Important

ಬಸ್ ಗೆ ಡಿಕ್ಕಿ ಹೊಡೆದ ಲಾರಿ : ಸ್ಟೇರಿಂಗ್ ಮಧ್ಯ ಸಿಲುಕಿದ ಲಾರಿ ಚಾಲಕ ಸಾವು: ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ನಿಧನ

Share

ಅಂಕೋಲಾ: ಟ್ಯಾಂಕರ್ ಲಾರಿ ಮತ್ತು ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟ್ಯಾಂಕರ್ ಚಾಲಕ ಮತ್ತು ಒರ್ವ ಬಸ್ ಪ್ರಯಾಣಿಕ ಸೇರಿ ಒಟ್ಟು ಇಬ್ಬರು ಸ್ಥಳದಲ್ಲೇ ಮೃತಪಟ್ಟು,ಸುಮಾರು 9 ಜನರು ಗಾಯನೋವುಗೊಂಡ ಧಾರುಣ ಘಟನೆ ತಾಲೂಕಿನ ಅಡ್ಲೂರ್ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸಂಭವಿಸಿದೆ.

ಮಕ್ಕಿಗದ್ದೆಯಿಂದ ಅಂಕೋಲಾ ಕಡೆ ಬರುತ್ತಿದ್ದ ಸಾರಿಗೆ ಸಂಸ್ಥೆ ಬಸ್ ( ನೊಂದಣಿ ಸಂಖ್ಯೆ KA 31 F 1247) ಮತ್ತು ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆ ಸಾಗುತ್ತಿದ್ದ ಟ್ಯಾಂಕರ್ ಲಾರಿ ( KA 29 C 2998) ನಡುವೆ ಅಡ್ಲೂರಿನ ತರಂಗ ಹೊಟೇಲ್ ಎದುರು ಭೀಕರ ಅಪಘಾತ ಸಂಭವಿಸಿದ್ದು ಟ್ಯಾಂಕರ್ ಚಾಲಕ ಮುದ್ದೇಬಿಹಾಳ ನಿವಾಸಿ ಶರಣಪ್ಪ ಎಸ್ ಎನ್ನುವವರು ಸ್ಥಳದಲ್ಲೇ ಮೃತಪಟ್ಟಿದ್ದು , ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ತಾಲೂಕಿನ ಕೇಣಿಯ ಭಾಸ್ಕರ ಗಾಂವಕರ್ ಎನ್ನುವವರು, ಸಹ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಬಸ್ ಚಾಲಕ ಅವರ್ಸಾ ದಂಡೇಭಾಗ ನಿವಾಸಿ ರತ್ನಾಕರ ನಾಯ್ಕ ಕಾಲಿಗೆ ಮತ್ತು ಇತರೆ ಸುಮಾರು
ಒಂಬತ್ತು ಜನ ಪ್ರಯಾಣಿಕರಿಗೆ ಸಹ ಗಾಯ ನೋವುಗಳಾಗಿದ್ದು, ಗಾಯಾಳುಗಳನ್ನು ಅಂಬುಲೆನ್ಸ್ ಮೂಲಕ ತಾಲೂಕ ಆಸ್ಪತ್ರೆಗೆ ಸಾಗಿಸಿ, ಗಂಭೀರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆ ಕಾರವಾರಕ್ಕೆ ಸಾಗಿಸಲಾಗಿದೆ.

ಅಂಕೋಲಾ,ರಾಮನ ಗುಳಿ,ಗೋಕರ್ಣ,ಗುಳ್ಳಾಪುರ ಭಾಗದ ಅಂಬುಲೆನ್ಸ್ ಗಳನ್ನು ಸೇವೆಗೆ ಬಳಸಿಕೊಳ್ಳಲಾಗಿತ್ತು. ವಾಹನವೊಂದನ್ನು ಓವರ್ ಟೇಕ್ ಮಾಡಲು ಹೋಗಿ ಟ್ಯಾಂಕರ್ ಲಾರಿ ಚಾಲಕ ವಾಹನದ ಮೇಲಿನ ತನ್ನ ನಿಯಂತ್ರಣ ಕಳೆದುಕೊಂಡು,ಎದುರಿನಿಂದ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸಿಗೆ ಜೋರಾಗಿ ಡಿಕ್ಕಿ ಪಡಿಸಿದ ಎನ್ನಲಾಗಿದ್ದು, ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿ ಬಿದ್ದು, ಸಂಪೂರ್ಣ ಜಜ್ಜಿ ,ನುಜ್ಜು ಗುಜ್ಜಾಗಿ ಗುಜರಿಯಂತೆ ಕಂಡುಬರುತ್ತಿದೆ. ಪಿ ಎಸ್ ಐ ಗಳಾದ ಗುರುನಾಥ್ ಹಾದಿಮನಿ,ಪಿಎಸ್ಐ ಸುನಿಲ್ ಹುಲ್ಲೊಳ್ಳಿ ಸ್ಥಳಕ್ಕೆ ಭೇಟಿ ನೀಡಿ,ಪರಿಶೀಲಿಸಿ ಕಾನೂನು ಕ್ರಮ ಮುಂದುವರಿಸಿದ್ದಾರೆ.

ಹೆದ್ದಾರಿ ಗಸ್ತು ವಾಹನ ದ ಎಎಸ್ಐ ದೇವಿದಾಸ, ಸಿಬ್ಬಂದಿ ಉಮೇಶ, 112 ತುರ್ತು ವಾಹನ ಸಿಬ್ಬಂದಿಗಳು, ಹಾಗೂ ಪೋಲಿಸ್ ಮತ್ತು ಹೋಂ ಗಾರ್ಡ್ ಸಿಬ್ಬಂದಿಗಳು ,ಕರ್ತವ್ಯ ನಿರ್ವಹಿಸಿ ಹೆದ್ದಾರಿಯಲ್ಲಿ ಇತರೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕ್ರೇನ್ ಬಳಸಿ ಅಪಘಾತಗೊಂಡ ಎರಡೂ ವಾಹನಗಳನ್ನು ಹೆದ್ದಾರಿ ಅಂಚಿಗೆ ಎಳೆದೊಯ್ಯಲಾಯಿತು.

ಘಟನಾ ಸ್ಥಳದಿಂದ,ತಾಲೂಕ ಆಸ್ಪತ್ರೆ ಶವಾಗಾರಕ್ಕೆ ಮೃತ ದೇಹ ಸಾಗಿಸಲು ಸಾಮಾಜಿಕ ಕಾರ್ಯಕರ್ತರಾದ ಕನಸಿ ಗದ್ದೆಯ ವಿಜಯಕುಮಾರ್ ನಾಯ್ಕ್,ಬೊಮ್ಮಯ್ಯ ನಾಯ್ಕ ಸಹಕರಿಸಿದರು. ಗಣಪತಿ ನಾಯಕ್ ಮೂಲೆಮನೆ, ಮಂಜುನಾಯಕ ಸೇರಿದಂತೆ ಅಗಸೂರು ಅಡ್ಲೂರು ಹಾಗೂ ಸುತ್ತಮುತ್ತಲ ಸ್ಥಳೀಯ ನಾಗರಿಕರು, ಪ್ರಮುಖರು, ಇತರೆ ಕೆಲ ಹೆದ್ದಾರಿ ಸಂಚರಿಗಳು ಮಾನವೀಯ ನೆಲೆಯಲ್ಲಿ ಕೆಲ ಸೇವೆ, ಸಹಕಾರ ನೀಡಿದರು.

ಮಕ್ಕಿಗದ್ದೆ ಶಾಲಾ ಶಿಕ್ಷಕಿ ವೀಣಾ ವೆಂಕಟರಮಣ, ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರಾದ ಪ್ರಜ್ಞಾ ಪ್ರದೀಪ ನಾಯ್ಕ ಅಲಗೇರಿ, ಪ್ರಜ್ಞಾ ಮಗಳು ಸಾನ್ವಿ,ಸಾವಿತ್ರಿ ದಾಾಕು ಗೌಡ ಒಕ್ಕಲ ಬೆಳಸೆ ,ರಕ್ಷಾ ರಾಘವೇಂದ್ರ ಬಾನಾವಳಿ ಅವರ್ಸಾ,ಬಸ್ಸಿನ ನಿರ್ವಾಹಕ ಚಂದ್ರಹಾಸ ನಾರಾಯಣ ನಾಯಕ ಕೋಡ್ಕಣಿ,ಶ್ರೀಧರ ಈಶ್ವರ ಹರಿಕಂತ್ರ ಬಳಲೆ,ರಾಧಾಕೃಷ್ಣ ಮಹಾಬಲೇಶ್ವರ ನಾಯ್ಕ ಮಕ್ಕಿಗದ್ದೆ ಮತ್ತು ಬಸ್ ಚಾಲಕ ರತ್ನಾಕರ ನಾಯ್ಕ ಅವರ್ಸ ಅವರು ಗಾಯಾಳುಗಳಾಗಿದ್ದಾರೆ.ಅಂಬುಲೆನ್ಸ್ ಮೂಲಕ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.

