Important

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸಚಿವರಿಗೆ ಮನವಿ: ಏನೇನು ಚರ್ಚೆ?

Share
  • ಅಕ್ರಮ ಆಮದು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ
  • ತೇವಾಂಶ & ಗುಣಮಟ್ಟದ ಮಾನದಂಡಗಳ ಪರಿಷ್ಕರಣೆ ಮಾಡಬೇಕು
  • ದೋಟಿ ಮೇಲೆ ಸುಂಕ ಕಡಿಮೆ ಮಾಡಿ
  • ಬೆಳೆ ವಿಮಾ ಸೌಲಭ್ಯ ಬಲಪಡಿಸಿ

ದೆಹಲಿ: ದೆಹಲಿಯಲ್ಲಿ ಕೇಂದ್ರ ಸಚಿವರು ಹಾಗೂ ಕರ್ನಾಟಕದ ರಾಜ್ಯದ ಅಡಿಕೆ ಬೆಳೆಯುವ ಪ್ರದೇಶದ ಲೋಕಸಭಾ ಸದಸ್ಯರು ಮತ್ತು ಅಡಿಕೆ ಬೆಳೆಗಾರರ ಸಂಘಗಳ ಪ್ರತಿನಿಧಿಗಳ ನಿಯೋಗವು ಕೇಂದ್ರ ಸರ್ಕಾರಕ್ಕೆ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ನಿಯೋಗವು ಭೇಟಿ ಮಾಡಿತು.

ಗಣೇಶ ಚತುರ್ಥಿ 2025: ಸರ್ಕಾರದ ಮಾರ್ಗಸೂಚಿ ಹೀಗಿದೆ: ಕಡ್ಡಾಯವಾಗಿ ಪಾಲಿಸಬೇಕಾದ ನಿಯಮಗಳು

ನಿಯೋಗವು ತಮ್ಮ ಮನವಿಯಲ್ಲಿ ಪ್ರಮುಖವಾಗಿ ಹಳದಿ ಎಲೆ ರೋಗ ಮತ್ತು ಕೊಳೆ ರೋಗದಂತಹ ಮಾರಕ ರೋಗಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ, ಹಾಗೂ ಅಡಿಕೆ ಬೆಳೆ ಮತ್ತು ಮಾನವನ ಆರೋಗ್ಯದ ಕುರಿತು ವೈಜ್ಞಾನಿಕ ವರದಿಯನ್ನು ತುರ್ತಾಗಿ ತರಿಸಿಕೊಳ್ಳಬೇಕು ಎಂದು ಸಚಿವರಿಗೆ ಒತ್ತಾಯಿಸಿತು.

ಅಕ್ರಮ ಆಮದು ನಿಯಂತ್ರಣಕ್ಕೆ ಕಠಿಣ ಕ್ರಮಗಳಿಗೆ ಒತ್ತಾಯ

ಅಡಿಕೆಯ ಅಕ್ರಮ ಆಮದನ್ನು ತಡೆಯಲು ಕಸ್ಟಮ್ಸ್ ವ್ಯವಸ್ಥೆಯನ್ನು ಬಲಪಡಿಸುವಂತೆ ನಿಯೋಗವು ಸರ್ಕಾರವನ್ನು ಒತ್ತಾಯಿಸಿತು. ಇದರ ಜೊತೆಗೆ, ಅಕ್ರಮ ವ್ಯಾಪಾರವನ್ನು ಹತ್ತಿಕ್ಕಲು ದೊಡ್ಡ ಪ್ರಮಾಣದ ಅಡಿಕೆ ಸಾಗಣೆಗಳಿಗೆ ಜಿಪಿಎಸ್ ಟ್ರ‍್ಯಾಕಿಂಗ್ ಅಳವಡಿಸುವಂತೆ ಮತ್ತು ಅಡಿಕೆ ಆಮದು ಮಾಡುವ ಮೊದಲು ಸ್ಥಳೀಯ ಸಹಕಾರಿ ಸಂಸ್ಥೆಗಳಾದ ಕ್ಯಾಂಪ್ಕೋ, ಟಿಎಸ್‌ಎಸ್, ಮಾಮ್ಕೋಸ್ ಹಾಗೂ ಇನ್ನಿತರ ಸಂಸ್ಥೆಗಳೊoದಿಗೆ ಸಮಾಲೋಚನೆ ನಡೆಸುವಂತೆ ಮನವಿ ಮಾಡಿದರು.

ಇದನ್ನೂ ಓದಿ: 26 ಮತ್ತು 14 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

ತೇವಾಂಶ ಮತ್ತು ಗುಣಮಟ್ಟದ ಮಾನದಂಡಗಳ ಪರಿಷ್ಕರಣೆ

ರೈತರಿಗೆ ಅನುಕೂಲವಾಗುವಂತೆ ಅಡಿಕೆಯಲ್ಲಿನ ತೇವಾಂಶ ಮಟ್ಟವನ್ನು ಶೇ.7 ರಿಂದ ಶೇ.11-12ಕ್ಕೆ ಹೆಚ್ಚಿಸುವಂತೆ ಎಫ್‌ಎಸ್‌ಎಸ್‌ಎಐಗೆ ಮನವಿ ಸಲ್ಲಿಸಲಾಯಿತು. ಸೂರ್ಯನ ಬೆಳಕಿನಲ್ಲಿ ಶೇ.7 ತೇವಾಂಶವನ್ನು ಕಾಯ್ದುಕೊಳ್ಳುವುದು ರೈತರಿಗೆ ಕಷ್ಟಕರ ಎಂದು ನಿಯೋಗವು ವಿವರಿಸಿತು. ಅಲ್ಲದೆ, ಭಾರತೀಯ ಮಾನದಂಡಗಳ ಬ್ಯೂರೋ (ಬಿಐಎಸ್) ನಿಗದಿಪಡಿಸಿರುವ ಅಡಿಕೆ ಗ್ರೇಡಿಂಗ್ ಮಾನದಂಡಗಳನ್ನು ಪುನರ್ ಪರಿಶೀಲಿಸಿ, ಸ್ಥಳೀಯ ಭೌಗೋಳಿಕ ವ್ಯತ್ಯಾಸಗಳನ್ನು ಗಣನೆಗೆ ತೆಗೆದುಕೊಳ್ಳುವಂತೆ ಕೋರಿದರು.

ಬೆಳೆಗಾರರಿಗೆ ಆರ್ಥಿಕ ನೆರವು ಮತ್ತು ತೆರಿಗೆ ಕಡಿತಕ್ಕೆ ಮನವಿ

ಸಹಕಾರಿ ಸಂಸ್ಥೆಗಳಿಗೆ ನೀಡುವ ಸಾಲಗಳ ಮೇಲಿನ ಬಡ್ಡಿದರ ಕಡಿಮೆ ಮಾಡಿ, ಕಾರ್ಪೊರೇಟ್‌ಗಳ ಮಾದರಿಯಲ್ಲಿ ಕ್ರೆಡಿಟ್ ರೇಟಿಂಗ್ ಅನ್ವಯಿಸದೆ ಹೊಸ ಮಾನದಂಡಗಳನ್ನು ರೂಪಿಸುವಂತೆ ನಿಯೋಗವು ಸಚಿವರನ್ನು ಒತ್ತಾಯಿಸಿತು. ಇದರಿಂದ ರೈತರಿಗೆ ಸುಲಭವಾಗಿ ಸಾಲ ದೊರೆಯಲು ಸಹಾಯವಾಗುತ್ತದೆ ಎಂದು ನಿಯೋಗ ಹೇಳಿತು.ಅಲ್ಲದೆ, ಅಡಿಕೆಗೆ ಬಳಸುವ ಕಾಪರ್ ಸಲ್ಫೇಟ್ ಮೇಲಿನ ಜಿಎಸ್‌ಟಿ ದರವನ್ನು ಶೇ.18 ರಿಂದ ಶೇ.5ಕ್ಕೆ ಮತ್ತು ಅಡಿಕೆ ಮೇಲಿನ ಜಿಎಸ್‌ಟಿ ದರವನ್ನು ಇಳಿಸುವಂತೆ ಕೋರಿಕೆ ಸಲ್ಲಿಸಲಾಯಿತು.

ಬೆಳೆ ವಿಮೆ ಮತ್ತು ಸಂಗ್ರಹಣಾ ಸೌಲಭ್ಯಗಳ ಬೇಡಿಕೆ

ಬೆಳೆ ನಷ್ಟದಿಂದ ರೈತರನ್ನು ರಕ್ಷಿಸಲು ಬೆಳೆ ವಿಮಾ ಸೌಲಭ್ಯಗಳನ್ನು ಬಲಪಡಿಸುವಂತೆ ನಿಯೋಗವು ಮನವಿ ಮಾಡಿತು. ಇದರ ಜೊತೆಗೆ, ರೈತರು ಕಡಿಮೆ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ತಪ್ಪಿಸಲು ಸಹಕಾರಿ ಸಂಸ್ಥೆಗಳಿಗೆ ಸಬ್ಸಿಡಿ ದರದಲ್ಲಿ ಹಣಕಾಸು ಒದಗಿಸಿ ಗೋದಾಮಿನ ಸೌಲಭ್ಯಗಳನ್ನು ನಿರ್ಮಿಸಲು ನೆರವಾಗುವಂತೆ ಕೋರಲಾಯಿತು.

ಇತರೆ ಪ್ರಮುಖ ಬೇಡಿಕೆಗಳು

ಅಮೆರಿಕಾದಲ್ಲಿ ಅಡಿಕೆ ಎಲೆಗಳಿಂದ ಮಾಡಿದ ಬಯೋಡಿಗ್ರೇಡಬಲ್ ಪ್ಲೇಟ್‌ಗಳನ್ನು ಕ್ಯಾನ್ಸರ್-ಕಾರಕ ಎಂದು ಘೋಷಿಸಿರುವುದರಿಂದ ಉಂಟಾದ ರಫ್ತು ಸಮಸ್ಯೆಗಳನ್ನು ಬಗೆಹರಿಸಲು ವೈಜ್ಞಾನಿಕ ಅಧ್ಯಯನ ನಡೆಸುವಂತೆ ಒತ್ತಾಯ. ಕಾರ್ಬನ್ ಫೈಬರ್ ದೋಟಿ ಮತ್ತು ಇತರೆ ಕೃಷಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲು ಮನವಿ. ನಿಯೋಗದ ಎಲ್ಲಾ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಎಲ್ಲಾ ವಿಷಯಗಳನ್ನು ಪರಿಶೀಲಿಸಿ ಅಡಿಕೆ ಬೆಳೆಗಾರರಿಗೆ ಅನುಕೂಲವಾಗುವಂತಹ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಶ್ರೀ ಎಚ್ ಡಿ ಕುಮಾರಸ್ವಾಮಿ, ಶ್ರೀ ವಿ ಸೋಮಣ್ಣ, ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀ ಗೋವಿಂದ ಕಾರಜೋಳ, ಶ್ರೀ ಕೋಟ ಶ್ರೀನಿವಾಸ್ ಪೂಜಾರಿ, ಶ್ರೀ ಬಿ ವೈ ರಾಘವೇಂದ್ರ, ಶ್ರೀ ಬ್ರಿಜೇಶ್ ಚೌಟ, ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಶಾಸಕರು ಮತ್ತು ಅಡಿಕೆ ಮಹಾಮಂಡಳದ ಅಧ್ಯಕ್ಷರಾದ ಶ್ರೀ ಅರಗ ಜ್ಞಾನೇಂದ್ರ, ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡಗಿ, ಸೇರಿದಂತೆ ಅಡಿಕೆ ಬೆಳೆಗಾರರ ವಿವಿಧ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

ಕ್ಷುಲ್ಲಕ ಕಾರಣಕ್ಕೆ ಜಗಳ: ವ್ಯಕ್ತಿಗೆ ಇರಿತ

ಭಟ್ಕಳ: ವಾರದ ಸಂತೆಯಲ್ಲಿ ವ್ಯಾಪಾರಿಯೊಬ್ಬರ ಹತ್ತಿರ ಕೆಲಸ ಮಾಡುತ್ತಿದ್ದ ಇಬ್ಬರು ಕೆಲಸಗಾರರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದ ಚೂ-ರಿ ಇರಿತದಲ್ಲಿ ಕೊನೆಗೊಂಡ ಘಟನೆ ನಡೆದಿದೆ. ಹಾನಗಲ್ ಮೂಲದ ಹಾಲಿ...

📰 ನಿಮ್ಮ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರಿನ ಸಭೆ, ಸಮಾರಂಭ, ಪ್ರತಿಭಟನೆ ಮತ್ತು ವಿಶೇಷ ವರದಿಗಳನ್ನು ನಮಗೆ ಕಳುಹಿಸಿ.

✉️ Gmail: [email protected]

📲 WhatsApp ಮೂಲಕ ಕಳುಹಿಸಿ ✉️ Gmail ಮೂಲಕ ಕಳುಹಿಸಿ

ಸರ್ಕಾರಿ ಇಲಾಖೆಯ ಕಟ್ಟಡದ ಇಕ್ಕಟ್ಟಾದ ಗೋಡೆಗಳ ಮಧ್ಯೆ ಪತ್ತೆಯಾದ ಸೂಟ್ ಕೇಸ್ ! ? ಕೊನೆಗೂ ಸೂಟ್ಕೇಸ್ ರಹಸ್ಯ

ಅಂಕೋಲಾ, ಆಗಸ್ಟ್ 26 : ಸರ್ಕಾರಿ ಇಲಾಖೆ ಒಂದರ ಕಟ್ಟಡದ ಗೋಡೆಗಳ ನಡುವಿನ ಇಕ್ಕಟ್ಟಾದ ಸ್ಥಳದಲ್ಲಿ ಯಾರೋ ತಂದಿಟ್ಟು ಹೋಗಿದ್ದರೆನ್ನಲಾದ ಸೂಟ್ ಕೇಸ್ ಒಂದು ಪಟ್ಟಣ ವ್ಯಾಪ್ತಿಯಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ್ದಲ್ಲದೇ,ಸೂಟ್ಕೇಸ್...

ಗಣಪತಿಗೆ ಜೀವ ಕಳೆ ತುಂಬುವ ಗಂಗಾವಳಿಯ ಶರತ್ ನಾಯ್ಕ್

ಕುಮಟಾ, ಆಗಸ್ಟ್ 26: ಪ್ರತಿಭೆ ಯಾರ ಸೊತ್ತಲ್ಲ. ಅದು ಸಾಧಕನ ಸ್ವತ್ತು ಎನ್ನುವ ಮಾತಿಗೆ ಅನುಗುಣವಾಗಿ ಇರುವವರು ಕುಮಟಾ ತಾಲೂಕಿನ ಗಂಗಾವಳಿಯ ಹೆಮ್ಮೆಯ ಪ್ರತಿಭೆ ಶರತ್ ನಾಯ್ಕ್ ಅವರು ಈಗಾಗಲೇ ಬೃಹತ್...

ವಿಶ್ವಾಸದ ಮತ್ತೊಂದು ಹೆಸರೇ ಅಲಂಕಾರ ಜ್ಯುವೆಲರ್ಸ್: ಅಂಕೋಲಾದಲ್ಲಿ ಭವ್ಯ ಶುಭಾರಂಭ

ಅಂಕೋಲಾ, ಆಗಸ್ಟ್ 24: ಪಟ್ಟಣದ ಬಂಡಿಬಜಾರ ಮುಖ್ಯ ರಸ್ತೆಯಂಚಿಗೆ ನವೀಕೃತಗೊಂಡಿರುವ ಭವ್ಯವಾದ ಕಟ್ಟಡದಲ್ಲಿ ಅಲಂಕಾರ ಜ್ಯುವೆಲರ್ಸ್ ನ ಬೃಹತ್ತ ಮಳಿಗೆ ಅಗಸ್ಟ್ 24 ರ ರವಿವಾರ ಶುಭ ಮುಹೂರ್ತದಲ್ಲಿ ಗ್ರಾಹಕರ ಸೇವೆಗೆ...

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Current date Tuesday , 26 August 2025
Related Articles

ಗಣಪತಿಗೆ ಜೀವ ಕಳೆ ತುಂಬುವ ಗಂಗಾವಳಿಯ ಶರತ್ ನಾಯ್ಕ್

ಕುಮಟಾ, ಆಗಸ್ಟ್ 26: ಪ್ರತಿಭೆ ಯಾರ ಸೊತ್ತಲ್ಲ. ಅದು ಸಾಧಕನ ಸ್ವತ್ತು ಎನ್ನುವ ಮಾತಿಗೆ ಅನುಗುಣವಾಗಿ...

ವಿಶ್ವಾಸದ ಮತ್ತೊಂದು ಹೆಸರೇ ಅಲಂಕಾರ ಜ್ಯುವೆಲರ್ಸ್: ಅಂಕೋಲಾದಲ್ಲಿ ಭವ್ಯ ಶುಭಾರಂಭ

ಅಂಕೋಲಾ, ಆಗಸ್ಟ್ 24: ಪಟ್ಟಣದ ಬಂಡಿಬಜಾರ ಮುಖ್ಯ ರಸ್ತೆಯಂಚಿಗೆ ನವೀಕೃತಗೊಂಡಿರುವ ಭವ್ಯವಾದ ಕಟ್ಟಡದಲ್ಲಿ ಅಲಂಕಾರ ಜ್ಯುವೆಲರ್ಸ್...

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್...

ಕ್ಷುಲ್ಲಕ ಕಾರಣಕ್ಕೆ ಜಗಳ: ವ್ಯಕ್ತಿಗೆ ಇರಿತ

ಭಟ್ಕಳ: ವಾರದ ಸಂತೆಯಲ್ಲಿ ವ್ಯಾಪಾರಿಯೊಬ್ಬರ ಹತ್ತಿರ ಕೆಲಸ ಮಾಡುತ್ತಿದ್ದ ಇಬ್ಬರು ಕೆಲಸಗಾರರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ...