Focus News

ಶ್ರೀ ಸಂಸ್ಥಾನ ತರಳಿಮಠದಲ್ಲಿ ನೂತನ ಶಿವಾಲಯ ಲೋಕಾರ್ಪಣೆ

Share

ಸಿದ್ದಾಪುರ: ಶ್ರೀ ಸಂಸ್ಥಾನ ತರಳಿಮಠದಲ್ಲಿ ನೂತನ ವಾಗಿ ನಿರ್ಮಾಣ ಗೊಂಡ ಶಿವಾಲಯದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಸಾರಂಗನ ಜಡ್ಡು ಕಾರ್ತಿಕೇಯ ಪೀಠದ ಶ್ರೀಗಳಾದ ಯೋಗೇಂದ್ರ ಸ್ವಾಮೀಜಿ ಅವರು ತರಳಿ ಮಠದ ಟ್ರಸ್ಟ ಅಧ್ಯಕ್ಷರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.

ಧರ್ಮಸಭೆಯ ದಿವ್ಯ ಸಾನಿಧ್ಯ ವಹಿಸಿದ ಯೋಗೇಂದ್ರ ಸ್ವಾಮೀಜಿ ಅವರು ಮಠ ಎಂದರೆ ಒಂದು ಜಂಕ್ಷನ್ ಎಲ್ಲರೂ ಸೇರುವ ಜಾಗ, ಈ ಜಾಗದಲ್ಲಿ ಎಲ್ಲರೂ ಸೇರಿ ಸಮಾಜದ ಒಳತಿಗೆ ಇಲ್ಲಿ ಕುಳಿತು ಚರ್ಚಿಸುವಂತೆ ಆಗಬೇಕು ಆ ಮೂಲಕ ಸಮಾಜದ ಅಭಿವೃದ್ಧಿ ಆಗಬೇಕು, ಮಠಗಳು ಮಾನಸಿಕ ನೆಮ್ಮದಿ ನೀಡುತ್ತವೆ, ತಾಲೂಕಿನಲ್ಲಿ ನಮಗೆ ಅವಶ್ಯಕತೆ ಇರುವ ಮಠ ಲೋಕಾರ್ಪಣೆಗೊಂಡಿದೆ ಇಲ್ಲಿ ಇನ್ನು ಮುಂದಿನ ದಿನದಲ್ಲಿ ನಾವು ಯಾರಿಗೂ ಎದೆ ಗುಂದದೆ ಎಲ್ಲರೂ ಒಟ್ಟಾಗಿ ಬದುಕು ಕಟ್ಟಿಕೊಳ್ಳೋಣ ಎಂದು ಆಶೀರ್ವಚನ ನೀಡಿದರು.

ದಿವ್ಯ ಸಾನಿಧ್ಯ ವಹಿಸಿದ್ದ ಸಿಗಂದೂರು ಕ್ಷೇತ್ರದ ಧರ್ಮದರ್ಶಿಗಳಾದ ರಾಮಪ್ಪನವರು ಮಾತನಾಡಿ ಸಮಾಜದ ಅಭಿವೃದ್ಧಿಗೆ ಸಂಘಟನೆ ಅವಶ್ಯಕ, ದೇವಾಲಯ ಮಠ ಮಂದಿರ ಗಳಿಂದ ನಾವು ಸಂಸ್ಕೃತಿ ಹಾಗೂ ಆಚಾರ ವಿಚಾರಗಳನ್ನು ಕಲಿತುಕೊಳ್ಳಬಹುದು ಶಿಕ್ಷಣವನ್ನು ಪಡೆಯಬಹುದು ಆ ಮೂಲಕ ಸಮಾಜದ ಅಭಿವೃದ್ಧಿ ಪಡಿಸಬಹುದು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾಗರ ಕ್ಷೇತ್ರದ ಶಾಸಕ ಬೇಲೂರು ಗೋಪಾಲಕೃಷ್ಣ ಹಾಗೂ ಶಿರಸಿ ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ್ ವಕೀಲರಾದ ಎ ಕೆ ವಸಂತ, ಜಿ.ಟಿ ನಾಯ್ಕ್, ಪ್ರಮುಖರಾದ ಎಚ್ ಆರ್ ಸತೀಶ್ ಮಾತನಾಡಿ ಶಿಕ್ಷಣದತ್ತ ನಾವು ಗಮನ ನೀಡಿ ಮಕ್ಕಳನ್ನ ವಿದ್ಯಾವಂತರನ್ನಾಗಿ ಮಾಡಬೇಕು, ಆ ಮೂಲಕ ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕು ಎಲ್ಲರೂ ತಮ್ಮ ಕೈಲಾದ ಸಹಾಯ ಸಹಕಾರ ನೀಡಬೇಕು ಒಂದಾಗಿ ಒಗ್ಗಟ್ಟಾಗಿ ಸಮಾಜವನ್ನು ಬೆಳೆಸಲು ಮುಂದಾಗಬೇಕು ಇಂದು ನಾವು ಕೊಟ್ಟ ದಾನ ಮುಂದಿನ ತಲೆಮಾರಿನವರಿಗೆ ಆಸರೆ ಆಗುತ್ತದೆ ಹಾಗಾಗಿ ಎಲ್ಲರೂ ಒಗ್ಗಟ್ಟಿನಿಂದ ಗುರುಗಳ ಮಾರ್ಗದರ್ಶನದಲ್ಲಿ ನಡೆಯೋಣ ಎಂದರು. ಇದೇ ವೇಳೆ ಮಾಜಿ ಸ್ಪೀಕರ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರನ್ನು ಸನ್ಮಾನಿಸಲಾಯಿತು.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ ಸಮ್ಮೇಳನವು ಇದೇ ಜೂನ್ 14 ರ ಭಾನುವಾರದಂದು ಕುಮಟಾದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಂಗಣದಲ್ಲಿ ನಡೆಯಲಿದೆ....

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ / ಹೆಗಡೆ ಆಪ್ಟಿಕಲ್ಸ್, ಭಟ್ಕಳ ಹಾಗೂ ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಹೊಂದಿದ್ದು, ಇದೀಗ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಜನಪ್ರಿಯ ಶಿಕ್ಷಕ ಮಂಜುನಾಥ ನಾಯಕ ಇನ್ನಿಲ್ಲ :  ಜೂನ್ 6 ರ ಶನಿವಾರ ಬೆಳಿಗ್ಗೆ ಅಗ್ರಗೋಣದಲ್ಲಿ ಅಂತ್ಯಸಂಸ್ಕಾರ

ಅಂಕೋಲಾ: ತಾಲೂಕಿನ ಅಗ್ರಗೋಣ ಗ್ರಾಮದ (ಲಕ್ಷ್ಮೀ ಮನೆ ) ನಿವಾಸಿ, ಹಾಗೂ ಬೇಲೇಕೇರಿ ಸರ್ಕಾರಿ ಪ್ರೌಢಶಾಲೆಯ...

ಮೂಲ ಸ್ಥಳದಲ್ಲೇ ಮುರಿನಕಟ್ಟೆ ನಿರ್ಮಾಣಕ್ಕೆ ಯೋಜನೆ ಸಿದ್ಧ : ವಿಶ್ವೇಶ್ವರ ಹೆಗಡೆ ಕಾಗೇರಿ

ಭಟ್ಕಳ: ಹೆದ್ದಾರಿ ಪ್ರಾಧಿಕಾರ ಮುರಿನಕಟ್ಟೆಯನ್ನು ಮೂಲ ಜಾಗದಲ್ಲಿಯೇ ಕಟ್ಟಲು ತಿರ್ಮಾನಿಸಿ ಈ ಕುರಿತು ನೀಲನಕ್ಷೇಯನ್ನು ತಯಾರಿಸಲಾಗಿದೆ...

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್...

ಚುನಾವಣೆ ನಂತರ ರಾಜಕೀಯ ಬದಿಗಿಟ್ಟು ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯ : ಅಮದಳ್ಳಿ ಗ್ರಾಮ ದೇವರ ಗ್ರಾಮ ಎಂದ ಶಾಸಕ ಸೈಲ್

ಕಾರವಾರ: ಗ್ರಾಮೀಣ ಆಡಳಿತ ವ್ಯವಸ್ಥೆಗೆ ಬಲ ತುಂಬುವ ಹೆಜ್ಜೆಯಾಗಿ ಅಮದಳ್ಳಿ ಗ್ರಾಮ ಪಂಚಾಯತ್‌ನ ನೂತನ ಸಭಾಭವನವನ್ನು...

ಅಂಕೋಲಾದಲ್ಲಿ ಇಂದು ಪಂಚದೇವರ ದೊಡ್ಡ ಕಾರ್ತಿಕೋತ್ಸವ : ಶಿರ ಕುಳಿ ಕಾನದೇವಿ ದೇವಸ್ಥಾನದ ಹತ್ತಿರ ವನಭೋಜನಕ್ಕೆ ನಡೆಯುತ್ತಿದೆ ಸಿದ್ದತೆ

ಅಂಕೋಲಾ: ತಾಲೂಕಿನ ಸಂಸ್ಕೃತಿಯ ಆರಾಧನಾ ಪದ್ಧತಿಯಾಗಿ ಹಲವು ತಲೆಮಾರುಗಳಿಂದ ಆಚರಿಸಲ್ಪಡುತ್ತಬಂದಿರುವ ಪಂಚ ದೇವರುಗಳ ದೊಡ್ಡ ಕಾರ್ತಿಕೋತ್ಸವ...

ಕೇಣಿ ವಾಣಿಜ್ಯ ಬಂದರು ವಿರೋಧಿಸಿ ಹೋರಾಟ ನಿರಂತರ : ಬಹಿರಂಗ ಸಭೆ ತಾತ್ಕಾಲಿಕವಾಗಿ ಮುಂದೂಡಿಕೆ : ಸಂಘಟಕ ಪ್ರಮುಖರು ಪ್ರಕಟಣೆಯಲ್ಲಿ ಹೇಳಿದ್ದೇನು ?

ಅಂಕೋಲಾ: ತಾಲೂಕಿನ ಕೇಣಿಯಲ್ಲಿ ನಿರ್ಮಾಣ ಉದ್ದೇಶಿತ ವಾಣಿಜ್ಯ ಬಂದರು ಯೋಜನೆಯನ್ನು ವಿರೋಧಿಸಿ, ಸಾಮೂಹಿಕ ನಾಯಕತ್ವದಡಿ, ಅಂಕೋಲಾ...

ಚಿಪ್ಪಿ ಫ್ಯಾಕ್ಟರಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆ

ಅಂಕೋಲಾ: ತಾಲೂಕಿನ ಶೆಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...

ಆಧುನಿಕ ಜಗತ್ತನ್ನಾಳಲಿರುವ AI ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

ಅಂಕೋಲಾ : ಕೃತಕ ಬುದ್ಧಿಮತ್ತೆಯು ( AI ತಂತ್ರಜ್ಞಾನ ) ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ...