Important

ಕಾಸರಕೋಡ್ ಟೊಂಕಾ ಪ್ರದೇಶದಲ್ಲಿ ನಿಷೇಧಾಜ್ಞೆ : ಅಮ್ಮ ಮನೆಗೆ ಬರದಿದ್ರೆ ಸಮುದ್ರಕ್ಕೆ ಹಾರಿ ಸಾಯುತ್ತೇನೆ: ಎಚ್ಚರಿಕೆ ನೀಡಿದ ಬಾಲಕಿ

Share

ಹೊನ್ನಾವರ: ತಾಲೂಕಿನ ಕಾಸರಕೋಡ್ ಟೊಂಕಾ ಉದ್ದೇಶಿತ ವಾಣಿಜ್ಯ ಬಂದರು ವಿರೋಧಿಸಿ ನಿಷೇಧಾಜ್ಞೆಯ ನಡುವೆಯು ಮೀನುಗಾರರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66 ಪಕ್ಕದಲ್ಲೇ ಇರುವ ಹಿರೇಮಠ ಸ್ಮಶಾನದಿಂದ ಕಾಸರಕೋಡ ಗ್ರಾಮದಲ್ಲಿ ಸಮುದ್ರಗುಂಟ ಇರುವ ರಸ್ತೆಯನ್ನು ಅಭಿವೃದ್ಧಿಪಡಿಸಿ ಬಂದರು ಅಭಿವೃದ್ಧಿ ಯೋಜನಾ ಸ್ಥಳದವರೆಗೆ ಹೋಗುವ ರಸ್ತೆ ಕಾಮಗಾರಿಯ ಸರ್ವೆ ಕಾರ್ಯ ನಡೆಯುವ ಸುತ್ತಲಿನ ಪ್ರದೇಶದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಆದೇಶಿಸಿದ್ದರು. ಅದರ ಹೊರತಾಗಿಯೂ ಬಂದರು ವಿರೋಧಿಸಿ ಸ್ಥಳೀಯ ಮೀನುಗಾರರು ಪ್ರತಿಭಟನೆ ಹಮ್ಮಿಕೊಂಡಿದ್ದರಿoದ ಪ್ರತಿಭಟನೆನಿರತ ಐವತ್ತುಕ್ಕೂ ಅಧಿಕ ಮೀನುಗಾರರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ವಿರುದ್ಧ ಸ್ಥಳೀಯ ಮೀನುಗಾರರು ಆಕ್ರೋಶ ವ್ಯಕ್ತಪಡಿಸಿ ನಮ್ಮ ಜಾಗ ನಮಗೆ ಬಿಟ್ಟುಕೊಡಿ,ಸರ್ವೇಗೆ ಮುಂದಾದರೆ ನಾವೆಲ್ಲಾ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎನ್ನುವ ಎಚ್ಚರಿಕೆ ನೀಡಿದರು. ಪೊಲೀಸರು ಮತ್ತು ಮೀನುಗಾರಿಕೆ ಸಚಿವ ಮಂಕಾಳು ವೈದ್ಯರ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. ಸಾಯಂಕಾಲ ನಾಲ್ಕು ಗಂಟೆ ಒಳಗೆ ವಶಕ್ಕೆ ಪಡೆದ ಮೀನುಗಾರರನ್ನು ಬಿಡುಗಡೆಗೊಳಿಸದಿದ್ದಲ್ಲಿ ಸಮುದ್ರಕ್ಕೆ ಹಾರಿ ಪ್ರಾಣ ಬಿಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು,ಪೊಲೀಸರು,ಸ್ಥಳೀಯರು ಮದ್ಯೆ ಕೆಲಕಾಲ ಮಾತಿನ ಚಕಮಕಿ ಉಂಟಾಗಿತ್ತು. ಮೂವರು ಮಹಿಳೆಯರು,ಇರ್ವರು ಪುರುಷರು ಪ್ರತಿಭಟನೆ ವೇಳೆ ಅಸ್ವಸ್ಥರಾಗಿದ್ದು ತಕ್ಷಣ ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿದೆ.

ಏತನ್ಮದ್ಯೆ ಶಾಲಾ ವಿದ್ಯಾರ್ಥಿನಿ ಅಪೇಕ್ಷಾ ತಾಂಡೇಲ್ ತಮ್ಮ ತಾಯಿಯನ್ನು ಪೊಲೀಸರು ಪ್ರತಿಭಟನೆ ವೇಳೆ ಬಂಧಿಸಿ ಕರೆದೊಯ್ದದನ್ನು ಖಂಡಿಸಿ,ಮಾಧ್ಯಮದ ಮೂಲಕ ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ. ಅಮ್ಮ ಮನೆಗೆ ವಾಪಸ್ಸಾಗದಿದ್ದಲ್ಲಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಏಚ್ಚರಿಕೆ ನೀಡಿದಳು. ಪ್ರತಿಭಟನೆಯ ನಡುವೆಯೂ ಬಿಗಿಪೊಲೀಸ್ ಬಂದೋಬಸ್ತ್ ನಲ್ಲಿ ಅಧಿಕಾರಿಗಳು ಸರ್ವೇ ಕಾರ್ಯ ಮುಂದುವರೆಸಿದರು. ಭಟ್ಕಳ ಉಪವಿಭಾಗಾಧಿಕಾರಿ ಕಾವ್ಯಾ ರಾಣಿ, ಡಿವೈಎಸ್ ಪಿ ಮಹೇಶ್ ಕೆ,ತಹಶೀಲ್ದಾರ ಪ್ರವೀಣ ಕರಾಂಡೆ,ಪಿಐ ಸಿದ್ರಾಮೇಶ್ವರ ಸ್ಥಳದಲ್ಲೇ ಬಿಡುಬಿಟ್ಟಿದ್ದರು. ತಮ್ಮ ಮನೆ,ಭೂಮಿ ಕಳೆದುಕೊಳ್ಳುವ ಭೀತಿಯಿಂದ ಸಮುದ್ರದಡದಲ್ಲಿ ಮೀನುಗಾರರು ಗುಂಪು ಗುಂಪಾಗಿ ಸೇರಿದ್ದರು.ಪ್ರತಿಭಟನೆಗೆ ಮುಂದಾಗುತ್ತಿದ್ದ ಸ್ಥಳದಲ್ಲಿ ಪೊಲೀಸರು ಎಂಟ್ರಿ ನೀಡಿ ಮೀನುಗಾರರ ಚದುರಿಸುತ್ತಿರುವ ದ್ರಶ್ಯ ಕಂಡುಬoತು.

ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ ಸಮ್ಮೇಳನವು ಇದೇ ಜೂನ್ 14 ರ ಭಾನುವಾರದಂದು ಕುಮಟಾದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಂಗಣದಲ್ಲಿ ನಡೆಯಲಿದೆ....

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ / ಹೆಗಡೆ ಆಪ್ಟಿಕಲ್ಸ್, ಭಟ್ಕಳ ಹಾಗೂ ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಹೊಂದಿದ್ದು, ಇದೀಗ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಕುಮಟಾ: ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅತ್ಯಂತ ವಿಜೃಂಭಣೆಯಿoದ ನೆರವೇರಿತು....

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...