ಅಂಕೋಲಾ ಬಾಳೆಗುಳಿ ಕ್ರಾಸ್ ಬಳಿ ಹೆದ್ದಾರಿ ಹೊಂಡದಲ್ಲಿ ಸಿಲುಕಿದ ಲಾರಿ
Big News

ಹೆದ್ದಾರಿ ಹೊಂಡದಲ್ಲಿ ಲಾರಿ ಸಿಲುಕಿ ಸಂಚಾರ ಅಸ್ತವ್ಯಸ್ತ: ಈ ನರಕ ಯಾತನೆಗೆ ಕೊನೆ ಎಂದು?

Share

ಅಂಕೋಲಾ, ಸೆಪ್ಟೆಂಬರ್ 3: ಹೊಂಡ ಗುಂಡಿಗಳ ಹೆದ್ದಾರಿ, ಸಾವು ನೋವು ಹಾಗೂ ಅಪಘಾತ ಮತ್ತು ಅವಾಂತರಗಳಿಗೆ ರಹದಾರಿ ಎನ್ನುವುದು ಅಂಕೋಲಾದಲ್ಲಿ ಸಾಮಾನ್ಯ ಎನಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಣ್ಣಿದ್ದೂ ಕುರುಡುತನ ಮುಂದುವರಿಸಿದoತಿದ್ದು ಅವರ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿಯಿಂದ ಹೆದ್ದಾರಿ ಸಂಚಾರ ಮಾಡುವಾಗ ಹೆದರಿ ಹೆದರಿ ಸವಾರಿ ಮಾಡ ಬೇಕಾದ ದುಸ್ಥಿತಿ ತರದೋರಿದೆ.

ಅದಕ್ಕೆ ಉದಾಹರಣೆ ಎಂಬoತೆ ತಾಲೂಕಿನ ಬಾಳೆಗುಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಮಧ್ಯೆ ನಿರ್ಮಾಣವಾಗಿರುವ ಬೃಹತ್ ಹೊಂಡದಲ್ಲಿ ಸರಕು ತುಂಬಿದ ಲಾರಿಯೊಂದರ ಟಯರ್ ಸಿಲುಕಿದ ಪರಿಣಾಮ ಲಾರಿ ಮುಂದೆ ಚಲಿಸಲಾಗದೇ ಬಿಡಿ ಭಾಗಗಳಿಗೆ ಹಾನಿ ಸಂಭವಿಸಿ ಲಾರಿ ಅಪಾಯಕಾರಿ ರೀತಿಯಲ್ಲಿ ಕೆಟ್ಟು ನಿಂತ ಘಟನೆ ಸಂಭವಿಸಿದೆ.

ಹೆದ್ದಾರಿ ಹೊಂಡಗಳಿಂದ ಪ್ರತಿದಿನ ವಾಹನ ಹಾನಿ, ಅಪಘಾತ ಭೀತಿ

ತಾಲೂಕಿನ ಬಾಳೆಗುಳಿ ಕ್ರಾಸ್ ನಿಂದ ಯಲ್ಲಾಪುರ ಕಡೆ ಸಾಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಕೆಟ್ಟು ಹೊಂಡಮಯವಾಗಿ ಹಲವಾರು ಅಪಘಾತಗಳಿಗೆ ಕಾರಣವಾಗುತ್ತಿದ್ದು ರಸ್ತೆ ಹೊಂಡಗಳಿoದಾಗಿ ಪ್ರತಿದಿನ , ಹಲವಾರು ವಾಹನಗಳು ಕೆಟ್ಟು ನಿಲ್ಲುತ್ತಿವೆಯಲ್ಲದೇ, ಸುಮಾರು ಒಂದುವರೆ ತಾಸು ಪ್ರಯಾಣದ ಅವಧಿ ಈಗ ಎರಡೂವರೆ ತಾಸು ತೆಗೆದುಕೊಳ್ಳುತ್ತಿದೆ.

ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಲಾರಿಯೊಂದು ಬಾಳೆಗುಳಿ ಕ್ರಾಸ್ ಬಳಿ ಬೃಹತ್ ರಸ್ತೆ ಹೊಂಡಕ್ಕೆ ಬಿದ್ದು ಲಾರಿಯ ಹಿಂಬದಿ ಟಯರ್ ಎಕ್ಸಲ್ ತುಂಡಾಗಿ ಲಾರಿ ರಸ್ತೆಗೆ ಉರುಳಿ ಬೀಳುವ ರೀತಿಯಲ್ಲಿ ಒರಗಿ ನಿಂತಿದ್ದು, ರಸ್ತೆಯಲ್ಲಿ ಸಂಚರಿಸುವ ಕಾರು ಮತ್ತಿತರ ವಾಹನಗಳ ಚಾಲಕರು ಲಾರಿ ತಮ್ಮ ವಾಹನಗಳ ಮೇಲೆ ಉರುಳಿ ಬೀಳುವುದೋ ಎನ್ನುವ ಭಯದಿಂದ ಸಂಚರಿಸುವoತಾಯ್ತು.

ಹೆದ್ದಾರಿ ಹೊಂಡಗಳಿಂದ ವಾಹನ ಹಾನಿ, ಅಪಘಾತ ಭೀತಿ

ರಾಷ್ಟ್ರೀಯ ಹೆದ್ದಾರಿ ರಸ್ತೆ ಹೊಂಡಗಳು ಇದೀಗ ವಾಹನಗಳ ಚಾಲಕರಿಗೆ ಭಯ ಹುಟ್ಟಿಸಿದರೆ ವಾಹನಗಳ ಬಿಡಿ ಭಾಗ ಕೆಟ್ಟು ಮಾಲಕರು ಸಾವಿರಾರು ರೂಪಾಯಿ ನಷ್ಟ ಅನುಭವಿಸುತ್ತಿದ್ದಾರೆ. ಈ ರಾಷ್ಟ್ರೀಯ ಹೆದ್ದಾರಿಯ ದುಸ್ಥಿತಿ ಇದೀಗ ದೇಶಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾದಾಗ ಹೊಂಡ ಸರಿ ಪಡಿಸುವ ಕೆಲ ತೇಪೆ ಕಾರ್ಯ ನಡೆಸುವುದನ್ನು ಕಾಣಬಹುದಾಗಿದೆ.

ಅಂಕೋಲಾ ಹೆದ್ದಾರಿ ಅವ್ಯವಸ್ಥೆ: ಈ ಸುದ್ದಿಯನ್ನೂ ಓದಿ: ಹೊಂಡದಲ್ಲಿ ಗಿಡನೆಟ್ಟು ಸಾರ್ವಜನಿಕರ ಆಕ್ರೋಶ

ಬಹಳಷ್ಟು ಜನ ವಾಹನಗಳ ಮಾಲಿಕರು ಇಲ್ಲಿನ ರಸ್ತೆ ಮೂಲಕ ತಮ್ಮ ವಾಹನಗಳನ್ನು ಓಡಿಸಲು ಬಾಡಿಗೆ ಪಡೆಯಲು ನಿರಾಕರಿಸುತ್ತಿದ್ದಾರೆ ಎನ್ನುವ ಮಾತುಗಳು ಸಾರಿಗೆ ಉದ್ಯಮಿ ಗಣಪತಿ ನಾಯಕ ಮೂಲೆಮನೆ ಮತ್ತಿತರರಿಂದ ಕೇಳಿ ಬಂದಿದ್ದು, ಹೆದ್ದಾರಿ ಸಂಚಾರ ನರಕ ಯಾತನೆಗೆ ಕೊನೆ ಇಲ್ಲವೇ ಎಂದು ನಾಗರಿಕರು ಪ್ರಶ್ನಿಸುತ್ತಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮೂಲ ಸ್ಥಳದಲ್ಲೇ ಮುರಿನಕಟ್ಟೆ ನಿರ್ಮಾಣಕ್ಕೆ ಯೋಜನೆ ಸಿದ್ಧ : ವಿಶ್ವೇಶ್ವರ ಹೆಗಡೆ ಕಾಗೇರಿ

ಭಟ್ಕಳ: ಹೆದ್ದಾರಿ ಪ್ರಾಧಿಕಾರ ಮುರಿನಕಟ್ಟೆಯನ್ನು ಮೂಲ ಜಾಗದಲ್ಲಿಯೇ ಕಟ್ಟಲು ತಿರ್ಮಾನಿಸಿ ಈ ಕುರಿತು ನೀಲನಕ್ಷೇಯನ್ನು ತಯಾರಿಸಲಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಈ ವಿಚಾರದ ಕುರಿತಂತೆ ಜಿಲ್ಲಾಡಳಿತ ಹಾಗೂ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ ಸುರಕ್ಷಿತ ಆಶ್ರಯ ದೊರೆತಂತಿದ್ದು, ಕುಮಟಾ ಉಪವಿಭಾಗಾಧಿಕಾರಿಗಳ ಅನುಮತಿ ಬಳಿಕ ಹೋರಿಗಳನ್ನು ಗೋಶಾಲೆಗೆ ಕಳಿಸಿ, ಮೂಕ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ...

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ...

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...

ಭಟ್ಕಳದಲ್ಲಿ 14 ಜಾನುವಾರಗಳ ರಕ್ಷಣೆ : ಇಬ್ಬರ ವಿರುದ್ಧ ಪ್ರಕರಣ ದಾಖಲು

ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರ ವಿರುದ್ಧ ಭಟ್ಕಳ ಪಟ್ಟಣ ಪೊಲೀಸ್...