Focus News

6 ನೇ ವರ್ಷದ ಮ್ಯಾಟ್ ಕಬ್ಬಡ್ಡಿ ಪಂದ್ಯಾವಳಿ: ಕುಂದಾಪುರದ ಬೈಂದೂರಿನ ಸ್ವಾಮಿ ಕೊರಗಜ್ಜ ತಂಡ ಚ್ಯಾಂಪಿಯನ್

Share

ಸಿದ್ದಾಪುರ: ತಾಲೂಕಿನ ದೊಡ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಗೋಳಿಮಕ್ಕಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 6 ನೇ ವರ್ಷದ ಮ್ಯಾಟ್ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಕುಂದಾಪುರದ ಬೈಂದೂರಿನ ಸ್ವಾಮಿ ಕೊರಗಜ್ಜ ತಂಡ ಚ್ಯಾಂಪಿಯನ್ ಆಗಿ ಹೊರಹೊಮ್ಮಿದೆ. ಶ್ರೀ ಗ್ರಾಮದೇವ ಗೆಳೆಯರ ಬಳಗ ಉಡಳ್ಳಿ ಬಿಳೇಗೋಡ ಹಾಗೂ ಸ್ಥಳೀಯ ಗ್ರಾಮಸ್ಥರ ಸಹಕಾರದೊಂದಿಗೆ ಆಯೋಜಿಸಿದ್ದ ಮ್ಯಾಟ್ ಕಬಡ್ಡಿ ಪಂದ್ಯಾವಳಿಯಲ್ಲಿ ಜಿಲ್ಲೆ ಹಾಗೂ ಅಂತರ ಜಿಲ್ಲೆಯಿಂದ ಒಟ್ಟು 17 ತಂಡಗಳು ಭಾಗವಹಿಸಿದ್ದವು. ಈ ಪೈಕಿ ಕುಂದಾಪುರದ ಬೈಂದೂರಿನ ಸ್ವಾಮೀ ಕೊರಗಜ್ಜ ತಂಡ ಹಾಗೂ ಶ್ರೀ ಗ್ರಾಮದೇವ ಗೆಳೆಯರ ಬಳಗ ತಂಡಗಳು ಫೈನಲ್ ಪ್ರವೇಶಿಸಿದ್ದವು. ಅಂತಿಮವಾಗಿ ಕುಂದಾಪುರದ ಬೈಂದೂರಿನ ಸ್ವಾಮೀ ಕೊರಗಜ್ಜ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ತೃತೀಯ ಬಹುಮಾನ ಹೈಸ್ಕೂಲ್ ಬಾಯ್ಸ್ ಕುಮಟಾ ತಂಡ ಹಾಗೂ ಚತುರ್ಥ ಬಹುಮಾನವನ್ನು ಗ್ರಾಮ ದೇವ ಗೆಳೆಯರ ಬಳಗ ಬಿ ತಂಡ ಪಡೆದುಕೊಂಡಿದೆ.

ಇನ್ನು ಆರಂಭದಲ್ಲಿ ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕರಾದ ಮಂಜುನಾಥ ಭಟ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕಳೆದ ಆರು ವರ್ಷದಿಂದ ಗ್ರಾಮೀಣ ಕ್ರೀಡೆ ಕಬ್ಬಡ್ಡಿಯನ್ನು ಈ ಭಾಗದಲ್ಲಿ ನಮ್ಮ ಮಕ್ಕಳು ಆಯೋಜನೆ ಮಾಡಿ ಆಡುತ್ತಿರುವುದು ಖುಷಿಯ ವಿಚಾರ. ಕ್ರೀಡೆಯಲ್ಲಿ ಪಾಲ್ಗೊಳ್ಳುವವರು ಉತ್ತಮ ಆಟದೊಂದಿಗೆ ಎಲ್ಲರ ಮನಸ್ಸು ಗೆಲ್ಲಬೇಕು. ಎಲ್ಲರಿಗೂ ಭಗವಂತ ಒಳ್ಳೆಯದನ್ನು ಮಾಡಲಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ದೊಡ್ಮನೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾತನಾಡಿ ದೊಡ್ಮನೆ ಗ್ರಾಮ ಪಂಚಾಯಿತಿ ಇದೀಗ ಉತ್ತಮ ಕಟ್ಟಡ, ತೆರಿಗೆ ಸಂಗ್ರಹಣೆಯಲ್ಲಿ ಮಾದರಿಯಾಗಿದೆ. ಇತ್ತೀಚೆಗೆ ಪಂಚಾಯಿತಿಗೆ ಭೇಟಿ ನೀಡಿದ ಜಿ.ಪಂ. ಸಿಇಓ ಕೂಡ ಪಂಚಾಯಿತಿಯಲ್ಲಿ ಕೈಗೊಂಡ ಸುಧಾರಣಾ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತೆರಿಗೆ ಪಾವತಿಯಲ್ಲಿ ಶೆ.97 ರಷ್ಟು ಸಾಧನೆ ಮಾಡಿದ್ದು ಇನ್ನು ಕೆಲವೆ ದಿನದಲ್ಲಿ ಶೇ. 100 ಸಾಧನೆ ಮಾಡುತ್ತೇನೆ. ಇದಕ್ಕೆಲ್ಲವೂ ಗ್ರಾ.ಪಂ ವ್ಯಾಪ್ತಿಯ ಜನರ ಸಹಕಾರವೇ ಕಾರಣ. ಕಬ್ಬಡ್ಡಿಯಂತಹ ಕ್ರೀಡೆಗಳು ನಮ್ಮಲ್ಲಿ ದೈಹಿಕ ಆರೋಗ್ಯ ಹೆಚ್ಚಿಸುವುದಲ್ಲದೆ ಈ ಕ್ರೀಡಾಕೂಡ ಆಯೋಜನೆ ಯುವ ಪಿಳಿಗೆಗೆ ಉತ್ಸಾಹವನ್ನು ಹೆಚ್ಚಿಸುತ್ತದೆ ಎಂದರು.

ಇನ್ನು ಕಾರ್ಯಕ್ರಮದಲ್ಲಿ ದೊಡ್ಮನೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದಾ ವಿಘ್ನೇಶ್ವರ ಹೆಗಡೆ, ಸದಸ್ಯ ಬೀರಾ ದ್ಯಾವ ಗೌಡ, ಶಿಕ್ಷಕರಾದ ತಿಪ್ಪಾ ಈರಾ ಗೌಡ, ತಾಲೂಕು ಕರೆ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಅಮ್ಮು ಗೌಡ, ಅನಂತ್ ಗೌಡ, ವಿನಾಯಕ ಗೌಡ, ಗಣಪತಿ ಗೌಡ, ಬೀರಾ ಗೌಡ ಸೇರಿದಂತೆ ಇನ್ನಿತರರು ಇದ್ದರು.

ವಿಸ್ಮಯ ನ್ಯೂಸ್,  ಸಿದ್ದಾಪುರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

ಕ್ಷುಲ್ಲಕ ಕಾರಣಕ್ಕೆ ಜಗಳ: ವ್ಯಕ್ತಿಗೆ ಇರಿತ

ಭಟ್ಕಳ: ವಾರದ ಸಂತೆಯಲ್ಲಿ ವ್ಯಾಪಾರಿಯೊಬ್ಬರ ಹತ್ತಿರ ಕೆಲಸ ಮಾಡುತ್ತಿದ್ದ ಇಬ್ಬರು ಕೆಲಸಗಾರರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದ ಚೂ-ರಿ ಇರಿತದಲ್ಲಿ ಕೊನೆಗೊಂಡ ಘಟನೆ ನಡೆದಿದೆ. ಹಾನಗಲ್ ಮೂಲದ ಹಾಲಿ...

📰 ನಿಮ್ಮ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರಿನ ಸಭೆ, ಸಮಾರಂಭ, ಪ್ರತಿಭಟನೆ ಮತ್ತು ವಿಶೇಷ ವರದಿಗಳನ್ನು ನಮಗೆ ಕಳುಹಿಸಿ.

✉️ Gmail: [email protected]

📲 WhatsApp ಮೂಲಕ ಕಳುಹಿಸಿ ✉️ Gmail ಮೂಲಕ ಕಳುಹಿಸಿ

ಸರ್ಕಾರಿ ಇಲಾಖೆಯ ಕಟ್ಟಡದ ಇಕ್ಕಟ್ಟಾದ ಗೋಡೆಗಳ ಮಧ್ಯೆ ಪತ್ತೆಯಾದ ಸೂಟ್ ಕೇಸ್ ! ? ಕೊನೆಗೂ ಸೂಟ್ಕೇಸ್ ರಹಸ್ಯ

ಅಂಕೋಲಾ, ಆಗಸ್ಟ್ 26 : ಸರ್ಕಾರಿ ಇಲಾಖೆ ಒಂದರ ಕಟ್ಟಡದ ಗೋಡೆಗಳ ನಡುವಿನ ಇಕ್ಕಟ್ಟಾದ ಸ್ಥಳದಲ್ಲಿ ಯಾರೋ ತಂದಿಟ್ಟು ಹೋಗಿದ್ದರೆನ್ನಲಾದ ಸೂಟ್ ಕೇಸ್ ಒಂದು ಪಟ್ಟಣ ವ್ಯಾಪ್ತಿಯಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ್ದಲ್ಲದೇ,ಸೂಟ್ಕೇಸ್...

ಗಣಪತಿಗೆ ಜೀವ ಕಳೆ ತುಂಬುವ ಗಂಗಾವಳಿಯ ಶರತ್ ನಾಯ್ಕ್

ಕುಮಟಾ, ಆಗಸ್ಟ್ 26: ಪ್ರತಿಭೆ ಯಾರ ಸೊತ್ತಲ್ಲ. ಅದು ಸಾಧಕನ ಸ್ವತ್ತು ಎನ್ನುವ ಮಾತಿಗೆ ಅನುಗುಣವಾಗಿ ಇರುವವರು ಕುಮಟಾ ತಾಲೂಕಿನ ಗಂಗಾವಳಿಯ ಹೆಮ್ಮೆಯ ಪ್ರತಿಭೆ ಶರತ್ ನಾಯ್ಕ್ ಅವರು ಈಗಾಗಲೇ ಬೃಹತ್...

ವಿಶ್ವಾಸದ ಮತ್ತೊಂದು ಹೆಸರೇ ಅಲಂಕಾರ ಜ್ಯುವೆಲರ್ಸ್: ಅಂಕೋಲಾದಲ್ಲಿ ಭವ್ಯ ಶುಭಾರಂಭ

ಅಂಕೋಲಾ, ಆಗಸ್ಟ್ 24: ಪಟ್ಟಣದ ಬಂಡಿಬಜಾರ ಮುಖ್ಯ ರಸ್ತೆಯಂಚಿಗೆ ನವೀಕೃತಗೊಂಡಿರುವ ಭವ್ಯವಾದ ಕಟ್ಟಡದಲ್ಲಿ ಅಲಂಕಾರ ಜ್ಯುವೆಲರ್ಸ್ ನ ಬೃಹತ್ತ ಮಳಿಗೆ ಅಗಸ್ಟ್ 24 ರ ರವಿವಾರ ಶುಭ ಮುಹೂರ್ತದಲ್ಲಿ ಗ್ರಾಹಕರ ಸೇವೆಗೆ...

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Current date Wednesday , 27 August 2025
Related Articles

35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಶಿರಸಿ: ಕಳೆದ 35 ವರ್ಷಗಳಿಂದ ದೆಹಲಿಯಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಶಿರಸಿ...

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ದೀಕ್ಷಾ ಮಂಜುನಾಥ ನಾಯ್ಕ ಪ್ರಥಮ ಸ್ಥಾನ

ಹೊನ್ನಾವರ: ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಹೊನ್ನಾವರದ ಕು. ದೀಕ್ಷಾ ಮಂಜುನಾಥ ನಾಯ್ಕ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ....

ಹಿಮಾಲಯ ಬಿಸಿಎ ಕಾಲೇಜಿನಲ್ಲಿ ಉದ್ಯೋಗ ತರಬೇತಿ

ಅಂಕೋಲಾ : ತಾಲೂಕಿನ ಹಾಗೂ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಹಿಮಾಲಯ ಶಿಕ್ಷಣ ಸಂಸ್ಥೆಯ...

ಕುಮಟಾದಲ್ಲಿ ಬಿಜೆಪಿ ಮಂಡಲ ಕಾರ್ಯಕಾರಿಣಿ: ಗಮನಸೆಳೆದ ತಿರಂಗಾ ಬೈಕ್ ರ‍್ಯಾಲಿ

ಕುಮಟಾ: ತಾಲೂಕಾ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು....