇರುವುದಿಲ್ಲ. ತಮ್ಮ ಮನೆಗಳಲ್ಲಿ ಕುಳಿತಲ್ಲಿಯೇ ತಮ್ಮ ಬೆರಳತುದಿಯಲ್ಲಿ ಎಲ್ಲಾ ದಾಖಲಾತಿಗಳ ಬಗ್ಗೆ ಮಾಹಿತಿಯನ್ನು ಪಡೆಯಲು ಸಾಧ್ಯವಿದೆ.

ದಾಖಲಾತಿಗಳನ್ನು ಪಡೆಯುವ ಸಲುವಾಗಿ ಕಚೇರಿಗಳಿಗೆ ಅಲೆಯುವ ಕೆಲಸವನ್ನು ತಪ್ಪಿಸಲು ರಾಜ್ಯ ಸರ್ಕಾರ ಭೂ ಸುರಕ್ಷಾ ಯೋಜನೆಯನ್ನು ತಂದಿದೆ. ಸಲೀಸಾಗಿ ಯಾವುದೇ ಮದ್ಯವರ್ತಿಗಳ ಅವಲಂಬನೆ ಇಲ್ಲದೇ ಶೋಷಣೆಗೆ ಅವಕಾಶ ನೀಡದೆ ತಮ್ಮ ಭೂ ದಾಖಲೆಗಳನ್ನು ಪಡೆಯುವ ಉದ್ದೇಶದಿಂದ ಈ ಯೋಜನೆಯನ್ನು ಜರಿ ಮಾಡಲಾಗಿದೆ. ಇದರಿಂದ ಕೆಲವು ಶಿಥಿಲಾವಸ್ಥೆಗಳಲ್ಲಿರುವ ದಾಖಲಾತಿಗಳನ್ನೂ ಸಹ ಗಣಕೀಕೃತ ಮಾಡಿ ಅವುಗಳು ನಾಶ ಹೊಂದದೇ ಇರುವ ಹಾಗೆ ನೋಡಿಕೊಳ್ಳವ ಉದ್ದೇಶದಿಂದ ಈ ಕೆಲಸವನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ , ಕುಮಟಾ ತಹಶೀಲ್ದಾರ ಕೃಷ್ಣ ಕಾಮ್ಕರ್, ಹೊನ್ನಾವರ ತಹಶೀಲ್ದಾರ ಪ್ರವೀಣ ಕರಾಂಡೆ, ಕುಮಟಾ ಸಹಾಯಕ ಆಯುಕ್ತರಾದ ಕಲ್ಯಾಣಿ ಕಾಂಬ್ಳೆ, ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ, ಕುಮಟಾ ಹೊನ್ನಾವರ ಶಾಸಕರಾದ ದಿನಕರ ಶೆಟ್ಟಿ, ಶಿರಸಿ ಸಿದ್ದಾಪುರ ಶಾಸಕರಾದ ಭೀಮಣ್ಣ ನಾಯ್ಕ,  ಕಾಂಗ್ರೆಸ್ ಮುಖಂಡರಾದ ಭುವನ್ ಭಾಗ್ವತ್, ಹೊನ್ನಪ್ಪ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್ ದೀಪೇಶ ನಾಯ್ಕ ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ ತರಬಹುದು,ಇಂತಹದೊoದು ಪ್ರಕೃತಿ ವಿಸ್ಮಯ ನಡೆದದ್ದು ದೂರದಲ್ಲೆಲ್ಲೋ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ...

ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗೆ ಸರ್ಚ್ ವಾರೆಂಟ್ ಮೇಲೆ ಬಂದ ಲೋಕಾಯುಕ್ತರ ತಂಡ : ಯಾಕೆ ನೋಡಿ?

ಅಂಕೋಲಾ‌ : ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮುಂತಾದ ಕೆಲಸಗಳಲ್ಲಿ ಅನಗತ್ಯ ವಿಳಂಬ ಮತ್ತು ಏಜೆಂಟರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ...

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ...

ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ : ಆರೋಪಿ ಬಂಧನ

ಅಂಕೋಲಾ: ಪಟ್ಟಣದಲ್ಲಿ ನಿಲ್ಲಿಸಿಟ್ಟ ಮೋಟಾರ್ ಬೈಕ್ ಕಳ್ಳತನ ಮಾಡಿದ್ದ ಆರೋಪಿತನನ್ನು ಅಂಕೋಲಾ ಪೊಲೀಸರು ವಾಹನ ಸಮೇತ...

ರಾಷ್ಟ್ರೀಯ ಮೆಗಾ ಲೋಕ ಅದಾಲತ್ ನಲ್ಲಿ ಒಟ್ಟೂ 167 ಪ್ರಕರಣಗಳು ರಾಜೀ ಸಂಧಾನದಲ್ಲಿ ಇತ್ಯರ್ಥ

ಅಂಕೋಲಾ: ತಾಲೂಕಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಸೆ 13 ರ ಶನಿವಾರ...

ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ ಶಿಕ್ಷಕ ದಿನಾಚರಣೆ: ಶಿಕ್ಷಕ ರಾಷ್ಟ್ರ ರಕ್ಷಕ ಕಾರ್ಯಕ್ರಮ

ಕುಮಟಾ: ತಾಯಿ ಮಗುವಿಗೆ ಜನ್ಮ ನೀಡುತ್ತಾಳೆ, ಶಿಕ್ಷಕ ಆ ಮಗುವಿಗೆ ಜ್ಞಾನ ನೀಡಿ ಕಣ್ತೆರೆಯಿಸಿ ಒಳ್ಳೆಯ...

ಭೂಮಿತಾಯಿಯ ಹೊಸ್ತಿನ ಹಬ್ಬ : ಕೃಷಿ ಮತ್ತು ಶ್ರಮ ಪ್ರಧಾನ ಸಂಸ್ಕೃತಿಯ ಪ್ರತೀಕ

ಅಂಕೋಲಾ: ಭೂಮ್ತಾಯಿ ಎಂದೇ ಪ್ರಸಿದ್ಧಿ ಪಡೆದಿರುವ ತಾಲೂಕಿನ ಹಾಗೂ ಇತರಡೆಯ ಅಸಂಖ್ಯ ಭಕ್ತರ ಪಾಲಿನ ಶಕ್ತಿ...

ಅಕ್ರಮ ಗೋಸಾಗಾಟ: 7 ಲಕ್ಷ ಮೌಲ್ಯದ ಜಾನುವಾರು ವಶಕ್ಕೆ

ಭಟ್ಕಳ: ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ಪ್ರಕರಣ ಪದೇ ಪದೇ ಸದ್ದು ಮಾಡುತ್ತಿದ್ದು, ಬೆಳಗಿನ ಜಾವ ಗ್ರಾಮೀಣ...

ಕುಮಟಾ ಪೊಲೀಸ್ ಗಣೇಶೋತ್ಸವ ಸಂಭ್ರಮ: ನೂರಾರು ಭಕ್ತರಿಂದ ಪ್ರಸಾದ ಸ್ವೀಕಾರ

ಕುಮಟಾ: ಪಟ್ಟಣದ ಎಲ್ಲಡೆ ಸಂಭ್ರಮದಿoದ ಗಣೇಶ ಚತುರ್ಥಿಯನ್ನು ಆಚರಿಸಲಾಗಿದ್ದು ಕುಮಟಾ ಪೊಲೀಸ್ ಠಾಣೆಯ ಆರಾಧ್ಯ ದೇವರು...