Important

ಅಂಕೋಲಾ ಕೇಣಿ ವಾಣಿಜ್ಯ ಬಂದರು ಯೋಜನೆ ಕೈ ಬಿಡಬೇಕು : ಮುಖ್ಯಮಂತ್ರಿಗಳಿಗೆ ಮನವಿ

Share

ಬೆಳಂಬಾರದ ಸಾಂಪ್ರದಾಯಿಕ ಮೀನುಗಾರರ ಜೀವನಕ್ಕೆ ಭಾರೀ ಧಕ್ಕೆ: 1200 ಕ್ಕೂ ಹೆಚ್ಚು ಮನೆಗಳಿಗೆ ಅಪಾಯ

  • 1200 ಕ್ಕೂ ಹೆಚ್ಚು ಮೀನುಗಾರರ ಮನೆಗಳಿಗೆ ಅಪಾಯ
  • ಅಲೆಗಳ ಅಬ್ಬರ ಹೆಚ್ಚಿಸುವ ಭೀತಿ
  • ಮನೆ, ದೋಣಿ, ಉಪಕರಣಗಳಿಗೆ ನಷ್ಟದ ಸಾಧ್ಯತೆ
  • ಮೀನುಗಾರರ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ

ಅಂಕೋಲಾ, ಆಗಸ್ಟ್ 21 : ತಾಲೂಕಿನ ಕೇಣಿಯಲ್ಲಿ ಉದ್ದೇಶಿತವಾಗಿರುವ ವಾಣಿಜ್ಯ ಬಂದರು ನಿರ್ಮಾಣ ಯೋಜನೆಯನ್ನು ಕೈ ಬಿಡುವಂತೆ, ಯುವ ಮೀನುಗಾರ ಮುಖಂಡ ಹಾಗೂ ಬೆಳಂಬಾರದ ನಾಡದೋಣಿ ಸಂಘದ ಕಾರ್ಯದರ್ಶಿ ಸುಂದರ್ ಖಾರ್ವಿ ಅವರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಧರ್ಮಸ್ಥಳಕ್ಕೆ ಕಪ್ಪುಚುಕ್ಕೆ ತರುವ ಪ್ರಯತ್ನ: ಬೃಹತ್ ಜನಾಗ್ರಹ-ಧರ್ಮಸಭೆ

ಬಂದರು ನಿರ್ಮಾಣದಿಂದ ಉಂಟಾಗುವ ಆತಂಕ ಏನು?

ಯೋಜನೆಯ ಪ್ರಕಾರ ಸಮುದ್ರದಲ್ಲಿ ಸುಮಾರು 4000 ಮೀಟರ್ ಉದ್ದದ ತಡೆಗೋಡೆ ನಿರ್ಮಾಣವಾಗಲಿದೆ.
ನೈರುತ್ಯ ದಿಕ್ಕಿನಿಂದ ಬೀಸುವ ಗಾಳಿ ಈ ತಡೆಗೋಡೆಗೆ ಬಡಿದು, ಬೆಳಂಬಾರದ ಕಡೆಗೆ ಅಲೆಗಳ ಅಬ್ಬರವನ್ನು ಹೆಚ್ಚಿಸಲಿದೆ.
ಇದರ ಪರಿಣಾಮವಾಗಿ ಭಾರೀ ಅಲೆಗಳು ಬೆಳಂಬಾರ ಕಡಲ ತೀರಕ್ಕೆ ಅಪ್ಪಳಿಸುವ ಅಪಾಯವಿದೆ.

ಮೀನುಗಾರರ ಮನೆಗಳು ಮತ್ತು ದೋಣಿಗಳಿಗೆ ಅಪಾಯ

ಬೆಳಂಬಾರ ಕಡಲ ತೀರದಲ್ಲಿ ವಾಸಿಸುವ 1200 ಕ್ಕೂ ಹೆಚ್ಚು ಮೀನುಗಾರರ ಮನೆಗಳು ಅಪಾಯಕ್ಕೊಳಗಾಗುವ ಭೀತಿ.ದಡದಲ್ಲಿ ನಿಲ್ಲಿಸಿರುವ ಸಾಂಪ್ರದಾಯಿಕ ನಾಡದೋಣಿಗಳು ಕೊಚ್ಚಿ ಹೋಗುವ ಸಾಧ್ಯತೆ. ಮನೆ, ದೋಣಿ, ಉಪಕರಣಗಳನ್ನು ಕಳೆದುಕೊಂಡು ಮೀನುಗಾರರು ಸಂಕಷ್ಟಕರ ಜೀವನ ನಡೆಸಬೇಕಾದ ಪರಿಸ್ಥಿತಿ ಎದುರಾಗಬಹುದು.

ಸುಂದರ್ ಖಾರ್ವಿ ಅವರ ಆಗ್ರಹ

ಮೀನುಗಾರರು ಮುಗ್ಧರಾಗಿದ್ದು ಅವರಿಗೆ ಅಗತ್ಯ ಜೀವ ರಕ್ಷಣಾ ಸಲಕರಣೆಗಳು ಮತ್ತು ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕು.ಕೇಣಿಯ ವಾಣಿಜ್ಯ ಬಂದರು ಯೋಜನೆಯನ್ನು ತಕ್ಷಣವೇ ಕೈಬಿಡಬೇಕು. ಮೀನುಗಾರ ಸಮುದಾಯದ ಪರವಾಗಿ ಅವರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ್ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...