Focus News

6 ನೇ ವರ್ಷದ ಮ್ಯಾಟ್ ಕಬ್ಬಡ್ಡಿ ಪಂದ್ಯಾವಳಿ: ಕುಂದಾಪುರದ ಬೈಂದೂರಿನ ಸ್ವಾಮಿ ಕೊರಗಜ್ಜ ತಂಡ ಚ್ಯಾಂಪಿಯನ್

Share

ಸಿದ್ದಾಪುರ: ತಾಲೂಕಿನ ದೊಡ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಗೋಳಿಮಕ್ಕಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 6 ನೇ ವರ್ಷದ ಮ್ಯಾಟ್ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಕುಂದಾಪುರದ ಬೈಂದೂರಿನ ಸ್ವಾಮಿ ಕೊರಗಜ್ಜ ತಂಡ ಚ್ಯಾಂಪಿಯನ್ ಆಗಿ ಹೊರಹೊಮ್ಮಿದೆ. ಶ್ರೀ ಗ್ರಾಮದೇವ ಗೆಳೆಯರ ಬಳಗ ಉಡಳ್ಳಿ ಬಿಳೇಗೋಡ ಹಾಗೂ ಸ್ಥಳೀಯ ಗ್ರಾಮಸ್ಥರ ಸಹಕಾರದೊಂದಿಗೆ ಆಯೋಜಿಸಿದ್ದ ಮ್ಯಾಟ್ ಕಬಡ್ಡಿ ಪಂದ್ಯಾವಳಿಯಲ್ಲಿ ಜಿಲ್ಲೆ ಹಾಗೂ ಅಂತರ ಜಿಲ್ಲೆಯಿಂದ ಒಟ್ಟು 17 ತಂಡಗಳು ಭಾಗವಹಿಸಿದ್ದವು. ಈ ಪೈಕಿ ಕುಂದಾಪುರದ ಬೈಂದೂರಿನ ಸ್ವಾಮೀ ಕೊರಗಜ್ಜ ತಂಡ ಹಾಗೂ ಶ್ರೀ ಗ್ರಾಮದೇವ ಗೆಳೆಯರ ಬಳಗ ತಂಡಗಳು ಫೈನಲ್ ಪ್ರವೇಶಿಸಿದ್ದವು. ಅಂತಿಮವಾಗಿ ಕುಂದಾಪುರದ ಬೈಂದೂರಿನ ಸ್ವಾಮೀ ಕೊರಗಜ್ಜ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ತೃತೀಯ ಬಹುಮಾನ ಹೈಸ್ಕೂಲ್ ಬಾಯ್ಸ್ ಕುಮಟಾ ತಂಡ ಹಾಗೂ ಚತುರ್ಥ ಬಹುಮಾನವನ್ನು ಗ್ರಾಮ ದೇವ ಗೆಳೆಯರ ಬಳಗ ಬಿ ತಂಡ ಪಡೆದುಕೊಂಡಿದೆ.

ಇನ್ನು ಆರಂಭದಲ್ಲಿ ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕರಾದ ಮಂಜುನಾಥ ಭಟ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕಳೆದ ಆರು ವರ್ಷದಿಂದ ಗ್ರಾಮೀಣ ಕ್ರೀಡೆ ಕಬ್ಬಡ್ಡಿಯನ್ನು ಈ ಭಾಗದಲ್ಲಿ ನಮ್ಮ ಮಕ್ಕಳು ಆಯೋಜನೆ ಮಾಡಿ ಆಡುತ್ತಿರುವುದು ಖುಷಿಯ ವಿಚಾರ. ಕ್ರೀಡೆಯಲ್ಲಿ ಪಾಲ್ಗೊಳ್ಳುವವರು ಉತ್ತಮ ಆಟದೊಂದಿಗೆ ಎಲ್ಲರ ಮನಸ್ಸು ಗೆಲ್ಲಬೇಕು. ಎಲ್ಲರಿಗೂ ಭಗವಂತ ಒಳ್ಳೆಯದನ್ನು ಮಾಡಲಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ದೊಡ್ಮನೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾತನಾಡಿ ದೊಡ್ಮನೆ ಗ್ರಾಮ ಪಂಚಾಯಿತಿ ಇದೀಗ ಉತ್ತಮ ಕಟ್ಟಡ, ತೆರಿಗೆ ಸಂಗ್ರಹಣೆಯಲ್ಲಿ ಮಾದರಿಯಾಗಿದೆ. ಇತ್ತೀಚೆಗೆ ಪಂಚಾಯಿತಿಗೆ ಭೇಟಿ ನೀಡಿದ ಜಿ.ಪಂ. ಸಿಇಓ ಕೂಡ ಪಂಚಾಯಿತಿಯಲ್ಲಿ ಕೈಗೊಂಡ ಸುಧಾರಣಾ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತೆರಿಗೆ ಪಾವತಿಯಲ್ಲಿ ಶೆ.97 ರಷ್ಟು ಸಾಧನೆ ಮಾಡಿದ್ದು ಇನ್ನು ಕೆಲವೆ ದಿನದಲ್ಲಿ ಶೇ. 100 ಸಾಧನೆ ಮಾಡುತ್ತೇನೆ. ಇದಕ್ಕೆಲ್ಲವೂ ಗ್ರಾ.ಪಂ ವ್ಯಾಪ್ತಿಯ ಜನರ ಸಹಕಾರವೇ ಕಾರಣ. ಕಬ್ಬಡ್ಡಿಯಂತಹ ಕ್ರೀಡೆಗಳು ನಮ್ಮಲ್ಲಿ ದೈಹಿಕ ಆರೋಗ್ಯ ಹೆಚ್ಚಿಸುವುದಲ್ಲದೆ ಈ ಕ್ರೀಡಾಕೂಡ ಆಯೋಜನೆ ಯುವ ಪಿಳಿಗೆಗೆ ಉತ್ಸಾಹವನ್ನು ಹೆಚ್ಚಿಸುತ್ತದೆ ಎಂದರು.

ಇನ್ನು ಕಾರ್ಯಕ್ರಮದಲ್ಲಿ ದೊಡ್ಮನೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದಾ ವಿಘ್ನೇಶ್ವರ ಹೆಗಡೆ, ಸದಸ್ಯ ಬೀರಾ ದ್ಯಾವ ಗೌಡ, ಶಿಕ್ಷಕರಾದ ತಿಪ್ಪಾ ಈರಾ ಗೌಡ, ತಾಲೂಕು ಕರೆ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಅಮ್ಮು ಗೌಡ, ಅನಂತ್ ಗೌಡ, ವಿನಾಯಕ ಗೌಡ, ಗಣಪತಿ ಗೌಡ, ಬೀರಾ ಗೌಡ ಸೇರಿದಂತೆ ಇನ್ನಿತರರು ಇದ್ದರು.

ವಿಸ್ಮಯ ನ್ಯೂಸ್,  ಸಿದ್ದಾಪುರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮೂಲ ಸ್ಥಳದಲ್ಲೇ ಮುರಿನಕಟ್ಟೆ ನಿರ್ಮಾಣಕ್ಕೆ ಯೋಜನೆ ಸಿದ್ಧ : ವಿಶ್ವೇಶ್ವರ ಹೆಗಡೆ ಕಾಗೇರಿ

ಭಟ್ಕಳ: ಹೆದ್ದಾರಿ ಪ್ರಾಧಿಕಾರ ಮುರಿನಕಟ್ಟೆಯನ್ನು ಮೂಲ ಜಾಗದಲ್ಲಿಯೇ ಕಟ್ಟಲು ತಿರ್ಮಾನಿಸಿ ಈ ಕುರಿತು ನೀಲನಕ್ಷೇಯನ್ನು ತಯಾರಿಸಲಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಈ ವಿಚಾರದ ಕುರಿತಂತೆ ಜಿಲ್ಲಾಡಳಿತ ಹಾಗೂ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ ಸುರಕ್ಷಿತ ಆಶ್ರಯ ದೊರೆತಂತಿದ್ದು, ಕುಮಟಾ ಉಪವಿಭಾಗಾಧಿಕಾರಿಗಳ ಅನುಮತಿ ಬಳಿಕ ಹೋರಿಗಳನ್ನು ಗೋಶಾಲೆಗೆ ಕಳಿಸಿ, ಮೂಕ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಜನಪ್ರಿಯ ಶಿಕ್ಷಕ ಮಂಜುನಾಥ ನಾಯಕ ಇನ್ನಿಲ್ಲ :  ಜೂನ್ 6 ರ ಶನಿವಾರ ಬೆಳಿಗ್ಗೆ ಅಗ್ರಗೋಣದಲ್ಲಿ ಅಂತ್ಯಸಂಸ್ಕಾರ

ಅಂಕೋಲಾ: ತಾಲೂಕಿನ ಅಗ್ರಗೋಣ ಗ್ರಾಮದ (ಲಕ್ಷ್ಮೀ ಮನೆ ) ನಿವಾಸಿ, ಹಾಗೂ ಬೇಲೇಕೇರಿ ಸರ್ಕಾರಿ ಪ್ರೌಢಶಾಲೆಯ...

ಮೂಲ ಸ್ಥಳದಲ್ಲೇ ಮುರಿನಕಟ್ಟೆ ನಿರ್ಮಾಣಕ್ಕೆ ಯೋಜನೆ ಸಿದ್ಧ : ವಿಶ್ವೇಶ್ವರ ಹೆಗಡೆ ಕಾಗೇರಿ

ಭಟ್ಕಳ: ಹೆದ್ದಾರಿ ಪ್ರಾಧಿಕಾರ ಮುರಿನಕಟ್ಟೆಯನ್ನು ಮೂಲ ಜಾಗದಲ್ಲಿಯೇ ಕಟ್ಟಲು ತಿರ್ಮಾನಿಸಿ ಈ ಕುರಿತು ನೀಲನಕ್ಷೇಯನ್ನು ತಯಾರಿಸಲಾಗಿದೆ...

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್...

ಚುನಾವಣೆ ನಂತರ ರಾಜಕೀಯ ಬದಿಗಿಟ್ಟು ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯ : ಅಮದಳ್ಳಿ ಗ್ರಾಮ ದೇವರ ಗ್ರಾಮ ಎಂದ ಶಾಸಕ ಸೈಲ್

ಕಾರವಾರ: ಗ್ರಾಮೀಣ ಆಡಳಿತ ವ್ಯವಸ್ಥೆಗೆ ಬಲ ತುಂಬುವ ಹೆಜ್ಜೆಯಾಗಿ ಅಮದಳ್ಳಿ ಗ್ರಾಮ ಪಂಚಾಯತ್‌ನ ನೂತನ ಸಭಾಭವನವನ್ನು...

ಅಂಕೋಲಾದಲ್ಲಿ ಇಂದು ಪಂಚದೇವರ ದೊಡ್ಡ ಕಾರ್ತಿಕೋತ್ಸವ : ಶಿರ ಕುಳಿ ಕಾನದೇವಿ ದೇವಸ್ಥಾನದ ಹತ್ತಿರ ವನಭೋಜನಕ್ಕೆ ನಡೆಯುತ್ತಿದೆ ಸಿದ್ದತೆ

ಅಂಕೋಲಾ: ತಾಲೂಕಿನ ಸಂಸ್ಕೃತಿಯ ಆರಾಧನಾ ಪದ್ಧತಿಯಾಗಿ ಹಲವು ತಲೆಮಾರುಗಳಿಂದ ಆಚರಿಸಲ್ಪಡುತ್ತಬಂದಿರುವ ಪಂಚ ದೇವರುಗಳ ದೊಡ್ಡ ಕಾರ್ತಿಕೋತ್ಸವ...

ಕೇಣಿ ವಾಣಿಜ್ಯ ಬಂದರು ವಿರೋಧಿಸಿ ಹೋರಾಟ ನಿರಂತರ : ಬಹಿರಂಗ ಸಭೆ ತಾತ್ಕಾಲಿಕವಾಗಿ ಮುಂದೂಡಿಕೆ : ಸಂಘಟಕ ಪ್ರಮುಖರು ಪ್ರಕಟಣೆಯಲ್ಲಿ ಹೇಳಿದ್ದೇನು ?

ಅಂಕೋಲಾ: ತಾಲೂಕಿನ ಕೇಣಿಯಲ್ಲಿ ನಿರ್ಮಾಣ ಉದ್ದೇಶಿತ ವಾಣಿಜ್ಯ ಬಂದರು ಯೋಜನೆಯನ್ನು ವಿರೋಧಿಸಿ, ಸಾಮೂಹಿಕ ನಾಯಕತ್ವದಡಿ, ಅಂಕೋಲಾ...

ಚಿಪ್ಪಿ ಫ್ಯಾಕ್ಟರಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆ

ಅಂಕೋಲಾ: ತಾಲೂಕಿನ ಶೆಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...

ಆಧುನಿಕ ಜಗತ್ತನ್ನಾಳಲಿರುವ AI ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

ಅಂಕೋಲಾ : ಕೃತಕ ಬುದ್ಧಿಮತ್ತೆಯು ( AI ತಂತ್ರಜ್ಞಾನ ) ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ...