Important

ಬ್ರಹ್ಮಾನಂದ ಸರಸ್ವತಿ ಶ್ರೀಗಳಿಗೆ ಗುರುನಮನ: ಶ್ರೀಗಳಿಗೆ ಅದ್ಧೂರಿಯಾಗಿ ಸ್ವಾಗತ

Share

ಕುಮಟಾ: ಪ್ರಯಾಗರಾಜ್‌ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಭಾರತದ ಸುಮಾರು ೧೫ ಸಾವಿರ ನಾಗಾಸಾಧುಗಳು ಕೂಡಿ ಸನ್ಯಾಸಿ ಪರಂಪರೆಯಲ್ಲಿಯೇ ಮೊಟ್ಟಮೊದಲಬಾರಿಗೆ ಕರ್ನಾಟಕದ ಮದಲ ಮಂಡಲಾಧೀಶ್ವರರನ್ನಾಗಿ ಧರ್ಮಸ್ಥಳ ನಿತ್ಯಾನಂದನಗರ ಶ್ರೀರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾದೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಪಟ್ಟಾಭಿಷೇಕವನ್ನು ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಶ್ರೀಗಳಿಗೆ ಗೌರವ ಸಮರ್ಪಣೆಯೊಂದಿಗೆ ಗುರುನಮನ ಕಾರ್ಯಕ್ರಮವನ್ನು ಕುಮಟಾ ತಾಲೂಕಿನ ನಾಮಧಾರಿ ಸಭಾಭವನದಲ್ಲಿ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ ಶ್ರೀ ಗುರುಗಳಿಗೆ ನಾಮಧಾರಿ ಸಮಾಜದ ಪ್ರಮುಖರು ತುಳಸಿಮಾಲೆ ಹೂಹಾರವನ್ನು ಸಮರ್ಪಿಸಿ ಗೌರವದಿಂದ ಬರಮಾಡಿಕೊಂಡರು. ತಾಲೂಕಾ ನಾಮಧಾರಿ ಸಂಘದ ಅಧ್ಯಕ್ಷರಾದ ಮಂಜುನಾಥ ನಾಯ್ಕ ದಂಪತಿಗಳು ಗುರುಗಳ ಪಾದಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಪ್ರಾಸ್ಥಾವಿಕವಾಗಿ ಮಾತನಾಡಿದ ಶ್ರೀ ರಾಮ ಕ್ಷೇತ್ರ ಸೇವಾ ಸಮಿತಿ ಕುಮಟಾ ಇದರ ಸಂಚಾಲಕರಾದ ಆರ್.ಜಿ.ನಾಯ್ಕ ಅವರು ಮಾತನಾಡಿ ಕೇವಲ ಹದಿನೈದು ವರ್ಷಗಳಲ್ಲಿ ಶ್ರೀಗಳು ಉತ್ತರ ಪ್ರದೇಶದಲ್ಲಿ ಮಠ ಸ್ಥಾಪಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ದಕ್ಷಿಣ ಭಾರತದ ಸ್ವಾಮೀಜಿಯೊಬ್ಬರು ಉತ್ತರ ಭಾರತದ ಕಡೆ ಹಲವಾರು ಮಠಗಳನ್ನು ಸ್ಥಾಪಿಸಿರವುದು ಸಣ್ಣ ವಿಚಾರವಲ್ಲ. ಶ್ರೀಗಳು ಶೈಕ್ಷಣಿಕ, ಆಧ್ಯಾತ್ಮಿಕ ಆಲೋಚನೆ ಮೇರೆಗೆ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. 25 ಲಕ್ಷ ನಾಗಾಸಾಧುಗಳಲ್ಲಿ ಶ್ರೀಗಳು ಮಹಾಮಂಡಲೇಶ್ವರ 1008 ಪರಮೋಚ್ಚ ಹುದ್ದೆಯನ್ನು ಪಡೆದ ದೈವಿಕ ಶಕ್ತಿ ನಮ್ಮ ಶ್ರೀಗಳಾಗಿದ್ದಾರೆ.

ಆದ ಕಾರಣದಿಂದ ಕುಮಟಾ ಹಾಗೂ ಹೊನ್ನಾವರದ ಜನತೆಯ ಸಹಕಾರವನ್ನು ಪಡೆದುಕೊಂಡು ಮೊಟ್ಟಮೊದಲ ಚಾತುರ್ಮಾಸವನ್ನು ಕುಮಟಾದ ಕೋನಳ್ಳಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕುಮಟಾದಲ್ಲಿ ನಡೆಯುತ್ತಿರುವ ಶ್ರೀ ಗುರುಗಳ ಮೊಟ್ಟ ಮೊದಲ ಚಾತುರ್ಮಾಸವಾಗಿದ್ದರಿಂದ ಇದು ನಮ್ಮ ಮನೆಯ ಕಾರ್ಯಕ್ರಮವೆಂದು ತಿಳಿದು ಎಲ್ಲರೂ ಸಕ್ರೀಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕೊಂದು ವಿನಂತಿಸಿಕೊoಡರು.

ಈ ಸಂದರ್ಭದಲ್ಲಿ ಪ್ರಗತಿಪರ ರೈತರಾಗಿರುವ ಉತ್ತಮ ಕೃಷಿಕ ಪ್ರಶಸ್ತಿ ಪಡೆದಿರುವ ಕಾಗಾಲದ ನಾಗರಾಜ ನಾಯ್ಕ ದಂಪತಿಗಳನ್ನು ಶ್ರೀಗಳು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಆರ್ಶೀವಚನ ನೀಡಿದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಧ್ಯಾತ್ಮದಿಂದ ಆನಂದವನ್ನು ಪಡೆಯುವವರೇ ನಿಜವಾದ ಸನ್ಯಾಸಿಗಳು. 2 ತಿಂಗಳಿನಿoದ ಸರಿಯಾಗಿ ನಿದ್ದೆ ಮಾಡದೇ ನಿರಂತರ ಧ್ಯಾನ ತಪಸ್ಸುಗಳ ಮೂಲಕ ಸಾಧನೆ ಮಾಡಲಾಗಿದೆ. ಚಾತುರ್ಮಾಸ ಎಂದರೆ ಸಾಕ್ಷಾತ್ ಭಗವಂತನೇ ಭೂಮಿಗೆ ಬರುವ ಒಂದು ಸನ್ನಿವೇಶವಾಗಿದೆ. ಹಿಂದೆ ಮಹಾಭಾರತದ ಕಾಲದಿಂದಲೂ ಈ ಚಾತುರ್ಮಾಸ ವೃತಾಚರಣೆ ನಡೆದುಕೊಂಡು ಬಂದಿರುವುದರ ಬಗ್ಗೆ ಸಂಕ್ಷಿಪ್ತವಾಗಿ ವಿವರಣೆ ನೀಡಿದರು.

ಈ ಸಂದರ್ಭದಲ್ಲಿ ಕುಮಟಾ ಹೊನ್ನಾವರ ಶಾಸಕರಾದ ದಿನಕರ ಶೆಟ್ಟಿಯವರು ಆಗಮಿಸಿ ಶ್ರೀಗಳ ಆಶೀರ್ವಾದವನ್ನು ಪಡೆದುಕೊಂಡರು. ಉದ್ಯಮಿಗಳಾದ ಮುರಳೀಧರ ಪ್ರಭು, ನಾಮಧಾರಿ ಸಂಘದ ಪ್ರಮುಖರಾದ ಎಚ್.ಆರ್.ನಾಯ್ಕ, ಜೆಡಿಎಸ್ ಮುಖಂಡರಾದ ಸೂರಜ್ ನಾಯ್ಕ, ರತ್ನಾಕರ ನಾಯ್ಕ, ಸತೀಶ ನಾಯ್ಕ, ಯುವ ನಾಮಧಾರಿ ಸಂಘದ ಅಧ್ಯಕ್ಷ ರಾಜೇಶ ನಾಯ್ಕ, ಕಾರ್ಯದರ್ಶಿಗಳಾದ ರಾಘವೇಂದ್ರ ನಾಯ್ಕ, ಸಂತೋಷ ನಾಯ್ಕ, ವೈಭವ ನಾಯ್ಕ, ಸಂಘದ ನಿರ್ದೆಶಕರಾದ ಕಮಲಾಕರ ನಾಯ್ಕ, ಗಜಾನನ ನಾಯ್ಕ, ಸುರೇಶ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್ ದೀಪೇಶ ನಾಯ್ಕ ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ ಗುರುವಾರ, 10ರ ಶುಕ್ರವಾರ ಶ್ರೀಕ್ಷೇತ್ರ ಗೋಕರ್ಣಕ್ಕೆ ಆಗಮಿಸಲಿದೆ. ಏಪ್ರಿಲ್ 9 ರಂದು ರಥಬೀದಿಯಲ್ಲಿರುವ ರಾಮಚಂದ್ರ...

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್ ರವರು ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ’ ದಲ್ಲಿ ಹೇಳಿದರು....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...