Focus News

ಉತ್ತರ ಕನ್ನಡದಲ್ಲಿ ಭಾರೀ ಮಳೆ : ಮೂರು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ

Share
  • ಪ್ರವಾಹದ ಭೀತಿ
  • ತಗ್ಗು ಪ್ರದೇಶಗಳಿಗೆ ನೀರು
  • ಅಪಾಯದ ಮಟ್ಟ‌ ಮೀರಿ ಹರಿಯುತ್ತಿರುವ ನದಿಗಳು

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹದ ಭೀತಿ ಹೆಚ್ಚಾಗಿದೆ.  ತಗ್ಗು ಪ್ರದೇಶಗಳಿಗೆ ನೀರುನುಗ್ಗಿದ್ದು,‌ನದಿಗಳು ಅಪಾಯದ ಮಟ್ಟ‌ ಮೀರಿ ಹರಿಯುತ್ತಿವೆ.

ಮಳೆಯ ತೀವ್ರತೆಗೆ ಅನುಗುಣವಾಗಿ ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಸ್ಥಳೀಯ ಬಿಇಓ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಅಂಕೋಲಾ ತಾಲೂಕಿನಲ್ಲಿ ಭಾರಿ ಮಳೆ: ಇಂದು ಶಾಲೆ-ಅಂಗನವಾಡಿಗಳಿಗೆ ರಜೆ

ಅಂಕೋಲಾ, ಆಗಸ್ಟ್ 29: ತಾಲೂಕಿನಲ್ಲಿ ನಿರಂತರ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಅಂಕೋಲಾ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು (29-08-2025) ಒಂದು ದಿನ ರಜೆ ಘೋಷಿಸಲಾಗಿದೆ.

ತಾಲೂಕಿನಲ್ಲಿ ಅನಿರೀಕ್ಷಿತ ಭಾರಿ ಮಳೆಯಾದ ಸಂದರ್ಭಗಳಲ್ಲಿ ತುರ್ತು ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ತಹಶೀಲ್ದಾರರಿಗೆ ನೀಡಲಾಗಿದೆ. ಅದರಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕೊರಿಕೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ರಜಾ ಅವಧಿ ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮಕ್ಕಳಿಗೆ ಯಾವುದೇ ಅನಾನುಕೂಲ ಉಂಟಾಗದಂತೆ ಶಾಲಾ-ಅಂಗನವಾಡಿ ನಿರ್ವಾಹಕರು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚಿಸಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ ಗುರುವಾರ, 10ರ ಶುಕ್ರವಾರ ಶ್ರೀಕ್ಷೇತ್ರ ಗೋಕರ್ಣಕ್ಕೆ ಆಗಮಿಸಲಿದೆ. ಏಪ್ರಿಲ್ 9 ರಂದು ರಥಬೀದಿಯಲ್ಲಿರುವ ರಾಮಚಂದ್ರ...

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್ ರವರು ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ’ ದಲ್ಲಿ ಹೇಳಿದರು....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್...

ಚುನಾವಣೆ ನಂತರ ರಾಜಕೀಯ ಬದಿಗಿಟ್ಟು ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯ : ಅಮದಳ್ಳಿ ಗ್ರಾಮ ದೇವರ ಗ್ರಾಮ ಎಂದ ಶಾಸಕ ಸೈಲ್

ಕಾರವಾರ: ಗ್ರಾಮೀಣ ಆಡಳಿತ ವ್ಯವಸ್ಥೆಗೆ ಬಲ ತುಂಬುವ ಹೆಜ್ಜೆಯಾಗಿ ಅಮದಳ್ಳಿ ಗ್ರಾಮ ಪಂಚಾಯತ್‌ನ ನೂತನ ಸಭಾಭವನವನ್ನು...

ಅಂಕೋಲಾದಲ್ಲಿ ಇಂದು ಪಂಚದೇವರ ದೊಡ್ಡ ಕಾರ್ತಿಕೋತ್ಸವ : ಶಿರ ಕುಳಿ ಕಾನದೇವಿ ದೇವಸ್ಥಾನದ ಹತ್ತಿರ ವನಭೋಜನಕ್ಕೆ ನಡೆಯುತ್ತಿದೆ ಸಿದ್ದತೆ

ಅಂಕೋಲಾ: ತಾಲೂಕಿನ ಸಂಸ್ಕೃತಿಯ ಆರಾಧನಾ ಪದ್ಧತಿಯಾಗಿ ಹಲವು ತಲೆಮಾರುಗಳಿಂದ ಆಚರಿಸಲ್ಪಡುತ್ತಬಂದಿರುವ ಪಂಚ ದೇವರುಗಳ ದೊಡ್ಡ ಕಾರ್ತಿಕೋತ್ಸವ...

ಕೇಣಿ ವಾಣಿಜ್ಯ ಬಂದರು ವಿರೋಧಿಸಿ ಹೋರಾಟ ನಿರಂತರ : ಬಹಿರಂಗ ಸಭೆ ತಾತ್ಕಾಲಿಕವಾಗಿ ಮುಂದೂಡಿಕೆ : ಸಂಘಟಕ ಪ್ರಮುಖರು ಪ್ರಕಟಣೆಯಲ್ಲಿ ಹೇಳಿದ್ದೇನು ?

ಅಂಕೋಲಾ: ತಾಲೂಕಿನ ಕೇಣಿಯಲ್ಲಿ ನಿರ್ಮಾಣ ಉದ್ದೇಶಿತ ವಾಣಿಜ್ಯ ಬಂದರು ಯೋಜನೆಯನ್ನು ವಿರೋಧಿಸಿ, ಸಾಮೂಹಿಕ ನಾಯಕತ್ವದಡಿ, ಅಂಕೋಲಾ...

ಚಿಪ್ಪಿ ಫ್ಯಾಕ್ಟರಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆ

ಅಂಕೋಲಾ: ತಾಲೂಕಿನ ಶೆಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...

ಆಧುನಿಕ ಜಗತ್ತನ್ನಾಳಲಿರುವ AI ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

ಅಂಕೋಲಾ : ಕೃತಕ ಬುದ್ಧಿಮತ್ತೆಯು ( AI ತಂತ್ರಜ್ಞಾನ ) ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ...

ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ ವಿಶೇಷ ಅಭಿಯಾನ

ಅಂಕೋಲಾ : ತಾಲೂಕಿನ ವಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋಳೆ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಗೆ...

ಅಂಕೋಲಾ ಕಲ್ಲೇಶ್ವರದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಅಂಕೋಲಾ : ಒನ್‌ ಲೈಟ್‌ ಎಸ್ಸಿಲಾರ್ ಲಕ್ಸೊಟಿಕಾ ಫೌಂಡೇಶನ್, ಸ್ಪಂದನ ಸೇವಾ ಟ್ರಸ್ಟ್ ಹಡಿನಬಾಳ ಹೊನ್ನಾವರ,ಸಂಗಮ...