Focus News

ಬಂದರು ನಿರ್ಮಾಣ ವಿರೋಧಿಸಿ ಬೃಹತ್ ಪ್ರತಿಭಟನೆ

Share

ಅಂಕೋಲಾ: ಖಾಸಗಿ ಸಹ ಭಾಗಿತ್ವದಲ್ಲಿ ಅಂಕೋಲಾದಲ್ಲಿ ಕೇಣಿ ಗ್ರೀನ್ ಫೀಲ್ಡ್ ಬೃಹತ್ತ್ ವಾಣಿಜ್ಯ ಬಂದರು ನಿರ್ಮಾಣಕ್ಕೆ ಸಿದ್ಧತೆಗಳು ಮತ್ತಷ್ಟು ಹೆಚ್ಚಾಗುತ್ತಿರುವ ನಡುವೆ ಸ್ಥಳೀಯ ಮೀನುಗಾರರ ನೇತೃತ್ವದ ಬಂದರು ವಿರೋಧಿ ಹೋರಾಟ ಸಮಿತಿ ಆಶ್ರಯದಲ್ಲಿ ಕೇಣಿ ಕಡಲ ತೀರದಿಂದ ಮೀನುಗಾರ ಮಹಿಳೆಯರೂ ಸೇರಿದಂತೆ ಸಾವಿರಾರು ಜನ ಪ್ರತಿಭಟನಾಕಾರರು ಸುರಿವ ಮಳೆಯನ್ನೂ ಲೆಕ್ಕಿಸದೇ 4-5 ಕಿ.ಮೀ ದೂರದ ವರೆಗೆ ಪಾದಯಾತ್ರೆ ನಡೆಸಿದರು.

ಪಟ್ಟಣದ ಮುಖ್ಯ ರಸ್ತೆಗಳಲ್ಲಿ ವಾಣಿಜ್ಯ ಬಂದರು ನಿರ್ಮಾಣ ಯೋಜನೆ ವಿರುದ್ಧ ಘೋಷಣೆಗಳನ್ನು ಕೂಗುತ್ತ,ತಹಶೀಲ್ಧಾರರ ಕಾರ್ಯಾಲಯದ ಅವರಣದ ವರೆಗೆ ಬಂದು ವಾಣಿಜ್ಯ ಬಂದರು ನಿರ್ಮಾಣ ಯೋಜನೆ ಕುರಿತಂತೆ ತಮ್ಮ ಅಸಮಧಾನ ಮತ್ತು ಆಕ್ರೋಶ ವ್ಯಕ್ತಪಡಿಸಿದರು.

ಮೀನು ಮಾರಾಟ ಮಾಡುವ ಬುಟ್ಟಿಯ ಮಾದರಿಯಲ್ಲಿ ನೂರಾರು ಮನವಿ ಪತ್ರದ ಪ್ರತಿಗಳನ್ನು ತುಂಬಿ ತಂದ ಕೆಲ ಮಹಿಳೆಯರು ಮತ್ತು ಹೆಗಲ ಮೇಲೆ ಮತ್ತು ಕೈಯಲ್ಲಿ ಬಲೆ ಹಿಡಿದು ಸಾಂಪ್ರದಾಯಿಕ ಮೀನುಗಾರರ ಶೈಲಿಯಲ್ಲಿಯೇ ಕಾಣಿಸಿಕೊಂಡ ಹಿಯರೊಬ್ಬರು, ತಮ್ಮ ಕುಲ ಕಸುಬಾದ ಮೀನುಗಾರಿಕೆಯೇ ಜೀವಾಳ ಎಂಬoತೆ ಸಾಂಕೇತಿಕವಾಗಿ ಪ್ರದರ್ಶಿಸಿ, ಗಮನ ಸೆಳೆದರು. ಬಂದರು ವಿರೋಧಿ ಹೋರಾಟ ಸಮಿತಿ ಪ್ರಮುಖರು ಮತ್ತು ಸ್ಥಳೀಯರು ಸೇರಿ ಮನವಿ ತುಂಬಿರುವ ಬುಟ್ಟಿಗಳನ್ಪು ತಹಶೀಲ್ಧಾರರಿಗೆ ನೀಡುವ ಮೂಲಕ ಮುಖ್ಯಮಂತ್ರಿಗಳಿಗೆ ತಮ್ಮ ಅಳಲು ತಿಳಿಸುವಂತೆ ವಿನಂತಿಸಿದರು.

ಜಿಲ್ಲಾ ಮೀನುಗಾರ ಸಂಘಟನೆ ಪ್ರಮುಖ ಮತ್ತು ಎಂ ಎಲ್ ಸಿ ಗಣಪತಿ ಉಳ್ವೇಕರ ಈ ಸಂದರ್ಭದಲ್ಲಿ ಮಾತನಾಡಿ, ಕೇಣಿಯಲ್ಲಿ ವಾಣಿಜ್ಯ ಬಂದರು ನಿರ್ಮಾಣದಿಂದ ಕೇವಲ ಕೇಣಿಯ ಮೀನುಗಾರರು ಮಾತ್ರವಲ್ಲದೇ ಸುತ್ತ ಮುತ್ತಲಿನ ಎಲ್ಲಾ ಭಾಗಗಳಲ್ಲಿ ಮೀನುಗಾರರು ತೊಂದರೆ ಅನುಭವಿಸಲಿದ್ದಾರೆ ಈ ಯೋಜನೆಯಿಂದ ಕೃಷಿ ಸೇರಿದಂತೆ ಇತರ ಜನ ಮತ್ತು ಜೀವನಕ್ಕೆ ಸಾಕಷ್ಟು ಸಮಸ್ಯೆ ಆಗಲಿದೆ ಎಂದರು.

ಕಾರವಾರ ಮತ್ತು ಬೆಲೇಕೇರಿಗಳಲ್ಲಿ ಬಂದರುಗಳು ವ್ಯವಹಾರ ನಡೆಯದೇ ಖಾಲಿ ಬಿದ್ದಿವೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇರುವ ಬಂದರುಗಳನ್ನು ಅಭಿವೃದ್ಧಿ ಪಡಿಸುವುದನ್ನು ಬಿಟ್ಟು ಸಾವಿರಾರು ಕೋಟಿಗಳ ಹೊಸ ಬಂದರು ನಿರ್ಮಾಣಕ್ಕೆ ಯಾಕೆ ಮುಂದಾಗಿವೆ ಎನ್ನುವುದು ಅರ್ಥವಾಗುತ್ತಿಲ್ಲ ಎಂದ ಅವರು ಕೇಣಿ ಬಂದರು ಯೋಜನೆಯನ್ನು ಸಮಸ್ತ ಮೀನುಗಾರರು ಮತ್ತು ಸುತ್ತ ಮುತ್ತಲಿನ ಜನರು ವಿರೋಧಿಸಬೇಕು ಎಂದರು.

ಕಾoಗ್ರೆಸ್ ಪಕ್ಷದ ಯುವ ಮುಖಂಡ ಗೋಪಾಲಕೃಷ್ಣ ನಾಯಕ ಮಾತನಾಡಿ ವಾಣಿಜ್ಯ ಬಂದರು ನಿರ್ಮಾಣ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು ಮೀನುಗಾರರು ಮುಖ್ಯಮಂತ್ರಿಗಳಿಗೆ ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿದ್ದಾರೆ. ಯೋಜನೆ ಕುರಿತಂತೆ ಇರುವ ಸ್ಥಳೀಯರ ವಿರೋಧವನ್ನು ಸರ್ಕಾರ ಪರಿಗಣಿಸಬೇಕು. ಇಲ್ಲದಿದ್ದರೆ ಹೋರಾಟಗಾರರ ಸಮಾಧಿಯ ಮೇಲೆ ಬಂದರು ನಿರ್ಮಾಣ ಮಾಡಬೇಕಾಗುತ್ತದೆ ಎಂದರು.

