ಸಿಂಧೂರ ಗಣಪತಿ ಮೂರ್ತಿ ಅಂಕೋಲಾ ವೆಂಕಟರಮಣ ದೇವಾಲಯ
Important

ಬಲು ಅಪರೂಪ ಕೆಂಪು ಬಣ್ಣದ ಈ ಸಿಂಧೂರ ಗಣಪ: ದರ್ಶನ ಮಾತ್ರದಿಂದಲೇ ಪರಿಹಾರವಾಗುವುದಂತೆ ಜನ್ಮಾಂತರಗಳ ಪಾಪ

Share

ಅಂಕೋಲಾ: ವಿಶ್ವದಾದ್ಯಂತ ಪ್ರಥಮ ಪೂಜಿತ, ಏಕದಂತನ ಆರಾಧನೆ ಜೋರಾಗಿ ನಡೆದಿದ್ದು ಚೌತಿಯ ಸಂಭ್ರಮ ಎಲ್ಲೆಡೆ ಕಂಡುಬರುತ್ತಿದೆ. ಈ ನಡುವೆ ಅಂಕೋಲಾ ತಾಲೂಕಿನ ಸಾರ್ವಜನಿಕ ಗಣಪತಿಗಳಲ್ಲಿ ಮೊದಲ ಗಣಪ ಎನ್ನುವ ಪ್ರಸಿದ್ಧಿ ಪಡೆದಿರುವುದು ದೊಡ್ಡ ದೇವರೆಂದೇ ಖ್ಯಾತಿ ಪಡೆದಿರುವ ಶ್ರೀ ವೆಂಕಟರಮಣ ದೇವಾಲಯದ ಸನ್ನಿಧಿಯಲ್ಲಿ ಪ್ರತಿಷ್ಠಾಪಿಸಿದ ಮಹಾ ಗಣಪತಿಗೆ ಸಲ್ಲುತ್ತದೆ. ಕೇವಲ ಪ್ರಥಮ ಪೂಜಿತ ಎಂದಷ್ಟೇ ಅಲ್ಲದೇ ಈ ಗಣಪ ಭಕ್ತರ ಪಾಲಿನ ಇಷ್ಟಾರ್ಥ ಕರುಣಿಸುವ ಮಹಾ ಮಹಿಮನೂ ಹೌದು.

ಸಿಂಧೂರ ಗಣಪತಿ: ಪುರಾತನ ಸಂಪ್ರದಾಯ

ಸಾಮಾನ್ಯವಾಗಿ ಗಣಪತಿಗೆ ಕೆಂಪು ಬಣ್ಣ ಮತ್ತು ಗರಿಕೆ ಎಂದರೆ ಬಲು ಪ್ರೀತಿ ಎನ್ನುವುದು ಹಲವು ಭಕ್ತರಿಗೆ ತಿಳಿದಿರುವ ವಿಚಾರ . ಆದರೆ ಇಲ್ಲಿ ಆಧುನಿಕತೆಯ ಈ ದಿನಗಳಲ್ಲಿಯೂ ಈಗಲೂ ಮಣ್ಣಿನಿಂದಲೇ ಮೂರ್ತಿ ತಯಾರಿಸುತ್ತಿರುವುದು ಒಂದು ವಿಶೇಷವಾದರೆ, ಮಂಗಲ ಮೂರ್ತಿ ಕೆಂಪು ಬಣ್ಣದಿಂದ ಕಂಗೊಳಿಸುವುದು ಇನ್ನೊಂದು ವಿಶೇಷ. ಅದಕ್ಕೆ ಇದನ್ನು ಸಿಂಧೂರ ಗಣಪತಿಯೆಂದು ಕರೆದು ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.

ಅಂಕೋಲಾ ತಾಲೂಕಿನಲ್ಲಿ ಸಾರ್ವಜನಿಕವಾಗಿ ಪೂಜಿಸಿ ಆರಾದಿಸಲ್ಪಟ್ಟ ಪ್ರಪ್ರಥಮ ಗಣಪತಿ ಎಂದೇ ಖ್ಯಾತಿ ಪಡೆದಿರುವ ಸಿಂಧೂರ ಗಣಪತಿಯನ್ನು 1880 ರಲ್ಲೇ ಪ್ರತಿಷ್ಠಾಪಿಸಿ ಪೂಜಿಸುವ ಪದ್ಧತಿ ಆರಂಭವಾಗಿದ್ದು, ಇಂದಿಗೂ ಸಹ ಈ ಗಣಪತಿ ತಯಾರಿಸಲು ಮಣ್ಣು ಪೂರೈಕೆ ಸೇರಿದಂತೆ ಗಣೇಶನ ಹಬ್ಬದ ಸಂದರ್ಭದ ವಿವಿಧ ಸೇವೆಗಳನ್ನು ತಾಲೂಕಿನ ವಿವಿಧ ಸಮಾಜಗಳ ಜನರು ನೆರವೇರಿಸುತ್ತಾ ಬಂದಿದ್ದು ನೂರಾರು ವರ್ಷಗಳ ಪುರಾತನ ಧಾರ್ಮಿಕ ಪರಂಪರೆ ಮುಂದುವರೆಸಿಕೊಂಡು ಬರಲಾಗುತ್ತಿದೆ.

ಮೂಲ ನಕ್ಷತ್ರ ದಿನದಂದೇ ವಿಸರ್ಜನೆ

ಚೌತಿಯಂದು ಪ್ರತಿಷ್ಠಾಪನೆ ಗೊಳ್ಳುವ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಸಾಮಾನ್ಯವಾಗಿ 5 ದಿನಗಳ ನಂತರ ಹಂತ ಹಂತವಾಗಿ ಅನಂತ ಲೋಪಿ ವರೆಗೆ ಬೇರೆ ಬೇರೆ ಕಡೆ ಬೇರೆ ಬೇರೆ ದಿನಗಳಂದು ವಿಸರ್ಜಿಸಲಾಗುತ್ತದೆ. ಆದರೆ ದೊಡ್ಡ ದೇವರ ಸನ್ನಿಧಿಯಲ್ಲಿ ಪ್ರತಿಷ್ಠಾಪಿಸುವ ಗಣಪನಿಗೆ ದಿನದ ಲೆಕ್ಕ ಮಾಡದೇ, ಮೂಲ ನಕ್ಷತ್ರದ ದಿನದಂದೇ ವಿಸರ್ಜನೆ ನಡೆಸುವುದು ಇದರ ಇನ್ನೊಂದು ವಿಶೇಷ.

ತಾಲೂಕಿನ ಜನರು ಗಣೇಶ ಚೌತಿಯ ಸಂದರ್ಭದಲ್ಲಿ ವೆಂಕಟರಮಣ ದೇವಾಲಯಕ್ಕೆ ಆಗಮಿಸಿ ಸಿಂಧೂರ ಗಣಪತಿ ದರ್ಶನ ಪಡೆದು ತಮ್ಮ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಕೆಂಪು ಗಣಪನ ದರ್ಶನ ಭಾಗ್ಯದಿಂದಲೇ ಜನ್ಮ -ಜನ್ಮಾಂತರಗಳ ಸಕಲ ಪಾಪ ಪರಿಹಾರವಾಗುವುದೆಂಬ ನಂಬಿಕೆ ಹಲವು ಭಕ್ತರಲ್ಲಿದೆ. ಗರಿಕೆ ಸೇವೆ ನೀಡಿದರೂ ಸಂತೃಪ್ತನಾಗುವ ಸಿಂಧೂರ ಮಹಾಗಣಪ ಭಕ್ತರ ಕಷ್ಟ ಕಾರ್ಪಣ್ಯ ದೂರ ಮಾಡುವನೆಂಬ ನಂಬಿಕೆ ಇದೆ.

ಭವ್ಯ ಮೆರವಣಿಗೆ – ಭಕ್ತರ ಉತ್ಸಾಹ

ಮೂಲ ನಕ್ಷತ್ರ ದಿನದಂದು ಮಂಗಲಮೂರ್ತಿಯನ್ನು ದೇವರ ಪ್ರತಿಷ್ಠಾ ಪೀಠದಿಂದ ವಿಸರ್ಜಿಸಿ, ದೇಗುಲ ಹೊರ ಆವರಣದಲ್ಲಿ ಮೆರವಣಿಗೆ ಪೀಠದಲ್ಲಿ ಕುಳ್ಳಿರಿಸಿ, ಪಲ್ಲಕಿ ಸೇವೆಯಂತೆ ನೂರಾರು ಭಕ್ತರು ಹೆಗಲ ಮೇಲೆ ಹೊತ್ತು ಸಾಗಿಸಿದರು. ಶ್ರೀ ದೇವರ ರಥಬೀದಿ, ಕಣಕಣೇಶ್ವರ ದೇಗುಲ, ದುರ್ಗಾ ಮಂದಿರದ ಎದುರಿನಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸಾಗಿ ಬಂದ ಗಣನಾಯಕನ ವಿಸರ್ಜನಾ ಮೆರವಣಿಗೆ ಬಂಡಿ ಭಜಾರದಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿ ಸನ್ನಿಧಿ ಹತ್ತಿರದ ಮಾರ್ಗವಾಗಿ ಶ್ರೀ ನರಸಿಂಹ ದೇವಸ್ಥಾನದ ಎದುರಿಂದ ಕೇಣಿ ಹಳ್ಳದತ್ತ ಆಗಮಿಸಿತು.

ಇದನ್ನೂ ಓದಿ: ಐತಿಹಾಸಿಕ ಚಂದ್ರಗ್ರಹಣ: ಆರಂಭ-ಮುಕ್ತಾಯ: ಚಂದ್ರಗ್ರಹಣ ಕುರಿತ ಸಾಮಾನ್ಯ ಪ್ರಶ್ನೆಗಳಿಗೆ ಉತ್ತರ

ದಾರಿಯುದ್ಧಕ್ಕೂ ಹಲವು ಭಕ್ತರು ಆರತಿ, ಹಣ್ಣು -ಕಾಯಿ , ಹೂವು ಸೇವೆ ನೆರವೇರಿಸಿದರು. ಕೇಣಿ ಹಳ್ಳದ ಬಳಿ ಮಂಗಲ ಮೂರ್ತಿ ಅಭರಣಗಳನ್ನು ತೆಗೆದು, ವಿಶೇಷ ಪೂಜೆ ಸಲ್ಲಿಸಿ ಹರಿವ ನೀರಿನಲ್ಲಿ ಗಣಪವನ್ನು ಹೊತ್ತೊಯ್ದು ವಿಸರ್ಜಿಸಲಾಯಿತು. ಬಪ್ಪಾ ಮೋರಯಾ ಎನ್ನುತ್ತಾ ಭಕ್ತರು ಕೆಂಪು ಗಣಪನಿಗೆ ಕೈ ಮುಗಿದು ಈ ವರ್ಷದ ಶುಭ ವಿದಾಯ ಹೇಳಿದರು. ಕೇಣಿ ಹಳ್ಳದ ಸೇತುವೆ ಮತ್ತು ಅಕ್ಕ ಪಕ್ಕದ ಪ್ರದೇಶಗಳಲ್ಲಿ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಪುನೀತರಾದರು,

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ ಅರೆಗದ್ದೆ ನೆನಪಾಗುತ್ತಾರೆ. ಅದರ ಬೆನ್ನಲ್ಲೇ ರಿಯಲ್ ಎಸ್ಟೇಟ್ ಉದ್ಯಮ, ಆಯ್ಸಪ್ಲಾಂಟ್. ಸಹನಾ ಪ್ಯಾಲೇಸ್ ಲಾಡ್ಜ್,...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...