Important

ಕ್ಷುಲ್ಲಕ ಕಾರಣಕ್ಕೆ ಜಗಳ: ವ್ಯಕ್ತಿಗೆ ಇರಿತ

Share

ಭಟ್ಕಳ: ವಾರದ ಸಂತೆಯಲ್ಲಿ ವ್ಯಾಪಾರಿಯೊಬ್ಬರ ಹತ್ತಿರ ಕೆಲಸ ಮಾಡುತ್ತಿದ್ದ ಇಬ್ಬರು ಕೆಲಸಗಾರರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದ ಚೂ-ರಿ ಇರಿತದಲ್ಲಿ ಕೊನೆಗೊಂಡ ಘಟನೆ ನಡೆದಿದೆ. ಹಾನಗಲ್ ಮೂಲದ ಹಾಲಿ ಭಟ್ಕಳದ ಜಾಲಿ ತಗ್ಗರಗೋಡಿನಲ್ಲಿ ವಾಸವಾಗಿರುವ ಇಬ್ರಾಹಿಂ ಹಸನ್ ಸಾಬ್ ಚೂ-ರಿ ಇರಿತಕ್ಕೊಳಗಾಗಿ ಗಾಯಗೊಂಡಿದ್ದು, ಹಾವೇರಿ ಮೂಲದ ಸದ್ಯ ಭಟ್ಕಳದ ಇಸ್ಮಾಯಿಲ್ ವೆಲ್ಡಿಂಗ್ ಶಾಪ್ ಹತ್ತಿರ ವಾಸವಿರುವ ಅಕ್ಬರ್ ಅಹ್ಮದ್ ಮೌಲಾಲಿ ಚೂರಿ ಇರಿದ ಆರೋಪಿಯಾಗಿದ್ದಾನೆ.

ಇದನ್ನೂ ಓದಿ: ಆಯ ತಪ್ಪಿ ಸಮುದ್ರ ನೀರಿಗೆ ಬಿದ್ದು ಕಣ್ಮರೆಯಾದ ಮೀನುಗಾರ 

ಹಣ್ಣಿನ ವ್ಯಾಪಾರಿ ದೂರುದಾರ ಮಹ್ಮದ್ ಹನಿಫ್ ಕೊಟ್ಟ ದೂರಿನಂತೆ ಇಬ್ರಾಹಿಂ ಹಸನ್ ಸಾಬ್ ಹಾಗೂ ಅಕ್ಬರ್ ಅಹ್ಮದ್ ಇಬ್ಬರೂ ದೂರುದಾರನ ಹತ್ತಿರ ಸಂತೆ ಮಾರುಕಟ್ಟೆಯಲ್ಲಿ ಕೆಲಸ ಮಾಡಿಕೊಂಡಿದ್ದು ಆಗಾಗ ವ್ಯಾಪಾರದ ವಿಷಯದಲ್ಲಿ ಜಗಳ ಮಾಡಿಕೊಳ್ಳುತ್ತಿದ್ದರು. ರವಿವಾರ ಮಧ್ಯಾಹ್ನ 1: 30 ರ ವೇಳೆಗೆ ದೂರುದಾರ ವ್ಯಾಪಾರ ಮಾಡುತ್ತಿದ್ದ ಸೇಬು ಹಣ್ಣು ಖಾಲಿಯಾಗಿತ್ತು.

ವ್ಯಾಪಾರ ಮಾಡಲು ಆರೋಪಿಯ ಬಳಿಯಿದ್ದ ಸೇಬು ಹಣ್ಣಿನ ಬಾಕ್ಸನ್ನು ತರಲು ಹೋದಾಗ ವೇಳೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಆರೋಪಿಯು ಇಬ್ರಾಹಿಂನನ್ನು ಅವಾಚ್ಯ ಶಬ್ಧದಿಂದ ಬೈದು ಪಕ್ಕದಲ್ಲಿರುವ ಚೂರಿಯನ್ನು ಕೈಗೆತ್ತಿಕೊಂಡು ಇಬ್ರಾಹಿಂನ ಚುಚ್ಚಲು ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಇಬ್ರಾಹಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಚಾಕು ಇಬ್ರಾಹಿಂನ ಸೊಂಟದ ಹಿಂಬಾಗಕ್ಕೆ ತಾಗಿದ್ದು, ಗಾಯವಾಗಿದೆ.

ಕೊಲೆಯತ್ನಕ್ಕೆ ಪ್ರಯತ್ನಿಸಿದ ಆರೋಪಿ ಅಕ್ಬರ ಅಹ್ಮದ್ ನನ್ನು ಶಹರಾ ಪೋಲಿಸ್ ಠಾಣೆಯ ವೃತ್ತ ನೀರಿಕ್ಷಕ ದಿವಾಕರ್ ಪಿ.ಎಂ ಮಾರ್ಗದರ್ಶನದಲ್ಲಿ ಪಿ.ಎಸ್.ಐ ನವೀನ್ ಎಸ್ ನಾಯ್ಕ, ತಿಮ್ಮಪ್ಪ ಎಸ್ ನಾಯ್ಕ ನೇತೃತ್ವದಲ್ಲಿ ತಂಡವನ್ನು ರಚಿಸಿ ಕಾರ್ಯಚರಣೆ ನಡೆಸಿ ತಾಲೂಕಿನ ಇಸ್ಮಾಯಿಲ್ ವೆಲ್ಡಿಂಗ್ ಶಾಪ್ ನ ಹತ್ತಿರ ಬಂಧಿಸಿ, ಆರೊಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ವಿಸ್ಮಯ ನ್ಯೂಸ್, ಈಶ್ವರ ನಾಯ್ಕ ಭಟ್ಕಳ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ ತರಬಹುದು,ಇಂತಹದೊoದು ಪ್ರಕೃತಿ ವಿಸ್ಮಯ ನಡೆದದ್ದು ದೂರದಲ್ಲೆಲ್ಲೋ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ...

ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗೆ ಸರ್ಚ್ ವಾರೆಂಟ್ ಮೇಲೆ ಬಂದ ಲೋಕಾಯುಕ್ತರ ತಂಡ : ಯಾಕೆ ನೋಡಿ?

ಅಂಕೋಲಾ‌ : ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮುಂತಾದ ಕೆಲಸಗಳಲ್ಲಿ ಅನಗತ್ಯ ವಿಳಂಬ ಮತ್ತು ಏಜೆಂಟರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ...

ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶೀ ಮೇಳ: ಅಕ್ಟೋಬರ್ 7, 8,9 ರಂದು ಆಯೋಜನೆ

ಅಂಕೋಲಾ : ರಾಘವೇಂದ್ರ ಇವೆಂಟ್ಸ್ ಅಂಕೋಲಾ ಹಾಗೂ ಬೆನಕ ಇವೆಂಟ್ಸ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ...

ಸೇವಾಪರ್ವ ವಿಕಸಿತ ಭಾರತ ವಿಷಯಾಧಾರಿತ ಪೇಟಿಂಗ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದರ್ಶನ ನಾಯ್ಕ

ಭಟ್ಕಳ: ಕೇಂದ್ರ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ತಂಜಾವೂರು ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ವಿಕ್ಷಿತ್ ಭಾರತ್...

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ...

ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಹೊನ್ನಾವರ ಇದರ ವಾರ್ಷಿಕ ಸರ್ವ ಸಾಧಾರಣ

ಹೊನ್ನಾವರ : ಇಲ್ಲಿನ ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ...

ಮಾನವೀಯತೆಯ ದೀಪ ಬೆಳಗಿಸಿದ ನೇತ್ರದಾನಿ ಕೃಷ್ಣ ನಾಯ್ಕ ಅಮರ

ಕುಮಟಾ : ತಾಲೂಕಿನ ಧಾರೇಶ್ವರ ಹೋಬಳಿ ಹರನೀರು ತುದಿಮನೆ ನಿವಾಸಿ ಕೃಷ್ಣ ನಾರಾಯಣ ನಾಯ್ಕ (77...

ಬಸ್ ಗೆ ಡಿಕ್ಕಿ ಹೊಡೆದ ಲಾರಿ : ಸ್ಟೇರಿಂಗ್ ಮಧ್ಯ ಸಿಲುಕಿದ ಲಾರಿ ಚಾಲಕ ಸಾವು: ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ನಿಧನ

ಅಂಕೋಲಾ: ಟ್ಯಾಂಕರ್ ಲಾರಿ ಮತ್ತು ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಹೃದಯದಾಕಾರದ ಮುಖದ ಗೂಬೆ: ಶಾಲೆಗೆ ಬಂತು ಗುಮ್ಮ

ಅಂಕೋಲಾ: ಮಕ್ಕಳು ಊಟ, ತಿಂಡಿ, ನಿದ್ದೆ ಸರಿಯಾಗಿ ಮಾಡದಿದ್ದರೆ ಅಥವಾ ಬೇರೆ ಕಾರಣದಿಂದ ಹಠ ಹಿಡಿದರೆ...