ಇನ್ನೊರ್ವ ಪ್ರಯಾಣಿಕ ಖಾಸಗಿ ವಾಹನದ ಮೂಲಕ ನೇರವಾಗಿ ಜಿಲ್ಲಾಸ್ಪತ್ರೆ ಕಾರವಾರಕ್ಕೆ ತೆರಳಿದ್ದಾರೆ ಎನ್ನಲಾಗಿದ್ದು ಈ ಎಲ್ಲಾ ಗಾಯಾಳುಗಳ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿ ದಂತೆ ಆಲಿಕೆ ಸಭೆಗೆ ತೆರಳಿದ್ದ ಎಸ್ಪಿ ದೀಪನ್,ಅಂಕೋಲಾ ಅಪಘಾತದ ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಕೂಡಲೇ ಗೇರುಸೊಪ್ಪ ದಿಂದ ಹೊರಟು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ಮತ್ತು ಅಡ್ಲೂರಿನ ಘಟನಾಸ್ಥಳಕ್ಕೆ ಭೇಟಿ ನೀಡಿದರು. ಸಿಪಿಐ ಚಂದ್ರಶೇಖರ್ ಮಠಪತಿ ಹಿರಿಯ ಅಧಿಕಾರಿಗಳ ಜೊತೆಯಲ್ಲಿದ್ದು ಕರ್ತವ್ಯ ನಿರ್ವಹಿಸಿದರು.

ಅಂಕೋಲಾ ಸಾರಿಗೆ ಘಟಕದ ಅಧಿಕಾರಿ ಶಿವಾನಂದ ಮತ್ತಿತರರು ಸ್ಥಳ ಪರಿಶೀಲಿಸಿದರು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸುಮಾರು 10 ತಿಂಗಳಿಂದ ಮಗ ಸಂಪರ್ಕಕ್ಕೆ ಸಿಗದೆ ನೊಂದ ತಂದೆ: ಮನೆಯಿಂದ ಮಲ್ಪೆಗೆ ಹೋದ ಮಗನೆಲ್ಲಿ ?

ಅಂಕೋಲಾ: ವ್ಯಕ್ತಿಯೋರ್ವ ಕಾಣೆಯಾಗಿ ಸುಮಾರು ಹತ್ತು ತಿಂಗಳುಗಳ ನಂತರ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಘಟನೆ ಅಂಕೋಲಾದಲ್ಲಿ ನಡೆದಿದೆ. ತಾಲೂಕಿನ ಹಿಲ್ಲೂರು ತಿಂಗಳೆಬೈಲ್ ನಿವಾಸಿಯಾಗಿದ್ದ ನವೀನ ತೋಕು ಹರಿಕಂತ್ರ ಕಾಣೆಯಾದ ವ್ಯಕ್ತಿ....

ರಾಷ್ಟ್ರೀಯ ಮೆಗಾ ಲೋಕ ಅದಾಲತ್ ನಲ್ಲಿ ಒಟ್ಟೂ 167 ಪ್ರಕರಣಗಳು ರಾಜೀ ಸಂಧಾನದಲ್ಲಿ ಇತ್ಯರ್ಥ

ಅಂಕೋಲಾ: ತಾಲೂಕಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಸೆ 13 ರ ಶನಿವಾರ ಯಶಸ್ವಿಯಾಗಿ ನಡೆಯಿತು. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಹೃದಯದಾಕಾರದ ಮುಖದ ಗೂಬೆ: ಶಾಲೆಗೆ ಬಂತು ಗುಮ್ಮ

ಅಂಕೋಲಾ: ಮಕ್ಕಳು ಊಟ, ತಿಂಡಿ, ನಿದ್ದೆ ಸರಿಯಾಗಿ ಮಾಡದಿದ್ದರೆ ಅಥವಾ ಬೇರೆ ಕಾರಣದಿಂದ ಹಠ ಹಿಡಿದರೆ...

ಸುಮಾರು 10 ತಿಂಗಳಿಂದ ಮಗ ಸಂಪರ್ಕಕ್ಕೆ ಸಿಗದೆ ನೊಂದ ತಂದೆ: ಮನೆಯಿಂದ ಮಲ್ಪೆಗೆ ಹೋದ ಮಗನೆಲ್ಲಿ ?

ಅಂಕೋಲಾ: ವ್ಯಕ್ತಿಯೋರ್ವ ಕಾಣೆಯಾಗಿ ಸುಮಾರು ಹತ್ತು ತಿಂಗಳುಗಳ ನಂತರ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಘಟನೆ...

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಅಂಕೋಲಾ ತಾಲೂಕಾ ಘಟಕ ಉದ್ಘಾಟನೆ

ಅಂಕೋಲಾ: ಪತ್ರಿಕೆ ಹಾಗೂ ಸುದ್ದಿ ಮಾಧ್ಯಮಗಳಿಂದ ಪ್ರತಿದಿನದ ಜಾಗತಿಕ ಆಗು ಹೋಗುಗಳ ಜ್ಞಾನವನ್ನು ಅರಿಯಲು ಸಾಧ್ಯವಿದ್ದು,...

ಚುಟುಕು ಬ್ರಹ್ಮ ದಿನಕರ ದೇಸಾಯಿ ಜನ್ಮದಿನಾಚರಣೆ

ಹೊನ್ನಾವರ: ಚುಟುಕು ಬ್ರಹ್ಮ ದಿನಕರ ದೇಸಾಯಿ ಜನ್ಮದಿನಾಚರಣೆ ಹೊನ್ನಾವರ ತಾಲೂಕಿನ ಕಾಸರಕೋಡದ ಜನತಾ ವಿದ್ಯಾಲಯದಲ್ಲಿ ಕನ್ನಡ...

ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡಿ: ಹೆಸ್ಕಾಂ ಅಧಿಕಾರಿಗೆ ಸಚಿವ ಮಂಕಾಳ ವೈದ್ಯ ತಾಕೀತು

ಭಟ್ಕಳ: ಜನರಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸಿ.ಸಿ ಓಸಿ ಪ್ರಮಾಣ ಪತ್ರವಿಲ್ಲದಿದ್ದರು, ಜನರಿಗೆ ಪಂಚಾಯತ್...

Uttara Kannada Roundup 2025: ಇಂದಿನ ಪ್ರಮುಖ ಸುದ್ದಿಗಳು

ಅರಣ್ಯಕ್ಕೆ ಓಡಿ ಕಾಣೆಯಾದ ವ್ಯಕ್ತಿ ಬನವಾಸಿ: ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬ ಅರಣ್ಯದೊಳಗೆ ಓಡಿಹೋಗಿ ಕಾಣೆಯಾದ...

ಹೊಟೇಲ್ ಮೇಲೆ ದಾಳಿ: ಹೆಗ್ಗಣಗಳ ರಾಶಿ, ಹಾಳಾದ ಎಣ್ಣೆ, ಅಶುಚಿತ್ವ ನೋಡಿ ಅಧಿಕಾರಿಗಳೇ ದಂಗು

ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ದೂರು ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಪಟ್ಟಣ ವ್ಯಾಪ್ತಿಯ ಸಾಮಾನ್ಯ...

ಗುರು ಶಿಷ್ಯರ ಸಂಬಂಧ ಚಿರಸ್ಥಾಯಿ: ತಹಶೀಲ್ದಾರ ಡಾ. ಚಿಕ್ಕಪ್ಪ ನಾಯಕ

ಅಂಕೋಲಾ : ಶಿಕ್ಷಕರು ವೃತ್ತಿಯಿಂದ ನಿವೃತ್ತರಾದರೂ ಜನಮಾನಸದಿಂದ ಎಂದಿಗೂ ನಿವೃತ್ತರಾಗುವುದಿಲ್ಲ. ಗುರು ಶಿಷ್ಯರ ಸಂಬಂಧ ಎಂದಿಗೂ...