ಹೋಟೆಲ್ ಅಡುಗೆಮನೆಯಲ್ಲಿ ಅಶುಚಿತ್ವ ಪತ್ತೆ"
Important

ಹೊಟೇಲ್ ಮೇಲೆ ದಾಳಿ: ಹೆಗ್ಗಣಗಳ ರಾಶಿ, ಹಾಳಾದ ಎಣ್ಣೆ, ಅಶುಚಿತ್ವ ನೋಡಿ ಅಧಿಕಾರಿಗಳೇ ದಂಗು

Share

ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ದೂರು ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಪಟ್ಟಣ ವ್ಯಾಪ್ತಿಯ ಸಾಮಾನ್ಯ ಹೋಟೆಲ್ ಒಂದರ ಮೇಲೆ ದಾಳಿ ಮಾಡಿ,ಸ್ಥಳ ಪರಿಶೀಲಿಸಿದ ವೇಳೆ ವೈದ್ಯಾಧಿಕಾರಿಗಳು ಮತ್ತು ತಂಡದವರು ಆಡಿದ ಮಾತುಗಳು ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಂತಿತ್ತು. ಇಲ್ಲಿ ಹೆಗ್ಗಣಗಳ ರಾಶಿ,ಸುಟ್ಟು ಕರಕಲಾಗಿ ಜಿಡ್ಡು ಗಟ್ಟಿದ ಎಣ್ಣೆಯ ಬಗ್ಗೆ ಅವರಾಡಿದ ಮಾತುಗಳೇನು? ನೀವೇ ನೋಡಿ

ಅಂಕೋಲಾ: ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ಪಟ್ಟಣ ವ್ಯಾಪ್ತಿಯ ಸಣ್ಣ ಹೊಟೇಲ್ ಒಂದಕ್ಕೆ ದಾಳಿ ಮಾಡಿದ ಆರೋಗ್ಯ ಅಧಿಕಾರಿಗಳ ನೇತೃತ್ವದ ತಂಡ ಅಲ್ಲಿನ ಅಶುಚಿತ್ವ, ಆರೋಗ್ಯಕ್ಕೆ ಹಾನಿಕರ ಆಗಬಲ್ಲ ರೀತಿಯಲ್ಲಿ ಆಹಾರ ಪದಾರ್ಥಗಳ ತಯಾರಿಕೆ ಕಂಡು ಕ್ಷಣ ಕಾಲ ಅವರೇ ಹೌಹಾರುವಂತಾಗಿತ್ತು.

ಅಂಕೋಲಾ ಹೋಟೆಲ್ ಮೇಲೆ ಆರೋಗ್ಯ ಇಲಾಖೆಯ ದಾಳಿ"

ತಾಲೂಕು ಆರೋಗ್ಯಾಧಿಕಾರಿ ಡಾ. ಜಗದೀಶ ನಾಯ್ಕ ನೇತೃತ್ವದ ತಂಡ ದಾಳಿ ನಡೆಸಿದ ವೇಳೆ ಜಿಡ್ಡು ಗಟ್ಟಿದಂತಿರುವ ಎಣ್ಣೆಯನ್ನು ಬಾಣಲೆಯಲ್ಲಿ ಕಂಡು, ಇಲಿ ಹೆಗ್ಗಣಗಳ ಆಶ್ರಯ ತಾಣದಂತಿರುವ ಅಡುಗೆ ಕೋಣೆ, ಸ್ವಚ್ಚಗೊಳಿಸದ ಪಾತ್ರಗಳನ್ನು ಕಣ್ಣಾರೆ ಕಂಡು ಮಾಲಿಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಆರೋಗ್ಯಕ್ಕೆ ಹಾನಿಕಾರಕ ರೀತಿಯಲ್ಲಿ ತಿಂಡಿ ತಿನಿಸು ತಯಾರಿಕೆ

ಪಟ್ಟಣದ ಅಜ್ಜಿಕಟ್ಟಾ ಶಾಲೆ ಬಳಿ ಈ ಸಣ್ಣ ಹೋಟೆಲ್ ಇದ್ದು ಇಲ್ಲಿ ಆಹಾರ ಸುರಕ್ಷತೆ ನಿಯಮಗಳನ್ನು ಪಾಲನೆ ಮಾಡದಿರುವ ಕುರಿತು, ಒಂದೊಮ್ಮೆ ಇಲ್ಲಿನ ಆಹಾರ ಸೇವಿಸಿದರೆ ಸಣ್ಣ ಮಕ್ಕಳು ಹಾಗೂ ಇತರರ ಆರೋಗ್ಯದ ಮೇಲೆ ಕ್ರಮೇಣ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದ್ದು ಹೋಟೆಲಿನಲ್ಲಿ ಸ್ವಚ್ಛತೆ ಇಲ್ಲದಿರುವುದು, ಕಲಬೆರೆಕೆ ಎಣ್ಣೆ ಬಳಕೆ, ಹೃದಯ ಸಂಬಂಧಿ ಹಾಗೂ ಸಾಂಕ್ರಾಮಿಕ ರೋಗ ಹರಡುವ ರೀತಿಯಲ್ಲಿ ತಿಂಡಿ ತಿನಿಸುಗಳ ತಯಾರಿಕೆ ಕಂಡು ಬoದಿದೆ.

ಮಾಲಿಕರಿಗೆ ನೋಟಿಸ್ ಮತ್ತು ಎಚ್ಚರಿಕೆ

ಸಾರ್ವಜನಿಕರ ಆರೋಗ್ಯದ ಜತೆ ಚೆಲ್ಲಾಟವಾಡದಂತೆ ಖಡಕ್ ಆಗಿ ಎಚ್ಚರಿಸಿದ ಅಧಿಕಾರಿಗಳು, ಇದೇ ರೀತಿ ತಾಲೂಕಿನ ಬೇರೆಡೆಯೂ ಅಶುಚಿತ್ವ, ಬಳಸಿದ ಎಣ್ಣೆಯಲ್ಲೇ ಪದೇ ಪದೇ ಆಹಾರ ಪದಾರ್ಥಗಳನ್ನು ಕರಿಯುವುದು ಮತ್ತಿತರ ರೀತಿಯಲ್ಲಿ ಆರೋಗ್ಯಕ್ಕೆ ಹಾನಿಕಾರಕ ಎನ್ನುವ ಅಂಶ ಪತ್ತೆಯಾದಲ್ಲಿ ಅಂತಹ ಸ್ಥಳಗಳ ಮೇಲೂ ದಾಳಿ ನಡೆಸಿ ಸೂಕ್ತ ಕಾನೂನು ಕ್ರಮಗಳನ್ನು ಜರುಗಿಸುವುದಾಗಿ ತಾಲೂಕು ಆರೋಗ್ಯಾಧಿಕಾರಿಗಳು ಎಚ್ಚರಿಸಿದ್ದಾರೆ.

ಎಚ್ಚರ ಗ್ರಾಹಕ ಎಚ್ಚರ

ಆರೋಗ್ಯ ಶಿಕ್ಷಣಾಧಿಕಾರಿ ಶೈಲಜಾ ಭಂಡಾರಿ,ಆರೋಗ್ಯ ನಿರೀಕ್ಷಣಾಧಿಕಾರಿ ದರ್ಶನ ನಾಯ್ಕ, ಅಕ್ಷಯಕುಮಾರ್ ಮೊದಲಾದವರು ದಾಳಿಯಲ್ಲಿ ಪಾಲ್ಗೊಂಡಿದ್ದರು. ಹಾದಿ ಬೀದಿಗಳೇ ಇರಲಿ,ಹೋಟೆಲ್ ಮತ್ತಿತರ ಸ್ಥಳಗಳೇ ಇರಲಿ, ಆಹಾರ ತಯಾರಿಸುವವರು , ಮಾರುವವರ ಜವಾಬ್ದಾರಿಯಂತೆ,ಅರೋತ್ಪನ್ನಗಳನ್ನು ಕೊಂಡುಕೊಳ್ಳುವ ಗ್ರಾಹಕರು ಸಹ ಜಾಗರೂಕರಾಗಿದ್ದರೆ ಮಾತ್ರ ಆರೋಗ್ಯ ಭಾಗ್ಯ ಕಾಪಾಡಿಕೊಳ್ಳಲು ಸಾಧ್ಯ. ಇಲ್ಲದಿದ್ದರೆ ಯಾರದು ಲಾಭದಾಸೆಗೆ ನಿಮ್ಮ ಮತ್ತು ನಿಮ್ಮ ಪ್ರೀತಿ ಪಾತ್ರರ ಆರೋಗ್ಯ ಕೆಡುವುದರಲ್ಲಿ ಎರಡು ಮಾತಿಲ್ಲ. ಎಚ್ಚರ ಗ್ರಾಹಕ ಎಚ್ಚರ’ ! ?

ವಿಸ್ಮಯ ನ್ಯೂಸ್, ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮೂಲ ಸ್ಥಳದಲ್ಲೇ ಮುರಿನಕಟ್ಟೆ ನಿರ್ಮಾಣಕ್ಕೆ ಯೋಜನೆ ಸಿದ್ಧ : ವಿಶ್ವೇಶ್ವರ ಹೆಗಡೆ ಕಾಗೇರಿ

ಭಟ್ಕಳ: ಹೆದ್ದಾರಿ ಪ್ರಾಧಿಕಾರ ಮುರಿನಕಟ್ಟೆಯನ್ನು ಮೂಲ ಜಾಗದಲ್ಲಿಯೇ ಕಟ್ಟಲು ತಿರ್ಮಾನಿಸಿ ಈ ಕುರಿತು ನೀಲನಕ್ಷೇಯನ್ನು ತಯಾರಿಸಲಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಈ ವಿಚಾರದ ಕುರಿತಂತೆ ಜಿಲ್ಲಾಡಳಿತ ಹಾಗೂ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ ಸುರಕ್ಷಿತ ಆಶ್ರಯ ದೊರೆತಂತಿದ್ದು, ಕುಮಟಾ ಉಪವಿಭಾಗಾಧಿಕಾರಿಗಳ ಅನುಮತಿ ಬಳಿಕ ಹೋರಿಗಳನ್ನು ಗೋಶಾಲೆಗೆ ಕಳಿಸಿ, ಮೂಕ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಕುಮಟಾ: ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅತ್ಯಂತ ವಿಜೃಂಭಣೆಯಿoದ ನೆರವೇರಿತು....

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...