Big News

ದುಶ್ಚಟಕ್ಕೆ ಬಲಿಯಾಗಬೇಡಿ: ಹೊಲನಗದ್ದೆ ಗ್ರಾ.ಪಂ ಅಧ್ಯಕ್ಷ ಎಂ. ಎಂ. ಹೆಗಡೆ ಹೇಳಿಕೆ

Share

ಕುಮಟಾ: ಯುವಜನತೆಯು ದೇಶದ ಆಸ್ತಿ. ದುಶ್ಚಟದಿಂದ ದೂರವಿದ್ದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ ವಾಗುತ್ತದೆ ಎಂದು ಉದ್ಯಮಿಗಳು ಮತ್ತು ಹೊಲನಗದ್ದೆ ಗ್ರಾಮ ಪಂಚಾಯತ್ ಅಧ್ಯಕ್ಷ ಎಂ. ಎಂ. ಹೆಗಡೆ ಹೇಳಿದರು. ಅವರು ಡಾ ಎ. ವಿ. ಬಾಳಿಗಾ ಪದವಿಪೂರ್ವ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟಿಸಿ, ಮಾತನಾಡಿದರು.

ಜಗತ್ತು ಸ್ಪರ್ಧಾತ್ಮಕ ಯುಗದಲ್ಲಿದೆ. ವಿದ್ಯರ್ಥಿಗಳು ಆತ್ಮ ವಿಶ್ವಾಸ ಹೆಚ್ಚಿಸಿಕೊಂಡಾಗ ಯಶಸನ್ನು ಹೊಂದಲು ಸಾಧ್ಯ. ಕಠಿಣ ಪರಿಶ್ರಮ ದಿಂದ ಮಾತ್ರ ಬೆಳವಣಿಗೆ ಹೊಂದಲು ಸಾಧ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗಕ್ಕು ಹೆಚ್ಚು ಲಕ್ಷಕೊಡಬೇಕು. ವಾಣಿಜ್ಯ ವಿಷಯದಲ್ಲಿ ಹೆಚ್ಚಿನ ಉದ್ಯೋಗ ಅವಕಾಶ ಗಳಿವೆ, ಚಾರ್ಟೆಡ್ ಅಕೌಂಟ್, ಕೈಗಾರಿಕೊಧ್ಯಮಿ ಯಾಗಿ ಯು ಹೊರಹೋಮ್ಮಲು ಉಜ್ವಲ ಅವಕಾಶ ಗಳಿವೆ ಎಂದರು. ಇದೇ ವೇಳೆ, ವಿದ್ಯಾರ್ಥಿ ಪರಿಷತ್ ಚಟುವಟಿಕೆ ಗಾಗಿ 10 ಸಾವಿರ ದೇಣಿಗೆ ನೀಡುವುದಾಗಿ ತಿಳಿಸಿದರು.

ಕೆನರಾ ಕಾಲೇಜು ಸೊಸೈಟಿ ಕಾರ್ಯಧ್ಯಕ್ಷ ರಾದ ಹನುಮಂತ ಶಾನಭಾಗ ಮಾತನಾಡಿ ಎಂ. ಎಂ. ಹೆಗಡೆ ಯವರು ಬಾಳಿಗಾ ಕಾಲೇಜು ಸ್ಥಾಪಕರಲ್ಲಿ ಒಬ್ಬರಾದ ದಿ. ಎನ್. ಟಿ. ಹೆಗಡೆ ಕುಟುಂಬದವರು ಎನ್ನುವದು ಸಂತಸದ ವಿಷಯ. ವಿದ್ಯಾರ್ಥಿಗಳು ಹೆಚ್ಚು ಅಂಕದೊoದಿಗೆ ಕಾಲೇಜಿಗೆ ಕೀರ್ತಿ ತರುವಂತ್ವರಾಗಿ ಎಂದು ಶುಭ ಹಾರೈಕೆ ಮಾಡಿದರು.

ಈ ಸಂದರ್ಭದಲ್ಲಿ ಪಿ. ಯು. ಸಿ. ದ್ವಿತೀಯ ವಾರ್ಷಿಕ ಪರೀಕ್ಷೆ ಯಲ್ಲಿ ಕಾಲೇಜಿಗೆ ಗರಿಷ್ಠ ಅಂಕ ಗಳಿಸಿ ಕಾಲೇಜಿಗೆ ಕೀರ್ತಿ ತಂದ ನವ್ಯ ಹೆಬ್ಬಾರ ಹಾಗೂ ಅನನ್ಯ ಭಟ್ಟ ಅವರನ್ನು ಎಂ. ಎಂ. ಹೆಗಡೆ ಅವರು ಶಾಲು ಹೋದೆಸಿ ಸನ್ಮಾನ ಮಾಡಿದರು. ಅದೇ ರೀತಿ ಡಿಸ್ಟಿಂಗಷನ್ ಪಡೆದ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಸತ್ಕಾರಿಸಲಾಯಿತು. ಈ ಸಂದರ್ಭದಲ್ಲಿ ಹನುಮಂತ ಶಾನಭಾಗ್ ಅವರು ಎಂ. ಎಂ. ಹೆಗಡೆ ಅವರಿಗೆ ಶಾಲು ಹೋದೆಸಿ ಸನ್ಮಾನ ಮಾಡಿದರು. ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರೊ. ಹೇಮಾ ಪೈ ಸಂವಿಧಾನಾತ್ಮ ವಾಗಿ ಪ್ರಮಾಣ ವಚನ ಬೋಧಿಸಿದರು.

ವಿಸ್ಮಯ ನ್ಯೂಸ್, ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ ಇಂಡಿಪೆoಡೆoಟ್ ಪಿಯು ಕಾಲೇಜಿನಲ್ಲಿ ಹಲವು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿ ನಡೆಯಲಿದೆ. ಭೌತಶಾಸ್ತ್ರ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ ಶ್ರೀ ವೀರಾಂಜನೇಯ ಸ್ವಾಮಿ ದೇವರುಗಳ ಚತುರ್ಥ ವಾರ್ಷಿಕ ವರ್ಧಂತಿ ಉತ್ಸವ ಮತ್ತು ಪುನರ್ ಪ್ರತಿಷ್ಠಾಪನಾ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...

ಭಟ್ಕಳದಲ್ಲಿ 14 ಜಾನುವಾರಗಳ ರಕ್ಷಣೆ : ಇಬ್ಬರ ವಿರುದ್ಧ ಪ್ರಕರಣ ದಾಖಲು

ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರ ವಿರುದ್ಧ ಭಟ್ಕಳ ಪಟ್ಟಣ ಪೊಲೀಸ್...

ಮಹಾಶಿವರಾತ್ರಿ ಪುಣ್ಯಕಾಲದಲ್ಲಿ ಕಣಕಣೇಶ್ವರ ದೇವರ ನೂತನ ಭವ್ಯ ದೇವಸ್ಥಾನ ಲೋಕಾರ್ಪಣೆ :ಶಿಖರ ಕಲಶ ಪ್ರತಿಷ್ಠೆ – ಅಷ್ಟಬಂಧ ಸಮೇತ ನೂತನ ಶಿವಲಿಂಗ ಪ್ರತಿಷ್ಠಾ ಮಹೋತ್ಸವ

ಅಂಕೋಲಾ: ಪಟ್ಟಣದ ಕಾರವಾರ ರಸ್ತೆಯಲ್ಲಿರುವ ಪುರಾತನ ಪ್ರಸಿದ್ಧ ಶ್ರೀ ಕಣಕಣೇಶ್ವರ ದೇವಾಲಯವು ಮಹಾಶಿವರಾತ್ರಿ ಪುಣ್ಯಸಂದರ್ಭದಲ್ಲಿ ನೂತನ...

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ...

ಅಂಕೋಲಾದಲ್ಲಿ ಕರಾಳ ದಿನಾಚರಣೆ ಮತ್ತು ಬಂದ್ ಗೆ ಕರೆ

ಅಂಕೋಲಾ: ಕೇಣಿ ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ನವೆಂಬರ್ 15ರಂದು ಒಂದು ವರ್ಷವಾಗಲಿದ್ದು...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು...