Important

ಸಿನೆಮಾ ಶೈಲಿಯಲ್ಲಿ ಹಣ ಸುಲಿಗೆ ಯತ್ನ : ಖಾಕಿ ಬಲೆಗೆ ಬಿದ್ದ ಆರೋಪಿಗಳು

Share
  • ತರಕಾರಿ ವ್ಯಾಪಾರಿಗೆ 20 ಲಕ್ಷಕ್ಕೆ ಬೇಡಿಕೆ
  • ಬ್ಲಾಕ್ ಮೇಲ್ ಮಾಡಿದ್ದು ಯಾಕೆ?
  • ಮೂವರು ಯುವಕರ ಬಂಧನ

ಭಟ್ಕಳ, ಆಗಸ್ಟ್ 24: ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಎಂಬ ಗಾದೆ ಮಾತಿದೆ. ಆ ಮಾತಿಗೆ ಅನ್ವರ್ಥಕವಾಗಿ ಭಟ್ಕಳ ತಾಲೂಕಿ ಪ್ರಸಿದ್ಧ ತರಕಾರಿ ವ್ಯಾಪಾರಿಯೊಬ್ಬರಿಗೆ ಮಗಳ ಖಾ-ಸಗಿ ವಿಡಿಯೋ ಇದೆ ಎಂದು ಬೆದರಿಸಿ ಇಡೀ ಕುಟುಂಬವನ್ನು ಸತತ ಎಂಟು ದಿನಗಳವರೆಗೆ ಕಾಡಿದ ಚೋರರ ಗ್ಯಾಂಗ್ ನ್ನು ಹೆಡೆಮುರಿ ಕಟ್ಟಲು ಶಹರಾ ಠಾಣೆಯ ಪೋಲಿಸರು ಯಶಸ್ವಿಯಾಗಿದ್ದಾರೆ. ಹೌದು, ನಿವಿಲ್ಲಿ ನೋಡ್ತಾ ಮೋಹಮ್ಮದ್ ಫಾರಿಶ್, ಮೊಹಮ್ಮದ್ ಅರ್ಶದ್, ಅಮನ್ ಮಸೂದ್ ಎಂಬ ಖದೀಮರನ್ನ.

ಪ್ರಕರಣದ ವಿವರ

ಆಗಸ್ಟ್ 16, 2025 ರಂದು, ಅನ್ವರ್ ಭಾಷಾ ಎಂಬ ಪ್ರಸಿದ್ಧ ತರಕಾರಿ ವ್ಯಾಪಾರಿಗೆ, ಮೂವರು ಆರೋಪಿಗಳು ಫೋನ್ ಮಾಡಿ – “ನಿನ್ನ ಮಗಳ ಖಾ-ಸಗಿ ಫೋಟೋ ಮತ್ತು ವಿಡಿಯೋ ನಮ್ಮ ಹತ್ತಿರ ಇದೆ. 20 ಲಕ್ಷ ರೂ. ಕೊಡದಿದ್ದರೆ ಎಲ್ಲರಿಗೂ ಹಂಚುತ್ತೇವೆ” ಎಂದು ಬೆದರಿಕೆ ಹಾಕಿದರು. ಇದಾದ ಎರಡು ದಿನಗಳ ನಂತರ (ಆಗಸ್ಟ್ 18), ಅದೇ ಗ್ಯಾಂಗ್ ವ್ಯಾಪಾರಿಯ ಪತ್ನಿಗೆ ಕರೆ ಮಾಡಿ 15 ಲಕ್ಷ ರೂ. ಬೇಡಿಕೆ ಇಟ್ಟಿತು. ಕುಟುಂಬ ಭಯಗೊಂಡು ತಕ್ಷಣವೇ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತು.

ಪೊಲೀಸರ ಕಾರ್ಯಚರಣೆ

ಪ್ರಕರಣ ಗಂಭೀರವೆಂದು ಪರಿಗಣಿಸಿದ ಪೊಲೀಸರು, ವೃತ್ತ ನಿರೀಕ್ಷಕ ದಿವಾಕರ ಪಿ.ಎಮ್. ಅವರ ಮಾರ್ಗದರ್ಶನದಲ್ಲಿ, ಪಿಎಸ್‌ಐ ನವೀನ್ ಎಸ್ ನಾಯ್ಕ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಯಿತು. ಮೊದಲ ಹಂತದ ಕಾರ್ಯಾಚರಣೆಯಲ್ಲಿ ಆರೋಪಿ ಗ್ಯಾಂಗ್ ಸಿನಿಮಿಯ ಮಾದರಿಯಲ್ಲಿ ತಪ್ಪಿಸಿಕೊಂಡರೂ, ದ್ವಿತೀಯ ಹಂತದಲ್ಲಿ ಪೊಲೀಸರು ಅವರನ್ನು ಬಲೆಗೆ ಬೀಸಿ ಬಂಧಿಸಿದರು. ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

ಖಾಕಿ ಬಲೆಗೆ ಬಿದ್ದ ಭಟ್ಕಳದ ಸುಲಿಗೆಕೋರರ ಗ್ಯಾಂಗ್

ಮೊದಲ ಹಂತದ ಕಾರ್ಯಾಚರಣೆಯಲ್ಲಿ ಆರೋಪಿ ಗ್ಯಾಂಗ್ ಸಿನಿಮಿಯ ಮಾದರಿಯಲ್ಲಿ ತಪ್ಪಿಸಿಕೊಂಡರೂ, ದ್ವಿತೀಯ ಹಂತದಲ್ಲಿ ಪೊಲೀಸರು ಅವರನ್ನು ಬಲೆಗೆ ಬೀಸಿ ಬಂಧಿಸಿದರು. ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಕೆಲಸ ಕಾರ್ಯ ಮಾಡಿಕೊಳ್ಳದೆ ಊರೂರು ಸುತ್ತುತ್ತಿದ್ದ 20 ವರ್ಷ ಪ್ರಾಯದ ಅಬ್ಬುಹುರೇರಾ ಕಾಲೊನಿ ನಿವಾಸಿ ಮೊಹಮ್ಮದ ಫಾರಿಸ್ ತಂದೆ ಅಬ್ದುಲ್ ಮುತಲ್ಲಬ್, ಗುತ್ತಿಗೆ ಕೆಲಸ ಮಾಡಿಕೊಂಡಿದ್ದ ಮೂಸಾನಗರ ನಿವಾಸಿ 22 ವರ್ಷ ಪ್ರಾಯದ ಮೊಹಮ್ಮದ ಅರ್ಶದ ತಂದೆ ಮೊಹಮ್ಮದ ಜುಬೇರ್ ಬ್ಯಾರಿ, ಇಂಜಿನಿಯರಿಂಗ್ ವಿದ್ಯಾರ್ಥಿ ಹಾಲಾಡಿ ಜನತಾ ಕಾಲೊನಿಯ 20 ವರ್ಷದ ಅಮನ್ ತಂದೆ ಮಸೂದ ಖಾನ್ ನನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದು ಆರೋಪಿತರಿಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಇತ್ತೀಚಿನ ದಿನಗಳಲ್ಲಿ ಉದ್ಯಮಿಗಳು ಮತ್ತು ಹಣವಂತರ ವಿರುದ್ಧ ಸುಲಿಗೆ ಪ್ರಯತ್ನಗಳು ಹೆಚ್ಚಾಗುತ್ತಿವೆ. ಜನರು ಇಂತಹ ಕರೆಗಳು ಬಂದಾಗ ತಕ್ಷಣ ಪೊಲೀಸರ ನೆರವು ಪಡೆಯುವುದು ಅತಿ ಅಗತ್ಯ ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ ಗುರುವಾರ, 10ರ ಶುಕ್ರವಾರ ಶ್ರೀಕ್ಷೇತ್ರ ಗೋಕರ್ಣಕ್ಕೆ ಆಗಮಿಸಲಿದೆ. ಏಪ್ರಿಲ್ 9 ರಂದು ರಥಬೀದಿಯಲ್ಲಿರುವ ರಾಮಚಂದ್ರ...

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್ ರವರು ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ’ ದಲ್ಲಿ ಹೇಳಿದರು....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...