Big News

ಪಟ್ಟಣದಲ್ಲಿ ಹೆಚ್ಚುತ್ತಿದೆ ಟ್ರಾಫಿಕ್ ಜಾಮ್ ಜಾಮ್ : ಮುಂಬರುವ ಹಬ್ಬಗಳ ಸಾಲಿನಲ್ಲಿ ಇನ್ನಷ್ಟು ಕಿರಿಕಿರಿಯಾಗುವ ಸಾಧ್ಯತೆ

Share

ಅಂಕೋಲಾ: ಪಟ್ಟಣದಲ್ಲಿ ದಿನದಿಂದ ದಿನಕ್ಕೆ ನಾನಾ ಕಾರಣಗಳಿಂದ ಜನದಟ್ಟಣೆ ಹೆಚ್ಚುತ್ತಿದ್ದು , ಕೆಲವು ಕಡೆ ಆಗಾಗ ಸಂಚಾರ ದಟ್ಟಣೆ ಕಂಡು ಬಂದು ,ಅಂಕೋಲಾವೂ ಮಹಾನಗರಗಳಂತೆ ಬೆಳೆದು ಟ್ರಾಫಿಕ್ ಜಾಮ್ ಆಗಲಾರಂಭಿಸಿದೆಯೇ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಿಂದ ಕೇಳಿ ಬರಲಾರಂಭಿಸಿದೆ. ಪಟ್ಟಣದ ಮುಖ್ಯ ರಸ್ತೆಯಲ್ಲಿ ಮಿತಿ ಮೀರಿದ ಟ್ರಾಫಿಕ್ ಜಾಮ್ ಕಿರಿಕಿರಿಯಿಂದಾಗಿ ಸಾರ್ವಜನಿಕರು ಕೆಲ ಕಾಲ ಸಂಚಾರ ಸಮಸ್ಯೆ ಎದುರಿಸುವಂತಾಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ತಂದ ಅವಾಂತರ: ನಸುಕಿನಜಾವ ಅಂಗಡಿಯೊoದಕ್ಕೆ ಬೆಂಕಿ

ಪಟ್ಟಣದ ಜೈಹಿಂದ್ ಹೊಟೇಲ್ ಹತ್ತಿರದ ಕ್ರಾಸ್ ಮೊದಲೇ ಕಿರಿದಾಗಿದ್ದು, ಇಲ್ಲಿ 3 – 4 ಕಡೆಗಳ ರಸ್ತೆಗಳೂ ಕೂಡುವುದರಿಂದ ಸಹಜವಾಗಿಯೇ ಸಂಚಾರ ದಟ್ಟಣೆ ಹೆಚ್ಚಿರುತ್ತದೆ. ಗುಡಿಗಾರಗಲ್ಲಿ ಕ್ರಾಸ್ ನಿಂದ ಬಂಡಿ ಬಾಜಾರದವರೆಗೆ ಹೋಗಿ ಬರುವ ಮುಖ್ಯ ರಸ್ತೆಯ ಎರಡೂ ಕಡೆ ದ್ವಿಚಕ್ರ ತ್ರಿಚಕ್ರ, ಲಘು ಮೋಟಾರ ವಾಹನ ಸೇರಿದಂತೆ ನೂರಾರು ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಳ್ಳುಂತಾಗುತ್ತದೆ.

ಅoಕೋಲಾ ಪೊಲೀಸ್ ಠಾಣೆಯಿಂದ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇರಿ ಸುಮಾರು 20 ಕ್ಕೂ ಹೆಚ್ಚು ಜನರು ವರ್ಗಾವಣೆಗೊಂಡಿದ್ದು, ಬದಲಿಯಾಗಿ ಪೂರ್ಣ ಪ್ರಮಾಣದ ಅಧಿಕಾರಿ ಹಾಗೂ ಸಿಬ್ಬಂದಿಗಳ ನಿಯೋಜನೆಯಾಗದಿರುವುದು,ಇರುವ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮನೆ ಮನೆ ಪೊಲೀಸ್ ಕಾರ್ಯಕ್ರಮ, ಬೀಟ್ ವ್ಯವಸ್ಥೆ ಮತ್ತಿತರ ಕಾರಣಗಳಿಂದ ಬೇರೆ ಬೇರೆ ಕಡೆ ಕರ್ತವ್ಯ ನಿರ್ವಹಿಸಬೇಕಿರುವುದರಿಂದ ಮತ್ತು ಅಂಕೋಲಾದಲ್ಲಿ ಸಂಚಾರ ವಿಭಾಗದ ಪಿ. ಎಸ್ ಐ ಇದ್ದರೂ ಸಹ , ಸಿಬ್ಬಂದಿಗಳ ಕೊರತೆ ಮತ್ತು 2 ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿಶಾಲ ವ್ಯಾಪ್ತಿ ಇರುವ ತಾಲೂಕಿನೆಲ್ಲಡೆ ಒನ್ ಮ್ಯಾನ್ ಆರ್ಮಿಯಂತೆ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಇರುವುದರಿಂದ , ಅವರಿಗೂ ಎಲ್ಲೆಡೆ ಕಣ್ಗಾವಲಿಡಲು ಕಷ್ಟವಾಗುವ ಸಾಧ್ಯತೆ ಇದೆ.

ಸಂಚಾರ ಸಮಸ್ಯೆ ನಿವಾರಣೆಗೆ ಇಲ್ಲಿ ಪ್ರತ್ಯೇಕ ಟ್ರಾಫಿಕ್ ಪೊಲೀಸ್ ಠಾಣೆ ಅತ್ಯಗತ್ಯವಿದೆ ಎನ್ನುವ ಮಾತು ಪ್ರಜ್ಞಾವಂತ ವಲಯದಿಂದ ಕೇಳಿ ಬಂದಿದೆ. ಠಾಣೆ ಎದುರು ಒಮ್ಮೊಮ್ಮೆ ಹಲವು ಸಿಬ್ಬಂದಿಗಳು ಮೇಲ್ನೋಟಕ್ಕೆ ಕಂಡು ಬಂದರೂ ಸಹ ಬೀಟ್ ವ್ಯವಸ್ಥೆ, ಇಲಾಖೆಯ ಯೋಜನೆಗಳು, ನ್ಯಾಯಾಲಯದ ಕರ್ತವ್ಯ ಮತ್ತಿತರ ಕಾರಣಗಳಿಂದ ಬ್ಯೂಸಿಯಾಗಿರುವುದಿಂದ, ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಂಚಾರ ಸುವ್ಯವಸ್ಥೆಗೆ ಸಿಬ್ಬಂದಿಗಳೇ ಇಲ್ಲದಂತಾಗಿದೆ ಎಂದರೂ ತಪ್ಪಿಲ್ಲ.

ಮುಂಬರುವ ದಿನಗಳಲ್ಲಿ ಸಾಲು ಸಾಲು ಹಬ್ಬಗಳು ಬರಲಿದ್ಧು ಸಂಚಾರ ನಿಯಂತ್ರಣ ಯಾರ ಹೊಣೆ ಎನ್ನುವುದಕ್ಕಿಂತ, ಸಂಬoಧಿತ ಪುರಸಭೆ , ಲೋಕೋಪಯೋಗಿ ಇಲಾಖೆ, ಪೊಲೀಸ್, ಗೃಹರಕ್ಷಕ ದಳ , ಮತ್ತಿತರ ಇಲಾಖೆಗಳು, ಸಮನ್ವಯತೆಯಿಂದ ಕೆಲಸ ಮಾಡಿ, ಪಾರ್ಕಿಂಗ್ , ಪುಟಪಾತ್ ಅತಿಕ್ರಮಣ, ಬೇಕಾಬಿಟ್ಟಿ ರಸ್ತೆಯಲ್ಲೇ ವ್ಯಾಪಾರ ಮಾಡುವುದು, ಒನ್ ವೇ , ಮತ್ತಿತರ ಅಂಶಗಳತ್ತ ಗಂಭೀರ ಚಿತ್ತ ಹರಿಸಿ , ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲೇ ಬೇಕಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ ತರಬಹುದು,ಇಂತಹದೊoದು ಪ್ರಕೃತಿ ವಿಸ್ಮಯ ನಡೆದದ್ದು ದೂರದಲ್ಲೆಲ್ಲೋ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ...

ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗೆ ಸರ್ಚ್ ವಾರೆಂಟ್ ಮೇಲೆ ಬಂದ ಲೋಕಾಯುಕ್ತರ ತಂಡ : ಯಾಕೆ ನೋಡಿ?

ಅಂಕೋಲಾ‌ : ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮುಂತಾದ ಕೆಲಸಗಳಲ್ಲಿ ಅನಗತ್ಯ ವಿಳಂಬ ಮತ್ತು ಏಜೆಂಟರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ...

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ...

ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ : ಆರೋಪಿ ಬಂಧನ

ಅಂಕೋಲಾ: ಪಟ್ಟಣದಲ್ಲಿ ನಿಲ್ಲಿಸಿಟ್ಟ ಮೋಟಾರ್ ಬೈಕ್ ಕಳ್ಳತನ ಮಾಡಿದ್ದ ಆರೋಪಿತನನ್ನು ಅಂಕೋಲಾ ಪೊಲೀಸರು ವಾಹನ ಸಮೇತ...

ರಾಷ್ಟ್ರೀಯ ಮೆಗಾ ಲೋಕ ಅದಾಲತ್ ನಲ್ಲಿ ಒಟ್ಟೂ 167 ಪ್ರಕರಣಗಳು ರಾಜೀ ಸಂಧಾನದಲ್ಲಿ ಇತ್ಯರ್ಥ

ಅಂಕೋಲಾ: ತಾಲೂಕಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಸೆ 13 ರ ಶನಿವಾರ...

ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ ಶಿಕ್ಷಕ ದಿನಾಚರಣೆ: ಶಿಕ್ಷಕ ರಾಷ್ಟ್ರ ರಕ್ಷಕ ಕಾರ್ಯಕ್ರಮ

ಕುಮಟಾ: ತಾಯಿ ಮಗುವಿಗೆ ಜನ್ಮ ನೀಡುತ್ತಾಳೆ, ಶಿಕ್ಷಕ ಆ ಮಗುವಿಗೆ ಜ್ಞಾನ ನೀಡಿ ಕಣ್ತೆರೆಯಿಸಿ ಒಳ್ಳೆಯ...

ಭೂಮಿತಾಯಿಯ ಹೊಸ್ತಿನ ಹಬ್ಬ : ಕೃಷಿ ಮತ್ತು ಶ್ರಮ ಪ್ರಧಾನ ಸಂಸ್ಕೃತಿಯ ಪ್ರತೀಕ

ಅಂಕೋಲಾ: ಭೂಮ್ತಾಯಿ ಎಂದೇ ಪ್ರಸಿದ್ಧಿ ಪಡೆದಿರುವ ತಾಲೂಕಿನ ಹಾಗೂ ಇತರಡೆಯ ಅಸಂಖ್ಯ ಭಕ್ತರ ಪಾಲಿನ ಶಕ್ತಿ...

ಅಕ್ರಮ ಗೋಸಾಗಾಟ: 7 ಲಕ್ಷ ಮೌಲ್ಯದ ಜಾನುವಾರು ವಶಕ್ಕೆ

ಭಟ್ಕಳ: ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ಪ್ರಕರಣ ಪದೇ ಪದೇ ಸದ್ದು ಮಾಡುತ್ತಿದ್ದು, ಬೆಳಗಿನ ಜಾವ ಗ್ರಾಮೀಣ...

ಕುಮಟಾ ಪೊಲೀಸ್ ಗಣೇಶೋತ್ಸವ ಸಂಭ್ರಮ: ನೂರಾರು ಭಕ್ತರಿಂದ ಪ್ರಸಾದ ಸ್ವೀಕಾರ

ಕುಮಟಾ: ಪಟ್ಟಣದ ಎಲ್ಲಡೆ ಸಂಭ್ರಮದಿoದ ಗಣೇಶ ಚತುರ್ಥಿಯನ್ನು ಆಚರಿಸಲಾಗಿದ್ದು ಕುಮಟಾ ಪೊಲೀಸ್ ಠಾಣೆಯ ಆರಾಧ್ಯ ದೇವರು...