ಅಂಕೋಲಾದ ತೋಟದಲ್ಲಿ ಕಂಡುಬಂದ ಹೆಬ್ಬಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡುತ್ತಿರುವ ದೃಶ್ಯ
Important

ಮನೆಯ ಹತ್ತಿರ ಹೆಬ್ಬಾವು ಪತ್ತೆ : ಅರಣ್ಯ ಇಲಾಖೆಯ ತುರ್ತು ಕಾರ್ಯಾಚರಣೆ

Share

ಅಂಕೋಲಾ, ಆಗಸ್ಟ್ 28: ಗ್ರಾಮೀಣ ಪ್ರದೇಶದ ರೈತ ಕುಟುಂಬವೊoದರ ಮನೆಯ ಹತ್ತಿರದ ತೋಟದ ಬಳಿ ಹೆಬ್ಬಾವು ಕಾಣಿಸಿಕೊಂಡಿತ್ತು. ಈ ವಿಷಯವನ್ನು ತೋಟದ ಕೆಲಸಗಾರರು ಮನೆಯ ಯಜಮಾನಿಗೆ ತಿಳಿಸಿದರಾದರೂ ಮನೆ ಮಕ್ಕಳು ಮೊಮ್ಮಕ್ಕಳು ಸೇರಿದಂತೆ ಕುಟುಂಬ ವರ್ಗದವರು ದೈವ ದರ್ಶನಕ್ಕೆ ದೂರದೂರಿಗೆ ಹೋಗಿದ್ದರಿಂದ ಆತಂಕ ಹೆಚ್ಚುವಂತಾಗಿತ್ತು.

Read: ಮುರ್ನಾಲ್ಕು ದಿನಗಳ ಕಾಲ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ ಏನು?

ತಾಲೂಕಿನ ಡೊಂಗ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಗ್ಗಾರ ಪುನರ್ವಸತಿ ಕೇಂದ್ರದ ರಾಘವೇಂದ್ರ ಗಾಂವ್ಕರ್ ಅವರ ಮನೆಗೆ ಹೊಂದಿಕೊoಡಿರುವ ತೋಟದ ಗಿಡ ಗಂಟಿಗಳ ಪೊದೆಯಲ್ಲಿ ಹೆಬ್ಬಾವು ಅವಿತುಕೊಂಡಿತ್ತು. ಗಮನಸಿದ, ಅಲ್ಲೇ ಕೆಲಸ ಮಾಡುತ್ತಿದ್ದ ಕೃಷಿ ಕೂಲಿ ಕಾರ್ಮಿಕರು ಕ್ಷಣ ಕಾಲ ಗಾಬರಿಗೊಂಡು ಮನೆಯೊಡತಿಗೆ ವಿಷಯ ತಿಳಿಸಿದ್ದಾರೆ.

ಅರಣ್ಯ ಇಲಾಖೆ ಕಾರ್ಯಾಚರಣೆ

ಆದರೆ ಆ ಸಂದರ್ಭದಲ್ಲಿ ಮನೆ ಮಕ್ಕಳು ಸೊಸೆಯಂದಿರು ಮತ್ತು ಮೊಮ್ಮಕ್ಕಳು ಶಿರಡಿ ಮತ್ತಿತರ ಧಾರ್ಮಿಕ ಕ್ಷೇತ್ರಗಳ ದರ್ಶನಕ್ಕೆ ತೆರಳಿದ್ದರಿಂದ ತುರ್ತಾಗಿ ಏನು ಮಾಡುವುದು ಎಂದು ಯೋಚನೆಗೆ ಬಿದ್ದು, ಕೊನೆಗೆ ದೂರವಾಣಿ ಕರೆ ಮಾಡಿ ಮಗನಿಗೆ ತಿಳಿಸಿದ್ದಾರೆ.

ಶಿರಡಿ ಸಾಯಿಬಾಬಾ ದರ್ಶನಕ್ಕೆ ಹೋಗಿದ್ದ ಮಗ ಅಲ್ಲಿಂದಲೇ, ವಲಯ ಅರಣ್ಯಾಧಿಕಾರಿ ಸುರೇಶ್ ನಾಯ್ಕ ಅವರಿಗೆ ಕರೆ ಮಾಡಿ ತಮ್ಮ ತೋಟದಲ್ಲಿ ಹೆಬ್ಬಾವು ಬಂದಿರುವ ವಿಷಯ ತಿಳಿಸಿ,ತಾಯಿಯವರ ಆತಂಕ ದೂರ ಮಾಡುವಂತೆ ವಿನಂತಿಸಿದ್ದಾರೆ.

ಯಶಸ್ವಿ ಕಾರ್ಯಾಚರಣೆ

ಸುರೇಶ ನಾಮಕ ಅವರು ಕೂಡಲೇ ಫೋನ್ ಕರೆಗೆ ಸ್ಪಂದಿಸಿ, ತಮ್ಮ ಸಿಬ್ಬಂದಿಗಳನ್ನು ಹೆಬ್ಬಾವು ಸೆರೆ ಮತ್ತು ಸಂರಕ್ಷಣೆ ಕಾರ್ಯಚರಣೆಗೆ ಕಳಿಸಿಕೊಟ್ಟಿದ್ದಾರೆ. ಸ್ಥಳೀಯ ಪಂಚಾಯತ ಸದಸ್ಯರಾದ ನಾರಾಯಣ ಭಟ್ಟ ಮತ್ತಿತರರ ಸಹಕಾರದಲ್ಲಿ ಹೆಬ್ಬಾವನ್ನು ಹಿಡಿದು ಸುರಕ್ಷಿತ ಅರಣ್ಯ ಪ್ರದೇಶದಲ್ಲಿ ಬಿಟ್ಟು ಬರಲಾಗಿದೆ.

ಮನೆಮಕ್ಕಳು ದೂರದಲ್ಲಿದ್ದರೂ ತಕ್ಷಣಕ್ಕೆ ಸ್ಪಂದಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಕರ್ತವ್ಯ ಹಾಗೂ ಸೇವೆಗೆ ಗಾಂವಕರ ಕುಟುಂಬಸ್ಥರು ಮತ್ತು ಸ್ಥಳೀಯ ನಾಗರಿಕರು ಕೃತಜ್ಞತೆ ಸೂಚಿಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...