Focus News

ಪ್ರತಿಭೆಗಳು ಶಿಕ್ಷಣ ಜೊತೆಗೆ ಸಂಸ್ಕಾರವoತರಾಗಬೇಕು: ನಿಶ್ಚಲಾನಂದನಾಥ ಸ್ವಾಮೀಜಿ

Share

ಕುಮಟಾ: ಶಿಕ್ಷಣ ಪಡೆಯುವುದು ಪ್ರತಿಯೊಬ್ಬ ವಿದ್ಯಾರ್ಥಿಗಳ ಹಕ್ಕು. ಅದಕ್ಕೆ ನೀರೆರೆದು ಪ್ರೋತ್ಸಾಹಿಸುವುದು ಪಾಲಕರ ಕರ್ತವ್ಯ. ಶೈಕ್ಷಣಿಕ ಸಾಧನೆ ಮಾಡಿದ ಪ್ರತಿಭೆಗಳು ಸಂಸ್ಕಾರವನ್ನು ರೂಢಿಸಿ ಕೊಂಡಾಗ ಮಾತ್ರ ಆ ಪ್ರತಿಭೆಗೆ ಒಂದು ಮೌಲ್ಯ ಇರುತ್ತದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಿರ್ಜಾನ್ ಶಾಖಾ ಮಠದ ಬ್ರಹ್ಮಚಾರಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ನುಡಿದರು.

ಅವರು ಹಾಲಕ್ಕಿ ಒಕ್ಕಲಿಗರ ಸಂಘ ಕುಮಟಾ ರವರು ಹಾಲಕ್ಕಿ ಒಕ್ಕಲಿಗರ ಸಮುದಾಯ ಭವನ ದೀವಗಿಯಲ್ಲಿ ಹಮ್ಮಿಕೊಂಡ ಕುಮಟಾ ಮತ್ತು ಹೊನ್ನಾವರ ತಾಲೂಕಿನ ಹಾಲಕ್ಕಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನ್ನಾಡುತ್ತಾ ಸಮಾಜದಲ್ಲಿ ಯಾರೂ ದಡ್ಡರಲ್ಲ, ಪ್ರತಿಯೊಂದು ಮಗುವಿನಲ್ಲೂ ಜ್ಞಾನ ಇದ್ದೇ ಇರುತ್ತದೆ. ಅದನ್ನು ಬೆಳಕಿಗೆ ತರುವ ಪ್ರಯತ್ನ ಶಿಕ್ಷಕರು, ಸುತ್ತನ ಸಮಾಜ, ಪಾಲಕ ಪೋಷಕರು ಮಾಡಬೇಕು.

ಹಾಲಕ್ಕಿ ಸಮಾಜದ ಅಂತಹ ಪ್ರತಿಭೆಗಳನ್ನು ಸಂಘವು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಈ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣ ಮತ್ತು ಅಭಿನಂದನೀಯವಾದುದು. ಇದರೊಂದಿಗೆ ಜಾನಪದ, ಸುಗ್ಗಿ ಕುಣಿತ, ನಾಟಿ ವೈದ್ಯ ಪದ್ಧತಿಯಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಿರುವುದು ಸಮಾಜದ ಬಗ್ಗೆ ಹೊಂದಿರುವ ಕಳಕಳಿ , ಕಾಳಜಿಯನ್ನು ಅನಾವರಣಗೊಳಿಸಿದೆ. ಪುರಸ್ಕಾರ ಸ್ವೀಕರಿಸಿದ ಪ್ರತಿಭೆಗಳು ಭವಿಷ್ಯದಲ್ಲಿ ಅದನ್ನು ಸಮಾಜಕ್ಕೆ ಹಿಂತಿರುಗಿಸುವ ನಿಟ್ಟಿನಲ್ಲಿ ಕಾರ್ಯವನ್ನು ಮುಂದಿನ ಪೀಳಿಗೆಗೆ ಅದು ಮಾದರಿಯಾಗುತ್ತದೆ ಎಂದು ಆಶೀರ್ವದಿಸಿದರು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಶಾಸಕ ದಿನಕರ ಶೆಟ್ಟಿಯವರು ಆಗಮಿಕಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ಸಂಘದ ಅಧ್ಯಕ್ಷ ಗೋವಿಂದ ಗೌಡರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸುಗ್ಗಿ ಕುಣಿತ ಕಲಾವಿದ ಗಣಪು ಬಡವಾ ಗೌಡ, ನಾಟಿ ವೈದ್ಯ ಸುಗ್ಗಿ ಕುಪ್ಪು ಗೌಡ, ಜಾನಪದ ಕಲಾವಿದೆ ಸೋಮ ಗಣಪು ಗೌಡ ರನ್ನು ಸನ್ಮಾನಿಸಲಾಯಿತು. 72 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.

ವೇದಿಕೆಯಲ್ಲಿ ಗ್ಯಾರಂಟಿ ಯೋಜನೆ ಅಧ್ಯಕ್ಷ ಅಶೋಕ್ ಗೌಡ, ಹೊನ್ನಾವರ ಪದವಿ ಪೂರ್ವ ಕಾಲೇಜು , ಪ್ರಾಂಶುಪಾಲ ರವಿ ಗೌಡ, ಹಾಲಕ್ಕಿ ನೌಕರ ಸಂಘದ ಅಧ್ಯಕ್ಷ ಜಂಗಾ ಗೌಡ, , ಹೊನ್ನಾವರ ಪಟ್ಟಣ ಪಂಚಾಯತ್ ಸದಸ್ಯ ಸುಬ್ರಾಯ ಗೌಡ ಉಪಸ್ಥಿತರಿದ್ದರು. ಶ್ರೀಧರ್ ಗೌಡ ಸ್ವಾಗತಿಸಿದರು.

ವಿಸ್ಮಯ ನ್ಯುಸ್, ಕುಮಟಾ

Share

Don't Miss

ಶಿರೂರು ಗುಡ್ಡ ಕುಸಿತ ದುರಂತ : ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ಧ ಪ್ರಣವಾನಂದ ಸ್ವಾಮೀಜಿ

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ದುರ್ಘಟನೆಗೆ ಸಂಬoಧಿಸಿದoತೆ ಅಂಕೋಲಾ ಪೊಲೀಸರು 8 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಶಿರೂರು ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಗುತ್ತಿಗೆ ಕಂಪನಿಯ ಬೇಜವಾಬ್ದಾರಿ...

ಭಟ್ಕಳದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ: 80ಕ್ಕೂ ಹೆಚ್ಚು ಜನರಿಂದ ರಕ್ತದಾನ

ಭಟ್ಕಳ: ಪುನಿತ್ ರಾಜಕುಮಾರು ಬದುಕಿದ ರೀತಿ ನಿಜಕ್ಕೂ ಎಲ್ಲರಿಗೂ ಆದರ್ಶಪ್ರಾಯ. ಅವರು ಮಾಡಿರುವ ಸಾಮಾಜಿಕ ಕಾರ್ಯಗಳು ಅದರಲ್ಲೂ ಬಲಗೈಯಲ್ಲಿ ಕೊಟ್ಟದ್ದು ಎಡಗೈಗೂ ಗೊತ್ತಾಗದಂತೆ ಅದನ್ನು ನಿಭಾಯಿಸಿದ ರೀತಿ ನಿಜಕ್ಕೂ ಅನನ್ಯ. ಇಂತಹ...

ಸಿಐಡಿ ಡಿವೈಎಸ್ಪಿಯಾಗಿ ಎಚ್ ಜಯರಾಜಗೆ ಪದೋನ್ನತಿ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆಗೆ ಹೊಸ ಭಾಷ್ಯವನ್ನು ಬರೆಯುವ ಮೂಲಕ ಜನರ ನಡುವೆ ಬೆರೆಯುವ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡು ಸಮಾಜಘಾತುಕ...

ವಿಶ್ವಜಲ ದಿನ ಆಚರಣೆ: ಸಾರ್ವಜನಿಕರಿಗೆ ಕಾನೂನು ಅರಿವು ಕಾರ್ಯಕ್ರಮ

ಹೊನ್ನಾವರ: ವಿಶ್ವ ಜಲ ದಿನ” ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಗಿಡಕ್ಕೆ ನೀರೆರಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ, ಜೆ.ಎಂ.ಎಫ್.ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ...

ಜನಸಾಮಾನ್ಯರ ಆರ್ಥಿಕ ಮಟ್ಟ ಏರಿಸುವ ಉದ್ದೇಶದಿಂದ ಗ್ಯಾರಂಟಿ ಯೋಜನೆ ಜಾರಿ: ಜಿಲ್ಲಾಧ್ಯಕ್ಷ ಸಾಯಿ ಗಾವಂಕರ್

ಭಟ್ಕಳ: ಕಾಂಗ್ರೇಸ್ ಪಕ್ಷ ಕೇವಲ ಚುನಾವಣೆ ಗೆಲ್ಲುವ ಉದ್ದೇಶದಿಂದ ಗ್ಯಾರಂಟಿ ಯೋಜನೆಯನ್ನು ಹೊರತರಲಿಲ್ಲ. ಬದಲಾಗಿ ಜನಸಾಮಾನ್ಯರ ಆರ್ಥಿಕ ಮಟ್ಟವನ್ನು ಏರಿಸುವ ನಿಟ್ಟಿನಲ್ಲಿ ಹಾಗೂ ಜನರಲ್ಲಿ ಕೊಳ್ಳುವಿಕೆಯ ಶಕ್ತಿಯನ್ನು ಹೆಚ್ಚಿಸಿ ಆರ್ಥಿಕ ಚೈತನ್ಯಕ್ಕೆ...

ಶಿರೂರು ಗುಡ್ಡ ಕುಸಿತ ದುರಂತ : ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ಧ ಪ್ರಣವಾನಂದ ಸ್ವಾಮೀಜಿ

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ದುರ್ಘಟನೆಗೆ ಸಂಬoಧಿಸಿದoತೆ ಅಂಕೋಲಾ ಪೊಲೀಸರು 8 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಶಿರೂರು ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಗುತ್ತಿಗೆ ಕಂಪನಿಯ ಬೇಜವಾಬ್ದಾರಿ...

Related Articles

ಸಂಗೀತ ತಾಳ ವಾದ್ಯ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ

ಸಿದ್ದಾಪುರ: ಡಾಕ್ಟರ್ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯದವರು ನಡೆಸಿದ ಸಂಗೀತ ತಾಳ ವಾದ್ಯ ಪರೀಕ್ಷೆಯಲ್ಲಿ ಸಿದ್ದಾಪುರ ತಾಲೂಕಿನ...

ಪ್ಲಾಸ್ಟಿಕ್ ವಸ್ತು ಬಳಕೆ: ದಂಡ ವಿಧಿಸಿ ಎಚ್ಚರಿಕೆ

ದಾಂಡೇಲಿ; ಕೇಂದ್ರ ಮತ್ತು ರಾಜ್ಯ ಸರ್ಕಾರವು ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಿದ್ದರೂ ಸಹ ಕೆಲವು ಕಡೆಗಳಲ್ಲಿ...

ಪ್ರಗತಿ ವಿದ್ಯಾಲಯದಲ್ಲಿ ಅರ್ಥಪೂರ್ಣವಾಗಿ ಆಚರಣೆಗೊಂಡ “ವಿಜ್ಞಾನ ದಿನ”

ಕುಮಟಾ: ಭಾರತದ ಶ್ರೇಷ್ಠ ವಿಜ್ಞಾನಿ ಸರ್ ಸಿ. ವಿ. ರಾಮನ್ ಅವರ ನೊಬೆಲ್ ಪುರಸ್ಕಾರ ಪಡೆದಂತ...

ಶ್ರೀ ಸಂಸ್ಥಾನ ತರಳಿಮಠದಲ್ಲಿ ನೂತನ ಶಿವಾಲಯ ಲೋಕಾರ್ಪಣೆ

ಸಿದ್ದಾಪುರ: ಶ್ರೀ ಸಂಸ್ಥಾನ ತರಳಿಮಠದಲ್ಲಿ ನೂತನ ವಾಗಿ ನಿರ್ಮಾಣ ಗೊಂಡ ಶಿವಾಲಯದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು....