“ಅಂಕೋಲಾದ ವಸಂತ ನಾಯಕ ಕುಟುಂಬದಿಂದ ಸೇವಾಶ್ರಮ ವಾಸಿಗಳಿಗೆ ಊಟ ವಿತರಣೆ”
Important

ಮಗಳ ಹುಟ್ಟುಹಬ್ಬದಂದು ಸೇವಾಶ್ರಮ ನಿವಾಸಿಗಳಿಗೆ ಪ್ರೀತಿಯ ಸೇವೆ: ವಸಂತ ನಾಯಕ ಕುಟುಂಬದ ಮಾನವೀಯ ನೆರವು

Share

ಅಂಕೋಲಾ: ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಅಪಾರ ಅನುಭವ, ಹಾಗೂ ಸಮಾಜದಲ್ಲಿ ಹಲವು ವಿದಾಯಕ ಕೆಲಸಗಳ ಮೂಲಕ ತಮ್ಮನ್ನು ಗುರುತಿಸಿಕೊಂಡಿರುವ ಶ್ರೀರಾಮ ಪರಿಸರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಸಂತ ನಾಯಕ ಜಮಗೋಡ ಅವರು ತಮ್ಮ ಮಗಳು ಪ್ರಥ್ವಿ ಜನ್ಮದಿನದ ಪ್ರಯುಕ್ತ ಅಜ್ಜಿಕಟ್ಟಾದ ಕ್ರಿಸ್ತಮಿತ್ರ ಸೇವಾಶ್ರಮದ ಅಸಹಾಯಕರು,ವೃದ್ಧರು ಮತ್ತಿತರ ವಾಸಿಗಳಿಗೆ ಊಟ, ಸಿಹಿ ತಿಂಡಿ, ಬೆಡ್ ಶೀಟ್, ಟವಲ್ ವಿತರಿಸಿ ಪ್ರೀತಿ ಹಾಗೂ ಮಾನವೀಯತೆ ತೋರಿದ್ದಾರೆ.

ಸಮಾಜ ಸೇವೆಗೆ ಮಾದರಿಯಾಗಿರುವ ವಸಂತ ನಾಯಕ ಕುಟುಂಬ

ಅಸಾಹಯಕರನ್ನು ಸದಾ ಪ್ರೀತಿ ವಾತ್ಸಲ್ಯದಿಂದ ಕಾಣುವ ವಸಂತ ನಾಯಕ ಅವರು ತಮ್ಮ ಕುಟುಂಬದಲ್ಲಿ ಯಾವುದೇ ವಿಶೇಷ ಕಾರ್ಯಕ್ರಮಗಳು ನಡೆದರೂ ಸೇವಾಶ್ರಮ ವಾಸಿಗಳಿಗೆ ಮರೆಯದೇ ಊಟೋಪಚಾರ ನೀಡುವ ಪರಿಪಾಠ ರೂಡಿಸಿಕೊಂಡಿದ್ದು,ತಮ್ಮ ಮಗಳ ಹುಟ್ಟುಹಬ್ಬದ ದಿನದಂದು ಸಹ ಆಶ್ರಮವಾಸಿಗಳಿಗೆ ಸ್ವತಃ ತಾವೇ ಊಟ ಬಡಿಸಿದ ವಸಂತ ನಾಯಕ,ಆಶ್ರಮ ವಾಸಿಗಳ ಆಶೀರ್ವಾದ ಬೇಡಿಕೊಂಡರು.

ಈ ವೇಳೆ ಮಾತನಾಡಿದ ವಸಂತ ನಾಯಕ ಅವರು, ಸಮಾಜದಲ್ಲಿ ಮೇಲು ಕೀಳು ಎಂಬ ಭಾವನೆಯನ್ನು ಬಿಟ್ಟು ಎಲ್ಲರೂ ಒಂದಾಗಿ ಬದುಕಬೇಕು, ತಂದೆ ತಾಯಿ ಗುರು ಹಿರಿಯರು ನಮ್ಮ ಬದುಕಿನ ಮೂಲ ಆಧಾರ ಸ್ತಂಬವಾಗಿದ್ದು ಅವರನ್ನು ಮರೆಯುವ ಕೆಲಸವನ್ನು ಎಂದಿಗೂ ಮಾಡಬಾರದು ಎಂದು ಹೇಳಿ ಅಸಹಾಯಕರಿಗೆ ಆಶ್ರಯ ನೀಡಿ ಪೋಷಿಸುತ್ತ ಬಂದಿರುವ ಕ್ರಿಸ್ತಮಿತ್ರ ಆಶ್ರಮದ ಕೆಲಸ ಶ್ಲಾಘನೀಯ ಎಂದರು.

ಆಶ್ರಮ ವಾಸಿಗಳಿಂದ ಕೃತಜ್ಞತೆ

ವಸಂತ ನಾಯಕ ಅವರ ಪುತ್ರ ಪರಿಸರ ನಾಯಕ, ಬ್ಯಾಂಕ್ ಸಿಬ್ಬಂದಿಗಳಾದ ನಿಲೇಶ ಹನುಮಟ್ಟಾ, ರಾಜನ್ ನಾಯಕ ಮೊದಲಾದವರು ಉಪಸ್ಥಿತರಿದ್ದು ಸೇವಾ ಕಾರ್ಯಕ್ಕೆ ಸಹಕರಿಸಿದರು.ಹತ್ತಾರು ಬಾರಿ ತಾವಿರುವ ಸೇವಾ ಶ್ರಮಕ್ಕೆ ಬಂದು ಊಟ ಬಟ್ಟೆ ಮತ್ತಿತರ ರೀತಿಯ ನೆರವು ನೀಡುತ್ತಾ ಪ್ರೀತಿಯಿಂದ ತಮ್ಮನ್ನು ಕಾಣುವ ವಸಂತ ನಾಯಕ ಕುಟುಂಬದ ಬಗ್ಗೆ ಆಶ್ರಮದ ಕೆಲ ನಿವಾಸಿಗಳು ಪ್ರೀತಿಯಿಂದ ಕೃತಜ್ಞತೆ ಸಲ್ಲಿಸಿದರು.

ಇದನ್ನೂ ಓದಿ: ಸೆಪ್ಟೆಂಬರ್ 6ರ ವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ ಏನು?

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು ಬೆಳ್ಳಿ ಖರೀದಿ ಮೇಲೆ ಭರ್ಜರಿ ಆಫರ್‌ಗಳು ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ಅಂಕೋಲಾದ ಪ್ರಸಿದ್ಧ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ ಗುರುವಾರ, 10ರ ಶುಕ್ರವಾರ ಶ್ರೀಕ್ಷೇತ್ರ ಗೋಕರ್ಣಕ್ಕೆ ಆಗಮಿಸಲಿದೆ. ಏಪ್ರಿಲ್ 9 ರಂದು ರಥಬೀದಿಯಲ್ಲಿರುವ ರಾಮಚಂದ್ರ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ...