Big News

ಗ್ರಾಮೀಣ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ: ಗೋಪಾಲಕೃಷ್ಣ ನಾಯಕ

Share

ಅಂಕೋಲಾ : ಗ್ರಾಮೀಣ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ಸಿಕ್ಕರೆ ಪ್ರತಿಭೆಗಳ ಅನಾವರಣ ಸಾಧ್ಯವಿದೆ. ಹೀಗಾಗಿ ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಆಗಬೇಕು ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಹೇಳಿದರು.
ಅವರು ಭಾನುವಾರ ರಾತ್ರಿ ತೆಂಕಣಕೇರಿಯ ಶ್ರೀ ವೆಂಕಟರಮಣ ದೇವಸ್ಥಾನದ ಆವಾರದಲ್ಲಿ ಅಂಕೋಲೆಯ ಶ್ರೀ ಮಹಾಗಣಪತಿ ಸಾಂಸ್ಕೃತಿಕ ಕಲಾ ಸಂಘದ ದ್ವಿತೀಯ ವರ್ಷದ ಸಂಗೀತ,ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂತಹ ಕಾರ್ಯಕ್ರಮಗಳು ನಿರಂತರ ನಡೆಯಲಿ ಎಂದು ಹಾರೈಸಿದರು.

ಮುಖ್ಯ ಅತಿಥಿಯಾಗಿದ್ದ ಜಿ.ಪ ಮಾಜಿ ಸದಸ್ಯೆ ಚೈತ್ರಾ ಕೊಠಾರಕರ್ ಮಾತನಾಡಿ, ಹಳ್ಳಿಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದರೆ ಹಳ್ಳಿಯ ಕಲಾವಿದರಿಗೆ ಅವಕಾಶ ಒದಗಿಬರುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಪುರಸಭೆಯ ಅಧ್ಯಕ್ಷ ಸೂರಜ ನಾಯ್ಕ ಮಾತನಾಡಿ, ಒತ್ತಡದಿಂದ ನಾವು ಹೊರ ಬರಲು ಮನರಂಜನಾ ಕಾರ್ಯಕ್ರಮಗಳು ಅಗತ್ಯ ಎಂದರು.

ಸನ್ಮಾನ: ಇದೇ ಸಂದರ್ಭದಲ್ಲಿ ಸಮಿತಿ ವತಿಯಿಂದ ಶ್ರೀ ಶಾಂತಾದುರ್ಗಾ ದೇವಸ್ಥಾನದ ಮುಖ್ಯ ಅರ್ಚಕ ವಿಠ್ಠಲ ಶಾಂತಾರಾಮ ಭಟ್ಟ, ಕಲಾವಿದ ಉಮೇಶ ನಾಯ್ಕ, ಗಾಯಕಿ ದೀಕ್ಷಾ ನಾಗರಾಜ, ಸಾಮಾಜಿಕ ಕಾರ್ಯಕರ್ತ ಸಣ್ಣಪ್ಪ ಮಾಸ್ತರ್, ನಿವೃತ್ತ ಮುಖ್ಯಾಧ್ಯಾಪಕಿ ಪಾರ್ವತಿ ಜಿ. ನಾಯಕ , ನಿವೃತ್ತ ಮುಖ್ಯಾಧ್ಯಾಪಕಿ ಸುಶೀಲಾ ಆಗೇರ್, ಮಾಜಿ ಸೈನಿಕ ಗಿರೀಶ ನಾಯಕ, ಕರಾಟೆ ಪಟು ಸಂಪ್ರೀತ ಪ್ರವೀಣ ನಾಯ್ಕ , ಸಾಮಾಜಿಕ ಕಾರ್ಯಕರ್ತ ಮಹೇಶ ನಾಯ್ಕ ಅವರ್ಸಾ, ಶಿಕ್ಷಕ ಜಿ.ಆರ್.ತಾಂಡೇಲ್, ಕಲಾವಿದ ಹಮೀದ್ ರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ವರದಿಗಾರ ಮಂಜುನಾಥ ನಾಯ್ಕ ಬೆಳಂಬಾರ, ಸಾಮಾಜಿಕ ಕಾರ್ಯಕರ್ತ ಸಣ್ಣಪ್ಪ ಮಾಸ್ತರ್, ವರದಿಗಾರ ವಿಠ್ಠಲದಾಸ ಕಾಮತ್, ಶ್ರೀ ವೆಂಕಟರಮಣ ಸೇವಾ ಸಂಸ್ಥೆಯ ಅಧ್ಯಕ್ಷ ಆನಂದು ನಾಯ್ಕ ಉಪಸ್ಥಿತರಿದ್ದರು.
ಸೌಮ್ಯ ಶ್ರೀನಿವಾಸ ನಾಯ್ಕ ಪ್ರಾರ್ಥಿಸಿದರು. ಶ್ರೀ ಮಹಾಗಣಪತಿ ಸಾಂಸ್ಕೃತಿಕ ಕಲಾ ಸಂಘದ ಅಧ್ಯಕ್ಷ ಶ್ರೀಕಾಂತ ಎನ್. ನಾಯ್ಕ ಸ್ವಾಗತಿಸಿದರು. ಪ್ರ.ಕಾರ್ಯದರ್ಶಿ ಪ್ರವೀಣ ಎನ್. ನಾಯಕ ಪ್ರಾಸ್ತಾವಿಕ ಮಾತನಾಡಿದರು.
ಶಿಕ್ಷಕ ಜಿ.ಆರ್. ತಾಂಡೇಲ್ ಕಾರ್ಯಕ್ರಮ ನಿರ್ವಹಿಸಿದರು. ಸಹ ಕಾರ್ಯದರ್ಶಿ ಮಹೇಶ ಡಿ. ನಾಯ್ಕ ವಂದಿಸಿದರು. ನಂತರ ಕಲಾವಿದ ನಾಗರಾಜ ಜಾಂಬಳೇಕರ್ ತಂಡದಿಂದ ರಸಮಂಜರಿ, ಸ್ಥಳೀಯ ಕಲಾವಿದರಿಂದ ಹಾಡು, ಹಾಸ್ಯ, ನೃತ್ಯ ನಡೆಯಿತು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಮಹಾಶಿವರಾತ್ರಿ ಪುಣ್ಯಕಾಲದಲ್ಲಿ ಕಣಕಣೇಶ್ವರ ದೇವರ ನೂತನ ಭವ್ಯ ದೇವಸ್ಥಾನ ಲೋಕಾರ್ಪಣೆ :ಶಿಖರ ಕಲಶ ಪ್ರತಿಷ್ಠೆ – ಅಷ್ಟಬಂಧ ಸಮೇತ ನೂತನ ಶಿವಲಿಂಗ ಪ್ರತಿಷ್ಠಾ ಮಹೋತ್ಸವ

ಅಂಕೋಲಾ: ಪಟ್ಟಣದ ಕಾರವಾರ ರಸ್ತೆಯಲ್ಲಿರುವ ಪುರಾತನ ಪ್ರಸಿದ್ಧ ಶ್ರೀ ಕಣಕಣೇಶ್ವರ ದೇವಾಲಯವು ಮಹಾಶಿವರಾತ್ರಿ ಪುಣ್ಯಸಂದರ್ಭದಲ್ಲಿ ನೂತನ...

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ...

ಅಂಕೋಲಾದಲ್ಲಿ ಕರಾಳ ದಿನಾಚರಣೆ ಮತ್ತು ಬಂದ್ ಗೆ ಕರೆ

ಅಂಕೋಲಾ: ಕೇಣಿ ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ನವೆಂಬರ್ 15ರಂದು ಒಂದು ವರ್ಷವಾಗಲಿದ್ದು...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು...

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ...

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ...

ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ : ಆರೋಪಿ ಬಂಧನ

ಅಂಕೋಲಾ: ಪಟ್ಟಣದಲ್ಲಿ ನಿಲ್ಲಿಸಿಟ್ಟ ಮೋಟಾರ್ ಬೈಕ್ ಕಳ್ಳತನ ಮಾಡಿದ್ದ ಆರೋಪಿತನನ್ನು ಅಂಕೋಲಾ ಪೊಲೀಸರು ವಾಹನ ಸಮೇತ...