Big News

ಕುಮಟಾದಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ

Share

ಕುಮಟಾ: ದಿನಾಂಕ 20-08-2025 ರಂದು ರೋಟರಿ ಹಾಲ್ ಕುಮಟಾ ದಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ ಮಾಡಲಾಯಿತು. ಕಾರ್ಯಕ್ರಮವನ್ನು ವೀಣಾ ಕಾಮತ್ ಪ್ರಾಚಾರ್ಯರು. ಡಾ. ಎ. ವಿ. ಬಾಳಿಗ ಕಲಾ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜು ಕುಮಟಾರವರು ಉದ್ಘಾಟಿಸಿದರು.

ಕೇಂದ್ರ ಸರ್ಕಾರವು ಕೊಂಕಣಿ ಭಾಷೆಗೆ 1992 ಆಗಸ್ಟ್ 20 ರಂದು ಮಾನ್ಯತೆ ನೀಡಿರುತ್ತದೆ. ಕೊಂಕಣಿ ಮಾತನಾಡುವ ಮಾತೃಭಾಷೆ ಹೊಂದಿರುವ ಕುಮಟಾ ತಾಲೂಕಿನ ಎಲ್ಲಾ ಸಮುದಾಯದವರು ಒಗ್ಗಟ್ಟಾಗಿ ಕೊಂಕಣಿ ಭಾಷೆ ಅಭಿವೃದ್ಧಿಪಡಿಸಬಕು. ತಾಯಿ ಭಾಷೆಯನ್ನು ಜೀವನದಲ್ಲಿ ಎಂದು ಮರೆಯಬಾರದು. ಇಂದಿನ ವಿದ್ಯಾರ್ಥಿಗಳು ಕೊಂಕಣಿ ಭಾಷೆ ಕಲಿಯಲು, ಮಾತನಾಡಲು ಹಿಂಜರಿಯುತ್ತಿದ್ದಾರೆ ಎಂದರು. ಮುಖ್ಯ ಅಥಿತಿಗಳಾಗಿ ಶ್ರೀ ಕೃಷ್ಣ ಕಾಮ್ಕರ್ ತಹಶೀಲ್ದಾರ್ ಕುಮಟಾ ರವರು ಮಾತನಾಡಿ ಕೊಂಕಣಿ ಮಾತನಾಡುವವರು ಪರಸ್ಪರ ಕೊಂಕಣಿ ಭಾಷೆಯಲ್ಲಿಯೇ ಮಾತನಾಡಿಕೊಳ್ಳಬೇಕು. ಮಾತೃಭಾಷೆಯಲ್ಲಿ ಮಾತನಾಡಿಕೊಂಡರೆ ಸಂವಹನವು ಉತ್ತಮವಾಗುತ್ತದೆ, ಸ್ಪಷ್ಟವಾಗಿ ಅರ್ಥವಾಗುತ್ತದೆ ಎಂದರು.

ಮುಖ್ಯ ಅತಿಥಿ ಮುರುಳಿಧರ ಪ್ರಭುರವರು ಮಾತನಾಡಿ ಕೊಂಕಣಿ ಭಾಷೆ ಮಾತನಾಡುವ ನಾವು ನಮ್ಮ ಭಾಷೆಯ ಬಗ್ಗೆ ಎಂದಿಗೂ ಸ್ವಾಭಿಮಾನದಿಂದ ಇರಬೇಕು. ಇಂಗ್ಲಿಷ್, ಹಿಂದಿ,ಕನ್ನಡ. ಭಾಷೆಯ ಜೊತೆಗೆ ಕೊಂಕಣಿಯನ್ನು ಅಭಿವೃದ್ಧಿ ಪಡಿಸಬೇಕು. ಅನೇಕ ಕೊಂಕಣಿ ಸಾಹಿತಿಗಳು ಕೊಂಕಣಿ ಭಾಷೆಯ ಬಗ್ಗೆ ಹೋರಾಟ ಮಾಡಿದ್ದಾರೆ. ಖ್ಯಾತ ಕವಿ ಗೋವಿಂದ ಪೈರವರು ಕೊಂಕಣಿ ಭಾಷಗೆ ನೀಡಿದ ಕೊಡುಗೆ ತಿಳಿಸಿದರು.ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಎಸ್ ಜಿ ನಾಯ್ಕ್ , ಕುಮಟಾ ರವರು ಇಂದಿನ ಮಕ್ಕಳಿಗೆ ಕೊಂಕಣಿ ಭಾಷೆಯ ಸಂಖ್ಯೆಗಳನ್ನು ಕಲಿಸಬೇಕೆಂದರು ಕುಮಟಾ ಕೊಂಕಣಿ ಪರಿಷತ್ ನಡೆದು ಬಂದ ಬಗೆ ತಿಳಿಸಿದರು.

ಮಹಾಲಕ್ಷ್ಮಿ ಶಾನ್ಭಾಗ್ ಪ್ರಾರ್ಥಿಸಿದರು. ಶ್ರೀಕಾಂತ್ ರಘುನಾಥ್ ಕಾಮತ್ ಕಾಮತ್ ಬುಕ್ ಸ್ಟಾಲ್. ಕುಮಟಾ ಇವರ ನಿಶ್ವಾರ್ಥ ಸೇವೆಗಾಗಿ ಅವರನ್ನು ಹಾಗು.ಡಾ. ವನಮಾಲಾ ದಯಾನಂದ ಶಾನಭಾಗ್, ನಿವೃತ್ತ ವೈದ್ಯಾಧಿಕಾರಿ. ತಾಲೂಕ ಆಸ್ಪತ್ರೆ ಕುಮಟಾ,ರವರನ್ನು ಸನ್ಮಾನಿಸಲಾಯಿತು. ವನಿತಾ ಸಿರೀಶ್ ನಾಯಕ ರವರ ರಚನೆಯ, “.ಮದುವೆಯ ಲಾಡು “. ನಾಟಕ ಪ್ರದರ್ಶಿಸಲಾಯಿತು. ಕೊಂಕಣಿ ಪರಿಷತ್ ಅಧ್ಯಕ್ಷರಾದ ಅರುಣ ಉಭಯಕರ್ ಉಪಸ್ಥಿತರಿದ್ದರು. ನಯನ ಪ್ರಭು ನೇತ್ರತ್ವದ ನಾಧಶ್ರೀ ಕಲಾ ಕೇಂದ್ರದ,ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು, ನಿರ್ಮಲ ಪ್ರಭು ಕಾರ್ಯದರ್ಶಿಗಳು ಸ್ವಾಗತಿಸಿದರು. ಅರುಣ ಮಣಕಿಕರ್ ನಿರೂಪಿಸಿದರು. ಆನಂದ್ ನಾಯ್ಕ್ ವಂದಿಸಿದರು, ಎಂ ಕೆ ಶಾನ್ಭಾಗ್, ದೀಪಾ ಕಾಮತ್, ಶ್ರದ್ಧಾ ಭಟ್, ಇತರರು ಇದ್ದರು. ಸ್ಪರ್ಧೆ ಯಲ್ಲಿ ವಿಜೇತ ರದವರಿಗೆ ಬಹುಮಾನ ನೀಡಲಾಯಿತು.

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ ತರಬಹುದು,ಇಂತಹದೊoದು ಪ್ರಕೃತಿ ವಿಸ್ಮಯ ನಡೆದದ್ದು ದೂರದಲ್ಲೆಲ್ಲೋ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ...

ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗೆ ಸರ್ಚ್ ವಾರೆಂಟ್ ಮೇಲೆ ಬಂದ ಲೋಕಾಯುಕ್ತರ ತಂಡ : ಯಾಕೆ ನೋಡಿ?

