“ಅಂಕೋಲಾದ ವಸಂತ ನಾಯಕ ಕುಟುಂಬದಿಂದ ಸೇವಾಶ್ರಮ ವಾಸಿಗಳಿಗೆ ಊಟ ವಿತರಣೆ”
Important

ಮಗಳ ಹುಟ್ಟುಹಬ್ಬದಂದು ಸೇವಾಶ್ರಮ ನಿವಾಸಿಗಳಿಗೆ ಪ್ರೀತಿಯ ಸೇವೆ: ವಸಂತ ನಾಯಕ ಕುಟುಂಬದ ಮಾನವೀಯ ನೆರವು

Share

ಅಂಕೋಲಾ: ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಅಪಾರ ಅನುಭವ, ಹಾಗೂ ಸಮಾಜದಲ್ಲಿ ಹಲವು ವಿದಾಯಕ ಕೆಲಸಗಳ ಮೂಲಕ ತಮ್ಮನ್ನು ಗುರುತಿಸಿಕೊಂಡಿರುವ ಶ್ರೀರಾಮ ಪರಿಸರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಸಂತ ನಾಯಕ ಜಮಗೋಡ ಅವರು ತಮ್ಮ ಮಗಳು ಪ್ರಥ್ವಿ ಜನ್ಮದಿನದ ಪ್ರಯುಕ್ತ ಅಜ್ಜಿಕಟ್ಟಾದ ಕ್ರಿಸ್ತಮಿತ್ರ ಸೇವಾಶ್ರಮದ ಅಸಹಾಯಕರು,ವೃದ್ಧರು ಮತ್ತಿತರ ವಾಸಿಗಳಿಗೆ ಊಟ, ಸಿಹಿ ತಿಂಡಿ, ಬೆಡ್ ಶೀಟ್, ಟವಲ್ ವಿತರಿಸಿ ಪ್ರೀತಿ ಹಾಗೂ ಮಾನವೀಯತೆ ತೋರಿದ್ದಾರೆ.

ಸಮಾಜ ಸೇವೆಗೆ ಮಾದರಿಯಾಗಿರುವ ವಸಂತ ನಾಯಕ ಕುಟುಂಬ

ಅಸಾಹಯಕರನ್ನು ಸದಾ ಪ್ರೀತಿ ವಾತ್ಸಲ್ಯದಿಂದ ಕಾಣುವ ವಸಂತ ನಾಯಕ ಅವರು ತಮ್ಮ ಕುಟುಂಬದಲ್ಲಿ ಯಾವುದೇ ವಿಶೇಷ ಕಾರ್ಯಕ್ರಮಗಳು ನಡೆದರೂ ಸೇವಾಶ್ರಮ ವಾಸಿಗಳಿಗೆ ಮರೆಯದೇ ಊಟೋಪಚಾರ ನೀಡುವ ಪರಿಪಾಠ ರೂಡಿಸಿಕೊಂಡಿದ್ದು,ತಮ್ಮ ಮಗಳ ಹುಟ್ಟುಹಬ್ಬದ ದಿನದಂದು ಸಹ ಆಶ್ರಮವಾಸಿಗಳಿಗೆ ಸ್ವತಃ ತಾವೇ ಊಟ ಬಡಿಸಿದ ವಸಂತ ನಾಯಕ,ಆಶ್ರಮ ವಾಸಿಗಳ ಆಶೀರ್ವಾದ ಬೇಡಿಕೊಂಡರು.

ಈ ವೇಳೆ ಮಾತನಾಡಿದ ವಸಂತ ನಾಯಕ ಅವರು, ಸಮಾಜದಲ್ಲಿ ಮೇಲು ಕೀಳು ಎಂಬ ಭಾವನೆಯನ್ನು ಬಿಟ್ಟು ಎಲ್ಲರೂ ಒಂದಾಗಿ ಬದುಕಬೇಕು, ತಂದೆ ತಾಯಿ ಗುರು ಹಿರಿಯರು ನಮ್ಮ ಬದುಕಿನ ಮೂಲ ಆಧಾರ ಸ್ತಂಬವಾಗಿದ್ದು ಅವರನ್ನು ಮರೆಯುವ ಕೆಲಸವನ್ನು ಎಂದಿಗೂ ಮಾಡಬಾರದು ಎಂದು ಹೇಳಿ ಅಸಹಾಯಕರಿಗೆ ಆಶ್ರಯ ನೀಡಿ ಪೋಷಿಸುತ್ತ ಬಂದಿರುವ ಕ್ರಿಸ್ತಮಿತ್ರ ಆಶ್ರಮದ ಕೆಲಸ ಶ್ಲಾಘನೀಯ ಎಂದರು.

ಆಶ್ರಮ ವಾಸಿಗಳಿಂದ ಕೃತಜ್ಞತೆ

ವಸಂತ ನಾಯಕ ಅವರ ಪುತ್ರ ಪರಿಸರ ನಾಯಕ, ಬ್ಯಾಂಕ್ ಸಿಬ್ಬಂದಿಗಳಾದ ನಿಲೇಶ ಹನುಮಟ್ಟಾ, ರಾಜನ್ ನಾಯಕ ಮೊದಲಾದವರು ಉಪಸ್ಥಿತರಿದ್ದು ಸೇವಾ ಕಾರ್ಯಕ್ಕೆ ಸಹಕರಿಸಿದರು.ಹತ್ತಾರು ಬಾರಿ ತಾವಿರುವ ಸೇವಾ ಶ್ರಮಕ್ಕೆ ಬಂದು ಊಟ ಬಟ್ಟೆ ಮತ್ತಿತರ ರೀತಿಯ ನೆರವು ನೀಡುತ್ತಾ ಪ್ರೀತಿಯಿಂದ ತಮ್ಮನ್ನು ಕಾಣುವ ವಸಂತ ನಾಯಕ ಕುಟುಂಬದ ಬಗ್ಗೆ ಆಶ್ರಮದ ಕೆಲ ನಿವಾಸಿಗಳು ಪ್ರೀತಿಯಿಂದ ಕೃತಜ್ಞತೆ ಸಲ್ಲಿಸಿದರು.

ಇದನ್ನೂ ಓದಿ: ಸೆಪ್ಟೆಂಬರ್ 6ರ ವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ ಏನು?

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಟಿ.ಕೆ ಲೇಔಟ್ ತರಳಬಾಳು ಫ್ರೌಡಶಾಲಾ ವಿದ್ಯಾರ್ಥಿಗಳು ಜೋಗ್ ಫಾಲ್ಸ್ ಪ್ರವಾಸ ಮುಗಿಸಿ...

ತಗ್ಗು ಪ್ರದೇಶದಲ್ಲಿ ಪಲ್ಟಿಯಾದ ಸಾರಿಗೆ ಸಂಸ್ಥೆ ಬಸ್ : ಚಾಲಕ, ನಿರ್ವಾಹಕ , ಪುಟಾಣಿ ಮಗು ಸೇರಿ 26 ಕ್ಕೂ ಹೆಚ್ಚು ಜನರಿಗೆ ಗಾಯ – ನೋವು

ಅಂಕೋಲಾ: ಸಾರಿಗೆ ಸಂಸ್ಥೆಯ ಬಸ್ ಒಂದು ಪಲ್ಟಿಯಾಗಿ ಚಾಲಕ , ನಿರ್ವಾಹಕ, ಪುಟ್ಟ ಮಗು ಹಾಗೂ ಇತರೆ ಪ್ರಯಾಣಿಕರೂ ಸೇರಿ ಸುಮಾರು 26ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಸುಂಕಸಾಳ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...

ಆಂಬ್ಯುಲೆನ್ಸ್ ಡಿಕ್ಕಿ : ಭಟ್ಕಳದ ದಂಪತಿ ಬೆಂಗಳೂರಿನಲ್ಲಿ ದುರಂತ ಸಾವು

ಭಟ್ಕಳ: ವೇಗವಾಗಿ ಬಂದ ಆಂಬ್ಯುಲೆನ್ಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಟ್ಕಳ ಮೂಲದ ದಂಪತಿ...