Important

ವಿಜ್ಞಾನ ದಿನಾಚರಣೆ: ಗಮನಸೆಳೆದ ವಸ್ತುಪ್ರದರ್ಶನ

Share

ಕುಮಟಾ: ವಿಜ್ಞಾನ ಎನ್ನುವುದು ಜಗತ್ತಿಗೆ ಬೆಳಕು ನೀಡಿದ ಒಂದು ವಿಚಾರ ಕ್ರಮ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವುದು ಹಿಂದಿನ ಅಗತ್ಯತೆಯಾಗಿದ್ದು ಈ ನಿಟ್ಟಿನಲ್ಲಿ ಶಾಲೆಗಳು ಕಾರ್ಯನಿರ್ವಹಿಸಬೇಕು ಎಂದು ರಾಷ್ಟ್ರೀಯ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಪನ್ಮೂಲ ವ್ಯಕ್ತಿ, ವಿಧಾತ್ರಿ ಅಕಾಡೆಮಿಯ ವಿಕ್ಕಿ ವಾಸ್ವಾನಿ ಹೇಳಿದರು. ಅವರು ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸರಸ್ವತಿ ವಿದ್ಯಾಕೇಂದ್ರದಲ್ಲಿ ನಡೆದ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ, ಕಾರ್ಯನಿರ್ವಹಿಸುವ ವಿಜ್ಞಾನ ಪರಿಕರಗಳ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಎಳೆವೆಯಲ್ಲಿಯೇ ವಿದ್ಯಾರ್ಥಿಗಳಿಗೆ ವಿಜ್ಞಾನದ ಕುರಿತಾಗಿ ಆಸಕ್ತಿ ಬೆಳೆಸಬೇಕು. ಇಂತಹ ಕಾರ್ಯ ಮಾಡುವುದು ಪ್ರಸ್ತುತ ಸಮಾಜದ ಅಗತ್ಯತೆಯಾಗಿದೆ. ದೊಡ್ಡ ದೊಡ್ಡ ಪಟ್ಟಣಗಳಲ್ಲಿ ಅವುಗಳಿಗೆ ಸೂಕ್ತ ವ್ಯವಸ್ಥೆ ಇರುತ್ತದೆ. ಆದರೆ ಕುಮಟಾದಂತಹ ಸ್ಥಳದಲ್ಲಿ ಇರುವ ಸಂಪನ್ಮೂಲಗಳ ಬಳಕೆಯನ್ನೇ ಮಾಡಿಕೊಂಡು ಇಷ್ಟು ಅತ್ಯುತ್ತಮವಾಗಿ, ಈ ರೀತಿಯಾದ ವಿಜ್ಞಾನ ದಿನವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಸಾಪ್ಟವೇರ್ ಇಂಜಿನಿಯರ್ ರಾಮಪ್ರಸನ್ನ ಖಾರ್ವಿ ಮಾತನಾಡಿ, 1928 ರ ಫೆಬ್ರವರಿ 28 ರಂದು ಮಹಾನ್ ವಿಜ್ಞಾನಿ ಸರ್.ಸಿ.ವಿ.ರಾಮನ್ ಅವರು ವಿಶ್ವ ಪ್ರಸಿದ್ಧವಾದ ರಾಮನ್ ಎಫೆಕ್ಟ ಅನ್ನು ಜಗತ್ತಿಗೆ ಬಹಿರಂಗ ಪಡಿಸಿದರು. ಈ ದಿನವನ್ನು ಇಷ್ಟು ವಿಭಿನ್ನವಾಗಿ ಹಮ್ಮಿಕೊಂಡು ಸಂಸ್ಥೆ ವಿದ್ಯಾರ್ಥಿಗಳ ಭವಿಷ್ಯತ್ತಿಗೆ ಮುನ್ನುಡಿ ಬರೆದಿದೆ. ವಿಜ್ಞಾನ ಎಂದರೆ ಇರುವುದನ್ನು ಹೊಸ ದೃಷ್ಟಿಕೋನದಲ್ಲಿ ನೋಡುವ ವ್ಯವಸ್ಥೆಯಾಗಿದೆ. ವಿದ್ಯಾರ್ಥಿಗಳು ವೈವಿಧ್ಯಮಯವಾದ ವೈಜ್ಞಾನಿಕ ಪರಿಕರಗಳನ್ನು ತಯಾರಿಸಿದ್ದು, ಅವರ ಮುಂದಿನ ಬದುಕಿಗೆ ಅದು ಮಾರ್ಗದರ್ಶಿಯಾಗಲಿದೆ. ಹೊಸದನ್ನು ಕಂಡುಹಿಡಿಯುವ ಹಂಬಲವೇ ವಿಜ್ಞಾನ ಬೆಳೆಯಲು ಕಾರಣವಾಗಿದೆ ಹೀಗಾಗಿ ವಿದ್ಯಾರ್ಥಿಗಳು ಹೊಸ ಹೊಸ ಪ್ರಯೋಗಗಳನ್ನು ಪ್ರಯತ್ನಗಳನ್ನು ಮಾಡುತ್ತ ಸಾಗಬೇಕು. ಇದಕ್ಕೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಬಲ ತುಂಬಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಿದಾತ್ರಿ ಅಕಾಡೆಮಿಯ ಸಹಯೋಗದ ಸರಸ್ವತಿ ಪಿಯು ಕಾಲೇಜಿನ ಉಪನ್ಯಾಸಕ ಪ್ರಸನ್ನ ಹೆಗಡೆ ವಿದ್ಯಾರ್ಥಿಗಳಿಗೆ ಪ್ರಯೋಗಗಳ ಮೂಲಕ ವಿಜ್ಞಾನದ ವಿಸ್ಮಯ ತೋರಿಸಿ, ಈ ಮೂಲಕ ವಿಜ್ಞಾನದಲ್ಲಿ ಆಸಕ್ತಿ ಮೂಡಿಸುವ ಕಾರ್ಯ ಮಾಡಿದರು. ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕ ಗುರುರಾಜ ಶೆಟ್ಟಿ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಸ್ಮಾರ್ಟ ಅಂಬ್ಯುಲೆನ್ಸ್, ರೇನ್ ಸೆನ್ಸಾರ್, ಭೂಕಂಪ ಅಲಾರಾಂ, ಹೋಲೋಗ್ರಾಮ್, ಲೈಟ್ ಫೆಡಿಲಿಟಿ, ಆಟೋಮಿಕ್ ವಾಟರ್ ಫಂಕ್ಷನ್, ಸ್ಮಾರ್ಟ ಸಿಟಿಯಂತಹ ಹಲವಾರು ವೈವಿದ್ಯಮಯ ಹಾಗೂ ಕ್ರಿಯಾಶೀಲ ವಿಜ್ಞಾನ ಮಾದರಿ ತಯಾರಿಸಿ ತಂದು ಗಮನ ಸೆಳೆದರು. ಮುಖ್ಯೋಪಾಧ್ಯಾಯ ಗಣೇಶ ಜೋಶಿ ಸಂಕೊಳ್ಳಿ ಸ್ವಾಗತಿಸಿ, ಪ್ರಾಸ್ಥಾವಿಕ ನುಡಿಗಳನ್ನು ಆಡಿದರು. ಶಿಕ್ಷಕರ ಗೌರೀಶ ಭಂಡಾರಿ ನಿರೂಪಿಸಿದರು. ಮುಖ್ಯ ಶಿಕ್ಷಕಿ ಸುಜಾತಾ ನಾಯ್ಕ ವಂದಿಸಿದರು. ವಿಜ್ಞಾನ ಶಿಕ್ಷಕರಾದ ಉಷಾ ಭಟ್ಟ, ಪ್ರಜ್ಞಾ ನಾಯ್ಕ, ಶೃತಿ ಪೆಡ್ನೇಕರ್, ವೈಭವಕುಮಾರ್ ಎಚ್ ಇದ್ದರು.

ವಿಸ್ಮಯ ನ್ಯೂಸ್, ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ ಅರೆಗದ್ದೆ ನೆನಪಾಗುತ್ತಾರೆ. ಅದರ ಬೆನ್ನಲ್ಲೇ ರಿಯಲ್ ಎಸ್ಟೇಟ್ ಉದ್ಯಮ, ಆಯ್ಸಪ್ಲಾಂಟ್. ಸಹನಾ ಪ್ಯಾಲೇಸ್ ಲಾಡ್ಜ್,...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...