Important

ಕನ್ನಡ ಸಾಹಿತ್ಯ ಪರಿಷತ್ತು ಅಂಕೋಲಾ ಘಟಕದ ವತಿಯಿಂದ 11ನೇ ಕನ್ನಡ ಸಾಹಿತ್ಯ ಸಮ್ಮೇಳನ

Share

ಅಂಕೋಲಾ: ಕನ್ನಡ ಸಾಹಿತ್ಯ ಪರಿಷತ್ತಿನ ಅಂಕೋಲಾ ಘಟಕ ಹಮ್ಮಿಕೊಳ್ಳುತ್ತಾ ಬಂದಿರುವ ತಾಲೂಕು ಸಾಹಿತ್ಯ ಸಮ್ಮೇಳನ ಕಳೆದ ವರ್ಷ ಅದ್ದೂರಿ ದಶಮಾನೋತ್ಸವ ಕಾರ್ಯಕ್ರಮದೊಂದಿಗೆ ಸಂಪನ್ನಗೊoಡಿದ್ದು , ಈ ಬಾರಿ 11 ನೇ ವರ್ಷಾಚರಣೆ ಸಂಭ್ರಮದಲ್ಲಿದೆ. ಫೆ 25 ರ ಮಂಗಳವಾರ ಅಂಕೋಲಾ ಪಟ್ಟಣದ ನಾಡವರ ಸಮುದಾಯ ಭವನದಲ್ಲಿ, 11 ನೇ ಸಾಹಿತ್ಯ ಸಮ್ಮೇಳನ ಹಿರಿಯ ಸಾಹಿತಿ ಜಿ ಯು ನಾಯಕ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಿತು. ಅಂಕೋಲಾದ ನೂತನ ತಹಶೀಲ್ಧಾರ ನಿಶ್ಚಲ ನರೋನಾ ರಾಷ್ಟ್ರ ಧ್ವಜಾರೋಹಣ, ಕಸಾಪ ತಾಲೂಕು ಅಧ್ಯಕ್ಷ ಗೋಪಾಲಕೃಷ್ಣ ನಾಯಕ ಕನ್ನಡ ಧ್ವಜ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು. ಗಣಪತಿ ತಾಂಡೇಲ ನಿರ್ವಹಿಸಿದರು.

ಸಮ್ಮೇಳನದ ಸರ್ವಾಧ್ಯಕ್ಷರಾದ ಜಿ ಯು ನಾಯಕ ಉಪಸ್ಥಿತಿಯಲ್ಲಿ, ರಾಜೇಂದ್ರ ಶೆಟ್ಟಿ ಮತ್ತಿತರ ಪ್ರಮುಖರು ನಾಡವರ ಸಭಾಭವನದ ಆವರಣದಲ್ಲಿ ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ನಮಿಸಿ, ಕನ್ನಡ ಧ್ವಜ ಎತ್ತಿ ತೋರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ನಾಡವರ ಸಮುದಾಯ ಭವನದಿಂದ ಹೊರಟು ಕೆಎಲ್ ಇ ರಸ್ತೆ ಮೂಲಕ ಬಸ್ ನಿಲ್ದಾಣದ ಎದುರಿಂದ ಜೈಹಿಂದ್ ಸರ್ಕಲ್ ಮಾರ್ಗವಾಗಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಸಾಗಿ ಬಂದ ಮೆರವಣಿಗೆ ನಾಡವರ ಸಮುದಾಯ ಭವನದತ್ತ ಮರಳಿ ಸಂಪನ್ನಗೊoಡಿತು ವಾದ್ಯ ಮೇಳದೊಂದಿಗೆ ಸಂಘಟಕರು ಅತಿಥಿ ಗಣ್ಯರು,ವಿದ್ಯಾರ್ಥಿಗಳು ,ಇತರರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಲೋಕೋಪಯೋಗಿ ಇಲಾಖೆಯ ಕಾರವಾರ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರಾಮು ಅರ್ಗೇಕರ ರಿಬ್ಬನ್ ಕತ್ತರಿಸುವ ಮೂಲಕ ಪುಸ್ತಕ ಮಳಿಗೆಗಳನ್ನು ಉದ್ಘಾಟಿಸಿದರು,ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಹಾಗೂ ಸೇಂಟ್ ಮಿಲಾಗ್ರಿಸ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಾರ್ಜ ಫರ್ನಾಂಡಿಸ್ ಅವರು ಹಿರಿಯ ಸಾಹಿತಿ ವಿಷ್ಣು ನಾಯ್ಕ ಅಂಬಾರಕೋಡ್ಲ ಮತ್ತು ನಿವೃತ್ತ ಶಿಕ್ಷಕ ಪ್ರಕಾಶ ಕುಂಚಿ ನೆನಪಿನ ದ್ವಾರಗಳ ಉದ್ಘಾಟನೆ ನೆರವೇರಿಸಿದರು.

ಬೆಂಗಳೂರಿನ ಹಿರಿಯ ಸಾಹಿತಿ ಪ್ರತಿಭಾ ನಂದಕುಮಾರ ದೀಪಬೆಳಗಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು . ಹಿರಿಯ ಸಾಹಿತಿ ಶಾಂತಾರಾಮ ನಾಯಕ, ಹಿಚಕಡ ಅವರು ಜೆ. ಜಯಲಕ್ಷ್ಮೀ ಅವರ ಜಾನಪದ-ಸುಜ್ಞಾನ ಪಥ ಪುಸ್ತಕವನ್ನು ಲೋಕಾರ್ಪಣೆಗೊಳಿಸಿದರು. ಈ ಹಿಂದೆ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಡಾ. ರಾಮಕೃಷ್ಣ ಗುಂದಿ ಕಡಲ ಸಿರಿ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ವಿಚಾರಗೋಷ್ಠಿ, ಕವಿಗೋಷ್ಠಿ, ಸಾಂಸ್ಕೃತಿಕ ಮತ್ತಿತರ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆದವು.ಸಾಹಿತ್ಯಾಸಕ್ತರು,ವಿದ್ಯಾರ್ಥಿಗಳು,ಸಾರ್ವಜನಿಕರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಹಲವು ಗಣ್ಯರು ವೇದಿಕೆ ಅಲಂಕರಿಸಿದ್ದರು .

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ ಅರೆಗದ್ದೆ ನೆನಪಾಗುತ್ತಾರೆ. ಅದರ ಬೆನ್ನಲ್ಲೇ ರಿಯಲ್ ಎಸ್ಟೇಟ್ ಉದ್ಯಮ, ಆಯ್ಸಪ್ಲಾಂಟ್. ಸಹನಾ ಪ್ಯಾಲೇಸ್ ಲಾಡ್ಜ್,...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...