ಅಂಕೋಲಾ‌ : ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮುಂತಾದ ಕೆಲಸಗಳಲ್ಲಿ ಅನಗತ್ಯ ವಿಳಂಬ ಮತ್ತು ಏಜೆಂಟರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ...

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ...

ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ : ಆರೋಪಿ ಬಂಧನ

ಅಂಕೋಲಾ: ಪಟ್ಟಣದಲ್ಲಿ ನಿಲ್ಲಿಸಿಟ್ಟ ಮೋಟಾರ್ ಬೈಕ್ ಕಳ್ಳತನ ಮಾಡಿದ್ದ ಆರೋಪಿತನನ್ನು ಅಂಕೋಲಾ ಪೊಲೀಸರು ವಾಹನ ಸಮೇತ...

ರಾಷ್ಟ್ರೀಯ ಮೆಗಾ ಲೋಕ ಅದಾಲತ್ ನಲ್ಲಿ ಒಟ್ಟೂ 167 ಪ್ರಕರಣಗಳು ರಾಜೀ ಸಂಧಾನದಲ್ಲಿ ಇತ್ಯರ್ಥ

ಅಂಕೋಲಾ: ತಾಲೂಕಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಸೆ 13 ರ ಶನಿವಾರ...

ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ ಶಿಕ್ಷಕ ದಿನಾಚರಣೆ: ಶಿಕ್ಷಕ ರಾಷ್ಟ್ರ ರಕ್ಷಕ ಕಾರ್ಯಕ್ರಮ

ಕುಮಟಾ: ತಾಯಿ ಮಗುವಿಗೆ ಜನ್ಮ ನೀಡುತ್ತಾಳೆ, ಶಿಕ್ಷಕ ಆ ಮಗುವಿಗೆ ಜ್ಞಾನ ನೀಡಿ ಕಣ್ತೆರೆಯಿಸಿ ಒಳ್ಳೆಯ...

ಭೂಮಿತಾಯಿಯ ಹೊಸ್ತಿನ ಹಬ್ಬ : ಕೃಷಿ ಮತ್ತು ಶ್ರಮ ಪ್ರಧಾನ ಸಂಸ್ಕೃತಿಯ ಪ್ರತೀಕ

ಅಂಕೋಲಾ: ಭೂಮ್ತಾಯಿ ಎಂದೇ ಪ್ರಸಿದ್ಧಿ ಪಡೆದಿರುವ ತಾಲೂಕಿನ ಹಾಗೂ ಇತರಡೆಯ ಅಸಂಖ್ಯ ಭಕ್ತರ ಪಾಲಿನ ಶಕ್ತಿ...

ಅಕ್ರಮ ಗೋಸಾಗಾಟ: 7 ಲಕ್ಷ ಮೌಲ್ಯದ ಜಾನುವಾರು ವಶಕ್ಕೆ

ಭಟ್ಕಳ: ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ಪ್ರಕರಣ ಪದೇ ಪದೇ ಸದ್ದು ಮಾಡುತ್ತಿದ್ದು, ಬೆಳಗಿನ ಜಾವ ಗ್ರಾಮೀಣ...

ಕುಮಟಾ ಪೊಲೀಸ್ ಗಣೇಶೋತ್ಸವ ಸಂಭ್ರಮ: ನೂರಾರು ಭಕ್ತರಿಂದ ಪ್ರಸಾದ ಸ್ವೀಕಾರ

ಕುಮಟಾ: ಪಟ್ಟಣದ ಎಲ್ಲಡೆ ಸಂಭ್ರಮದಿoದ ಗಣೇಶ ಚತುರ್ಥಿಯನ್ನು ಆಚರಿಸಲಾಗಿದ್ದು ಕುಮಟಾ ಪೊಲೀಸ್ ಠಾಣೆಯ ಆರಾಧ್ಯ ದೇವರು...