Important

ಸೇತುವೆ ಮಧ್ಯಭಾಗದಲ್ಲಿ ದೊಡ್ಡ ಹೊಂಡ, ಕಬ್ಬಿಣದ ಪಟ್ಟಿಗಳಿಗೆ ತುಕ್ಕು : ನಿರ್ವಹಣೆ ಇಲ್ಲದೆ ಸೊರಗಿಹೋದ ತೂಗುಸೇತುವೆ

Share

ಹೊನ್ನಾವರ: ತಾಲೂಕಿನ ಈ ಸೇತುವೆ ಯಾವಾಗ ಕುಸಿಯಬಹುದೋ ಅನ್ನೋ ತರ ಇದೆ. ಹೌದು, ತಾಲೂಕಿನಲ್ಲೇ ಮೊದಲಿಗೆ ಈ ಕರ್ಕಿ ತೂಗುಸೇತುವೆ ಕಟ್ಟಿದ್ದು, ಪ್ರೇಕ್ಷಣೀಯ ಸ್ಥಳವಾಗಿ ಮಾರ್ಪಟ್ಟಿತ್ತು. ಇಂದು ತನ್ನ ಅಂದ ಮತ್ತು ಬಲ ಕಳೆದುಕೊಂಡಿದೆ. ಯಾವುದೇ ಮೆಂಟೇನನ್ಸ್ ಇಲ್ಲದೇ ಸೊರಗಿ ಹೋಗಿದ್ದು, ದಿನನಿತ್ಯ ಓಡಾಡುವ ವಿಧ್ಯಾರ್ಥಿಗಳು, ಸಾರ್ವಜನಿಕರು ಭಯದಲ್ಲೇ ತಿರುಗಾಡಬೇಕಾದ ಪರಿಸ್ಥಿತಿ ಬಂದೊದಗಿದೆ.

ಈ ಬಗ್ಗೆ ಮಾತನಾಡಿದ ಗ್ರಾಮ ಪಂಚಾಯತ ಸದಸ್ಯರಾದ ಹರೀಶ ನಾಯ್ಕ ಈ ತೂಗುಸೇತುವೆ ಶಿಥಿಲಾವಸ್ಥೆಯಲ್ಲಿದ್ದು, ತಡೆಗೋಡೆ ಹಾಗೂ ಬ್ರಿಡ್ಜ್ ಕಮ್ ಬ್ಯಾರೇಜ್ ಮಾಡಿದ್ದಲ್ಲಿ ಇಲ್ಲಿಯ ಜನತೆಗೆ ಅನುಕೂಲವಾಗುತ್ತಿತ್ತು. ಇದರ ಬಗ್ಗೆ ಶಾಸಕರಲ್ಲಿ, ಸಚಿವರಲ್ಲಿ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇಲ್ಲಿ ವೋಟ್ ಆಧಾರದಲ್ಲಿ ಕೆಲಸ ಆಗುತ್ತಿದೆಯೋ ಎನೋ ಅಂತಾ ಬೇಸರ ವ್ಯಕ್ತಪಡಿಸಿದರು.

ಸ್ಥಳೀಯರಾದ ಪ್ರಕಾಶ ನಾಯ್ಕ ಮಾತನಾಡಿ ಈ ಊರಿಗೆ ಒಂದೇ ಸೇತುವೆಯಾಗಿದ್ದು, ದಿನನಿತ್ಯ ಸಾವಿರಾರು ಜನರು, ವಿದ್ಯಾರ್ಥಿಗಳು ಓಡಾಡುತ್ತಾರೆ. ಈ ಹಿಂದೆ ಸೇತುವೆಯ ಮೇಲೆ ಬೈಕ್ ನ್ನು ತಿರುಗಾಡಲು ನಿರ್ಬಂಧಿಸಲಾಗಿತ್ತು. ಆದರೆ ಇದೇ ಸ್ಥಳದಲ್ಲಿ ಬೈಕ್ ಕಳ್ಳತನವಾಗಿರುವುದರಿಂದ ಹೊಳೆಯ ಆ ಬದಿಯ ಜನರು ಸೇತುವೆಯ ಮೇಲೆ ಬೈಕ್ ನ್ನು ಓಡಾಡಿಸುವಂತಾಗಿದೆ. ಇದರಿಂದ ಜನರು ಭಯದಲ್ಲೇ ಸೇತುವೆಯನ್ನು ದಾಟಬೇಕಾಗಿದ್ದು, ಸಂಬoಧಪಟ್ಟ ಇಲಾಖೆಯ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸಿಕೊಡಬೇಕೆಂದು ವಿನಂತಿಸಿಕೊoಡರು.

ಗ್ರಾಮ ಪಂಚಾಯತ ಸದಸ್ಯರಾದ ಸಾವಿತ್ರಿ ಮೇಸ್ತ ಮಾತನಾಡಿ ಊರಿನವರಿಗೆಲ್ಲಾ ಇದೊಂದೆ ಸೇತುವೆಯಾಗಿರೋದ್ರಿಂದ ಶಿಥಿಲಾವಸ್ಥೆಯಲ್ಲಿದ್ದು, ಯಾವ ಸಮಯದಲ್ಲಿ ಬಿದ್ದುಹೋಗಬಹುದು ಅನ್ನೋ ಭಯ ಕಾಡುತ್ತಿದೆ ಎಂದರು. ಇದರ ಬಗ್ಗೆ ತಹಶೀಲ್ದಾರ, ಜಿಲ್ಲಾಪಂಚಾಯತ, ಶಾಸಕರಿಗೆ, ಸಚಿವರಿಗೆ ಮನವಿ ಕೊಟ್ಟಿದ್ದರೂ ಜಾಣಕುರುಡುತನದಿಂದ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದರು.

ಬೆಳಿಗ್ಗೆಯಿoದ ಸಂಜೆಯ ತನಕ ತೂಗು ಸೇತುವೆ ಮೇಲೆ 7 ರಿಂದ 10 ಕ್ಕೂ ಹೆಚ್ಚು ಜನರು ಇರುವ ತಂಡ ನಿಂತು, ನಿರಂತರವಾಗಿ ನಾಲ್ಕು ತಿಂಗಳಿoದ ಫ್ರೀ-ವೆಡ್ಡಿಂಗ್ , ಫೋಟೋ ಶೂಟ್ ಗಳನ್ನು ಮಾಡುತ್ತಿರುವುದು ಕೂಡ ಮತ್ತಷ್ಟು ಸೇತುವೆ ಹದಗೆಡಲು ಕಾರಣ ಎನ್ನುವ ಮಾತು ಕೂಡ ಸ್ಥಳೀಯರಿಂದ ವ್ಯಕ್ತವಾಗುತ್ತಿದೆ. ಈ ತೂಗು ಸೇತುವೆಗೆ ಇತ್ತೀಚಿಗೆ ಸರಿಯಾದ ನಿರ್ವಹಣೆ ಇಲ್ಲದೆ ಜನರು ಮತ್ತು ಬೈಕ್ ಸವಾರರು ತಿರುಗಾಡಲು ಭಯಪಡ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗೆ ಮುಂದುವರಿದರೆ ಸೇತುವೆ ಅಪಾಯದತ್ತ ಸಾಗುವಂತೆ ಕಂಡು ಬರುತ್ತಿದೆ ಎಂದು ಸ್ಥಳೀಯರು ಅಭಿಪ್ರಾಯ.

ಪಾವಿನಕುರ್ವಾ, ಕೆಸರಕೋಡಿ, ಮುಳ್ಳಿಕೇರಿ, ತಾರಿಬಾಗಿಲನ ಸಾವಿರಾರು ಜನರು ಕರ್ಕಿಗೆ ಬರಬೇಕು ಅಂದರೆ ಈ ತೂಗುಸೇತುವೆ ಬಿಟ್ಟರೆ ಬೇರೆ ಮಾರ್ಗವಿಲ್ಲ. ಇನ್ನೂ ಈ ಸೇತುವೆಯ ಮದ್ಯ ಮಧ್ಯ ಭಾಗದಲ್ಲಿ ದೊಡ್ಡದಾದ ಕಣ್ಣು ಬಿದ್ದು ಬಿಟ್ಟಿದೆ. ಸೇತುವೆಗೆ ಹಾಸಲಾದ ಹಲಗೆ ಕನ್ನಾಗಿದೆ. ಈ ಬಗ್ಗೆ ಸಂಬoಧಪಟ್ಟ ಇಲಾಖೆಯ ಅಧಿಕಾರಿವರ್ಗ, ಜನಪ್ರತಿನಿಧೀಗಳು ಸಮಸ್ಯೆಯನ್ನು ಬಗೆಹರಿಸುತ್ತಾರೋ ಎನ್ನುವುದನ್ನು ಕಾದುನೋಡಬೇಕಾಗಿದೆ.

ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ

Share

Don't Miss

ಶಿರೂರು ಗುಡ್ಡ ಕುಸಿತ ದುರಂತ : ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ಧ ಪ್ರಣವಾನಂದ ಸ್ವಾಮೀಜಿ

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ದುರ್ಘಟನೆಗೆ ಸಂಬoಧಿಸಿದoತೆ ಅಂಕೋಲಾ ಪೊಲೀಸರು 8 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಶಿರೂರು ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಗುತ್ತಿಗೆ ಕಂಪನಿಯ ಬೇಜವಾಬ್ದಾರಿ...

ಭಟ್ಕಳದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ: 80ಕ್ಕೂ ಹೆಚ್ಚು ಜನರಿಂದ ರಕ್ತದಾನ

ಭಟ್ಕಳ: ಪುನಿತ್ ರಾಜಕುಮಾರು ಬದುಕಿದ ರೀತಿ ನಿಜಕ್ಕೂ ಎಲ್ಲರಿಗೂ ಆದರ್ಶಪ್ರಾಯ. ಅವರು ಮಾಡಿರುವ ಸಾಮಾಜಿಕ ಕಾರ್ಯಗಳು ಅದರಲ್ಲೂ ಬಲಗೈಯಲ್ಲಿ ಕೊಟ್ಟದ್ದು ಎಡಗೈಗೂ ಗೊತ್ತಾಗದಂತೆ ಅದನ್ನು ನಿಭಾಯಿಸಿದ ರೀತಿ ನಿಜಕ್ಕೂ ಅನನ್ಯ. ಇಂತಹ...

ಸಿಐಡಿ ಡಿವೈಎಸ್ಪಿಯಾಗಿ ಎಚ್ ಜಯರಾಜಗೆ ಪದೋನ್ನತಿ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆಗೆ ಹೊಸ ಭಾಷ್ಯವನ್ನು ಬರೆಯುವ ಮೂಲಕ ಜನರ ನಡುವೆ ಬೆರೆಯುವ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡು ಸಮಾಜಘಾತುಕ...

ವಿಶ್ವಜಲ ದಿನ ಆಚರಣೆ: ಸಾರ್ವಜನಿಕರಿಗೆ ಕಾನೂನು ಅರಿವು ಕಾರ್ಯಕ್ರಮ

ಹೊನ್ನಾವರ: ವಿಶ್ವ ಜಲ ದಿನ” ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಗಿಡಕ್ಕೆ ನೀರೆರಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ, ಜೆ.ಎಂ.ಎಫ್.ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ...

ಜನಸಾಮಾನ್ಯರ ಆರ್ಥಿಕ ಮಟ್ಟ ಏರಿಸುವ ಉದ್ದೇಶದಿಂದ ಗ್ಯಾರಂಟಿ ಯೋಜನೆ ಜಾರಿ: ಜಿಲ್ಲಾಧ್ಯಕ್ಷ ಸಾಯಿ ಗಾವಂಕರ್

ಭಟ್ಕಳ: ಕಾಂಗ್ರೇಸ್ ಪಕ್ಷ ಕೇವಲ ಚುನಾವಣೆ ಗೆಲ್ಲುವ ಉದ್ದೇಶದಿಂದ ಗ್ಯಾರಂಟಿ ಯೋಜನೆಯನ್ನು ಹೊರತರಲಿಲ್ಲ. ಬದಲಾಗಿ ಜನಸಾಮಾನ್ಯರ ಆರ್ಥಿಕ ಮಟ್ಟವನ್ನು ಏರಿಸುವ ನಿಟ್ಟಿನಲ್ಲಿ ಹಾಗೂ ಜನರಲ್ಲಿ ಕೊಳ್ಳುವಿಕೆಯ ಶಕ್ತಿಯನ್ನು ಹೆಚ್ಚಿಸಿ ಆರ್ಥಿಕ ಚೈತನ್ಯಕ್ಕೆ...

ಶಿರೂರು ಗುಡ್ಡ ಕುಸಿತ ದುರಂತ : ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ಧ ಪ್ರಣವಾನಂದ ಸ್ವಾಮೀಜಿ

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ದುರ್ಘಟನೆಗೆ ಸಂಬoಧಿಸಿದoತೆ ಅಂಕೋಲಾ ಪೊಲೀಸರು 8 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಶಿರೂರು ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಗುತ್ತಿಗೆ ಕಂಪನಿಯ ಬೇಜವಾಬ್ದಾರಿ...

Related Articles

ಸಿಐಡಿ ಡಿವೈಎಸ್ಪಿಯಾಗಿ ಎಚ್ ಜಯರಾಜಗೆ ಪದೋನ್ನತಿ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆಗೆ...

ಜನಸಾಮಾನ್ಯರ ಆರ್ಥಿಕ ಮಟ್ಟ ಏರಿಸುವ ಉದ್ದೇಶದಿಂದ ಗ್ಯಾರಂಟಿ ಯೋಜನೆ ಜಾರಿ: ಜಿಲ್ಲಾಧ್ಯಕ್ಷ ಸಾಯಿ ಗಾವಂಕರ್

ಭಟ್ಕಳ: ಕಾಂಗ್ರೇಸ್ ಪಕ್ಷ ಕೇವಲ ಚುನಾವಣೆ ಗೆಲ್ಲುವ ಉದ್ದೇಶದಿಂದ ಗ್ಯಾರಂಟಿ ಯೋಜನೆಯನ್ನು ಹೊರತರಲಿಲ್ಲ. ಬದಲಾಗಿ ಜನಸಾಮಾನ್ಯರ...

ಶಿರೂರು ಗುಡ್ಡ ಕುಸಿತ ದುರಂತ : ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ಧ ಪ್ರಣವಾನಂದ ಸ್ವಾಮೀಜಿ

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ದುರ್ಘಟನೆಗೆ ಸಂಬoಧಿಸಿದoತೆ ಅಂಕೋಲಾ ಪೊಲೀಸರು 8 ಜನರ ಮೇಲೆ...

ಭಟ್ಕಳದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ: 80ಕ್ಕೂ ಹೆಚ್ಚು ಜನರಿಂದ ರಕ್ತದಾನ

ಭಟ್ಕಳ: ಪುನಿತ್ ರಾಜಕುಮಾರು ಬದುಕಿದ ರೀತಿ ನಿಜಕ್ಕೂ ಎಲ್ಲರಿಗೂ ಆದರ್ಶಪ್ರಾಯ. ಅವರು ಮಾಡಿರುವ ಸಾಮಾಜಿಕ ಕಾರ್ಯಗಳು...