Important

ಸೇತುವೆ ಮಧ್ಯಭಾಗದಲ್ಲಿ ದೊಡ್ಡ ಹೊಂಡ, ಕಬ್ಬಿಣದ ಪಟ್ಟಿಗಳಿಗೆ ತುಕ್ಕು : ನಿರ್ವಹಣೆ ಇಲ್ಲದೆ ಸೊರಗಿಹೋದ ತೂಗುಸೇತುವೆ

Share

ಹೊನ್ನಾವರ: ತಾಲೂಕಿನ ಈ ಸೇತುವೆ ಯಾವಾಗ ಕುಸಿಯಬಹುದೋ ಅನ್ನೋ ತರ ಇದೆ. ಹೌದು, ತಾಲೂಕಿನಲ್ಲೇ ಮೊದಲಿಗೆ ಈ ಕರ್ಕಿ ತೂಗುಸೇತುವೆ ಕಟ್ಟಿದ್ದು, ಪ್ರೇಕ್ಷಣೀಯ ಸ್ಥಳವಾಗಿ ಮಾರ್ಪಟ್ಟಿತ್ತು. ಇಂದು ತನ್ನ ಅಂದ ಮತ್ತು ಬಲ ಕಳೆದುಕೊಂಡಿದೆ. ಯಾವುದೇ ಮೆಂಟೇನನ್ಸ್ ಇಲ್ಲದೇ ಸೊರಗಿ ಹೋಗಿದ್ದು, ದಿನನಿತ್ಯ ಓಡಾಡುವ ವಿಧ್ಯಾರ್ಥಿಗಳು, ಸಾರ್ವಜನಿಕರು ಭಯದಲ್ಲೇ ತಿರುಗಾಡಬೇಕಾದ ಪರಿಸ್ಥಿತಿ ಬಂದೊದಗಿದೆ.

ಈ ಬಗ್ಗೆ ಮಾತನಾಡಿದ ಗ್ರಾಮ ಪಂಚಾಯತ ಸದಸ್ಯರಾದ ಹರೀಶ ನಾಯ್ಕ ಈ ತೂಗುಸೇತುವೆ ಶಿಥಿಲಾವಸ್ಥೆಯಲ್ಲಿದ್ದು, ತಡೆಗೋಡೆ ಹಾಗೂ ಬ್ರಿಡ್ಜ್ ಕಮ್ ಬ್ಯಾರೇಜ್ ಮಾಡಿದ್ದಲ್ಲಿ ಇಲ್ಲಿಯ ಜನತೆಗೆ ಅನುಕೂಲವಾಗುತ್ತಿತ್ತು. ಇದರ ಬಗ್ಗೆ ಶಾಸಕರಲ್ಲಿ, ಸಚಿವರಲ್ಲಿ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇಲ್ಲಿ ವೋಟ್ ಆಧಾರದಲ್ಲಿ ಕೆಲಸ ಆಗುತ್ತಿದೆಯೋ ಎನೋ ಅಂತಾ ಬೇಸರ ವ್ಯಕ್ತಪಡಿಸಿದರು.

ಸ್ಥಳೀಯರಾದ ಪ್ರಕಾಶ ನಾಯ್ಕ ಮಾತನಾಡಿ ಈ ಊರಿಗೆ ಒಂದೇ ಸೇತುವೆಯಾಗಿದ್ದು, ದಿನನಿತ್ಯ ಸಾವಿರಾರು ಜನರು, ವಿದ್ಯಾರ್ಥಿಗಳು ಓಡಾಡುತ್ತಾರೆ. ಈ ಹಿಂದೆ ಸೇತುವೆಯ ಮೇಲೆ ಬೈಕ್ ನ್ನು ತಿರುಗಾಡಲು ನಿರ್ಬಂಧಿಸಲಾಗಿತ್ತು. ಆದರೆ ಇದೇ ಸ್ಥಳದಲ್ಲಿ ಬೈಕ್ ಕಳ್ಳತನವಾಗಿರುವುದರಿಂದ ಹೊಳೆಯ ಆ ಬದಿಯ ಜನರು ಸೇತುವೆಯ ಮೇಲೆ ಬೈಕ್ ನ್ನು ಓಡಾಡಿಸುವಂತಾಗಿದೆ. ಇದರಿಂದ ಜನರು ಭಯದಲ್ಲೇ ಸೇತುವೆಯನ್ನು ದಾಟಬೇಕಾಗಿದ್ದು, ಸಂಬoಧಪಟ್ಟ ಇಲಾಖೆಯ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸಿಕೊಡಬೇಕೆಂದು ವಿನಂತಿಸಿಕೊoಡರು.

ಗ್ರಾಮ ಪಂಚಾಯತ ಸದಸ್ಯರಾದ ಸಾವಿತ್ರಿ ಮೇಸ್ತ ಮಾತನಾಡಿ ಊರಿನವರಿಗೆಲ್ಲಾ ಇದೊಂದೆ ಸೇತುವೆಯಾಗಿರೋದ್ರಿಂದ ಶಿಥಿಲಾವಸ್ಥೆಯಲ್ಲಿದ್ದು, ಯಾವ ಸಮಯದಲ್ಲಿ ಬಿದ್ದುಹೋಗಬಹುದು ಅನ್ನೋ ಭಯ ಕಾಡುತ್ತಿದೆ ಎಂದರು. ಇದರ ಬಗ್ಗೆ ತಹಶೀಲ್ದಾರ, ಜಿಲ್ಲಾಪಂಚಾಯತ, ಶಾಸಕರಿಗೆ, ಸಚಿವರಿಗೆ ಮನವಿ ಕೊಟ್ಟಿದ್ದರೂ ಜಾಣಕುರುಡುತನದಿಂದ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದರು.

ಬೆಳಿಗ್ಗೆಯಿoದ ಸಂಜೆಯ ತನಕ ತೂಗು ಸೇತುವೆ ಮೇಲೆ 7 ರಿಂದ 10 ಕ್ಕೂ ಹೆಚ್ಚು ಜನರು ಇರುವ ತಂಡ ನಿಂತು, ನಿರಂತರವಾಗಿ ನಾಲ್ಕು ತಿಂಗಳಿoದ ಫ್ರೀ-ವೆಡ್ಡಿಂಗ್ , ಫೋಟೋ ಶೂಟ್ ಗಳನ್ನು ಮಾಡುತ್ತಿರುವುದು ಕೂಡ ಮತ್ತಷ್ಟು ಸೇತುವೆ ಹದಗೆಡಲು ಕಾರಣ ಎನ್ನುವ ಮಾತು ಕೂಡ ಸ್ಥಳೀಯರಿಂದ ವ್ಯಕ್ತವಾಗುತ್ತಿದೆ. ಈ ತೂಗು ಸೇತುವೆಗೆ ಇತ್ತೀಚಿಗೆ ಸರಿಯಾದ ನಿರ್ವಹಣೆ ಇಲ್ಲದೆ ಜನರು ಮತ್ತು ಬೈಕ್ ಸವಾರರು ತಿರುಗಾಡಲು ಭಯಪಡ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗೆ ಮುಂದುವರಿದರೆ ಸೇತುವೆ ಅಪಾಯದತ್ತ ಸಾಗುವಂತೆ ಕಂಡು ಬರುತ್ತಿದೆ ಎಂದು ಸ್ಥಳೀಯರು ಅಭಿಪ್ರಾಯ.

ಪಾವಿನಕುರ್ವಾ, ಕೆಸರಕೋಡಿ, ಮುಳ್ಳಿಕೇರಿ, ತಾರಿಬಾಗಿಲನ ಸಾವಿರಾರು ಜನರು ಕರ್ಕಿಗೆ ಬರಬೇಕು ಅಂದರೆ ಈ ತೂಗುಸೇತುವೆ ಬಿಟ್ಟರೆ ಬೇರೆ ಮಾರ್ಗವಿಲ್ಲ. ಇನ್ನೂ ಈ ಸೇತುವೆಯ ಮದ್ಯ ಮಧ್ಯ ಭಾಗದಲ್ಲಿ ದೊಡ್ಡದಾದ ಕಣ್ಣು ಬಿದ್ದು ಬಿಟ್ಟಿದೆ. ಸೇತುವೆಗೆ ಹಾಸಲಾದ ಹಲಗೆ ಕನ್ನಾಗಿದೆ. ಈ ಬಗ್ಗೆ ಸಂಬoಧಪಟ್ಟ ಇಲಾಖೆಯ ಅಧಿಕಾರಿವರ್ಗ, ಜನಪ್ರತಿನಿಧೀಗಳು ಸಮಸ್ಯೆಯನ್ನು ಬಗೆಹರಿಸುತ್ತಾರೋ ಎನ್ನುವುದನ್ನು ಕಾದುನೋಡಬೇಕಾಗಿದೆ.

ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ವಿಶ್ವಾಸದ ಮತ್ತೊಂದು ಹೆಸರೇ ಅಲಂಕಾರ ಜ್ಯುವೆಲರ್ಸ್: ಅಂಕೋಲಾದಲ್ಲಿ ಭವ್ಯ ಶುಭಾರಂಭ

ಅಂಕೋಲಾ, ಆಗಸ್ಟ್ 24: ಪಟ್ಟಣದ ಬಂಡಿಬಜಾರ ಮುಖ್ಯ ರಸ್ತೆಯಂಚಿಗೆ ನವೀಕೃತಗೊಂಡಿರುವ ಭವ್ಯವಾದ ಕಟ್ಟಡದಲ್ಲಿ ಅಲಂಕಾರ ಜ್ಯುವೆಲರ್ಸ್ ನ ಬೃಹತ್ತ ಮಳಿಗೆ ಅಗಸ್ಟ್ 24 ರ ರವಿವಾರ ಶುಭ ಮುಹೂರ್ತದಲ್ಲಿ ಗ್ರಾಹಕರ ಸೇವೆಗೆ...

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

📰 ನಿಮ್ಮ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರಿನ ಸಭೆ, ಸಮಾರಂಭ, ಪ್ರತಿಭಟನೆ ಮತ್ತು ವಿಶೇಷ ವರದಿಗಳನ್ನು ನಮಗೆ ಕಳುಹಿಸಿ.

✉️ Gmail: [email protected]

📲 WhatsApp ಮೂಲಕ ಕಳುಹಿಸಿ ✉️ Gmail ಮೂಲಕ ಕಳುಹಿಸಿ

ಗುಡಿಗಾರಗಲ್ಲಿ ಗಣಪತಿಗೆ ಬೆಳ್ಳಿಯ ಕಿರೀಟ ಸಮರ್ಪಣೆ: ಭಕ್ತರ ಭಾವಪೂರ್ಣ ಕಾಣಿಕೆ

ಕುಮಟಾ, ಆಗಸ್ಟ್ 27: 50ನೇ ವರ್ಷದತ್ತ ಪಯಣಿಸುತ್ತಿರುವ ಗುಡಿಗಾರಗಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ, ತನ್ನ ಅಜರಾಮರ ಪರಂಪರೆಯನ್ನು ಮತ್ತಷ್ಟು ಭವ್ಯಗೊಳಿಸುವ ಕಾರ್ಯಕ್ಕೆ ಮುಂದಾಗಿದೆ. ಸಮಿತಿಯ ಪೂಜೆಗೆ ಒಳಪಡುವ ಮಹಾಗಣಪತಿಗೆ ಭಕ್ತರು ಸಮೂಹ...

ಸರ್ಕಾರಿ ಇಲಾಖೆಯ ಕಟ್ಟಡದ ಇಕ್ಕಟ್ಟಾದ ಗೋಡೆಗಳ ಮಧ್ಯೆ ಪತ್ತೆಯಾದ ಸೂಟ್ ಕೇಸ್ ! ? ಕೊನೆಗೂ ಸೂಟ್ಕೇಸ್ ರಹಸ್ಯ

ಅಂಕೋಲಾ, ಆಗಸ್ಟ್ 26 : ಸರ್ಕಾರಿ ಇಲಾಖೆ ಒಂದರ ಕಟ್ಟಡದ ಗೋಡೆಗಳ ನಡುವಿನ ಇಕ್ಕಟ್ಟಾದ ಸ್ಥಳದಲ್ಲಿ ಯಾರೋ ತಂದಿಟ್ಟು ಹೋಗಿದ್ದರೆನ್ನಲಾದ ಸೂಟ್ ಕೇಸ್ ಒಂದು ಪಟ್ಟಣ ವ್ಯಾಪ್ತಿಯಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ್ದಲ್ಲದೇ,ಸೂಟ್ಕೇಸ್...

ಗಣಪತಿಗೆ ಜೀವ ಕಳೆ ತುಂಬುವ ಗಂಗಾವಳಿಯ ಶರತ್ ನಾಯ್ಕ್

ಕುಮಟಾ, ಆಗಸ್ಟ್ 26: ಪ್ರತಿಭೆ ಯಾರ ಸೊತ್ತಲ್ಲ. ಅದು ಸಾಧಕನ ಸ್ವತ್ತು ಎನ್ನುವ ಮಾತಿಗೆ ಅನುಗುಣವಾಗಿ ಇರುವವರು ಕುಮಟಾ ತಾಲೂಕಿನ ಗಂಗಾವಳಿಯ ಹೆಮ್ಮೆಯ ಪ್ರತಿಭೆ ಶರತ್ ನಾಯ್ಕ್ ಅವರು ಈಗಾಗಲೇ ಬೃಹತ್...

ವಿಶ್ವಾಸದ ಮತ್ತೊಂದು ಹೆಸರೇ ಅಲಂಕಾರ ಜ್ಯುವೆಲರ್ಸ್: ಅಂಕೋಲಾದಲ್ಲಿ ಭವ್ಯ ಶುಭಾರಂಭ

ಅಂಕೋಲಾ, ಆಗಸ್ಟ್ 24: ಪಟ್ಟಣದ ಬಂಡಿಬಜಾರ ಮುಖ್ಯ ರಸ್ತೆಯಂಚಿಗೆ ನವೀಕೃತಗೊಂಡಿರುವ ಭವ್ಯವಾದ ಕಟ್ಟಡದಲ್ಲಿ ಅಲಂಕಾರ ಜ್ಯುವೆಲರ್ಸ್ ನ ಬೃಹತ್ತ ಮಳಿಗೆ ಅಗಸ್ಟ್ 24 ರ ರವಿವಾರ ಶುಭ ಮುಹೂರ್ತದಲ್ಲಿ ಗ್ರಾಹಕರ ಸೇವೆಗೆ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Current date Wednesday , 27 August 2025
Related Articles

ಗುಡಿಗಾರಗಲ್ಲಿ ಗಣಪತಿಗೆ ಬೆಳ್ಳಿಯ ಕಿರೀಟ ಸಮರ್ಪಣೆ: ಭಕ್ತರ ಭಾವಪೂರ್ಣ ಕಾಣಿಕೆ

ಕುಮಟಾ, ಆಗಸ್ಟ್ 27: 50ನೇ ವರ್ಷದತ್ತ ಪಯಣಿಸುತ್ತಿರುವ ಗುಡಿಗಾರಗಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ, ತನ್ನ ಅಜರಾಮರ...

ಗಣಪತಿಗೆ ಜೀವ ಕಳೆ ತುಂಬುವ ಗಂಗಾವಳಿಯ ಶರತ್ ನಾಯ್ಕ್

ಕುಮಟಾ, ಆಗಸ್ಟ್ 26: ಪ್ರತಿಭೆ ಯಾರ ಸೊತ್ತಲ್ಲ. ಅದು ಸಾಧಕನ ಸ್ವತ್ತು ಎನ್ನುವ ಮಾತಿಗೆ ಅನುಗುಣವಾಗಿ...

ವಿಶ್ವಾಸದ ಮತ್ತೊಂದು ಹೆಸರೇ ಅಲಂಕಾರ ಜ್ಯುವೆಲರ್ಸ್: ಅಂಕೋಲಾದಲ್ಲಿ ಭವ್ಯ ಶುಭಾರಂಭ

ಅಂಕೋಲಾ, ಆಗಸ್ಟ್ 24: ಪಟ್ಟಣದ ಬಂಡಿಬಜಾರ ಮುಖ್ಯ ರಸ್ತೆಯಂಚಿಗೆ ನವೀಕೃತಗೊಂಡಿರುವ ಭವ್ಯವಾದ ಕಟ್ಟಡದಲ್ಲಿ ಅಲಂಕಾರ ಜ್ಯುವೆಲರ್ಸ್...

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್...