Important

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

Share

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ ತರಬಹುದು,ಇಂತಹದೊoದು ಪ್ರಕೃತಿ ವಿಸ್ಮಯ ನಡೆದದ್ದು ದೂರದಲ್ಲೆಲ್ಲೋ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಾರವಾಡದಲ್ಲಿ,ಅದನ್ನು ನೀವೇ ನೋಡಿ.

ಅಂಕೋಲಾ : ತಾಲೂಕಿನ ಹಾರವಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಬಿತವಾಡ ಕಡಲ ಕಿನಾರೆಯಲ್ಲಿ ಮೀನುಗಾರರು ಬಲೆ ಬೀಸದಿದ್ದರೂ, ಜೀವಂತ ಮೀನುಗಳು ತಾವೇ ತಾವಾಗಿ ಬಂದು ಕಡಲಂಚಿನಲ್ಲಿ ಬೀಳುವ ಮೂಲಕ ಮೀನಿನ ಸುಗ್ಗಿ ಕಂಡು ಬಂದು ,ಪ್ರಕೃತಿ ವಿಸ್ಮಯಕ್ಕೆ ಎಂಥವರು ಬೆರಗಾಗುವಂತೆ ಮಾಡಿದೆ.

ತರ್ಲೆ ಮೀನು , ತೋರಿ ಮೀನು, ಎಂಬಿತ್ಯಾದಿ ಹೆಸರುಗಳಿಂದ ಗುರುತಿಸಿಕೊಂಡ ಗಾಬಿತವಾಡ ವ್ಯಾಪ್ತಿಯಲ್ಲಿ,ಸಮುದ್ರದ ಅಲೆಗಳೊಂದಿಗೆ ಬಂದು ಕಡಲ ತಡಿಯಲ್ಲಿ ಚಡಪಡಿಸುವುದನ್ನು ಕಂಡ ಮೀನುಗಾರ ಮಹಿಳೆಯರು, ಮಕ್ಕಳು ಸೇರಿದಂತೆ ಸ್ಥಳೀಯರು ಮೀನಿಗಾಗಿ ಮುಗಿಬಿದ್ದು ಕೈಗೆ ಸಿಕ್ಕಷ್ಟು ಬಾಚಿಕೊಂಡು,ಸಖತ್ ಖುಷಿಗೊಂಡಿದ್ದಾರೆ.

ದಡದಲ್ಲಿ ರಾಶಿ ರಾಶಿ ಮೀನುಗಳು ಬಂದು ಬೀಳುತ್ತಿರುವ ಸುದ್ದಿ ಗ್ರಾಮದಲ್ಲಿ ಸಖತ್ ವೈರಲ್ ಆಗಿದೆ. ಹಲವರು ಮೀನುಗಳನ್ನು ಹಿಡಿದು, ಚೀಲ ಬುಟ್ಟಿಗೆ ತುಂಬಿಸಿಕೊಳ್ಳಲು ಮುಂದಾದರೆ,ಇನ್ನು ಕೆಲವರು ಈ ಪ್ರಕೃತಿ ವಿಸ್ಮಯವನ್ನು ತಮ್ಮ ಮೊಬೈಲ್ ಕ್ಯಾಮೆರಾ ಗಳಲ್ಲಿ ಸೆರೆಹಿಡಿದು ಸಂತಸ ಹಂಚಿಕೊoಡಿದ್ದಾರೆ.

ಸ್ಥಳೀಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಂಜುನಾಥ್ ಠಾಕೇಕರ್ ಮತ್ತಿತರ ಪ್ರಮುಖರು ಈ ಕುರಿತು ವಿಸ್ಮಯ ವಾಹಿನಿ ಯೊಂದಿಗೆ ಮಾತನಾಡಿ, ಕಡಲ ಮಕ್ಕಳಾದ ನಾವು ಸಮುದ್ರ ದೇವತೆಯನ್ನು ಈ ಮೊದಲಿನಿಂದಲೂ ಪೂಜಿಸಿಕೊಂಡು ಬರುತ್ತಿದ್ದು,ಅದನ್ನೇ ನಂಬಿ ನಮ್ಮ ಜೀವನ ನಡೆಸುತ್ತಿದ್ದೇವೆ.ನವರಾತ್ರಿಯ ಶುಭ ಸಂದರ್ಭದಲ್ಲಿ ದುರ್ಗಾದೇವಿ ಕೃಪೆ ಎನ್ನುವಂತೆ ಈ ದಿನ ಭೂತಾಯಿ ಎನ್ನುವ ಮೀನು ತಾನೇ ತಾನಾಗಿ ಕಡಲ ತಡಿಯಲ್ಲಿ ಬಂದು ನಮ್ಮವರಿಗೆ ಸಿಕ್ಕಿದ್ದು,ಒಂದರ್ಥದಲ್ಲಿ ವರದಾನ ಎಂದೇ ನಂಬುತ್ತೇವೆ ಎಂದಿದ್ದಾರೆ.

ವಿಸ್ಮಯ ನ್ಯೂಸ್, ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ ಗುರುವಾರ, 10ರ ಶುಕ್ರವಾರ ಶ್ರೀಕ್ಷೇತ್ರ ಗೋಕರ್ಣಕ್ಕೆ ಆಗಮಿಸಲಿದೆ. ಏಪ್ರಿಲ್ 9 ರಂದು ರಥಬೀದಿಯಲ್ಲಿರುವ ರಾಮಚಂದ್ರ...

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್ ರವರು ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ’ ದಲ್ಲಿ ಹೇಳಿದರು....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...