Big News

ಅಂಕೋಲಾದಲ್ಲಿ ಬೆಳಂಬಾರ ಸುಗ್ಗಿ ವೈಭವ: ಭರ್ಜರಿ ರೋಡ್ ಶೋ ನಡೆಸಿ ವಿಶೇಷ ಪ್ರದರ್ಶನ

Share

ಅಂಕೋಲಾ: ನಾಡಿನ ಸಾಂಪ್ರದಾಯಿಕ ಮತ್ತು ಜನಪದ ಕಲಾ ಪ್ರಕಾರಗಳಲ್ಲಿ ಸುಗ್ಗಿಗೆ ತನ್ನದೇ ಆದ ಪ್ರಾಮುಖ್ಯತೆ ಇದ್ದು, ಕನ್ನಡ ಕರಾವಳಿ ಜಿಲ್ಲೆಯ ಹಲವೆಡೆ ಸುಗ್ಗಿ ಮತ್ತು ಹೋಳಿ ಸಂಭ್ರಮ ಜೋರಾಗಿದೆ.ಅಂಕೋಲಾ ತಾಲೂಕಿನಲ್ಲಿ ನೆಲೆಸಿರುವ ಹಾಲಕ್ಕಿಗಳು, ಕೋಮಾರಪಂತರು, ನಾಮಧಾರಿಗಳು, ಹಳ್ಳೇರರು ಮತ್ತಿತರರು,ತಮ್ಮ ಸಂಪ್ರದಾಯದoತೆ ಆಯಾ ಆಯಾ ಭಾಗಗಳಲ್ಲಿ ನಿಗದಿಪಡಿಸಿಕೊಂಡ ವರ್ಷಗಳಂದು, ಆಗಾಗ ಸುಗ್ಗಿ ಕುಣಿತ ಪ್ರದರ್ಶಿಸುತ್ತಲೇ ಇರುತ್ತಾರೆ. ಆದರೆ ಬೆಳಂಬಾರದ ಹಾಲಕ್ಕಿಗಳ ಸುಗ್ಗಿ ಸಂಭ್ರಮ ಮಾತ್ರ ಅನಾದಿ ಕಾಲದಿಂದಲೂ ಪ್ರತಿ ವರ್ಷ ಮುಂದುವರೆದುಕೊoಡು ಬಂದಿದೆ.

ಅಷ್ಟೇ ಅಲ್ಲದೇ ಈ ಸುಗ್ಗಿ ತಂಡ ಮತ್ತು ದೈವ ಮಹಿಮೆಗೆ ಅಂದಿನ ಬ್ರಿಟಿಷ್ ಆಡಳಿತವೇ ತಲೆ ಬಾಗಿ, ತದನಂತರ ಸರ್ಕಾರದ ಪರವಾಗಿ ತಾಮ್ರ ಪತ್ರ ನೀಡಿ, ಹೋಳಿ ಹುಣ್ಣಿಮೆ ದಿನ ಬ್ರಿಟಿಷ್ ತಹಸೀಲ್ದಾರ್ ಅವರಿಂದ,ಪ್ರತಿ ವರ್ಷ ತಾಲೂಕ ಕಚೇರಿಗೆ ಮೆರವಣಿಗೆ ಮೂಲಕ ಬಂದು ಹೋಗಲು ವಿನಂತಿ ಮಾಡಿರುವುದು ಈ ಸುಗ್ಗಿ ತಂಡದ ಐತಿಹಾಸಿಕ ಮಹತ್ವವನ್ನು ಎತ್ತಿ ತೋರಿಸುವಂತಿದೆ.ಅoದಿನಿoದ ಇಂದಿನವರೆಗೆ ಈ ಸಂಪ್ರದಾಯ ಮುಂದುವರೆದುಕೊAಡು ಬಂದಿದ್ದು ಸರ್ಕಾರದಿಂದ ಅಧಿಕೃತ ಗೌರವವನ್ನು ಪಡೆಯುತ್ತಿರುವ ನಾಡಿನ ಏಕೈಕ ಸುಗ್ಗಿ ತಂಡ ಎಂಬ ಹಿರಿಮೆಯೂ ಈ ತಂಡಕ್ಕೆ ಇದೆ. ಈ ವರ್ಷ ಮಾರ್ಚ್ 13 ರ ಗುರುವಾರದಂದು ಸಾಯಂಕಾಲ ಅಂಕೋಲಾ ಪಟ್ಟಣ ವ್ಯಾಪ್ತಿಯಲ್ಲಿ ಬೆಳಂಬಾರ ಸುಗ್ಗಿ ತಂಡದ ಮೆರವಣಿಗೆ ಅದ್ದೂರಿಯಾಗಿ ಮತ್ತು ವೈಶಿಷ್ಟ ಪೂರ್ಣವಾಗಿ ನಡೆಯಿತು.

ಈ ವರ್ಷದ ಸುಗ್ಗಿ ಹಗರಣದಲ್ಲಿ ಶಿರೂರು ಗುಡ್ಡ ಕುಸಿತ ದುರಂತದ ಬಳಿಕ ಈ ವರೆಗೂ ಗುಗಾವಳಿ ನದಿಯಲ್ಲಿ ರಾಶಿ ಬಿದ್ದಿರುವ ಮಣ್ಣು ತೆರವುಗೊಳಿಸದಿರುವುದು , ಉಳುವರೆ ಸಂತ್ರಸ್ಥರಿಗೆ ಸರಿಯಾಗಿ ಪುನರ್ವಸತಿ ಕಲ್ಪಿಸದಿರುವುದು ಮತ್ತು ಅದರಿಂದ ಸ್ಥಳೀಯರು ಈಗ ಪಡುತ್ತಿರುವ ಪರಿಪಾಟಲು ಮತ್ತು ಮುಂಬರುವ ಮಳೆಗಾಲದಲ್ಲಿ ಮತ್ತೆ ಎದುರಾಗಲಿರುವ ಅತಂಕದ ಕುರಿತು ಒತ್ತಿ ಹೇಳಲಾಯಿತು. ಪ್ರಮುಖ ಇನ್ನೊಂದು ಪ್ರದರ್ಶನದ ಮೂಲಕ ಜನ ವಿರೋಧಿ ಕೇಣಿ ವಾಣಿಜ್ಯ ಬಂದರು ನಿರ್ಮಿಸುವ ಬದಲು ಜನರ ಜೀವ ಉಳಿಸುವ ಮಲ್ಟಿ ಸ್ಥೆಶಾಲಿಟಿ ಆಸ್ಪತ್ರೆ ನಿರ್ಮಿಸಿ ಎಂಬ ಜನಾಗ್ರಹದ ಕುರಿತು ತಿಳಿಸಲಾಯಿತು. ಕೃಷ್ಣ ಗೆಳೆಯರ ಬಳಗ ದವರು ಪ್ರದರ್ಶಿಸಿದ ದಕ್ಷ ಯಜ್ಞ ಪೌರಾಣಿಕ ರೂಪಕ ಜನವೆಚ್ಚುಗೆ ಗಳಿಸಿತು.

ಶಾಸಕ ಸತೀಶ್ ಸೈಲ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಬಹು ಹೊತ್ತು ಹಗರಣಗಳನ್ನು ವೀಕ್ಷಿಸಿ , ತಾವು ಸಹ ಕೆಲವರೊಂದಿಗೆ ಪೋಟೋ ಕ್ಲಿಕ್ಕಿಸಿಕೊಂಡು , ಪ್ರದರ್ಶನಕಾರರ ಪ್ರಯತ್ನಕ್ಕೆ ಮತ್ತು ಕಲೆಗೆ ಮೆಚ್ಚುಗೆ ಸೂಚಿಸಿದರು. ಈ ಹಿಂದೆಯೂ ಹಲವು ಬಾರಿ ಹಾಲಕ್ಕಿ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಿದ್ದ ಸ್ಯೆಲ್ ಅವರು, ಈ ಬಾರಿಯೂ ಮತ್ತೆ ಸುಗ್ಗಿ ಸಂಭ್ರಮದಲ್ಲಿ ಪಾಲ್ಗೊಂಡು,ಬಹು ಹೊತ್ತು ವೀಕ್ಷಿಸಿ ಬೆಳಂಬಾರ ಹಾಲಕ್ಕಿ ಸುಗ್ಗಿಯ ಮಹತ್ವದ ಕುರಿತು ಹೇಳಿ, ಸರ್ವರಿಗೂ ಹೋಳಿ ಶುಭ ತರಲಿ ಎಂದು ಪ್ರಾರ್ಥಿಸಿದರು
ಹಗರಣಗಳ ಪ್ರದರ್ಶನದ ಬಳಿಕ ಕೊನೆಯಲ್ಲಿ ರಾಜಗಾಂಭೀರ್ಯದೊoದಿಗೆ ಬೆಳಂಬಾರ ಸುಗ್ಗಿ ಮೇಳ ತಹಶೀಲ್ದಾರ್ ಕಚೇರಿಯ ಆವರಣಕ್ಕೆ ಎಂಟ್ರಿ ನೀಡಿತು. ಅಲ್ಲಿ ಗೋಡೆ ಗಣಪತಿ ದೇವರ ಎದುರಿನ ಆವರಣದಲ್ಲಿ ಕೈಯಲ್ಲಿ ನವಿಲು ಗರಿಯಳ್ಳ ಕುಂಚ ಹಿಡಿದು,ಜನಪದ ವಾದ್ಯ ಹಾಗೂ ಚೊ ಹೋ ಚೆ ಹಾಡಿಗೆ ತಕ್ಕಂತೆ ಹೆಜ್ಜೆ ಹಾಕಿದ ಬಣ್ಣ ಬಣ್ಣದ ತುರಾಯಿ ಧರಿಸಿದ ಸುಗ್ಗಿ ತಂಡ ವಿಶೇಷ ಕುಣಿತ ಪ್ರದರ್ಶಿಸಿ ಅಲ್ಲಿ ತಾಲೂಕ ಆಡಳಿತದಿಂದ ತಸ್ಥಿಕ್ ಗೌರವ ಸ್ವೀಕರಿಸಿತು.

ತಾಲೂಕಾಡಳಿತದ ಪರವಾಗಿ ತಹಶೀಲ್ದಾರ ಕಾರ್ಯಾಲಯದ ಅಧಿಕಾರಿಗಳು ಗೌರವ ಸಮರ್ಪಿಸಿದರು. ಬೆಳಂಬಾರ ಊರಗೌಡರಾದ ಷಣ್ಮುಖ ಗೌಡ , ಸುಗ್ಗಿ ತಂಡದ ಪ್ರಮುಖರಾದ ವಸಂತ ಗೌಡ , ಹಾಲಕ್ಕಿ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಹನುಮಂತ ಗೌಡ ಮತ್ತಿತರ ಪ್ರಮುಖರು ತಮ್ಮ ಸುಗ್ಗಿ ಸಂಪ್ರದಾಯ ನಡೆದು ಬಂದ ದಾರಿಯ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಗಳಿಗೆ ತಿಳಿಸಿ, ಬ್ರಿಟಿಷ್ ಕಾಲದಲ್ಲಿ ನೀಡಿದ ತಾಮ್ರ ಪತ್ರ ಗೌರವದ ಇತಿಹಾಸ ಸ್ಮರಿಸಿ ಆ ಬಳಿಕ ಕರ್ನಾಟಕ ಸರ್ಕಾರದಿಂದ ನೀಡಿದ ತಾಮ್ರ ಪತ್ರ ತಮ್ಮ ಬಳಿ ಇರುವುದನ್ನು ತೋರಿಸಿ ಹೆಮ್ಮೆ ವ್ಯಕ್ತಪಡಿಸಿದರು. ಎಸ್ಪಿ ನಾರಾಯಣ ಎಂ ಮಾತನಾಡಿ ಜನಪದ ಕಲೆಯಾದ ಸುಗ್ಗಿ ಸಂಪ್ರದಾಯ ಹಾಗೂ ಬೆಳಂಬಾಲ ಹಾಲಕ್ಕಿ ಜನರ ಸಂಘಟನೆ ಬಗ್ಗೆ ಮೆಚ್ಚುಗೆ ಸೂಚಿಸಿದರು.

ನಂತರ ಇದೇ ಸುಗ್ಗಿ ತಂಡ ಪಕ್ಕದ ಪೊಲೀಸ್ ಠಾಣೆ ಎದುರು ಕುಣಿತ ಪ್ರದರ್ಶಿಸಿತು. ಪೊಲೀಸ್ ಇಲಾಖೆ ವತಿಯಿಂದ ಸುಗ್ಗಿ ತಂಡಕ್ಕೆ ಗೌರವ ನೀಡಲಾಯಿತು. ಬಳಿಕ ಎಸ್ಪಿ ಎಂ ನಾರಾಯಣ , ಡಿವೈಎಸ್ಪಿ ಗಿರೀಶ,ಅಂಕೋಲಾ ಠಾಣೆ ಸಿಪಿಐ ಚಂದ್ರಶೇಖರ ಮಠಪತಿ, ಶಾಸಕ ಸತೀಶ ಸೈಲ್ ಇವರ ತಲೆಯ ಮೇಲೂ ಸಾಂಕೇತಿಕವಾಗಿ ಸುಗ್ಗಿ ತುರಾಯಿ ಇಟ್ಟು, ಸುಗ್ಗಿ ತಂಡದವರು ಪ್ರೀತಿ- ಗೌರವ ಹಂಚಿಕೊAಡರು. ಪಿ ಎಸೈ ಹಾಗೂ ಠಾಣಾ ಸಿಬ್ಬಂದಿಗಳಿದ್ದರು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಟಿ.ಕೆ ಲೇಔಟ್ ತರಳಬಾಳು ಫ್ರೌಡಶಾಲಾ ವಿದ್ಯಾರ್ಥಿಗಳು ಜೋಗ್ ಫಾಲ್ಸ್ ಪ್ರವಾಸ ಮುಗಿಸಿ...

ತಗ್ಗು ಪ್ರದೇಶದಲ್ಲಿ ಪಲ್ಟಿಯಾದ ಸಾರಿಗೆ ಸಂಸ್ಥೆ ಬಸ್ : ಚಾಲಕ, ನಿರ್ವಾಹಕ , ಪುಟಾಣಿ ಮಗು ಸೇರಿ 26 ಕ್ಕೂ ಹೆಚ್ಚು ಜನರಿಗೆ ಗಾಯ – ನೋವು

ಅಂಕೋಲಾ: ಸಾರಿಗೆ ಸಂಸ್ಥೆಯ ಬಸ್ ಒಂದು ಪಲ್ಟಿಯಾಗಿ ಚಾಲಕ , ನಿರ್ವಾಹಕ, ಪುಟ್ಟ ಮಗು ಹಾಗೂ ಇತರೆ ಪ್ರಯಾಣಿಕರೂ ಸೇರಿ ಸುಮಾರು 26ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಸುಂಕಸಾಳ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಅಂಕೋಲಾದಲ್ಲಿ ಕರಾಳ ದಿನಾಚರಣೆ ಮತ್ತು ಬಂದ್ ಗೆ ಕರೆ

ಅಂಕೋಲಾ: ಕೇಣಿ ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ನವೆಂಬರ್ 15ರಂದು ಒಂದು ವರ್ಷವಾಗಲಿದ್ದು...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು...

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ...

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ...

ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ : ಆರೋಪಿ ಬಂಧನ

ಅಂಕೋಲಾ: ಪಟ್ಟಣದಲ್ಲಿ ನಿಲ್ಲಿಸಿಟ್ಟ ಮೋಟಾರ್ ಬೈಕ್ ಕಳ್ಳತನ ಮಾಡಿದ್ದ ಆರೋಪಿತನನ್ನು ಅಂಕೋಲಾ ಪೊಲೀಸರು ವಾಹನ ಸಮೇತ...

ರಾಷ್ಟ್ರೀಯ ಮೆಗಾ ಲೋಕ ಅದಾಲತ್ ನಲ್ಲಿ ಒಟ್ಟೂ 167 ಪ್ರಕರಣಗಳು ರಾಜೀ ಸಂಧಾನದಲ್ಲಿ ಇತ್ಯರ್ಥ

ಅಂಕೋಲಾ: ತಾಲೂಕಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಸೆ 13 ರ ಶನಿವಾರ...

ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ ಶಿಕ್ಷಕ ದಿನಾಚರಣೆ: ಶಿಕ್ಷಕ ರಾಷ್ಟ್ರ ರಕ್ಷಕ ಕಾರ್ಯಕ್ರಮ

ಕುಮಟಾ: ತಾಯಿ ಮಗುವಿಗೆ ಜನ್ಮ ನೀಡುತ್ತಾಳೆ, ಶಿಕ್ಷಕ ಆ ಮಗುವಿಗೆ ಜ್ಞಾನ ನೀಡಿ ಕಣ್ತೆರೆಯಿಸಿ ಒಳ್ಳೆಯ...