ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರ ವಿರುದ್ಧ ಭಟ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಹಿರೇಬೆಂಡೆಗಿರಿಯ ನಿವಾಸಿ ಹಜರತ್ ಅಲಿ ತಹಶೀಲ್ದಾರ ಹಾಗೂ ಧಾರವಾಡ ಜಿಲ್ಲೆಯ ಕಳಘಟಗಿ ತಾಲೂಕಿನ ನಾಲಬಂಧ ಓಣಿಯ ಮೊಹಮ್ಮದ ಆಸೀಪ್ (32) ಆರೋಪಿಗಳಾಗಿದ್ದಾರೆ.
ಶಿರಾಲಿಯಿಂದ ಭಟ್ಕಳದ ಕಡೆಗೆ ಲಾರಿಯಲ್ಲಿ ಸುಮಾರು 14 ಲಕ್ಷ ಮೌಲ್ಯದ 14 ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ, ನೀರು ಹಾಗೂ ಹುಲ್ಲು ನೀಡದೆ, ವಧೆ ಉದ್ದೇಶದಿಂದ ಸಾಗಾಟ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಸಾಗಾಟಕ್ಕೆ ಅಗತ್ಯ ಪರವಾನಿಗೆ ಪಡೆಯಲಾಗಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಶೀಲನೆ ವೇಳೆ ಹಜರತ್ ಅಲಿ ತಹಶೀಲ್ದಾರ ಪರಾರಿಯಾಗಿದ್ದು, ಚಾಲಕ ಮೊಹಮ್ಮದ ಆಸೀಪ್ ವಾಹನ ಸಮೇತ ಪತ್ತೆಯಾಗಿದ್ದಾನೆ.
ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ













