Focus News

ಕುಮಟಾ ತಾಲೂಕಿನ ನೆಲ್ಲಿಕೇರಿ ಶಾಲೆಯಲ್ಲಿ 15 ಕೊಠಡಿ ನಿರ್ಮಾಣ ಕಾರ್ಯಕ್ಕೆ ಚಾಲನೆ: 2 ಕೋಟಿ 74 ಲಕ್ಷ ರೂಪಾಯಿಗಳ ಅನುದಾನ

Share

ಕುಮಟಾ: 2023-24 ನೇ ಸಾಲಿನ ಆಯವ್ಯಯ ಘೋಷಣೆಯಂತೆ ಸಾಮಾನ್ಯ ಯೋಜನೆಯಡಿ ಕರ್ನಾಟಕ ರಾಜ್ಯದ ಪಬ್ಲಿಕ್ ಶಾಲೆಗಳಿಗೆ ಕಲಿಕಾ ಸಾಮಗ್ರಿ ಹಾಗೂ ಮೂಲಭೂತ ಸೌಕರ್ಯ ಅನುದಾನದಡಿ ಕುಮಟಾ ತಾಲೂಕಿನ ಕೆ ಪಿ ಎಸ್ ನೆಲ್ಲಿಕೇರಿ ಶಾಲೆಗೆ ಅಂದಾಜು ಮೊತ್ತ 2 ಕೋಟಿ 74 ಲಕ್ಷ ರೂಪಾಯಿಗಳ ಅನುದಾನದಡಿ 15 ಕೊಠಡಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿ ಗಣ್ಯರನ್ನು ವಾದ್ಯಘೋಷದ ಮೂಲಕ ಸ್ವಾಗತಿಸಲಾಯಿತು. ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಮತ್ತು ಕುಮಟಾ ಹೊನ್ನಾವರ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿ ಅವರು ಕೊಠಡಿ ನಿರ್ಮಾಣ ಕಾರ್ಯದ ಶಂಕುಸ್ಥಾಪನೆಯನ್ನು ನೆರವೇರಿಸಿದರು.

ನಂತರ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ವೇದಿಕೆಯ ಮೇಲಿರುವ ಅತಿಥಿ ಗಣ್ಯರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಮಂಕಾಳ ವೈದ್ಯ ಅವರು ಈ ರಾಜ್ಯದಲ್ಲಿಯೇ 2600ಕ್ಕೂ ಅಧಿಕ ಮಕ್ಕಳಿರುವ ಸರ್ಕಾರಿ ಶಾಲೆಗಳಿಲ್ಲ ಅನ್ನಿಸುತ್ತದೆ. ಸುಮಾರು 150 ವರ್ಷಗಳ ಇತಿಹಾಸ ಇರುವ ಈ ಶಾಲೆಯು ಕುಮಟಾ ಪಟ್ಟಣದ ಮಧ್ಯೆ ಒಳ್ಳೆಯ ಜಾಗದಲ್ಲಿದೆ. ಈ ಶಾಲೆಗೆ 15 ಕೊಠಡಿ ನಿರ್ಮಾಣ ಕಾರ್ಯಕ್ಕೆ ನಮ್ಮ ಸರ್ಕಾರ 2.74 ಕೋಟಿ ರೂ ಅನುದಾನ ನೀಡಿದೆ. ಮನುಷ್ಯ ಯಾವಾಗ ಬೇಕಾದರೂ ಏನನ್ನು ಬೇಕಾದರೂ ಪಡೆಯಬಹುದು, ಆದರೆ ಶಿಕ್ಷಣವನ್ನು ಮಾತ್ರ ಆ ಸಮಯದಲ್ಲಿ ಮಾತ್ರ ಪಡೆಯಬೇಕಾಗುತ್ತದೆ ಎಂದು ಹೇಳಿದರು.

ಉಳ್ಳವರು ಅವರಿಗೆ ಬೇಕಾದ ಶಾಲೆಗಳಲ್ಲಿ ಶಿಕ್ಷಣ ಕೊಡಿಸುತ್ತಾರೆ. ಸಾಮಾನ್ಯ ಜನರು, ಬಡವರು ಶಿಕ್ಷಣ ಪಡೆಯಲು ಇರುವ ವ್ಯವಸ್ಥೆ ಸರ್ಕಾರಿ ಶಾಲೆಗಳು ಮಾತ್ರ. ನನ್ನ ಪ್ರಥಮ ಆದ್ಯತೆ ಶಿಕ್ಷಣಕ್ಕೆ ನೀಡುತ್ತೇನೆ. ಸೇತುವೆ, ರಸ್ತೆ ಮತ್ತಿತರ ಅಭಿವೃದ್ಧಿ ಕಾರ್ಯಗಳು ಇಂದಲ್ಲಾ ನಾಳೆ ಆಗಬಹುದು ಆದರೆ ಇಂದು ಸಿಗಬೇಕಾದ ಶಿಕ್ಷಣ ಇಂದೇ ಸಿಗಬೇಕು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿ. ಸರ್ಕಾರದಲ್ಲಿ ದುಡ್ಡಿಲ್ಲ ಎಂಬ ಮಾತು ಸಲ್ಲದು ನಾವು ಐದು ಗ್ಯಾರಂಟಿಗೂ ದುಡ್ಡಿಟ್ಟಿದ್ದೇವೆ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೂ ದುಡ್ಡಿಟ್ಟಿದ್ದೇವೆ, ಅಭಿವೃದ್ಧಿ ಕಾರ್ಯಗಳು ಆಗುತ್ತಿದೆ ಎಂದರು.

ಕುಮಟಾ ಹೊನ್ನಾವರ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿ ಮಾತನಾಡಿ 150 ವರ್ಷ ದಾಟಿದ ಈ ಶಾಲೆಗೆ ಈ ವರೆಗೆ 2.74 ಕೋಟಿ ರೂ ಯಾವ ಸರ್ಕಾರವೂ ನೀಡಿರಲಿಲ್ಲ. ಆದರೆ ಇಂದಿನ ಈ ಸಕಾರ ಮತ್ತು ಸಚಿವರ ಮೂಲಕ ಅನುದಾನ ದೊರೆತಿದೆ. ಅದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಮತ್ತು ಅವರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ. 2010 ರಲ್ಲಿ ನಾನು ಶಾಸಕನಾಗಿದ್ದಾಗ ಈ ಶಾಲೆಯ ಕಟ್ಟಡ ಕಟ್ಟಲು ಪುರಾತತ್ವ ಇಲಾಖೆಯ ಸಮಸ್ಯೆ ಪರಿಹರಿಸಿ ಕಟ್ಟಡ ನಿರ್ಮಿಸಿದ್ದೇವೆ. ಮಾಜೀ ಶಾಸಕರಾದ ದಿವಂಗತ ಮೋಹನ ಶೆಟ್ಟಿಯವರು ಶಾಲೆಗಳ ಅಭಿವೃದ್ಧಿಗೆ ಕೊಡುಗೆ ನೀಡಿದ್ದು ಅವರೂ ಸಹ ಇದೇ ಶಾಲೆಯಲ್ಲಿ ಕಲಿತವರು. ಮತ್ತು ನಾನೂ ಸಹ ಇದೇ ಶಾಲೆಯಲ್ಲಿ ನನ್ನ ವಿದ್ಯಾಭ್ಯಾಸಮಾಡಿದ್ದೇನೆ. 2 ಶಾಸಕರನ್ನೂ ಸಹ ನೀಡಿದ ಶಾಲೆ ಇದಾಗಿದೆ. ಅಲ್ಲದೇ ಈ ಶಾಲೆಯಲ್ಲಿ ಕಲಿತ ಅನೇಕ ಜನರು ಒಳ್ಳೆಯ ಅಧಿಕಾರಿಗಳಾಗಿದ್ದಾರೆ. ಈ ಶಾಲೆಯಲ್ಲಿ ಸುಮಾರು 2600 ವಿದ್ಯಾರ್ಥಿಗಳು ಎಲ್.ಕೆ.ಜಿ ಯಿಂದ ಪಿ.ಯು.ಸಿ ವರೆಗೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಸದಸ್ಯ ರತ್ನಾಕರ ನಾಯ್ಕ, ನಾಗೇಶ ನಾಯ್ಕ, ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭುವನ್ ಭಾಗ್ವತ್, ನಿತ್ಯಾನಂದ ನಾಯ್ಕ, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ವಸಂತ ಎಲ್. ನಾಯ್ಕ ಹೊನ್ನಪ್ಪ ನಾಯಕ, ಪುರಸಭಾ ಉಪಾಧ್ಯಕ್ಷ ಮಹೇಶ ನಾಯ್ಕ ಗ್ರೇಡ್ 2 ತಹಶೀಲ್ದಾರ್ ಸತೀಶ ಗೌಡ, ಕ್ಷೇತ್ರ ಶಿಕಣಾಧಿಕಾರಿಗಳಾದ ರಾಜೇಂದ್ರ ಎಲ್. ಭಟ್, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರಾದ ರಾಘವೇಂದ್ರ ಡಿ. ನಾಯ್ಕ, ರಾಮು ಪಿ. ಗುನಗಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಲತಾ ಎಂ. ನಾಯಕ, ಡಯಟ್ ಪ್ರಾಚಾರ್ಯರಾದ ಶಿವರಾಮ ಎಮ್.ಆರ್. ಗುತ್ತಿಗೆದಾರರಾದ ಅಣ್ಣಪ್ಪ ಶೆಟ್ಟಿ ಸೇರಿದಂತೆ ವಿದ್ಯಾರ್ಥಿಗಳ ಪಾಲಕರು, ಶಾಲಾ ಶಿಕ್ಷಕರು ಮತ್ತು ವಿದ್ಯಾಥಿಗಳು ಹಾಜರಿದ್ದರು.

ವಿಸ್ಮಯ ನ್ಯೂಸ್ ದೀಪೇಶ್ ನಾಯ್ಕ ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

ಕ್ಷುಲ್ಲಕ ಕಾರಣಕ್ಕೆ ಜಗಳ: ವ್ಯಕ್ತಿಗೆ ಇರಿತ

ಭಟ್ಕಳ: ವಾರದ ಸಂತೆಯಲ್ಲಿ ವ್ಯಾಪಾರಿಯೊಬ್ಬರ ಹತ್ತಿರ ಕೆಲಸ ಮಾಡುತ್ತಿದ್ದ ಇಬ್ಬರು ಕೆಲಸಗಾರರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದ ಚೂ-ರಿ ಇರಿತದಲ್ಲಿ ಕೊನೆಗೊಂಡ ಘಟನೆ ನಡೆದಿದೆ. ಹಾನಗಲ್ ಮೂಲದ ಹಾಲಿ...

📰 ನಿಮ್ಮ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರಿನ ಸಭೆ, ಸಮಾರಂಭ, ಪ್ರತಿಭಟನೆ ಮತ್ತು ವಿಶೇಷ ವರದಿಗಳನ್ನು ನಮಗೆ ಕಳುಹಿಸಿ.

✉️ Gmail: [email protected]

📲 WhatsApp ಮೂಲಕ ಕಳುಹಿಸಿ ✉️ Gmail ಮೂಲಕ ಕಳುಹಿಸಿ

ಸರ್ಕಾರಿ ಇಲಾಖೆಯ ಕಟ್ಟಡದ ಇಕ್ಕಟ್ಟಾದ ಗೋಡೆಗಳ ಮಧ್ಯೆ ಪತ್ತೆಯಾದ ಸೂಟ್ ಕೇಸ್ ! ? ಕೊನೆಗೂ ಸೂಟ್ಕೇಸ್ ರಹಸ್ಯ

ಅಂಕೋಲಾ, ಆಗಸ್ಟ್ 26 : ಸರ್ಕಾರಿ ಇಲಾಖೆ ಒಂದರ ಕಟ್ಟಡದ ಗೋಡೆಗಳ ನಡುವಿನ ಇಕ್ಕಟ್ಟಾದ ಸ್ಥಳದಲ್ಲಿ ಯಾರೋ ತಂದಿಟ್ಟು ಹೋಗಿದ್ದರೆನ್ನಲಾದ ಸೂಟ್ ಕೇಸ್ ಒಂದು ಪಟ್ಟಣ ವ್ಯಾಪ್ತಿಯಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ್ದಲ್ಲದೇ,ಸೂಟ್ಕೇಸ್...

ಗಣಪತಿಗೆ ಜೀವ ಕಳೆ ತುಂಬುವ ಗಂಗಾವಳಿಯ ಶರತ್ ನಾಯ್ಕ್

ಕುಮಟಾ, ಆಗಸ್ಟ್ 26: ಪ್ರತಿಭೆ ಯಾರ ಸೊತ್ತಲ್ಲ. ಅದು ಸಾಧಕನ ಸ್ವತ್ತು ಎನ್ನುವ ಮಾತಿಗೆ ಅನುಗುಣವಾಗಿ ಇರುವವರು ಕುಮಟಾ ತಾಲೂಕಿನ ಗಂಗಾವಳಿಯ ಹೆಮ್ಮೆಯ ಪ್ರತಿಭೆ ಶರತ್ ನಾಯ್ಕ್ ಅವರು ಈಗಾಗಲೇ ಬೃಹತ್...

ವಿಶ್ವಾಸದ ಮತ್ತೊಂದು ಹೆಸರೇ ಅಲಂಕಾರ ಜ್ಯುವೆಲರ್ಸ್: ಅಂಕೋಲಾದಲ್ಲಿ ಭವ್ಯ ಶುಭಾರಂಭ

ಅಂಕೋಲಾ, ಆಗಸ್ಟ್ 24: ಪಟ್ಟಣದ ಬಂಡಿಬಜಾರ ಮುಖ್ಯ ರಸ್ತೆಯಂಚಿಗೆ ನವೀಕೃತಗೊಂಡಿರುವ ಭವ್ಯವಾದ ಕಟ್ಟಡದಲ್ಲಿ ಅಲಂಕಾರ ಜ್ಯುವೆಲರ್ಸ್ ನ ಬೃಹತ್ತ ಮಳಿಗೆ ಅಗಸ್ಟ್ 24 ರ ರವಿವಾರ ಶುಭ ಮುಹೂರ್ತದಲ್ಲಿ ಗ್ರಾಹಕರ ಸೇವೆಗೆ...

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Current date Wednesday , 27 August 2025
Related Articles

35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಶಿರಸಿ: ಕಳೆದ 35 ವರ್ಷಗಳಿಂದ ದೆಹಲಿಯಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಶಿರಸಿ...

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ದೀಕ್ಷಾ ಮಂಜುನಾಥ ನಾಯ್ಕ ಪ್ರಥಮ ಸ್ಥಾನ

ಹೊನ್ನಾವರ: ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಹೊನ್ನಾವರದ ಕು. ದೀಕ್ಷಾ ಮಂಜುನಾಥ ನಾಯ್ಕ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ....

ಹಿಮಾಲಯ ಬಿಸಿಎ ಕಾಲೇಜಿನಲ್ಲಿ ಉದ್ಯೋಗ ತರಬೇತಿ

ಅಂಕೋಲಾ : ತಾಲೂಕಿನ ಹಾಗೂ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಹಿಮಾಲಯ ಶಿಕ್ಷಣ ಸಂಸ್ಥೆಯ...

ಕುಮಟಾದಲ್ಲಿ ಬಿಜೆಪಿ ಮಂಡಲ ಕಾರ್ಯಕಾರಿಣಿ: ಗಮನಸೆಳೆದ ತಿರಂಗಾ ಬೈಕ್ ರ‍್ಯಾಲಿ

ಕುಮಟಾ: ತಾಲೂಕಾ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು....