Focus News

ಶ್ರೀ ಸಂಸ್ಥಾನ ತರಳಿಮಠದಲ್ಲಿ ನೂತನ ಶಿವಾಲಯ ಲೋಕಾರ್ಪಣೆ

Share

ಸಿದ್ದಾಪುರ: ಶ್ರೀ ಸಂಸ್ಥಾನ ತರಳಿಮಠದಲ್ಲಿ ನೂತನ ವಾಗಿ ನಿರ್ಮಾಣ ಗೊಂಡ ಶಿವಾಲಯದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಸಾರಂಗನ ಜಡ್ಡು ಕಾರ್ತಿಕೇಯ ಪೀಠದ ಶ್ರೀಗಳಾದ ಯೋಗೇಂದ್ರ ಸ್ವಾಮೀಜಿ ಅವರು ತರಳಿ ಮಠದ ಟ್ರಸ್ಟ ಅಧ್ಯಕ್ಷರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.

ಧರ್ಮಸಭೆಯ ದಿವ್ಯ ಸಾನಿಧ್ಯ ವಹಿಸಿದ ಯೋಗೇಂದ್ರ ಸ್ವಾಮೀಜಿ ಅವರು ಮಠ ಎಂದರೆ ಒಂದು ಜಂಕ್ಷನ್ ಎಲ್ಲರೂ ಸೇರುವ ಜಾಗ, ಈ ಜಾಗದಲ್ಲಿ ಎಲ್ಲರೂ ಸೇರಿ ಸಮಾಜದ ಒಳತಿಗೆ ಇಲ್ಲಿ ಕುಳಿತು ಚರ್ಚಿಸುವಂತೆ ಆಗಬೇಕು ಆ ಮೂಲಕ ಸಮಾಜದ ಅಭಿವೃದ್ಧಿ ಆಗಬೇಕು, ಮಠಗಳು ಮಾನಸಿಕ ನೆಮ್ಮದಿ ನೀಡುತ್ತವೆ, ತಾಲೂಕಿನಲ್ಲಿ ನಮಗೆ ಅವಶ್ಯಕತೆ ಇರುವ ಮಠ ಲೋಕಾರ್ಪಣೆಗೊಂಡಿದೆ ಇಲ್ಲಿ ಇನ್ನು ಮುಂದಿನ ದಿನದಲ್ಲಿ ನಾವು ಯಾರಿಗೂ ಎದೆ ಗುಂದದೆ ಎಲ್ಲರೂ ಒಟ್ಟಾಗಿ ಬದುಕು ಕಟ್ಟಿಕೊಳ್ಳೋಣ ಎಂದು ಆಶೀರ್ವಚನ ನೀಡಿದರು.

ದಿವ್ಯ ಸಾನಿಧ್ಯ ವಹಿಸಿದ್ದ ಸಿಗಂದೂರು ಕ್ಷೇತ್ರದ ಧರ್ಮದರ್ಶಿಗಳಾದ ರಾಮಪ್ಪನವರು ಮಾತನಾಡಿ ಸಮಾಜದ ಅಭಿವೃದ್ಧಿಗೆ ಸಂಘಟನೆ ಅವಶ್ಯಕ, ದೇವಾಲಯ ಮಠ ಮಂದಿರ ಗಳಿಂದ ನಾವು ಸಂಸ್ಕೃತಿ ಹಾಗೂ ಆಚಾರ ವಿಚಾರಗಳನ್ನು ಕಲಿತುಕೊಳ್ಳಬಹುದು ಶಿಕ್ಷಣವನ್ನು ಪಡೆಯಬಹುದು ಆ ಮೂಲಕ ಸಮಾಜದ ಅಭಿವೃದ್ಧಿ ಪಡಿಸಬಹುದು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾಗರ ಕ್ಷೇತ್ರದ ಶಾಸಕ ಬೇಲೂರು ಗೋಪಾಲಕೃಷ್ಣ ಹಾಗೂ ಶಿರಸಿ ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ್ ವಕೀಲರಾದ ಎ ಕೆ ವಸಂತ, ಜಿ.ಟಿ ನಾಯ್ಕ್, ಪ್ರಮುಖರಾದ ಎಚ್ ಆರ್ ಸತೀಶ್ ಮಾತನಾಡಿ ಶಿಕ್ಷಣದತ್ತ ನಾವು ಗಮನ ನೀಡಿ ಮಕ್ಕಳನ್ನ ವಿದ್ಯಾವಂತರನ್ನಾಗಿ ಮಾಡಬೇಕು, ಆ ಮೂಲಕ ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕು ಎಲ್ಲರೂ ತಮ್ಮ ಕೈಲಾದ ಸಹಾಯ ಸಹಕಾರ ನೀಡಬೇಕು ಒಂದಾಗಿ ಒಗ್ಗಟ್ಟಾಗಿ ಸಮಾಜವನ್ನು ಬೆಳೆಸಲು ಮುಂದಾಗಬೇಕು ಇಂದು ನಾವು ಕೊಟ್ಟ ದಾನ ಮುಂದಿನ ತಲೆಮಾರಿನವರಿಗೆ ಆಸರೆ ಆಗುತ್ತದೆ ಹಾಗಾಗಿ ಎಲ್ಲರೂ ಒಗ್ಗಟ್ಟಿನಿಂದ ಗುರುಗಳ ಮಾರ್ಗದರ್ಶನದಲ್ಲಿ ನಡೆಯೋಣ ಎಂದರು. ಇದೇ ವೇಳೆ ಮಾಜಿ ಸ್ಪೀಕರ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರನ್ನು ಸನ್ಮಾನಿಸಲಾಯಿತು.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಆಗಿದ್ದು, ಇದೀಗ ಶನಿವಾರ ( ನವೆಂಬರ್ 8 ರಂದು ) ರಾತ್ರಿ...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಇತರರ ಬದುಕಿನಲ್ಲೂ ಸದಾ ಬೆಳಗಲು ಸಾಧ್ಯ ಎಂದು ಕಲಾಸಿರಿ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಪಿ....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಅಂಕೋಲಾದಲ್ಲಿ ಇಂದು ಪಂಚದೇವರ ದೊಡ್ಡ ಕಾರ್ತಿಕೋತ್ಸವ : ಶಿರ ಕುಳಿ ಕಾನದೇವಿ ದೇವಸ್ಥಾನದ ಹತ್ತಿರ ವನಭೋಜನಕ್ಕೆ ನಡೆಯುತ್ತಿದೆ ಸಿದ್ದತೆ

ಅಂಕೋಲಾ: ತಾಲೂಕಿನ ಸಂಸ್ಕೃತಿಯ ಆರಾಧನಾ ಪದ್ಧತಿಯಾಗಿ ಹಲವು ತಲೆಮಾರುಗಳಿಂದ ಆಚರಿಸಲ್ಪಡುತ್ತಬಂದಿರುವ ಪಂಚ ದೇವರುಗಳ ದೊಡ್ಡ ಕಾರ್ತಿಕೋತ್ಸವ...

ಕೇಣಿ ವಾಣಿಜ್ಯ ಬಂದರು ವಿರೋಧಿಸಿ ಹೋರಾಟ ನಿರಂತರ : ಬಹಿರಂಗ ಸಭೆ ತಾತ್ಕಾಲಿಕವಾಗಿ ಮುಂದೂಡಿಕೆ : ಸಂಘಟಕ ಪ್ರಮುಖರು ಪ್ರಕಟಣೆಯಲ್ಲಿ ಹೇಳಿದ್ದೇನು ?

ಅಂಕೋಲಾ: ತಾಲೂಕಿನ ಕೇಣಿಯಲ್ಲಿ ನಿರ್ಮಾಣ ಉದ್ದೇಶಿತ ವಾಣಿಜ್ಯ ಬಂದರು ಯೋಜನೆಯನ್ನು ವಿರೋಧಿಸಿ, ಸಾಮೂಹಿಕ ನಾಯಕತ್ವದಡಿ, ಅಂಕೋಲಾ...

ಚಿಪ್ಪಿ ಫ್ಯಾಕ್ಟರಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆ

ಅಂಕೋಲಾ: ತಾಲೂಕಿನ ಶೆಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...

ಆಧುನಿಕ ಜಗತ್ತನ್ನಾಳಲಿರುವ AI ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

ಅಂಕೋಲಾ : ಕೃತಕ ಬುದ್ಧಿಮತ್ತೆಯು ( AI ತಂತ್ರಜ್ಞಾನ ) ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ...

ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ ವಿಶೇಷ ಅಭಿಯಾನ

ಅಂಕೋಲಾ : ತಾಲೂಕಿನ ವಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋಳೆ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಗೆ...

ಅಂಕೋಲಾ ಕಲ್ಲೇಶ್ವರದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಅಂಕೋಲಾ : ಒನ್‌ ಲೈಟ್‌ ಎಸ್ಸಿಲಾರ್ ಲಕ್ಸೊಟಿಕಾ ಫೌಂಡೇಶನ್, ಸ್ಪಂದನ ಸೇವಾ ಟ್ರಸ್ಟ್ ಹಡಿನಬಾಳ ಹೊನ್ನಾವರ,ಸಂಗಮ...

ಹೊನ್ನಾವರದಲ್ಲಿ ಸಾರ್ವಜನಿಕ ಗಣೇಶೋತ್ಸವ ಮೂರ್ತಿಯ ವಿಸರ್ಜನೆ: ಅದ್ಧೂರಿ ಮೆರವಣಿಗೆ

ಹೊನ್ನಾವರ: ಪಟ್ಟಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಚವತಿಯ ದಿನದಂದು ಪ್ರತಿಷ್ಠಾಪಿಸಿದ ಗಣಪನನ್ನು ವಿಜೃಂಭಣೆಯಿoದ ಆಚರಿಸಿ 7...

KEB ಗಣಪನಿಗೆ 48 ನೇ ವಾರ್ಷಿಕ ಸಂಭ್ರಮ: ಸೆ.4 ಮಹಾಪೂಜೆ – ಸೆ.5 ರಂದು ಭವ್ಯ ಮೆರವಣಿಗೆಯೊಂದಿಗೆ ವಿಸರ್ಜನೆ

ಅಂಕೋಲಾ: ತಾಲೂಕಿನ ಹೆಸ್ಕಾಂ ಇಲಾಖೆ ವತಿಯಿಂದ 48 ನೇ ವರ್ಷದ ಗಣೇಶೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ...