Big News

ನಾಕುತಂತಿ ಬದುಕಿನ ಸಮನ್ವಯತೆಯ ಸಾರ ಹೊಂದಿದೆ: ಸಾಹಿತಿ ಪುಟ್ಟ ಕುಲಕರ್ಣಿ

Share

ಕುಮಟಾ: ಬದುಕಿಗೂ ಮತ್ತು ಸಂಸ್ಕೃತಿಗೂ ಇರುವ ಅವಿನಾಭಾವ ಸಂಬಂಧ ಗಟ್ಟಿಯಾದಗ ಮಾತ್ರ ಬಾಳು ಸುಂದರವಾಗುತ್ತದೆ . ಬದುಕು ಭಾವ , ಬೂತಿ ,ಅನುಭೂತಿ ಇವುಗಳ ಸಮನ್ವಯತೆಯ ಸಾರ ವನ್ನು ನಾಕುತಂತಿ ಹೊಂದಿದೆ ಎಂದು ಹಿರಿಯ ಸಾಹಿತಿ ಪುಟ್ಟು ಕುಲಕರ್ಣಿ ಅಭಿಪ್ರಾಯಪಟ್ಟರು.

ಅವರು ಕನ್ನಡ ಸಾಹಿತ್ಯ ಪರಿಷತ್ ಕುಮಟಾ ತಾಲ್ಲೂಕು ಘಟಕ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್) ಉತ್ತರ ಕನ್ನಡ ಇವರ ಆಶ್ರಯದಲ್ಲಿ ನಡೆದ ಬೇಂದ್ರೆ ಯವರ ನಾಕುತಂತಿ ಕುರಿತು ಪಿ ಎಸ್ ಟಿ ಈ ವಿಭಾಗದ ಶಿಕ್ಷಣಾರ್ಥಿ ಗಳನ್ನು ಉದ್ದೇಶಿಸಿ ಉಪನ್ಯಾಸ ನೀಡಿದರು.

ಕಪ್ ಎತ್ತಿ ಹಿಡಿದ ಗಣಪತಿ: ಗಮನ ಸೆಳೆದ ಆರ್‌ಸಿಬಿ ವಿಜಯೋತ್ಸವ ಶೈಲಿಯ ಗಣೇಶ

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಾಹಿತಿ ರೋಹಿದಾಸ ನಾಯಕ ಸಾಮಾನ್ಯ ಜನರು ಓದಿ ಅರ್ಥೈಸಿಕೊಳ್ಳಲು ಸಾಧ್ಯವಾಗದ ನಾಕುತಂತಿಯ ಕುರಿತು ಉಪನ್ಯಾಸ ಏರ್ಪಡಿಸಿರುವುದು ಸಾಹಿತ್ಯ ಪರಿಷತ್ ನ ಸ್ತುತ್ಯಾರ್ಹ ಕಾರ್ಯ ವಾಗಿದೆ ಎಂದರು.
ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ನಿಕಟಪೂರ್ವ ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಡಾ. ಶ್ರೀಧರಗೌಡ ಉಪ್ಪಿನಗಣಪತಿ ಮಾತನಾಡಿ ಬೆಂದವರು ಮಾತ್ರ ಬೇಂದ್ರೆಯಾಗಲು ಸಾಧ್ಯ, ಬೇಂದ್ರೆಯವರು ತಾವು ಎದುರಿಸಿದ ಸಂಕಷ್ಟದ ದಿನಗಳಿಗೆ ಸಾಹಿತ್ಯದ ಲೇಪನದ ಮೂಲಕ ಕನ್ನಡ ಭಾಷೆಯನ್ನು ಶ್ರೀಮಂತ ಗೊಳಿಸಿದರು ಎಂದರು.

ನಾಕು ತಂತಿ ಉಪನ್ಯಾಸದ ಮೂಲಕ ಸಾಹಿತ್ಯ ಪರಿಷತ್ ಭಾವಿ ಶಿಕ್ಷಕರಲ್ಲಿ ಸಾಹಿತ್ಯದ ಬೀಜ ಬಿತ್ತುವ ಕೆಲಸ ಮಾಡಿದೆ ಎಂಡು ಡಯಟ್ ನ ಹಿರಿಯ ಉಪನ್ಯಾಸಕ ರಾಜೇಂದ್ರ ಎಲ್. ಭಟ್ ಅಭಿಮಾನ ವ್ಯಕ್ತಪಡಿಸಿದರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಮೋದ್ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಡಯಟ್ ನ ಹಿರಿಯ ಉಪನ್ಯಾಸಕ ಹಾಗೂ ಪಿ ಎಸ್ ಟಿ ಈ ವಿಭಾಗದ ಮುಖ್ಯಸ್ಥ ಶಾಂತೇಶ ಆರ್ ನಾಯಕ ಪ್ರಾಸ್ತಾವಿಕ ಮಾತನಾಡಿದರು.

ಉಪನ್ಯಾಸಕ ವಿನೋದ್ ನಾಯಕ ಸ್ವಾಗತಿಸಿದರು. ಡಯಟ್ ಉಪನ್ಯಾಸಕಿ ವೀಣಾ ಎಂ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ವೀಣಾ ಭಟ್ ವಂದಿಸಿದರು. ಅರವಿಂದ ನಾಯಕ್, ಆರ್. ಎನ್. Patagar,.ಮೋಹನ್ ನಾಯ್ಕ kujalli, ಸಂಧ್ಯಾ ಭಟ್, ಲಕ್ಷ್ಮಿ ನಾಯ್ಕ, ಎಸ್. ಬಿ. ನಾಯಕ್ ಸಹಕರಿಸಿದರು .

ವಿಸ್ಮಯ ನ್ಯೂಸ್, ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಮಹಾಶಿವರಾತ್ರಿ ಪುಣ್ಯಕಾಲದಲ್ಲಿ ಕಣಕಣೇಶ್ವರ ದೇವರ ನೂತನ ಭವ್ಯ ದೇವಸ್ಥಾನ ಲೋಕಾರ್ಪಣೆ :ಶಿಖರ ಕಲಶ ಪ್ರತಿಷ್ಠೆ – ಅಷ್ಟಬಂಧ ಸಮೇತ ನೂತನ ಶಿವಲಿಂಗ ಪ್ರತಿಷ್ಠಾ ಮಹೋತ್ಸವ

ಅಂಕೋಲಾ: ಪಟ್ಟಣದ ಕಾರವಾರ ರಸ್ತೆಯಲ್ಲಿರುವ ಪುರಾತನ ಪ್ರಸಿದ್ಧ ಶ್ರೀ ಕಣಕಣೇಶ್ವರ ದೇವಾಲಯವು ಮಹಾಶಿವರಾತ್ರಿ ಪುಣ್ಯಸಂದರ್ಭದಲ್ಲಿ ನೂತನ...

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ...

ಅಂಕೋಲಾದಲ್ಲಿ ಕರಾಳ ದಿನಾಚರಣೆ ಮತ್ತು ಬಂದ್ ಗೆ ಕರೆ

ಅಂಕೋಲಾ: ಕೇಣಿ ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ನವೆಂಬರ್ 15ರಂದು ಒಂದು ವರ್ಷವಾಗಲಿದ್ದು...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು...

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ...

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ...

ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ : ಆರೋಪಿ ಬಂಧನ

ಅಂಕೋಲಾ: ಪಟ್ಟಣದಲ್ಲಿ ನಿಲ್ಲಿಸಿಟ್ಟ ಮೋಟಾರ್ ಬೈಕ್ ಕಳ್ಳತನ ಮಾಡಿದ್ದ ಆರೋಪಿತನನ್ನು ಅಂಕೋಲಾ ಪೊಲೀಸರು ವಾಹನ ಸಮೇತ...