ಅರ್ಪಿತಾ ಬೆಲ್ಲದ್, ಸಿವಿಲ್ ನ್ಯಾಯಾಧೀಶೆ, ಬೋಳೆ ಗ್ರಾಮ ಎಸ್.ಸಿ ಕಾಲನಿ ಭೇಟಿ – ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 90 ವಿಶೇಷ ಅಭಿಯಾನ ಕಾರ್ಯಕ್ರಮ
Focus News

ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ ವಿಶೇಷ ಅಭಿಯಾನ

Share

ಅಂಕೋಲಾ : ತಾಲೂಕಿನ ವಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋಳೆ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಗೆ ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶರಾದ ಅರ್ಪಿತಾ ಬೆಲ್ಲದ್ ಅವರು ಭೇಟಿ ನೀಡಿ ಕಾನೂನು ಸೇವೆಗಳ ಪ್ರಾಧಿಕಾರದ ವಿವಿಧ ಕಾರ್ಯಕ್ರಮಗಳ ಕುರಿತಂತೆ ಮಾಹಿತಿ ನೀಡಿದರು.

ಜುಲೈ 1 ರಿಂದ ಅಕ್ಟೋಬರ್ 7 ರ ವರೆಗೆ

ಉತ್ತರ ಕನ್ನಡ ಜಿಲ್ಲೆಯ ಜನರ ಅನುಕೂಲಕ್ಕಾಗಿ ಧಾರವಾಡದಲ್ಲಿ ಖಾಯಂ ಜನತಾ ನ್ಯಾಯಾಲಯ ಸ್ಥಾಪಿಸಲಾಗಿದ್ದು ಸಾರ್ವಜನಿಕ ಉಪಯುಕ್ತ ಸೇವೆಗಳಿಗೆ ಸಂಬoಧಿಸಿದoತ ವಿವಾ ದಗಳನ್ನು ಶುಲ್ಕ ರಹಿತವಾಗಿ ಜನತಾ ನ್ಯಾಯಾಲಯದಲ್ಲಿ ದಾಖಲಿಸಬಹುದಾಗಿದೆ ಎಂದ ಅವರು ಜುಲೈ 1 ರಿಂದ ಅಕ್ಟೋಬರ್ 7 ರ ವರೆಗೆ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 90 ಎಂಬ ವಿಶೇಷ ಅಭಿಯಾನ ರಾಜ್ಯಾದ್ಯಂತ ನಡೆಸಲಾಗುತ್ತಿದೆ.

ಅಂಗನವಾಡಿ ಹಾಗೂ ಸ್ಥಳೀಯ ಗ್ರಾಪಂ ಬಗ್ಗೆ ವಿಶೇಷ ಮೆಚ್ಚುಗೆ

ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ರಾಜಿ ಮಾಡಿಕೊಳ್ಳಲು ಬಯಸಿದರೆ ನ್ಯಾಯಾಲಯಗಳ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಗಳಲ್ಲಿ ಇತ್ಯರ್ಥಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು. ಎಸ್. ಸಿ ಕಾಲನಿ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದ ನ್ಯಾಯಾಧೀಶರು ಮೂಲಭೂತ ಸೌಕರ್ಯಗಳ ನಿರ್ವಹಣೆ ಕುರಿತು ಅಂಗನವಾಡಿ ಹಾಗೂ ಸ್ಥಳೀಯ ಗ್ರಾಪಂ ಬಗ್ಗೆ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದರು.

ವಂದಿಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರೀಶ್ ನಾಯಕ ಮಾತನಾಡಿ ನ್ಯಾಯಾಧೀಶರ ಭೇಟಿಯಿಂದಾಗಿ ಲೋಕ ಅದಾಲತ್ ಮತ್ತು ಇತರ ಕಾನೂನು ಸವಲತ್ತುಗಳ ಕುರಿತು ಜನರಿಗೆ ಉಪಯುಕ್ತ ಮಾಹಿತಿ ದೊರಕಿದಂತಾಗಿದೆ ಎಂದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ ನಾಯಕ , ತಾಲೂಕಾ ವಕೀಲರ ಸಂಘದ ಅಧ್ಯಕ್ಷೆ ಪ್ರತಿಭಾ ನಾಯ್ಕ, ಕಾರ್ಯದರ್ಶಿ ಮಮತಾ ಕೆರೆಮನೆ, ಗ್ರಾಪಂ ಸದಸ್ಯೆ ಕುಸುಮಾ, ಅಂಗನವಾಡಿ ಕಾರ್ಯಕರ್ತೆಯರು,ಅಂಗನವಾಡಿಯ ಮಕ್ಕಳು ಮತ್ತು ಅವರ ಪಾಲಕರು,ಊರ ನಾಗರಿಕರು, ಉಪಸ್ಥಿತರಿದ್ದರು. ನ್ಯಾಯಾಲಯ ಹಾಗೂ ಗ್ರಾಪಂ ಸಿಬ್ಬಂದಿಗಳು ಸಹಕರಿಸಿದರು.


ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಚುನಾವಣೆ ನಂತರ ರಾಜಕೀಯ ಬದಿಗಿಟ್ಟು ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯ : ಅಮದಳ್ಳಿ ಗ್ರಾಮ ದೇವರ ಗ್ರಾಮ ಎಂದ ಶಾಸಕ ಸೈಲ್

ಕಾರವಾರ: ಗ್ರಾಮೀಣ ಆಡಳಿತ ವ್ಯವಸ್ಥೆಗೆ ಬಲ ತುಂಬುವ ಹೆಜ್ಜೆಯಾಗಿ ಅಮದಳ್ಳಿ ಗ್ರಾಮ ಪಂಚಾಯತ್‌ನ ನೂತನ ಸಭಾಭವನವನ್ನು...

ಅಂಕೋಲಾದಲ್ಲಿ ಇಂದು ಪಂಚದೇವರ ದೊಡ್ಡ ಕಾರ್ತಿಕೋತ್ಸವ : ಶಿರ ಕುಳಿ ಕಾನದೇವಿ ದೇವಸ್ಥಾನದ ಹತ್ತಿರ ವನಭೋಜನಕ್ಕೆ ನಡೆಯುತ್ತಿದೆ ಸಿದ್ದತೆ

ಅಂಕೋಲಾ: ತಾಲೂಕಿನ ಸಂಸ್ಕೃತಿಯ ಆರಾಧನಾ ಪದ್ಧತಿಯಾಗಿ ಹಲವು ತಲೆಮಾರುಗಳಿಂದ ಆಚರಿಸಲ್ಪಡುತ್ತಬಂದಿರುವ ಪಂಚ ದೇವರುಗಳ ದೊಡ್ಡ ಕಾರ್ತಿಕೋತ್ಸವ...

ಕೇಣಿ ವಾಣಿಜ್ಯ ಬಂದರು ವಿರೋಧಿಸಿ ಹೋರಾಟ ನಿರಂತರ : ಬಹಿರಂಗ ಸಭೆ ತಾತ್ಕಾಲಿಕವಾಗಿ ಮುಂದೂಡಿಕೆ : ಸಂಘಟಕ ಪ್ರಮುಖರು ಪ್ರಕಟಣೆಯಲ್ಲಿ ಹೇಳಿದ್ದೇನು ?

ಅಂಕೋಲಾ: ತಾಲೂಕಿನ ಕೇಣಿಯಲ್ಲಿ ನಿರ್ಮಾಣ ಉದ್ದೇಶಿತ ವಾಣಿಜ್ಯ ಬಂದರು ಯೋಜನೆಯನ್ನು ವಿರೋಧಿಸಿ, ಸಾಮೂಹಿಕ ನಾಯಕತ್ವದಡಿ, ಅಂಕೋಲಾ...

ಚಿಪ್ಪಿ ಫ್ಯಾಕ್ಟರಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆ

ಅಂಕೋಲಾ: ತಾಲೂಕಿನ ಶೆಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...

ಆಧುನಿಕ ಜಗತ್ತನ್ನಾಳಲಿರುವ AI ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

ಅಂಕೋಲಾ : ಕೃತಕ ಬುದ್ಧಿಮತ್ತೆಯು ( AI ತಂತ್ರಜ್ಞಾನ ) ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ...

ಅಂಕೋಲಾ ಕಲ್ಲೇಶ್ವರದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಅಂಕೋಲಾ : ಒನ್‌ ಲೈಟ್‌ ಎಸ್ಸಿಲಾರ್ ಲಕ್ಸೊಟಿಕಾ ಫೌಂಡೇಶನ್, ಸ್ಪಂದನ ಸೇವಾ ಟ್ರಸ್ಟ್ ಹಡಿನಬಾಳ ಹೊನ್ನಾವರ,ಸಂಗಮ...

ಹೊನ್ನಾವರದಲ್ಲಿ ಸಾರ್ವಜನಿಕ ಗಣೇಶೋತ್ಸವ ಮೂರ್ತಿಯ ವಿಸರ್ಜನೆ: ಅದ್ಧೂರಿ ಮೆರವಣಿಗೆ

ಹೊನ್ನಾವರ: ಪಟ್ಟಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಚವತಿಯ ದಿನದಂದು ಪ್ರತಿಷ್ಠಾಪಿಸಿದ ಗಣಪನನ್ನು ವಿಜೃಂಭಣೆಯಿoದ ಆಚರಿಸಿ 7...

KEB ಗಣಪನಿಗೆ 48 ನೇ ವಾರ್ಷಿಕ ಸಂಭ್ರಮ: ಸೆ.4 ಮಹಾಪೂಜೆ – ಸೆ.5 ರಂದು ಭವ್ಯ ಮೆರವಣಿಗೆಯೊಂದಿಗೆ ವಿಸರ್ಜನೆ

ಅಂಕೋಲಾ: ತಾಲೂಕಿನ ಹೆಸ್ಕಾಂ ಇಲಾಖೆ ವತಿಯಿಂದ 48 ನೇ ವರ್ಷದ ಗಣೇಶೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ...