ಆರ್‌ಸಿಬಿ ವಿಜಯೋತ್ಸವ ಮಾದರಿಯ ಗಣೇಶ ಮೂರ್ತಿ – ಅವರ್ಸಾ ಸಾರ್ವಜನಿಕ ಗಣೇಶೋತ್ಸವ 2025
Important

ಕಪ್ ಎತ್ತಿ ಹಿಡಿದ ಗಣಪತಿ: ಗಮನ ಸೆಳೆದ ಆರ್‌ಸಿಬಿ ವಿಜಯೋತ್ಸವ ಶೈಲಿಯ ಗಣೇಶ

Share

ಅಂಕೋಲಾ: ಇತ್ತೀಚೆಗೆ ನಡೆದಿದ್ದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆರ್‌ಸಿಬಿ ತಂಡದ ವಿಜಯವನ್ನು ಸಂಭ್ರಮಿಸುವಂತೆ,ಮೂಡಿ ಬಂದ ಗಣಪನ ಮಾದರಿ ದೃಶ್ಯ ಸಾಮಾಜಿಕ ಜಾಲತಾಣಗಳು ಸೇರಿದಂತೆ ಎಲ್ಲೆಡೆ ಭಾರೀ ವೈರಲ್ ಆಗುತ್ತಿದೆ .

IPL ಕಪ್ ಎತ್ತಿ ಹಿಡಿದ ಗಣಪ

ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದ ಸಾರ್ವಜನಿಕ ಗಣೇಶೋತ್ಸವ ತನ್ನ ಶಿಸ್ತು ಬದ್ಧ ಸಂಘಟನೆ ಮತ್ತಿತರ ಕಾರಣಗಳಿಂದ ಆಗಾಗ ಸಖತ್ ಸುದ್ದಿಯಾಗುತ್ತಲೇ ಇರುತ್ತದೆ. ಇಲ್ಲಿನ ಗಣೇಶೋತ್ಸವ ಮಂಡಳಿ 42 ನೇ ವರ್ಷದ ವಿಶೇಷ ಆಕರ್ಷಣೆಯಾಗಿ ರೂಪಿಸಿದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆರ್ ಸಿ ಬಿ ತಂಡದ ವಿಜಯೋತ್ಸವ ಮಾದರಿ ಗಮನ ಸೆಳೆಯುತ್ತಿದ್ದು ದಿನನಿತ್ಯ ಸಾವಿರಾರು ಜನರು ಆಗಮಿಸಿ ಗಣೇಶೋತ್ಸವದ ಆನಂದವನ್ನು ಸವಿಯುತ್ತಿದ್ದು, ಇಲ್ಲಿನ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ಜೋರಾದ ಸದ್ದು ಮಾಡುತ್ತ, ಐಪಿಎಲ್ ಚಾಂಪಿಯನ್ ಕಪ್ ಎತ್ತಿ ಹಿಡಿದ ಗಣೇಶ ಮೂರ್ತಿ ಎಲ್ಲಡೆ ವೈರಲ್ ಆಗುತ್ತಿದೆ.

ವಿರಾಟ್ ಕೊಹ್ಲಿ ಜೊತೆಯಲ್ಲೇ ಆರ್‌ಸಿಬಿ ವಿಜಯೋತ್ಸವ ಗಣಪ

ಸ್ಥಳೀಯರೇ ಆದ ಹೆಸರಾಂತ ಯುವ ಕಲಾವಿದ ದಿನೇಶ ಮೇತ್ರಿ ಅವರ ಪರಿಕಲ್ಪನೆ ಮತ್ತು ಕಲಾತ್ಮಕತೆಯಿಂದ ಟ್ರಾನ್ಸಪೋರ್ಟ್ ಉದ್ಯಮಿ ತುಳಸಿದಾಸ ಕಾಮತ್ ಮತ್ತು ಅವರ ಕುಟುಂಬದವರ ಸಹಕಾರದಲ್ಲಿ ಐ.ಪಿ.ಎಲ್ ಟ್ರೊಪಿ ಎತ್ತಿ ಹಿಡಿದು, ಜಿಲ್ಲೆಯ ಪ್ರತಿಷ್ಠಿತ ವರದಾ ರೋಡಲೈನ್ಸ್ ಬಸ್ಸಿನ ಮೇಲೆರಿ ವಿಜಯೋತ್ಸವದ ರೀತಿ ನಿಂತ ಭಂಗಿಯಲ್ಲಿ ಇಲ್ಲಿನ ಗಣಪ ಮೂಡಿಬಂದಿದ್ದು ಆರ್.ಸಿ.ಬಿ ಜೆರ್ಸಿಯಲ್ಲಿ ಇರುವ
ನಿಂತ ಗಣೇಶನ ಪಕ್ಕದಲ್ಲಿ ವಿಶ್ವ ಪ್ರಸಿದ್ಧ ಆಟಗಾರ ವಿರಾಟ ಕೊಹ್ಲಿ ಅವರ ಕಲಾಕೃತಿಯೂ ಗಣೇಶನ ಭಕ್ತರ,ಕ್ರಿಕೆಟ್ ಪ್ರಿಯರ ಹಾಗೂ ಕೊಹ್ಲಿ ಅಭಿಮಾನಿಗಳ ಮನಸೂರೆಗೊಳ್ಳುತ್ತಿದೆ.

ಭಟ್ಕಳದಲ್ಲಿ ದೇವಸ್ಥಾನದ ಹುಂಡಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ಗಣೇಶನ ವಾಹನ ಮೂಷಿಕ ,ಬಸ್ಸಿನ ಚಾಲಕನ ಸ್ಥಾನದಲ್ಲಿ ಕುಳಿತು ಬಿಳಿ ಬಣ್ಣದ ಸುಂದರ ಬಸ್ಸನ್ನು ಚಲಾಯಿಸುತ್ತಿರುವಂತೆ ಕಲಾತ್ಮಕತೆ ಕಂಡುಬರುತ್ತಿದೆ. ಕೋಟ್ಯಂತರ ಅಭಿಮಾನಿಗಳ ನಿರೀಕ್ಷೆಯಂತೆ ಈ ಸಲ ಐಪಿಎಲ್ ಕಪ್ ತನ್ನದಾಗಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ,ಗೆಲುವಿನ ಸಂಭ್ರಮಾಚರಣೆಯ ವರುಷ ಹಾಗೂ ಹರುಷದ ಸಂದರ್ಭದಲ್ಲಿ ಸುಮಾರು ಹನ್ನೊಂದು ಅಡಿ ಎತ್ತರದ ಈ ವಿಶೇಷ ಗಣೇಶ ಮೂರ್ತಿ ತನ್ನ ವಿಭಿನ್ನತೆಯಿಂದಾಗಿ ಶೋಭಿಸುತ್ತಿದ್ದು ಆರ್.ಸಿ.ಬಿ ಅಭಿಮಾನಿಗಳಂತೂ ಸಂತಸದಿಂದ ಜಯದೇವತೆಯನ್ನು ನೋಡಲು ಮುಗಿ ಬೀಳುತ್ತಿದ್ದಾರೆ.

ಅವರ್ಸಾದಲ್ಲಿ ಸಾರ್ವಜನಿಕ ಗಣೇಶೋತ್ಸವ ಪ್ರತಿ ವರ್ಷ ಹಲವು ವೈಶಿಷ್ಟ್ಯಗಳೊಂದಿಗೆ ಗಮನ ಸೆಳೆಯುತ್ತ ಬಂದಿದ್ದು
ಗಣೇಶೋತ್ಸವದ ಸಂದರ್ಭದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ, ಸಾಂಸ್ಕೃತಿಕ , ಮನೋರಂಜನೆ ಸೇರಿದಂತೆ ಹತ್ತಾರು ವಿಧಾಯಕ ಕಾರ್ಯಗಳ ಮೂಲಕ ತನ್ನದೇ ಆದ ಪ್ರಸಿದ್ಧಿ ಪಡೆದಿದೆ.

ಈ ಬಾರಿಯ ಗಣೇಶೋತ್ಸವದಲ್ಲಿ ಮೂಡಿಬಂದ ಆರ್.ಸಿ.ಬಿ ವಿಜಯೋತ್ಸವದ ಮಾದರಿಯಂತಿರುವ ಗಣಪ ರಾಜ್ಯಾದ್ಯಂತ ಅಷ್ಟೇ ಅಲ್ಲದೇ ದೇಶ ವಿದೇಶಗಳಲ್ಲಿಯೂ ಸಖತ್ ಸುದ್ದಿ ಮಾಡುವಂತಾಗಿದ್ದು,ಸ್ಥಳೀಯ ಸಂಘಟನೆ ಹಾಗೂ ಕಲಾವಿದನ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿ ಬರಲಾರಂಭಿಸಿವೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಆಗಿದ್ದು, ಇದೀಗ ಶನಿವಾರ ( ನವೆಂಬರ್ 8 ರಂದು ) ರಾತ್ರಿ...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಇತರರ ಬದುಕಿನಲ್ಲೂ ಸದಾ ಬೆಳಗಲು ಸಾಧ್ಯ ಎಂದು ಕಲಾಸಿರಿ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಪಿ....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...

ಆಂಬ್ಯುಲೆನ್ಸ್ ಡಿಕ್ಕಿ : ಭಟ್ಕಳದ ದಂಪತಿ ಬೆಂಗಳೂರಿನಲ್ಲಿ ದುರಂತ ಸಾವು

ಭಟ್ಕಳ: ವೇಗವಾಗಿ ಬಂದ ಆಂಬ್ಯುಲೆನ್ಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಟ್ಕಳ ಮೂಲದ ದಂಪತಿ...

ಪಲ್ಟಿಯಾದ ಬಸ್: 45 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಅಂಕೋಲಾ: ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾಗಿರುವ ಗೋಕರ್ಣ ವಡ್ದೀಘಾಟ ಹೆದ್ದಾರಿ ತಿರುವಿನಲ್ಲಿ ಸಾರಿಗೆ ಸಂಸ್ಥೆಯ ಬಸ್ಸೊಂದು...

KDCC ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಸಂತ ನಾಯಕ ಜಮಗೋಡ : ಈ ಬಾರಿ ಹೆಚ್ಚಿದ ಗೆಲುವಿನ ನಿರೀಕ್ಷೆ

ಅಂಕೋಲಾ : ಸಹಕಾರಿ ಮತ್ತು ಸಾಮಾಜಿಕ, ಧಾರ್ಮಿಕ ಮತ್ತಿತರ ಕ್ಷೇತ್ರಗಳಲ್ಲಿ ಸದಾ ಮಂಚೂಣಿಯಲ್ಲಿರುವ ನಾಯಕ ಎಂದು...

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ...

ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶೀ ಮೇಳ: ಅಕ್ಟೋಬರ್ 7, 8,9 ರಂದು ಆಯೋಜನೆ

ಅಂಕೋಲಾ : ರಾಘವೇಂದ್ರ ಇವೆಂಟ್ಸ್ ಅಂಕೋಲಾ ಹಾಗೂ ಬೆನಕ ಇವೆಂಟ್ಸ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ...

ಸೇವಾಪರ್ವ ವಿಕಸಿತ ಭಾರತ ವಿಷಯಾಧಾರಿತ ಪೇಟಿಂಗ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದರ್ಶನ ನಾಯ್ಕ

ಭಟ್ಕಳ: ಕೇಂದ್ರ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ತಂಜಾವೂರು ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ವಿಕ್ಷಿತ್ ಭಾರತ್...