Important

ಅಂಕೋಲಾದಲ್ಲಿ ಬೆಳಂಬಾರ ಹಾಲಕ್ಕಿಗಳ ಸುಗ್ಗಿ ಸಂಭ್ರಮ : ವಿಶೇಷ ವೇಷಭೂಷಣ, ಹಗರಣ ಪ್ರದರ್ಶನಕ್ಕೆ ಸಿದ್ಧತೆ

Share

ಅಂಕೋಲಾ: ನಾಡಿನ ಸಾಂಪ್ರದಾಯಿಕ ಮತ್ತು ಜನಪದ ಕಲಾ ಪ್ರಕಾರಗಳಲ್ಲಿ ಸುಗ್ಗಿಗೆ ತನ್ನದೇ ಆದ ಪ್ರಾಮುಖ್ಯತೆ ಇದ್ದು,ಕರಾವಳಿ ಜಿಲ್ಲೆಯ ಹಲವೆಡೆ ಸುಗ್ಗಿ ಮತ್ತು ಹೋಳಿ ಸಂಭ್ರಮ ಜೋರಾಗುತ್ತಿದೆ. ಅಂಕೋಲಾ ತಾಲೂಕಿನ ಮಟ್ಟಿಗೆ ಹೇಳುವುದಾದರೆ ತಾಲೂಕಿನ ವಿವಿಧಡೆ ನೆಲೆಸಿರುವ ಹಾಲಕ್ಕಿಗಳು, ಕೋಮಾರಪಂತರು, ನಾಮಧಾರಿಗಳು, ಹಳ್ಳೇರರು ಮತ್ತಿತರರು,ತಮ್ಮ ಸಂಪ್ರದಾಯದoತೆ ಆಯಾ ಆಯಾ ಭಾಗಗಳಲ್ಲಿ ನಿಗದಿಪಡಿಸಿಕೊಂಡ ವರ್ಷಗಳಂದು, ಆಗಾಗ ಸುಗ್ಗಿ ಕುಣಿತ ಪ್ರದರ್ಶಿಸುತ್ತಲೇ ಇರುತ್ತಾರೆ. ಈ ವರ್ಷ ಹೊನ್ನೆಬೈಲ್ ನ ಹಾಲಕ್ಕಿಗಳು , ಬಬ್ರುವಾಡದ ನಾಮಧಾರಿಗಳ ಸುಗ್ಗಿ ಹಿಗ್ಗು ಕಂಡುಬoದಿದೆ.

ಬ್ರಿಟಿಷ್ ಕಾಲದಲ್ಲೇ ತಾಮ್ರಪಟ ಗೌರವ ಪಡೆದ ನಾಡಿನ ಏಕೈಕ ಸುಗ್ಗಿ ತಂಡ

ಈ ನಡುವೆ ಬೆಳಂಬಾರದ ಹಾಲಕ್ಕಿಗಳ ಸುಗ್ಗಿ ಸಂಭ್ರಮ ಪ್ರತಿ ವರ್ಷ ಮುಂದುವರೆದುಕೊoಡು ಬಂದಿದೆ. . ಅಷ್ಟೇ ಅಲ್ಲದೇ ಈ ಸುಗ್ಗಿ ತಂಡ ಮತ್ತು ದೈವ ಮಹಿಮೆಗೆ ಅಂದಿನ ಬ್ರಿಟಿಷ್ ಆಡಳಿತವೇ ತಲೆ ಬಾಗಿ, ತದನಂತರ ಸರ್ಕಾರದ ಪರವಾಗಿ ತಾಮ್ರ ಪತ್ರ ನೀಡಿ, ಹೋಳಿ ಹುಣ್ಣಿಮೆ ದಿನ ಬ್ರಿಟಿಷ್ ತಹಸೀಲ್ದಾರ್ ಅವರಿಂದ,ಪ್ರತಿ ವರ್ಷ ತಾಲೂಕ ಕಚೇರಿಗೆ ಮೆರವಣಿಗೆ ಮೂಲಕ ಬಂದು ಹೋಗಲು ವಿನಂತಿ ಮಾಡಿರುವುದು ಈ ಸುಗ್ಗಿ ತಂಡದ ಐತಿಹಾಸಿಕ ಮಹತ್ವವನ್ನು ಎತ್ತಿ ತೋರಿಸುವಂತಿದೆ.

ಅoದಿನಿoದ ಇಂದಿನವರೆಗೆ ಈ ಸಂಪ್ರದಾಯ ಮುಂದುವರೆದುಕೊoಡು ಬಂದಿದ್ದು ಸರ್ಕಾರದಿಂದ ಅಧಿಕೃತ ಗೌರವವನ್ನು ಪಡೆಯುತ್ತಿರುವ ನಾಡಿನ ಏಕೈಕ ಸುಗ್ಗಿ ತಂಡ ಎಂಬ ಹಿರಿಮೆಯೂ ಈ ತಂಡಕ್ಕೆ ಇದೆ. ಈ ವರ್ಷ ಮಾರ್ಚ್ 13ರ ಗುರುವಾರ ಸಾಯಂಕಾಲ 4 ಗಂಟೆಯಿoದ ಅಂಕೋಲಾ ಪಟ್ಟಣ ವ್ಯಾಪ್ತಿಯಲ್ಲಿ ಬೆಳಂಬಾರ ಸುಗ್ಗಿ ತಂಡದ ಮೆರವಣಿಗೆ ಕಾಣಬಹುದಾಗಿದ್ದು,ಕೊನೆಯಲ್ಲಿ ತಹಶೀಲ್ದಾರ್ ಕಚೇರಿಯ ಗೋಡೆ ಗಣಪತಿ ಪಕ್ಕದ ಆವರಣದಲ್ಲಿ ವಿಶೇಷ ಕುಣಿತ ಪ್ರದರ್ಶಿಸಿ ಅಲ್ಲಿ ತಾಲೂಕ ಆಡಳಿತದಿಂದ ತಸ್ಥಿಕ್ ಗೌರವ ಸ್ವೀಕರಿಸಲಿದೆ. ಬಳಿಕ ಪೊಲೀಸ್ ಠಾಣೆಯಲ್ಲೂ ವಿಶೇಷ ಪ್ರದರ್ಶನ ನೀಡಲಿದೆ.

ಅದಕ್ಕಾಗಿ ಈಗಾಗಲೇ ತಾಲೂಕಾಡಳಿತ ಮತ್ತು ಪೊಲೀಸ್ ಇಲಾಖೆ ಪೂರ್ವಭಾವಿ ಸಭೆ ಕರೆದು ಸಿದ್ಧತೆ ಕೈಗೊಂಡಿದೆ. ಸುಗ್ಗಿ ತಂಡದ ಜೊತೆ ವಿವಿಧ ವೇಷ ಭೂಷಣಗಳು ಮೆರವಣಿಗೆಯ ಅಂದ ಹೆಚ್ಚಿಸಲಿದ್ದು,ಸಾಮಾಜಿಕ, ರಾಜಕೀಯ ಹಾಗೂ ಇತರೆ ವಿಭಾಗಗಳ ವಿಡಂಬನೆ,ಜನಜಾಗ್ರತಿ , ಪೌರಾಣಿಕ ಮತ್ತಿತರ ಸನ್ನಿವೇಶಗಳನ್ನು ಪ್ರದರ್ಶಿಸುವ ಸ್ಥಳೀಯರ ಈ ಸಂಪ್ರದಾಯ ಹಗರಣ ಎಂದೇ ಖ್ಯಾತವಾಗಿದೆ. ಇವನ್ನೆಲ್ಲ ನೋಡಲೆಂದೇ ದೇಶ ವಿದೇಶಗಳಲ್ಲಿ ನೆಲೆಸಿರುವ ಸಾವಿರಾರು ಜನ ಕುತೂಹಲದಿಂದ ಕಾಯುತ್ತಿರುತ್ತಾರೆ., ಮಾರ್ಚ್ 13ರ ಗುರುವಾರ ಅಂಕೋಲಾ ಪಟ್ಟಣ ಜನಜಂಗುಳಿಯಿoದ ಕೂಡಿರಲಿದ್ದು,ಸುಗ್ಗಿ ಸಂಭ್ರಮಕ್ಕೆ ಸಾಕ್ಷಿಯಾಗಿದೆ.

ಜನಪದ ಕಲೆಯ ಮೆರಗಿನೊಂದಿಗೆ,ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವ ಸಾರುವ,ಪ್ರಸ್ತುತ ವಿದ್ಯಮಾನಗಳು ಸೇರಿದಂತೆ ವಿವಿಧ ಕಾಲಘಟ್ಟದ ಪ್ರಮುಖ ಸನ್ನಿವೇಶಗಳ ಪ್ರದರ್ಶನಕ್ಕೆ ಬೆಳಂಬರ ಹಾಲಕ್ಕಿಗಳ ಸುಗ್ಗಿ ತಂಡ ಸಿದ್ಧತೆ ನಡೆಸಿದ್ದು,ಊರ ಗೌಡರಾದ ಷಣ್ಣು ಖ ಗೌಡ ಹಾಗೂ ಸುಗ್ಗಿ ತಂಡದ ಪ್ರಮುಖರು ಮತ್ತು ಬೆಳಂಬಾರ ಊರ ನಾಗರಿಕರು ಸರ್ವರ ಸಹಕಾರ ಕೋರಿದ್ದಾರೆ. ಹಾಲಕ್ಕಿ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಹನುಮಂತ ಗೌಡ ಚುಟುಕಾಗಿ ಮಾತನಾಡಿ, ಹಾಲಕ್ಕಿ ಸುಗ್ಗಿ ಸಂಪ್ರದಾಯದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ, ಸಮಾಜದ ಪರವಾಗಿ ಸರ್ವರಿಗೂ ಸ್ವಾಗತ ಕೋರಿದ್ದಾರೆ

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ ತರಬಹುದು,ಇಂತಹದೊoದು ಪ್ರಕೃತಿ ವಿಸ್ಮಯ ನಡೆದದ್ದು ದೂರದಲ್ಲೆಲ್ಲೋ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ...

ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗೆ ಸರ್ಚ್ ವಾರೆಂಟ್ ಮೇಲೆ ಬಂದ ಲೋಕಾಯುಕ್ತರ ತಂಡ : ಯಾಕೆ ನೋಡಿ?

ಅಂಕೋಲಾ‌ : ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮುಂತಾದ ಕೆಲಸಗಳಲ್ಲಿ ಅನಗತ್ಯ ವಿಳಂಬ ಮತ್ತು ಏಜೆಂಟರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ...

ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶೀ ಮೇಳ: ಅಕ್ಟೋಬರ್ 7, 8,9 ರಂದು ಆಯೋಜನೆ

ಅಂಕೋಲಾ : ರಾಘವೇಂದ್ರ ಇವೆಂಟ್ಸ್ ಅಂಕೋಲಾ ಹಾಗೂ ಬೆನಕ ಇವೆಂಟ್ಸ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ...

ಸೇವಾಪರ್ವ ವಿಕಸಿತ ಭಾರತ ವಿಷಯಾಧಾರಿತ ಪೇಟಿಂಗ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದರ್ಶನ ನಾಯ್ಕ

ಭಟ್ಕಳ: ಕೇಂದ್ರ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ತಂಜಾವೂರು ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ವಿಕ್ಷಿತ್ ಭಾರತ್...

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ...

ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಹೊನ್ನಾವರ ಇದರ ವಾರ್ಷಿಕ ಸರ್ವ ಸಾಧಾರಣ

ಹೊನ್ನಾವರ : ಇಲ್ಲಿನ ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ...

ಮಾನವೀಯತೆಯ ದೀಪ ಬೆಳಗಿಸಿದ ನೇತ್ರದಾನಿ ಕೃಷ್ಣ ನಾಯ್ಕ ಅಮರ

ಕುಮಟಾ : ತಾಲೂಕಿನ ಧಾರೇಶ್ವರ ಹೋಬಳಿ ಹರನೀರು ತುದಿಮನೆ ನಿವಾಸಿ ಕೃಷ್ಣ ನಾರಾಯಣ ನಾಯ್ಕ (77...

ಬಸ್ ಗೆ ಡಿಕ್ಕಿ ಹೊಡೆದ ಲಾರಿ : ಸ್ಟೇರಿಂಗ್ ಮಧ್ಯ ಸಿಲುಕಿದ ಲಾರಿ ಚಾಲಕ ಸಾವು: ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ನಿಧನ

ಅಂಕೋಲಾ: ಟ್ಯಾಂಕರ್ ಲಾರಿ ಮತ್ತು ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಹೃದಯದಾಕಾರದ ಮುಖದ ಗೂಬೆ: ಶಾಲೆಗೆ ಬಂತು ಗುಮ್ಮ

ಅಂಕೋಲಾ: ಮಕ್ಕಳು ಊಟ, ತಿಂಡಿ, ನಿದ್ದೆ ಸರಿಯಾಗಿ ಮಾಡದಿದ್ದರೆ ಅಥವಾ ಬೇರೆ ಕಾರಣದಿಂದ ಹಠ ಹಿಡಿದರೆ...