ತಹಶೀಲ್ಧಾರ ಡಾ.ಚಿಕ್ಕಪ್ಪ ನಾಯಕ ಮನವಿ ಸ್ವೀಕರಿಸಿ, ನಿಮ್ಮ ಜಿಲ್ಲಾಧಿಕಾರಿಗಳ ಮೂಲಕ ತಮ್ಮ ಮನವಿಯಂತೆ, ಇಲ್ಲಿ ತಾವು ಹೇಳಿದ ಮುಖ್ಯಾಂಶಗಳನ್ನು ಮುಖ್ಯಮಂತಿಗಳ ಗಮನಕ್ಕೆ ತರಲಾಗುವುದು ಎಂದರು. ಕೇಣಿ ಬಂದರು ವಿರೋಧಿ ಹೋರಾಟ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಹಾರವಾಡದಿಂದ ಮಂಜಗುಣಿ ವರೆಗಿನ ತಾಲೂಕು ವ್ಯಾಪ್ತಿಯ ಕೆಲ ಮೀಮಗಾರ ಮುಖಂಡರು, ಸ್ಥಳೀಯರು, ಕೆಲ ಸಂಘ ಸಂಸ್ಥೆಗಳ ಪ್ರಮುಖರು , ಹಾಲಿ ಹಾಗೂ ಮಾಜಿ ಜನಪ್ರತಿನಿದಿಗಳು, ವಿವಿಧ ಸಮಾಜ ಹಾಗೂ ಬೇರೆ ಬೇರೆ ಊರಿನ ಪ್ರಮುಖರು , ನಾಗರಿಕರು ಸೇರಿ ಸಾವಿರಾರು ಜನ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಇದೇ ವೇಳೆ, ಜಿಲ್ಲಾ ಕೇಂದ್ರ ಕಾರವಾರದ ವಿಶೇಷ ಸಭೆಗೆ ತೆರಳುತ್ತಿದ್ದ ರಾಜ್ಯದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ವಂದಿಗೆ ಬಳಿ ರಾಷ್ಟ್ರೀಯ ಹೆದ್ದಾರಿ ಅಂಚಿಗೆ ಭೇಟಿಯಾದ ಕೆಲ ಪ್ರಮುಖರು ವಾಣಿಜ್ಯ ಬಂದರು ನಿರ್ಮಾಣ ವಿರೋಧಿಸಿ ಸಚಿವರಿಗೆ ಮನವಿ ಸಲ್ಲಿಸಿದರು.

ಕಂದಾಯ ಸಚಿವರು ತಮ್ಮ ವಾಹನದಿಂದ ಕೆಳಗೆ ಇಳಿದು ಸ್ಥಳೀಯರ ಮನವಿ ಸ್ವೀಕರಿಸಿದರೂ, ಅದೇ ಕಾರಿನಲ್ಲಿ ಸಚಿವರ ಜೊತೆಯಲ್ಲಿ ಪ್ರಯಾಣಿಸುತ್ತಿದ್ದ ಮೀನುಗಾರ ಸಮುದಾಯದವರೇ ಆಗಿರುವ ಮೀನುಗಾರಿಕೆ ಮತ್ತು ಬಂದರು ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಕಾರಿನಿಂದ ಕೆಳಗಿಳಿದು ಬಂದು ತಮ್ಮ ಸಮಸ್ಯೆ ಆಲಿಸಲು ಬಾರದಿರುವುದು ಸ್ಥಳೀಯ ಕೆಲ ಮೀನುಗಾರ ಮುಖಂಡರ ಹಾಗೂ ಯುವಕರಲ್ಲಿ ನಿರಾಸೆ ಮೂಡಿಸಿದಂತಿತ್ತು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ ಗುರುವಾರ, 10ರ ಶುಕ್ರವಾರ ಶ್ರೀಕ್ಷೇತ್ರ ಗೋಕರ್ಣಕ್ಕೆ ಆಗಮಿಸಲಿದೆ. ಏಪ್ರಿಲ್ 9 ರಂದು ರಥಬೀದಿಯಲ್ಲಿರುವ ರಾಮಚಂದ್ರ...

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್ ರವರು ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ’ ದಲ್ಲಿ ಹೇಳಿದರು....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್...

ಚುನಾವಣೆ ನಂತರ ರಾಜಕೀಯ ಬದಿಗಿಟ್ಟು ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯ : ಅಮದಳ್ಳಿ ಗ್ರಾಮ ದೇವರ ಗ್ರಾಮ ಎಂದ ಶಾಸಕ ಸೈಲ್

ಕಾರವಾರ: ಗ್ರಾಮೀಣ ಆಡಳಿತ ವ್ಯವಸ್ಥೆಗೆ ಬಲ ತುಂಬುವ ಹೆಜ್ಜೆಯಾಗಿ ಅಮದಳ್ಳಿ ಗ್ರಾಮ ಪಂಚಾಯತ್‌ನ ನೂತನ ಸಭಾಭವನವನ್ನು...

ಅಂಕೋಲಾದಲ್ಲಿ ಇಂದು ಪಂಚದೇವರ ದೊಡ್ಡ ಕಾರ್ತಿಕೋತ್ಸವ : ಶಿರ ಕುಳಿ ಕಾನದೇವಿ ದೇವಸ್ಥಾನದ ಹತ್ತಿರ ವನಭೋಜನಕ್ಕೆ ನಡೆಯುತ್ತಿದೆ ಸಿದ್ದತೆ

ಅಂಕೋಲಾ: ತಾಲೂಕಿನ ಸಂಸ್ಕೃತಿಯ ಆರಾಧನಾ ಪದ್ಧತಿಯಾಗಿ ಹಲವು ತಲೆಮಾರುಗಳಿಂದ ಆಚರಿಸಲ್ಪಡುತ್ತಬಂದಿರುವ ಪಂಚ ದೇವರುಗಳ ದೊಡ್ಡ ಕಾರ್ತಿಕೋತ್ಸವ...

ಕೇಣಿ ವಾಣಿಜ್ಯ ಬಂದರು ವಿರೋಧಿಸಿ ಹೋರಾಟ ನಿರಂತರ : ಬಹಿರಂಗ ಸಭೆ ತಾತ್ಕಾಲಿಕವಾಗಿ ಮುಂದೂಡಿಕೆ : ಸಂಘಟಕ ಪ್ರಮುಖರು ಪ್ರಕಟಣೆಯಲ್ಲಿ ಹೇಳಿದ್ದೇನು ?

ಅಂಕೋಲಾ: ತಾಲೂಕಿನ ಕೇಣಿಯಲ್ಲಿ ನಿರ್ಮಾಣ ಉದ್ದೇಶಿತ ವಾಣಿಜ್ಯ ಬಂದರು ಯೋಜನೆಯನ್ನು ವಿರೋಧಿಸಿ, ಸಾಮೂಹಿಕ ನಾಯಕತ್ವದಡಿ, ಅಂಕೋಲಾ...

ಚಿಪ್ಪಿ ಫ್ಯಾಕ್ಟರಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆ

ಅಂಕೋಲಾ: ತಾಲೂಕಿನ ಶೆಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...

ಆಧುನಿಕ ಜಗತ್ತನ್ನಾಳಲಿರುವ AI ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

ಅಂಕೋಲಾ : ಕೃತಕ ಬುದ್ಧಿಮತ್ತೆಯು ( AI ತಂತ್ರಜ್ಞಾನ ) ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ...

ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ ವಿಶೇಷ ಅಭಿಯಾನ

ಅಂಕೋಲಾ : ತಾಲೂಕಿನ ವಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋಳೆ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಗೆ...

ಅಂಕೋಲಾ ಕಲ್ಲೇಶ್ವರದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಅಂಕೋಲಾ : ಒನ್‌ ಲೈಟ್‌ ಎಸ್ಸಿಲಾರ್ ಲಕ್ಸೊಟಿಕಾ ಫೌಂಡೇಶನ್, ಸ್ಪಂದನ ಸೇವಾ ಟ್ರಸ್ಟ್ ಹಡಿನಬಾಳ ಹೊನ್ನಾವರ,ಸಂಗಮ...