Important

ಶ್ರೀ ಬ್ರಹ್ಮಾನಂದ ಸರಸ್ವತಿ ಶ್ರೀಗಳ ಸೀಮೋಲ್ಲಂಘನ : ಗಮನಸೆಳೆದ ಬೃಹತ್ ಮೆರವಣಿಗೆ

Share

ಕುಮಟಾ: ತಾಲೂಕಿನ ಕೋನಳ್ಳಿಯ ವನದುರ್ಗಾ ಸಭಾಭವನದಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತಿ ಶ್ರೀಗಳು ಜುಲೈ 10 ರಂದು ಚಾತುರ್ಮಾಸ್ಯ ವ್ರತಾಚರಣೆಗೆ ಕುಳಿತಿದ್ದು, ಈಗಾಗಲೇ 41 ದಿನಗಳ ವ್ರತಾಚರಣೆ ಕಳೆದಿದ್ದು, ಆಗಸ್ಟ್ 20ರಂದು ಈ ವ್ರತಾಚರಣೆಯ ಸಿಮೋಲ್ಲಂಘನ ಕಾರ್ಯಕ್ರಮ ದೀವಗಿಯ ಅಘನಾಶಿನಿ ನದಿಯ ತಟದಲ್ಲಿ ನಡೆಯಿತು. ಕೋನಳ್ಳಿಯ ವನದುರ್ಗಾ ಸಭಾಭವನದಿಂದ ಸುಮಾರು 300 ಕ್ಕೂ ಅಧಿಕ ಭಕ್ತವೃಂದೊoದಿಗೆ ಭವ್ಯ ಮೆರವಣಿಗೆ ಆರಂಭಾಯಿತು.

ಎಮ್ಮೆ ಹತ್ಯೆ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಶ್ರೀಗಳು ಹಾಗೂ ಪಂಚದಶನಾಮ ಜುನಾಅಖಾಡ ನಿಕಟ ಪೂರ್ವ ಮಹಾಮಂತ್ರಿ ಹರಿದ್ವಾರದ ಶ್ರೀ ದೇವಾನಂದ ಸರಸ್ವತಿ ಮಹಾರಾಜ್ ಅವರು ಕುಮಟಾ ಗಿಬ್ ಸರ್ಕಲ್ ಮಾರ್ಗವಾಗಿ ದೀವಗಿಯ ಕೆಳಗಿನ ಕೇರಿಯ ಅಘನಾಶಿನಿ ನದಿತಟವನ್ನು ತಲುಪಿದರು. ನದೀ ತೀರದ ಪ್ರದೇಶದಲ್ಲಿ ಅಘನಾಶಿನಿ ನದಿಗೆ ಬಾಗೀನ ಅರ್ಪಿಸಿ ಪೂಜೆ ಸಲ್ಲಿಸಿದ ಶ್ರೀಗಳು ಚಾತುರ್ಮಾಸ್ಯ ವ್ರತಾಚರಣೆಯ ಸಿಮೋಲ್ಲಂಘನ ಕಾರ್ಯಕ್ರಮವನ್ನು ನೆರವೇರಿಸಿದರು.

ನಂತರ ನದಿ ತೀರದಿಂದ ದಿವಗಿಯ ಶ್ರೀ ರಮಾನಂದ ಸ್ವಾಮಿಗಳ ಮಠಕ್ಕೆ ಆಗಮಿಸಿದರು. ಮಠಕ್ಕೆ ಆಗಮಿಸಿದ ಶ್ರೀಗಳಿಗೆ ಭವ್ಯ ಸ್ವಾಗತ ಕೋರಲಾಯಿತು. ನಂತರ ಮಠದಲ್ಲಿರುವ ಆಂಜನೇಯನಿಗೆ ಪೂಜೆ ಸಲ್ಲಿಸಿ ಪ್ರಸಾದವನ್ನು ಶ್ರೀಗಳು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಟದ ವತಿಯಿಂದ ಉಭಯ ಶ್ರೀಗಳಿಗೆ ಕುಮಟಾದ ಖ್ಯಾತ ವೈದ್ಯರು ಹಾಗೂ ಬಿಜೆಪಿ ಮುಖಂಡರಾದ ಡಾ. ಜಿ.ಜಿ. ಹೆಗಡೆ ಅವರು ಗೌರವಪೂರ್ವಕವಾಗಿ ಸನ್ಮಾನಿಸಿ ಫಲ ಪುಷ್ಪ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು. ನಂತರ ಶ್ರೀಗಳು ಮಠದ ಗುರುಗಳಾಗಿದ್ದ ಶ್ರೀ ರಮಾನಂದ ಸ್ವಾಮಿಗಳ ಸಮಾಧಿಯ ದರ್ಶನ ಪಡೆದರು. ನಂತರ ಸ್ವಾಮೀಜಿಗಳು ಪುನಃ ಕೋನಳ್ಳಿಗೆ ವಾಪಾಸ್ಸಾಗಿ ವನದುರ್ಗಾ ಸಭಾಭವನದಲ್ಲಿ ಧರ್ಮಸಭೆ ನಡೆಸಿದರು.

ಧರ್ಮಸಭೆಯ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷ ಸತೀಶ ನಾಯ್ಕ, ಉದ್ಯಮಿಗಳಾದ ಮುರುಳೀಧರ ಪ್ರಭು, ಕಾಂಗ್ರೆಸ್ ಮುಖಂಡರಾದ ಮಂಜುನಾಥ ನಾಯ್ಕ, ರತ್ನಾಕರ ನಾಯ್ಕ, ಜೆಡಿಎಸ್ ಮುಖಂಡರಾದ ಸೂರಜ್ ನಾಯ್ಕ ಸೋನಿ, ಕುಮಟಾ ನಾಮಧಾರಿ ಸಂಘದ ಅಧ್ಯಕ್ಷ ಮಂಜುನಾಥ ನಾಯ್ಕ, ಹೊನ್ನಾವರ ನಾಮಧಾರಿ ಅಧ್ಯಕ್ಷ ಟಿ.ಟಿ. ನಾಯ್ಕ, ಪ್ರಮುಖರಾದ ಎಚ್.ಆರ್. ನಾಯ್ಕ ಕೋನಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್ ದೀಪೇಶ ನಾಯ್ಕ ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಅಂಕೋಲಾದಲ್ಲಿ ಇಂದು ಪಂಚದೇವರ ದೊಡ್ಡ ಕಾರ್ತಿಕೋತ್ಸವ : ಶಿರ ಕುಳಿ ಕಾನದೇವಿ ದೇವಸ್ಥಾನದ ಹತ್ತಿರ ವನಭೋಜನಕ್ಕೆ ನಡೆಯುತ್ತಿದೆ ಸಿದ್ದತೆ

ಅಂಕೋಲಾ: ತಾಲೂಕಿನ ಸಂಸ್ಕೃತಿಯ ಆರಾಧನಾ ಪದ್ಧತಿಯಾಗಿ ಹಲವು ತಲೆಮಾರುಗಳಿಂದ ಆಚರಿಸಲ್ಪಡುತ್ತಬಂದಿರುವ ಪಂಚ ದೇವರುಗಳ ದೊಡ್ಡ ಕಾರ್ತಿಕೋತ್ಸವ ಮತ್ತು ವನಭೋಜನ ಮಹೋತ್ಸವ ಈ ಬಾರಿ ನವೆಂಬರ್ 7ರ ಶುಕ್ರವಾರ (ಇಂದು), ಮತ್ತು 8...

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಆಗಿದ್ದು, ಇದೀಗ ಶನಿವಾರ ( ನವೆಂಬರ್ 8 ರಂದು ) ರಾತ್ರಿ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...

ಆಂಬ್ಯುಲೆನ್ಸ್ ಡಿಕ್ಕಿ : ಭಟ್ಕಳದ ದಂಪತಿ ಬೆಂಗಳೂರಿನಲ್ಲಿ ದುರಂತ ಸಾವು

ಭಟ್ಕಳ: ವೇಗವಾಗಿ ಬಂದ ಆಂಬ್ಯುಲೆನ್ಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಟ್ಕಳ ಮೂಲದ ದಂಪತಿ...

ಪಲ್ಟಿಯಾದ ಬಸ್: 45 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಅಂಕೋಲಾ: ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾಗಿರುವ ಗೋಕರ್ಣ ವಡ್ದೀಘಾಟ ಹೆದ್ದಾರಿ ತಿರುವಿನಲ್ಲಿ ಸಾರಿಗೆ ಸಂಸ್ಥೆಯ ಬಸ್ಸೊಂದು...

KDCC ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಸಂತ ನಾಯಕ ಜಮಗೋಡ : ಈ ಬಾರಿ ಹೆಚ್ಚಿದ ಗೆಲುವಿನ ನಿರೀಕ್ಷೆ

ಅಂಕೋಲಾ : ಸಹಕಾರಿ ಮತ್ತು ಸಾಮಾಜಿಕ, ಧಾರ್ಮಿಕ ಮತ್ತಿತರ ಕ್ಷೇತ್ರಗಳಲ್ಲಿ ಸದಾ ಮಂಚೂಣಿಯಲ್ಲಿರುವ ನಾಯಕ ಎಂದು...

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ...

ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶೀ ಮೇಳ: ಅಕ್ಟೋಬರ್ 7, 8,9 ರಂದು ಆಯೋಜನೆ

ಅಂಕೋಲಾ : ರಾಘವೇಂದ್ರ ಇವೆಂಟ್ಸ್ ಅಂಕೋಲಾ ಹಾಗೂ ಬೆನಕ ಇವೆಂಟ್ಸ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ...