Focus News

ಕೇಣಿ ವಾಣಿಜ್ಯ ಬಂದರು ಕೈಬಿಡಿ: ಮೀನುಗಾರರ ಹಿತ ದೃಷ್ಟಿಯಿಂದ ಲೈಫ್ ಜಾಕೆಟ್ ಮತ್ತಿತರ ಪೂರಕ ವ್ಯವಸ್ಥೆಗೆ ಅನುಕೂಲ ಕಲ್ಪಿಸಿಕೊಡಿ

Share

ಅಂಕೋಲಾ: ತಾಲೂಕಿನ ಕೇಣಿಯಲ್ಲಿ ವಾಣಿಜ್ಯ ಬಂದರು ನಿರ್ಮಾಣ ಯೋಜನೆಯನ್ನು ಕೈ ಬಿಟ್ಟು,ಮೀನುಗಾರರ ಹಿತರಕ್ಷಣೆಗೆ ಸರ್ಕಾರ ಸ್ಪಂದಿಸುವಂತೆ ಬೆಳಂಬಾರದ ಮೀನುಗಾರರು ಮತ್ತು ನಾಡ ದೋಣಿ ಸಂಘದವರು ಸ್ಥಳೀಯ ಯುವ ಪ್ರಮುಖ ಸುಂದರ ಖಾರ್ವಿ ನೇತೃತ್ವದಲ್ಲಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಅಂಕೋಲಾ ತಾಲೂಕು ಮತ್ತು ಸುತ್ತ ಮುತ್ತಲಿನ ಮೀನುಗಾರರಿಗೆ ಕೇಣಿ ಭಾಗದ ಕಡಲ ಪ್ರದೇಶ ಜೀವಾಳವಾಗಿದ್ದು ಆ ಭಾಗದಲ್ಲಿ ಮೀನುಗಾರಿಕೆ ನಡೆಸಿ ಜೀವನ ನಿರ್ವಹಣೆ ಮಾಡಲಾಗುತ್ತಿದೆ, ಕೇಣಿಯಲ್ಲಿ ವಾಣಿಜ್ಯ ಬಂದರು ನಿರ್ಮಾಣದಿಂದ ಮೀನುಗಾರರ ಜೀವನಾಧಾರ ಸಂಪೂರ್ಣವಾಗಿ ನಿಂತು ಹೋಗಲಿದ್ದು ಬದುಕು ಸರ್ವನಾಶವಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ನೈಸರ್ಗಿಕ ಸಮುದ್ರ ಪ್ರದೇಶವನ್ನು ಬಂದರು ನಿರ್ಮಾಣಕ್ಕೆ ಬಳಸುವದರಿಂದ ಮತ್ತು ಉಬ್ಬರ ಇಳಿತಕ್ಕೆ ಅಡ್ಡವಾಗಿ ತಡೆ ಉಂಟಾಗುವುದರಿಂದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಕಡಲ ತೀರಗಳು ಕೊಚ್ಚಿ ಹೋಗುವ ಆತಂಕವಿದೆ ಅಲೆಗಳ ಅಬ್ಬರ ಹೆಚ್ಚಿ ಮೀನುಗಾರರ ಮನೆ ಶೆಡ್ಡುಗಳು ಕಡಲ ಒಡಲು ಸೇರುವ ಸಾಧ್ಯತೆ ಇದೆ, ಎಂದು ಮನವಿಯಲ್ಲಿ ಅಳಲನ್ನು ತೋಡಿಕೊಳ್ಳಲಾಗಿದೆ.

ಈಗಾಗಲೇ ನೌಕಾನೆಲೆ ಮತ್ತಿತರ ಯೋಜನೆಗಳಿಂದಾಗಿ ಮೀನುಗಾರರು ಮೀನುಗಾರಿಕೆ ಪ್ರದೇಶಗಳನ್ನು ಕಳೆದುಕೊಂಡು ತೀವ್ರ ಸಂಕಟದಲ್ಲಿದ್ದು ವಾಣಿಜ್ಯ ಬಂದರು ನಿರ್ಮಾಣದಿಂದ ಮೀನುಗಾರ ಸಮಸ್ಯೆಗಳು ಹೆಚ್ಚಿಲಿವೆ, ಕರಾವಳಿ ಜನರ ಸಾಂಪ್ರದಾಯಿಕ ಕಸುಬುಗಳಾದ ಕೃಷಿ ಮತ್ತು ಮೀನುಗಾರಿಕೆಯನ್ನು ಬಲಿ ಪಡೆಯುವ ವಾಣಿಜ್ಯ ಬಂದರು ಯೋಜನೆ ಕೈ ಬಿಟ್ಟು ಪ್ರವಾಸೋದ್ಯಮದ ಬೆಳವಣಿಗೆಗೆ ಮಹತ್ವ ನೀಡಿ ಅಭಿವೃದ್ಧಿ ಕೆಲಸಗಳು ನಡೆಯಲಿ.

ಅಲ್ಲದೇ ಮೀನುಗಾರರ ಹಿತ ದೃಷ್ಟಿಯಿಂದ ಲೈಫ್ ಜಾಕೆಟ್ ಸೇರಿದಂತೆ ಪೂರಕ ವ್ಯವಸ್ಥೆಗಳನ್ನು ಮಾಡಿ, ಸಾಂಪ್ರದಾಯಿಕ ಮೀನುಗಾರಿಕೆಗೆ ಯಾವುದೇ ರೀತಿ ಕುತ್ತು ಬಾರದಂತೆ ,ಸಮುದ್ರ ಮತ್ತು ಸಮುದ್ರ ತೀರವನ್ನು ಉಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿನಂತಿಸಲಾಗಿದೆ. ನಮ್ಮ ಮನವಿಗೆ ಸ್ಪಂದಿಸದಿದ್ದರೆ ವಾಣಿಜ್ಯ ಬಂದರು ನಿರ್ಮಾಣ ವಿರೋಧಿಸಿ ನಿರಂತರವಾಗಿ ಹೋರಾಟ ಮುಂದುವರಿಸಬೇಕಾದೀತು ಎಂದು ಸುಂದರ ಖಾರ್ವಿ ಮನವಿ ಓದುವಾಗ ತಿಳಿಸಿದರು. ತಹಶೀಲ್ದಾರ ಡಾ ಚಿಕ್ಕಪ್ಪ ನಾಯಕ ಮನವಿ ಸ್ವೀಕರಿಸಿದರು. ಬೆಳಂಬಾರದ ಮೀನುಗಾರರ ಪ್ರಮುಖರಾದ ಪ್ರಭಾಕರ್ ಖಾರ್ವಿ, ಮಧುಕರ್ ಖಾರ್ವಿ, ಅಮಿತ್ ಖಾರ್ವಿ, ಕಮಲಕರ್ ಖಾರ್ವಿ ರೋಷನ್ ಖಾರ್ವಿ ದಿಲೀಪ್, ನಾಗರಾಜ ಖಾರ್ವಿ, ಮಂಜು ಖಾರ್ವಿ, ಗ್ರಾಪಂ ಉಪಾಧ್ಯಕ್ಷ ಜಗದೀಶ ಖಾರ್ವಿ ಮತ್ತಿತರರಿದ್ದರು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ ತರಬಹುದು,ಇಂತಹದೊoದು ಪ್ರಕೃತಿ ವಿಸ್ಮಯ ನಡೆದದ್ದು ದೂರದಲ್ಲೆಲ್ಲೋ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ...

ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗೆ ಸರ್ಚ್ ವಾರೆಂಟ್ ಮೇಲೆ ಬಂದ ಲೋಕಾಯುಕ್ತರ ತಂಡ : ಯಾಕೆ ನೋಡಿ?

ಅಂಕೋಲಾ‌ : ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮುಂತಾದ ಕೆಲಸಗಳಲ್ಲಿ ಅನಗತ್ಯ ವಿಳಂಬ ಮತ್ತು ಏಜೆಂಟರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಚಿಪ್ಪಿ ಫ್ಯಾಕ್ಟರಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆ

ಅಂಕೋಲಾ: ತಾಲೂಕಿನ ಶೆಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...

ಆಧುನಿಕ ಜಗತ್ತನ್ನಾಳಲಿರುವ AI ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

ಅಂಕೋಲಾ : ಕೃತಕ ಬುದ್ಧಿಮತ್ತೆಯು ( AI ತಂತ್ರಜ್ಞಾನ ) ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ...

ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ ವಿಶೇಷ ಅಭಿಯಾನ

ಅಂಕೋಲಾ : ತಾಲೂಕಿನ ವಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋಳೆ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಗೆ...

ಅಂಕೋಲಾ ಕಲ್ಲೇಶ್ವರದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಅಂಕೋಲಾ : ಒನ್‌ ಲೈಟ್‌ ಎಸ್ಸಿಲಾರ್ ಲಕ್ಸೊಟಿಕಾ ಫೌಂಡೇಶನ್, ಸ್ಪಂದನ ಸೇವಾ ಟ್ರಸ್ಟ್ ಹಡಿನಬಾಳ ಹೊನ್ನಾವರ,ಸಂಗಮ...

ಹೊನ್ನಾವರದಲ್ಲಿ ಸಾರ್ವಜನಿಕ ಗಣೇಶೋತ್ಸವ ಮೂರ್ತಿಯ ವಿಸರ್ಜನೆ: ಅದ್ಧೂರಿ ಮೆರವಣಿಗೆ

ಹೊನ್ನಾವರ: ಪಟ್ಟಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಚವತಿಯ ದಿನದಂದು ಪ್ರತಿಷ್ಠಾಪಿಸಿದ ಗಣಪನನ್ನು ವಿಜೃಂಭಣೆಯಿoದ ಆಚರಿಸಿ 7...

KEB ಗಣಪನಿಗೆ 48 ನೇ ವಾರ್ಷಿಕ ಸಂಭ್ರಮ: ಸೆ.4 ಮಹಾಪೂಜೆ – ಸೆ.5 ರಂದು ಭವ್ಯ ಮೆರವಣಿಗೆಯೊಂದಿಗೆ ವಿಸರ್ಜನೆ

ಅಂಕೋಲಾ: ತಾಲೂಕಿನ ಹೆಸ್ಕಾಂ ಇಲಾಖೆ ವತಿಯಿಂದ 48 ನೇ ವರ್ಷದ ಗಣೇಶೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ...

ವಿಶ್ರಾಂತ ಶಿಕ್ಷಕ ಉಮೇಶ ನಾಯ್ಕ ಅವರಿಗೆ ಬರ್ಗಿಯ ಶ್ರೀ ಮಹಾಲಿಂಗೇಶ್ವರ ವಿದ್ಯಾಪೀಠದಿಂದ ಸನ್ಮಾನ: “ಸದ್ಗುರು ಸಂಪನ್ನ” ಅಭಿದಾನ ಪ್ರದಾನ

ಕುಮಟಾ: ತಾಲ್ಲೂಕಿನ ಬರ್ಗಿಯ ಶ್ರೀ ಮಹಾಲಿಂಗೇಶ್ವರ ವಿದ್ಯಾಪೀಠದಿಂದ ಶಿಕ್ಷಕ ವೃತ್ತಿಯಿಂದ ವಯೋನಿವೃತ್ತಿಗೊಂಡ ಸ್ಥಳೀಯರಾದ ಉಮೇಶ ನಾಯ್ಕರವರನ್ನು...

ಉತ್ತರ ಕನ್ನಡದಲ್ಲಿ ಭಾರೀ ಮಳೆ : ಮೂರು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹದ ಭೀತಿ ಹೆಚ್ಚಾಗಿದೆ.  ತಗ್ಗು ಪ್ರದೇಶಗಳಿಗೆ...