Uncategorized

ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗೆ ಸರ್ಚ್ ವಾರೆಂಟ್ ಮೇಲೆ ಬಂದ ಲೋಕಾಯುಕ್ತರ ತಂಡ : ಯಾಕೆ ನೋಡಿ?

Share

ಅಂಕೋಲಾ‌ : ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮುಂತಾದ ಕೆಲಸಗಳಲ್ಲಿ ಅನಗತ್ಯ ವಿಳಂಬ ಮತ್ತು ಏಜೆಂಟರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು ಸರ್ಚ ವಾರೆಂಟ್ ಸಹಿತ ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗೆ ದಿಢೀರ್ ದಾಳಿ ಮಾಡಿದ್ದರಿಂದ,ಮಳೆಯ ವಾತಾವರಣದ ನಡುವೆಯೂ ಒಳಗಿದ್ದ ಅಧಿಕಾರಿಗಳು ಮತ್ತು ಕೆಲ ಸಿಬ್ಬಂದಿಗಳು ಕುಳಿತಲ್ಲೇ ಬೆವರುವಂತಾಯಿತು.

ಲೋಕಾಯುಕ್ತ ಅಧಿಕಾರಿ ವಿನಾಯಕ ಬಿಲ್ಲವ ಹಾಗೂ ವಿಜಯ ನೇತೃತ್ವದಲ್ಲಿ 7 ಜನರ ತಂಡ ದಿಡೀರ್ ದಾಳಿ ಮಾಡಿ ನಾಲ್ಕೈದು ತಾಸುಗಳ ಕಾಲ ಕಡತಗಳು ಮತ್ತಿತರ ಕಾಗದ ಪತ್ರಗಳನ್ನು ಪರಿಶೀಲನೆ ನಡೆಸಿ, ಇನ್ನೂ ಹೆಚ್ಚಿನ ಪರಿಶೀಲನೆಗಾಗಿ ಕೆಲವು ಕಡತಗಳ ಪ್ರತಿಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದ್ದು,ಇದು ಪಟ್ಟಣ ವ್ಯಾಪ್ತಿಯಲ್ಲಿ ಸಾರ್ವಜನಿಕ ವಲಯದಲ್ಲಿ ನಾನಾ ರೀತಿಯ ಚರ್ಚೆಗೆ ಕಾರಣವಾದಂತಿದೆ.

ಲೋಕಾಯುಕ್ತರ ದಿಡೀರ್ ಭೇಟಿಯ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ರಾತ್ರಿ 10 ಗಂಟೆ ನಂತರ ಅಧಿಕೃತ ಮತ್ತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.ಜಿಲ್ಲೆಯ ಮುಂಡಗೋಡ ಮತ್ತಿತರಡೆ ಕೆಲ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಲಂಚ ಇಲ್ಲವೇ ಮತ್ತಿತರ ಕಾರಣದಿಂದ ಬೇಕಾಯ್ದೆ ಶೀರ ನೋಂದಣಿ ಮಾಡಿಕೊಡಲಾಗುತ್ತದೆ ಎಂಬ ಆರೋಪ ಕೇಳಿಬರುವಂತಾಗಿದೆ.

ಈ ಹಿನ್ನೆಲೆಯಲ್ಲಿಯೂ ಉಪನೊಂದಣಾಧಿಕಾರಿಗಳ ಕಚೇರಿಗೆ ಲೋಕಾಯುಕ್ತರು ದಾಳಿ, ಮಹತ್ವ ಪಡೆದಿದ್ದು, ಆನ್ ಲೈನ್ ನೊಂದಣಿ ಪ್ರಕ್ರಿಯೆ ಹೊರತಾಗಿಯೂ ನಗದು ಮತ್ತಿತರ ರೀತಿಯ ಒಳ ವ್ಯವಹಾರ ನಡೆದಿದ್ದರೆ ಪರಿಶೀಲನೆ ವೇಳೆ ಅವು ಗೊತ್ತಾಗಲಿವೆ ಎನ್ನಲಾಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ ಸಮ್ಮೇಳನವು ಇದೇ ಜೂನ್ 14 ರ ಭಾನುವಾರದಂದು ಕುಮಟಾದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಂಗಣದಲ್ಲಿ ನಡೆಯಲಿದೆ....

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ / ಹೆಗಡೆ ಆಪ್ಟಿಕಲ್ಸ್, ಭಟ್ಕಳ ಹಾಗೂ ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಹೊಂದಿದ್ದು, ಇದೀಗ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಉದಯ ಏಜೆನ್ಸಿ ಮಾರ್ಟ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಹೊನ್ನಾವರ: ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ. ಮಂಕಿಯ ಉದಯ ಏಜೆನ್ಸಿ ಮಾರ್ಟ್ ಸಂಸ್ಥೆಯಲ್ಲಿ ಸೆಲ್ಸ್...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಹಲವು ಉದ್ಯೋಗಾವಕಾಶ : 40 ಸಾವಿರದ ವರೆಗೆ ಸಂಬಳ

ಕುಮಟಾ: ಉತ್ತರಕನ್ನಡ ಜಿಲ್ಲೆಯ ಪ್ರಸಿದ್ಧ ಮತ್ತು ಬೃಹತ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಶೋರೂಮ್, ತರಂಗ ಎಲೆಕ್ಟ್ರಾನಿಕ್ಸ್...

ಅಂಕೋಲಾದಲ್ಲಿ ‘ಉತ್ತಾರಾ’ ಫಿಸಿಯೋಥೆರಪಿ–ನ್ಯೂಟ್ರಿಷನ್ ಕೇಂದ್ರ ಆರಂಭ

ಅಂಕೋಲಾ: ಪಟ್ಟಣದ ಶಾಂತಾದುರ್ಗಾ ದೇವಸ್ಥಾನದ ಎದುರಿನ ಮುಖ್ಯರಸ್ತೆ ಅಂಚಿನ ಕಟ್ಟಡದಲ್ಲಿ ‘ಉತ್ತಾರಾ ಫಿಸಿಯೋಥೆರಪಿ ಮತ್ತು ನ್ಯೂಟ್ರಿಷನ್...

ಧರ್ಮಸ್ಥಳಕ್ಕೆ ಕಪ್ಪುಚುಕ್ಕೆ ತರುವ ಪ್ರಯತ್ನ: ಬೃಹತ್ ಜನಾಗ್ರಹ-ಧರ್ಮಸಭೆ

ಹೊನ್ನಾವರ: ಪಟ್ಟಣದ ನಾಮಧಾರಿ ಸಭಾಭವನದ ಆವಾರದಲ್ಲಿ ಶ್ರೀ ಧರ್ಮಸ್ಥಳ ಕ್ಷೇತ್ರ ಭಕ್ತಾಭಿಮಾನಿ ವೇದಿಕೆ ಹೊನ್ನಾವರ ವತಿಯಿಂದ...