Important

ವಿಜ್ಞಾನ ದಿನಾಚರಣೆ: ಗಮನಸೆಳೆದ ವಸ್ತುಪ್ರದರ್ಶನ

Share

ಕುಮಟಾ: ವಿಜ್ಞಾನ ಎನ್ನುವುದು ಜಗತ್ತಿಗೆ ಬೆಳಕು ನೀಡಿದ ಒಂದು ವಿಚಾರ ಕ್ರಮ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವುದು ಹಿಂದಿನ ಅಗತ್ಯತೆಯಾಗಿದ್ದು ಈ ನಿಟ್ಟಿನಲ್ಲಿ ಶಾಲೆಗಳು ಕಾರ್ಯನಿರ್ವಹಿಸಬೇಕು ಎಂದು ರಾಷ್ಟ್ರೀಯ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಪನ್ಮೂಲ ವ್ಯಕ್ತಿ, ವಿಧಾತ್ರಿ ಅಕಾಡೆಮಿಯ ವಿಕ್ಕಿ ವಾಸ್ವಾನಿ ಹೇಳಿದರು. ಅವರು ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸರಸ್ವತಿ ವಿದ್ಯಾಕೇಂದ್ರದಲ್ಲಿ ನಡೆದ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ, ಕಾರ್ಯನಿರ್ವಹಿಸುವ ವಿಜ್ಞಾನ ಪರಿಕರಗಳ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಎಳೆವೆಯಲ್ಲಿಯೇ ವಿದ್ಯಾರ್ಥಿಗಳಿಗೆ ವಿಜ್ಞಾನದ ಕುರಿತಾಗಿ ಆಸಕ್ತಿ ಬೆಳೆಸಬೇಕು. ಇಂತಹ ಕಾರ್ಯ ಮಾಡುವುದು ಪ್ರಸ್ತುತ ಸಮಾಜದ ಅಗತ್ಯತೆಯಾಗಿದೆ. ದೊಡ್ಡ ದೊಡ್ಡ ಪಟ್ಟಣಗಳಲ್ಲಿ ಅವುಗಳಿಗೆ ಸೂಕ್ತ ವ್ಯವಸ್ಥೆ ಇರುತ್ತದೆ. ಆದರೆ ಕುಮಟಾದಂತಹ ಸ್ಥಳದಲ್ಲಿ ಇರುವ ಸಂಪನ್ಮೂಲಗಳ ಬಳಕೆಯನ್ನೇ ಮಾಡಿಕೊಂಡು ಇಷ್ಟು ಅತ್ಯುತ್ತಮವಾಗಿ, ಈ ರೀತಿಯಾದ ವಿಜ್ಞಾನ ದಿನವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಸಾಪ್ಟವೇರ್ ಇಂಜಿನಿಯರ್ ರಾಮಪ್ರಸನ್ನ ಖಾರ್ವಿ ಮಾತನಾಡಿ, 1928 ರ ಫೆಬ್ರವರಿ 28 ರಂದು ಮಹಾನ್ ವಿಜ್ಞಾನಿ ಸರ್.ಸಿ.ವಿ.ರಾಮನ್ ಅವರು ವಿಶ್ವ ಪ್ರಸಿದ್ಧವಾದ ರಾಮನ್ ಎಫೆಕ್ಟ ಅನ್ನು ಜಗತ್ತಿಗೆ ಬಹಿರಂಗ ಪಡಿಸಿದರು. ಈ ದಿನವನ್ನು ಇಷ್ಟು ವಿಭಿನ್ನವಾಗಿ ಹಮ್ಮಿಕೊಂಡು ಸಂಸ್ಥೆ ವಿದ್ಯಾರ್ಥಿಗಳ ಭವಿಷ್ಯತ್ತಿಗೆ ಮುನ್ನುಡಿ ಬರೆದಿದೆ. ವಿಜ್ಞಾನ ಎಂದರೆ ಇರುವುದನ್ನು ಹೊಸ ದೃಷ್ಟಿಕೋನದಲ್ಲಿ ನೋಡುವ ವ್ಯವಸ್ಥೆಯಾಗಿದೆ. ವಿದ್ಯಾರ್ಥಿಗಳು ವೈವಿಧ್ಯಮಯವಾದ ವೈಜ್ಞಾನಿಕ ಪರಿಕರಗಳನ್ನು ತಯಾರಿಸಿದ್ದು, ಅವರ ಮುಂದಿನ ಬದುಕಿಗೆ ಅದು ಮಾರ್ಗದರ್ಶಿಯಾಗಲಿದೆ. ಹೊಸದನ್ನು ಕಂಡುಹಿಡಿಯುವ ಹಂಬಲವೇ ವಿಜ್ಞಾನ ಬೆಳೆಯಲು ಕಾರಣವಾಗಿದೆ ಹೀಗಾಗಿ ವಿದ್ಯಾರ್ಥಿಗಳು ಹೊಸ ಹೊಸ ಪ್ರಯೋಗಗಳನ್ನು ಪ್ರಯತ್ನಗಳನ್ನು ಮಾಡುತ್ತ ಸಾಗಬೇಕು. ಇದಕ್ಕೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಬಲ ತುಂಬಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಿದಾತ್ರಿ ಅಕಾಡೆಮಿಯ ಸಹಯೋಗದ ಸರಸ್ವತಿ ಪಿಯು ಕಾಲೇಜಿನ ಉಪನ್ಯಾಸಕ ಪ್ರಸನ್ನ ಹೆಗಡೆ ವಿದ್ಯಾರ್ಥಿಗಳಿಗೆ ಪ್ರಯೋಗಗಳ ಮೂಲಕ ವಿಜ್ಞಾನದ ವಿಸ್ಮಯ ತೋರಿಸಿ, ಈ ಮೂಲಕ ವಿಜ್ಞಾನದಲ್ಲಿ ಆಸಕ್ತಿ ಮೂಡಿಸುವ ಕಾರ್ಯ ಮಾಡಿದರು. ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕ ಗುರುರಾಜ ಶೆಟ್ಟಿ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಸ್ಮಾರ್ಟ ಅಂಬ್ಯುಲೆನ್ಸ್, ರೇನ್ ಸೆನ್ಸಾರ್, ಭೂಕಂಪ ಅಲಾರಾಂ, ಹೋಲೋಗ್ರಾಮ್, ಲೈಟ್ ಫೆಡಿಲಿಟಿ, ಆಟೋಮಿಕ್ ವಾಟರ್ ಫಂಕ್ಷನ್, ಸ್ಮಾರ್ಟ ಸಿಟಿಯಂತಹ ಹಲವಾರು ವೈವಿದ್ಯಮಯ ಹಾಗೂ ಕ್ರಿಯಾಶೀಲ ವಿಜ್ಞಾನ ಮಾದರಿ ತಯಾರಿಸಿ ತಂದು ಗಮನ ಸೆಳೆದರು. ಮುಖ್ಯೋಪಾಧ್ಯಾಯ ಗಣೇಶ ಜೋಶಿ ಸಂಕೊಳ್ಳಿ ಸ್ವಾಗತಿಸಿ, ಪ್ರಾಸ್ಥಾವಿಕ ನುಡಿಗಳನ್ನು ಆಡಿದರು. ಶಿಕ್ಷಕರ ಗೌರೀಶ ಭಂಡಾರಿ ನಿರೂಪಿಸಿದರು. ಮುಖ್ಯ ಶಿಕ್ಷಕಿ ಸುಜಾತಾ ನಾಯ್ಕ ವಂದಿಸಿದರು. ವಿಜ್ಞಾನ ಶಿಕ್ಷಕರಾದ ಉಷಾ ಭಟ್ಟ, ಪ್ರಜ್ಞಾ ನಾಯ್ಕ, ಶೃತಿ ಪೆಡ್ನೇಕರ್, ವೈಭವಕುಮಾರ್ ಎಚ್ ಇದ್ದರು.

ವಿಸ್ಮಯ ನ್ಯೂಸ್, ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ ತರಬಹುದು,ಇಂತಹದೊoದು ಪ್ರಕೃತಿ ವಿಸ್ಮಯ ನಡೆದದ್ದು ದೂರದಲ್ಲೆಲ್ಲೋ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ...

ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗೆ ಸರ್ಚ್ ವಾರೆಂಟ್ ಮೇಲೆ ಬಂದ ಲೋಕಾಯುಕ್ತರ ತಂಡ : ಯಾಕೆ ನೋಡಿ?

ಅಂಕೋಲಾ‌ : ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮುಂತಾದ ಕೆಲಸಗಳಲ್ಲಿ ಅನಗತ್ಯ ವಿಳಂಬ ಮತ್ತು ಏಜೆಂಟರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ...

ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶೀ ಮೇಳ: ಅಕ್ಟೋಬರ್ 7, 8,9 ರಂದು ಆಯೋಜನೆ

ಅಂಕೋಲಾ : ರಾಘವೇಂದ್ರ ಇವೆಂಟ್ಸ್ ಅಂಕೋಲಾ ಹಾಗೂ ಬೆನಕ ಇವೆಂಟ್ಸ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ...

ಸೇವಾಪರ್ವ ವಿಕಸಿತ ಭಾರತ ವಿಷಯಾಧಾರಿತ ಪೇಟಿಂಗ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದರ್ಶನ ನಾಯ್ಕ

ಭಟ್ಕಳ: ಕೇಂದ್ರ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ತಂಜಾವೂರು ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ವಿಕ್ಷಿತ್ ಭಾರತ್...

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ...

ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಹೊನ್ನಾವರ ಇದರ ವಾರ್ಷಿಕ ಸರ್ವ ಸಾಧಾರಣ

ಹೊನ್ನಾವರ : ಇಲ್ಲಿನ ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ...

ಮಾನವೀಯತೆಯ ದೀಪ ಬೆಳಗಿಸಿದ ನೇತ್ರದಾನಿ ಕೃಷ್ಣ ನಾಯ್ಕ ಅಮರ

ಕುಮಟಾ : ತಾಲೂಕಿನ ಧಾರೇಶ್ವರ ಹೋಬಳಿ ಹರನೀರು ತುದಿಮನೆ ನಿವಾಸಿ ಕೃಷ್ಣ ನಾರಾಯಣ ನಾಯ್ಕ (77...

ಬಸ್ ಗೆ ಡಿಕ್ಕಿ ಹೊಡೆದ ಲಾರಿ : ಸ್ಟೇರಿಂಗ್ ಮಧ್ಯ ಸಿಲುಕಿದ ಲಾರಿ ಚಾಲಕ ಸಾವು: ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ನಿಧನ

ಅಂಕೋಲಾ: ಟ್ಯಾಂಕರ್ ಲಾರಿ ಮತ್ತು ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಹೃದಯದಾಕಾರದ ಮುಖದ ಗೂಬೆ: ಶಾಲೆಗೆ ಬಂತು ಗುಮ್ಮ

ಅಂಕೋಲಾ: ಮಕ್ಕಳು ಊಟ, ತಿಂಡಿ, ನಿದ್ದೆ ಸರಿಯಾಗಿ ಮಾಡದಿದ್ದರೆ ಅಥವಾ ಬೇರೆ ಕಾರಣದಿಂದ ಹಠ ಹಿಡಿದರೆ...