ಹೋಟೆಲ್ ಅಡುಗೆಮನೆಯಲ್ಲಿ ಅಶುಚಿತ್ವ ಪತ್ತೆ"
Important

ಹೊಟೇಲ್ ಮೇಲೆ ದಾಳಿ: ಹೆಗ್ಗಣಗಳ ರಾಶಿ, ಹಾಳಾದ ಎಣ್ಣೆ, ಅಶುಚಿತ್ವ ನೋಡಿ ಅಧಿಕಾರಿಗಳೇ ದಂಗು

Share

ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ದೂರು ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಪಟ್ಟಣ ವ್ಯಾಪ್ತಿಯ ಸಾಮಾನ್ಯ ಹೋಟೆಲ್ ಒಂದರ ಮೇಲೆ ದಾಳಿ ಮಾಡಿ,ಸ್ಥಳ ಪರಿಶೀಲಿಸಿದ ವೇಳೆ ವೈದ್ಯಾಧಿಕಾರಿಗಳು ಮತ್ತು ತಂಡದವರು ಆಡಿದ ಮಾತುಗಳು ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಂತಿತ್ತು. ಇಲ್ಲಿ ಹೆಗ್ಗಣಗಳ ರಾಶಿ,ಸುಟ್ಟು ಕರಕಲಾಗಿ ಜಿಡ್ಡು ಗಟ್ಟಿದ ಎಣ್ಣೆಯ ಬಗ್ಗೆ ಅವರಾಡಿದ ಮಾತುಗಳೇನು? ನೀವೇ ನೋಡಿ

ಅಂಕೋಲಾ: ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ಪಟ್ಟಣ ವ್ಯಾಪ್ತಿಯ ಸಣ್ಣ ಹೊಟೇಲ್ ಒಂದಕ್ಕೆ ದಾಳಿ ಮಾಡಿದ ಆರೋಗ್ಯ ಅಧಿಕಾರಿಗಳ ನೇತೃತ್ವದ ತಂಡ ಅಲ್ಲಿನ ಅಶುಚಿತ್ವ, ಆರೋಗ್ಯಕ್ಕೆ ಹಾನಿಕರ ಆಗಬಲ್ಲ ರೀತಿಯಲ್ಲಿ ಆಹಾರ ಪದಾರ್ಥಗಳ ತಯಾರಿಕೆ ಕಂಡು ಕ್ಷಣ ಕಾಲ ಅವರೇ ಹೌಹಾರುವಂತಾಗಿತ್ತು.

ಅಂಕೋಲಾ ಹೋಟೆಲ್ ಮೇಲೆ ಆರೋಗ್ಯ ಇಲಾಖೆಯ ದಾಳಿ"

ತಾಲೂಕು ಆರೋಗ್ಯಾಧಿಕಾರಿ ಡಾ. ಜಗದೀಶ ನಾಯ್ಕ ನೇತೃತ್ವದ ತಂಡ ದಾಳಿ ನಡೆಸಿದ ವೇಳೆ ಜಿಡ್ಡು ಗಟ್ಟಿದಂತಿರುವ ಎಣ್ಣೆಯನ್ನು ಬಾಣಲೆಯಲ್ಲಿ ಕಂಡು, ಇಲಿ ಹೆಗ್ಗಣಗಳ ಆಶ್ರಯ ತಾಣದಂತಿರುವ ಅಡುಗೆ ಕೋಣೆ, ಸ್ವಚ್ಚಗೊಳಿಸದ ಪಾತ್ರಗಳನ್ನು ಕಣ್ಣಾರೆ ಕಂಡು ಮಾಲಿಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಆರೋಗ್ಯಕ್ಕೆ ಹಾನಿಕಾರಕ ರೀತಿಯಲ್ಲಿ ತಿಂಡಿ ತಿನಿಸು ತಯಾರಿಕೆ

ಪಟ್ಟಣದ ಅಜ್ಜಿಕಟ್ಟಾ ಶಾಲೆ ಬಳಿ ಈ ಸಣ್ಣ ಹೋಟೆಲ್ ಇದ್ದು ಇಲ್ಲಿ ಆಹಾರ ಸುರಕ್ಷತೆ ನಿಯಮಗಳನ್ನು ಪಾಲನೆ ಮಾಡದಿರುವ ಕುರಿತು, ಒಂದೊಮ್ಮೆ ಇಲ್ಲಿನ ಆಹಾರ ಸೇವಿಸಿದರೆ ಸಣ್ಣ ಮಕ್ಕಳು ಹಾಗೂ ಇತರರ ಆರೋಗ್ಯದ ಮೇಲೆ ಕ್ರಮೇಣ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದ್ದು ಹೋಟೆಲಿನಲ್ಲಿ ಸ್ವಚ್ಛತೆ ಇಲ್ಲದಿರುವುದು, ಕಲಬೆರೆಕೆ ಎಣ್ಣೆ ಬಳಕೆ, ಹೃದಯ ಸಂಬಂಧಿ ಹಾಗೂ ಸಾಂಕ್ರಾಮಿಕ ರೋಗ ಹರಡುವ ರೀತಿಯಲ್ಲಿ ತಿಂಡಿ ತಿನಿಸುಗಳ ತಯಾರಿಕೆ ಕಂಡು ಬoದಿದೆ.

ಮಾಲಿಕರಿಗೆ ನೋಟಿಸ್ ಮತ್ತು ಎಚ್ಚರಿಕೆ

ಸಾರ್ವಜನಿಕರ ಆರೋಗ್ಯದ ಜತೆ ಚೆಲ್ಲಾಟವಾಡದಂತೆ ಖಡಕ್ ಆಗಿ ಎಚ್ಚರಿಸಿದ ಅಧಿಕಾರಿಗಳು, ಇದೇ ರೀತಿ ತಾಲೂಕಿನ ಬೇರೆಡೆಯೂ ಅಶುಚಿತ್ವ, ಬಳಸಿದ ಎಣ್ಣೆಯಲ್ಲೇ ಪದೇ ಪದೇ ಆಹಾರ ಪದಾರ್ಥಗಳನ್ನು ಕರಿಯುವುದು ಮತ್ತಿತರ ರೀತಿಯಲ್ಲಿ ಆರೋಗ್ಯಕ್ಕೆ ಹಾನಿಕಾರಕ ಎನ್ನುವ ಅಂಶ ಪತ್ತೆಯಾದಲ್ಲಿ ಅಂತಹ ಸ್ಥಳಗಳ ಮೇಲೂ ದಾಳಿ ನಡೆಸಿ ಸೂಕ್ತ ಕಾನೂನು ಕ್ರಮಗಳನ್ನು ಜರುಗಿಸುವುದಾಗಿ ತಾಲೂಕು ಆರೋಗ್ಯಾಧಿಕಾರಿಗಳು ಎಚ್ಚರಿಸಿದ್ದಾರೆ.

ಎಚ್ಚರ ಗ್ರಾಹಕ ಎಚ್ಚರ

ಆರೋಗ್ಯ ಶಿಕ್ಷಣಾಧಿಕಾರಿ ಶೈಲಜಾ ಭಂಡಾರಿ,ಆರೋಗ್ಯ ನಿರೀಕ್ಷಣಾಧಿಕಾರಿ ದರ್ಶನ ನಾಯ್ಕ, ಅಕ್ಷಯಕುಮಾರ್ ಮೊದಲಾದವರು ದಾಳಿಯಲ್ಲಿ ಪಾಲ್ಗೊಂಡಿದ್ದರು. ಹಾದಿ ಬೀದಿಗಳೇ ಇರಲಿ,ಹೋಟೆಲ್ ಮತ್ತಿತರ ಸ್ಥಳಗಳೇ ಇರಲಿ, ಆಹಾರ ತಯಾರಿಸುವವರು , ಮಾರುವವರ ಜವಾಬ್ದಾರಿಯಂತೆ,ಅರೋತ್ಪನ್ನಗಳನ್ನು ಕೊಂಡುಕೊಳ್ಳುವ ಗ್ರಾಹಕರು ಸಹ ಜಾಗರೂಕರಾಗಿದ್ದರೆ ಮಾತ್ರ ಆರೋಗ್ಯ ಭಾಗ್ಯ ಕಾಪಾಡಿಕೊಳ್ಳಲು ಸಾಧ್ಯ. ಇಲ್ಲದಿದ್ದರೆ ಯಾರದು ಲಾಭದಾಸೆಗೆ ನಿಮ್ಮ ಮತ್ತು ನಿಮ್ಮ ಪ್ರೀತಿ ಪಾತ್ರರ ಆರೋಗ್ಯ ಕೆಡುವುದರಲ್ಲಿ ಎರಡು ಮಾತಿಲ್ಲ. ಎಚ್ಚರ ಗ್ರಾಹಕ ಎಚ್ಚರ’ ! ?

ವಿಸ್ಮಯ ನ್ಯೂಸ್, ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬಲು ಅಪರೂಪ ಕೆಂಪು ಬಣ್ಣದ ಈ ಸಿಂಧೂರ ಗಣಪ: ದರ್ಶನ ಮಾತ್ರದಿಂದಲೇ ಪರಿಹಾರವಾಗುವುದಂತೆ ಜನ್ಮಾಂತರಗಳ ಪಾಪ

ಅಂಕೋಲಾ: ವಿಶ್ವದಾದ್ಯಂತ ಪ್ರಥಮ ಪೂಜಿತ, ಏಕದಂತನ ಆರಾಧನೆ ಜೋರಾಗಿ ನಡೆದಿದ್ದು ಚೌತಿಯ ಸಂಭ್ರಮ ಎಲ್ಲೆಡೆ ಕಂಡುಬರುತ್ತಿದೆ. ಈ ನಡುವೆ ಅಂಕೋಲಾ ತಾಲೂಕಿನ ಸಾರ್ವಜನಿಕ ಗಣಪತಿಗಳಲ್ಲಿ ಮೊದಲ ಗಣಪ ಎನ್ನುವ ಪ್ರಸಿದ್ಧಿ ಪಡೆದಿರುವುದು...

ಐತಿಹಾಸಿಕ ಚಂದ್ರಗ್ರಹಣ: ಆರಂಭ-ಮುಕ್ತಾಯ: ಚಂದ್ರಗ್ರಹಣ ಕುರಿತ ಸಾಮಾನ್ಯ ಪ್ರಶ್ನೆಗಳಿಗೆ ಉತ್ತರ

ವಿಸ್ಮಯ ಟಿ.ವಿ ನ್ಯೂಸ್ ಡೆಸ್ಕ್: ಭಾರತ ಸೇರಿದಂತೆ ವಿಶ್ವದಾದ್ಯಂತ 2025ರ ಎರಡನೇ ಮತ್ತು ವರ್ಷದ ಕೊನೆಯ ಚಂದ್ರಗ್ರಹಣ ಸೆಪ್ಟೆಂಬರ್ 7 ರಂದು ಸಂಭವಿಸಲಿದೆ. ಈ ಸಮಯದಲ್ಲಿ ಚಂದ್ರ ಕೆಂಪು ಬಣ್ಣದಲ್ಲಿ ಗೋಚರಿಸಲಿದ್ದು,...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಗುರು ಶಿಷ್ಯರ ಸಂಬಂಧ ಚಿರಸ್ಥಾಯಿ: ತಹಶೀಲ್ದಾರ ಡಾ. ಚಿಕ್ಕಪ್ಪ ನಾಯಕ

ಅಂಕೋಲಾ : ಶಿಕ್ಷಕರು ವೃತ್ತಿಯಿಂದ ನಿವೃತ್ತರಾದರೂ ಜನಮಾನಸದಿಂದ ಎಂದಿಗೂ ನಿವೃತ್ತರಾಗುವುದಿಲ್ಲ. ಗುರು ಶಿಷ್ಯರ ಸಂಬಂಧ ಎಂದಿಗೂ...

ಬಲು ಅಪರೂಪ ಕೆಂಪು ಬಣ್ಣದ ಈ ಸಿಂಧೂರ ಗಣಪ: ದರ್ಶನ ಮಾತ್ರದಿಂದಲೇ ಪರಿಹಾರವಾಗುವುದಂತೆ ಜನ್ಮಾಂತರಗಳ ಪಾಪ

ಅಂಕೋಲಾ: ವಿಶ್ವದಾದ್ಯಂತ ಪ್ರಥಮ ಪೂಜಿತ, ಏಕದಂತನ ಆರಾಧನೆ ಜೋರಾಗಿ ನಡೆದಿದ್ದು ಚೌತಿಯ ಸಂಭ್ರಮ ಎಲ್ಲೆಡೆ ಕಂಡುಬರುತ್ತಿದೆ....

ಐತಿಹಾಸಿಕ ಚಂದ್ರಗ್ರಹಣ: ಆರಂಭ-ಮುಕ್ತಾಯ: ಚಂದ್ರಗ್ರಹಣ ಕುರಿತ ಸಾಮಾನ್ಯ ಪ್ರಶ್ನೆಗಳಿಗೆ ಉತ್ತರ

ವಿಸ್ಮಯ ಟಿ.ವಿ ನ್ಯೂಸ್ ಡೆಸ್ಕ್: ಭಾರತ ಸೇರಿದಂತೆ ವಿಶ್ವದಾದ್ಯಂತ 2025ರ ಎರಡನೇ ಮತ್ತು ವರ್ಷದ ಕೊನೆಯ...

ಮನೆಯಿಂದ ಹೋದ ಅಂಕೋಲಾ ಯುವತಿ ನಾಪತ್ತೆ: ಪೊಲೀಸರ ತನಿಖೆ ಆರಂಭ

ಅಂಕೋಲಾ: ತಾಲೂಕಿನ ಅಗ್ರಗೋಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡಿಗೋಣ ಬೈಲಕೇರಿಯಲ್ಲಿ ಯುವತಿಯೋರ್ವಳು ಮನೆಯಿಂದ ಕಾಣೆಯಾದ ಘಟನೆ...

ಮನೆಯಿಂದ ಹೋದ ಮಹಿಳೆ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಮುಂಡಗೋಡ: ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾದವರ ಬಗ್ಗೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಮುಂಡಗೋಡು ನಿವಾಸಿಯಾಗಿದ್ದ...

ಮಗಳ ಹುಟ್ಟುಹಬ್ಬದಂದು ಸೇವಾಶ್ರಮ ನಿವಾಸಿಗಳಿಗೆ ಪ್ರೀತಿಯ ಸೇವೆ: ವಸಂತ ನಾಯಕ ಕುಟುಂಬದ ಮಾನವೀಯ ನೆರವು

ಅಂಕೋಲಾ: ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಅಪಾರ ಅನುಭವ, ಹಾಗೂ ಸಮಾಜದಲ್ಲಿ ಹಲವು ವಿದಾಯಕ ಕೆಲಸಗಳ ಮೂಲಕ...

ಅಬ್ದುಲ್ ಕಲಾಂ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸಿದ್ದಾಪುರ ತಾಲೂಕಿನ ಆರು ಶಿಕ್ಷಕರು ಆಯ್ಕೆ

ಸಿದ್ದಾಪುರ: 2025ನೇ ಸಾಲಿನ ಸಿದ್ದಾಪುರ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿoದ ನೀಡುವ ಡಾ. ಎ.ಪಿ.ಜೆ...

ಸೆಪ್ಟೆಂಬರ್ 6ರ ವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ ಏನು?

ಕಾರವಾರ, ಸೆಪ್ಟೆಂಬರ್ 3: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ....